Homeಕರ್ನಾಟಕ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

- Advertisement -
- Advertisement -

ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ (ಬಿಫೆಸ್) 13 ಆವೃತ್ತಿ ಗುರುವಾರ ಸಂಜೆ ಉದ್ಘಾಟನೆಯಾಗಿದ್ದು, ಕಾರ್ಯಕ್ರಮದಲ್ಲಿ ವಿ.ಡಿ.ಸಾವರ್ಕರ್‌ ಕಟೌಟ್‌‌ ಪ್ರದರ್ಶಿಸಲಾಗಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ನಡೆಯುತ್ತಿರುವ ಬಿಫೆಸ್‌ 13 ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮ ಗುರುವಾರ ಸಂಜೆ ನಡೆಯಿತು. ಈ ಸಂದರ್ಭದಲ್ಲಿ ಸಾವರ್ಕರ್‌ ಕಟೌಟ್‌ಅನ್ನು ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯಿ ಪಟೇಲ್ ಕಟೌಟ್‌ ಜೊತೆಯಲ್ಲಿ ಪ್ರದರ್ಶಿಸಲಾಗಿದೆ.

ಸಾವರ್ಕರ್‌ ಬಲಪಂಥೀಯ ಪಡೆಯ ಐಕಾನ್‌. ಜೊತೆಗೆ ಬ್ರಿಟಿಷರಿಗೆ ಹಲವು ಭಾರಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿರುವುದು ಮತ್ತೆ ಮತ್ತೆ ಚರ್ಚೆಯಾಗುತ್ತಿದೆ. ರಾಷ್ಟ್ರಪಿತ ಗಾಂಧೀಜಿಯವರ ಹತ್ಯೆಯ ಜೊತೆಗೂ ಸಾವರ್ಕರ್‌ ಹೆಸರು ತಳುಕು ಹಾಕಿಕೊಂಡಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವರ್ಕರ್‌ ಕುರಿತು ಪೋಸ್ಟ್‌ ಹಾಕಿದ್ದನ್ನು ಹಲವು ಕನ್ನಡಿಗರು ಕಟುವಾಗಿ ಟೀಕಿಸಿದ್ದರು. ಆದರೀಗ ಬಿಜೆಪಿ ನೇತೃತ್ವದ ಸರ್ಕಾರ ಸಾವರ್ಕರ್‌ ಪ್ರೇಮವನ್ನು ಮತ್ತೆ ಪ್ರದರ್ಶಿಸಿದೆ.

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದಲ್ಲಿ (ಜಿಕೆವಿಕೆ) ಗುರುವಾರ ಸಂಜೆ 4.30ಕ್ಕೆ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರ ರಾಷ್ಟ್ರೀಯ ಸಮಾವೇಶ ಭವನದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಜೆ ಆರು ಗಂಟೆಯ ಬಳಿಕ ಕಾರ್ಯಕ್ರಮ ಚಾಲನೆ ಪಡೆಯಿತು.

ಇದನ್ನೂ ಓದಿರಿ: ಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆ ಮೇಲೆ ಸಿಎಂ ಅವರನ್ನು ಕರೆಯುವ ಮುನ್ನ ಮುಖ್ಯಮಂತ್ರಿಯವರ ಕುರಿತು ಒಂದು ಕಿರು ವಿಡಿಯೊ ಪ್ರದರ್ಶಿಸಿ ಪರಿಚಯಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ನಟಿ ಡಾ.ಭಾರತೀ ವಿಷ್ಣುವರ್ಧನ್‌, ಮಲಯಾಳಂ ನಿರ್ದೇಶಕ ಪ್ರಿಯದರ್ಶನ್ ಅವರ ಕುರಿತೂ ಕಿರು ವಿಡಿಯೊ ಪ್ರದರ್ಶಿಸಲಾಯಿತು. ಸಚಿವ ಮುನಿರತ್ನ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನಿರ್ಮಾಪಕ ರಾಕ್‌ಲೈಕ್‌ ವೆಂಕಟೇಶ್‌, ಅಶ್ವಿನಿ ಪುನಿತ್‌ ರಾಜ್‌ಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್‌, ವಾರ್ತಾ ಇಲಾಖೆಯ ಆಯಕ್ತ ಪಿ.ಎಸ್‌.ಹರ್ಷ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್‌ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ಸುಮಾರು 20 ನಿಮಿಷಗಳ ಕಾಲ ಬಸವರಾಜು ಬೊಮ್ಮಾಯಿಯವರು ಮಾತನಾಡಿದರು. ನಂತರ ಕಾರ್ಯಕ್ರಮದಲ್ಲಿ ಹಾಜರಿದ್ದ ಅತಿಥಿಗಳು ಮಾತನಾಡಿದರು.

ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಹಾಗೂ ಇತರರು ತೆರಳಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ನೀಡಲಾಯಿತು. ಮೂರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಮೊದಲ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗ ಬೆಳೆದುಬಂದ ಹಾದಿಯ ಕುರಿತು ಪ್ರದರ್ಶಿಸಲಾಯಿತು. ಎರಡನೆಯದರಲ್ಲಿ  ಪುನೀತ್‌ ರಾಜ್‌ಕುಮಾರ್‌ ಅಭಿನಯದ ವಿವಿಧ ಚಿತ್ರಗೀತೆಗಗಳಿಗೆ ನೃತ್ಯ ಮಾಡಲಾಯಿತು. ಆ ಮೂಲಕ ಪುನೀತ್ ರಾಜ್‌ಕುಮಾರ್‌ ಅವರಿಗೆ ಗೌರವ ಸಲ್ಲಿಸಲಾಯಿತು.

ಮೂರನೇ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾದರಿ ವ್ಯಕ್ತಿಗಳ (ರೋಲ್‌ ಮಾಡೆಲ್‌) ಕುರಿತು ನೃತ್ಯ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ, ಗಾಂಧೀಜಿ, ಝಾನ್ಸಿರಾಣಿ ಲಕ್ಷ್ಮೀಬಾಯಿ, ಸೈರಾ ನರಸಿಂಹರೆಡ್ಡೆ, ಸುಭಾಷ್ ಚಂದ್ರ ಬೋಸ್‌, ಒನಕೆ ಓಬವ್ವ ಸೇರಿದಂತೆ ಹಲವರನ್ನು ಸ್ಮರಿಸಲಾಯಿತು.

ಇದನ್ನೂ ಓದಿರಿ: ಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ಮಾದರಿ ವ್ಯಕ್ತಿತ್ವಗಳ ಪೈಕಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಇರಲಿಲ್ಲ. ಈ ಪ್ರದರ್ಶನದ ಅಂತ್ಯದಲ್ಲಿ ಎಲ್ಲ ಕಲಾವಿದರು ಒಟ್ಟಿಗೆ ವೇದಿಕೆ ಮೇಲೆ ನಿಂತಾಗ ನೃತ್ಯ ತಂಡವು ಸರ್ದಾರ್ ವಲ್ಲಭಬಾಯಿ ಪಟೇಲ್‌ ಮತ್ತು ವಿ.ಡಿ.ಸಾವರ್ಕರ್‌ ಅವರ ಸುಮಾರು ಹತ್ತು ಅಡಿ ಎತ್ತರದ ಕಟೌಟ್ ಪ್ರದರ್ಶಿಸಿತು.

ಬಿಜೆಪಿ ತನ್ನ ಹಿಡನ್ ಅಜೆಂಡಾಗಳನ್ನು ತುರುಕಲು ಪ್ರತಿಷ್ಟಿತ ಚಲನಚಿತ್ರೋತ್ಸವವನ್ನು ಬಳಸುತ್ತಿದೆಯೇ ಎಂದು ಕೇಳಲು ಅಕಾಡೆಮಿಯ ಅಧ್ಯಕ್ಷ ಸುನೀಲ್‌ ಪುರಾಣಿಕ್ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಸುನಿಲ್‌ ಪುರಾಣಿಕ್‌, “ನಮ್ಮ ವೀರ ಸಾವರ್ಕರ್‌ ಏನು ಭಯೋತ್ಪಾದಕನೆ? ಆಜಾದಿ ಕಾ ಅಮೃತ ಮಹೋತ್ಸವ ಎಂದು ಕಾರ್ಯಕ್ರಮ ಮಾಡುತ್ತಿದ್ದೇವೆ. ಭಗತ್‌ಸಿಂಗ್‌, ವೀರ ಸಾವರ್ಕರ್‌, ಚಂದ್ರಶೇಖರ್‌ ಆಜಾದ್ ಮೊದಲಾದವರನ್ನು ಸ್ಮರಿಸಲಾಗಿದೆ” ಎಂದು ತಿಳಿಸಿದರು.

ಅಂಬೇಡ್ಕರ್‌ ಅವರನ್ನೇಕೆ ವೇದಿಕೆ ಮೇಲೆ ತರಲಿಲ್ಲ ಎಂದು ಕೇಳಿದ್ದಕ್ಕೆ, “ಆಜಾದಿ ಕಾ ಅಮೃತ ಮಹೋತ್ಸವ ಮಾಡುತ್ತಿದ್ದೇವೆ.  ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರನ್ನು ಸ್ಮರಿಸಿದ್ದೇವೆ. ಅಂಬೇಡ್ಕರ್‌ ಅವರು ಬರೆದ ಸಂವಿಧಾನದಲ್ಲೇ ನಾವು ಬದುಕುತ್ತಿದ್ದೇವೆ” ಎಂದು ಹೇಳಿದರು.

ಶಿವಾಜಿಯನ್ನು ವೇದಿಕೆ ಮೇಲೆ ತಂದಿದ್ದರ ಕುರಿತು ಪ್ರಶ್ನಿಸಿದಾಗ, “ಸಂಗೊಳ್ಳಿ ರಾಯಣ್ಣ, ಝಾನ್ಸಿರಾಣಿ ಲಕ್ಷ್ಮೀಬಾಯಿ ಅವರಂತೆ ಶಿವಾಜಿಯೂ ಕೂಡ ಹೋರಾಟಗಾರ. ಭಾರತೀಯತೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಹೋರಾಡಿದ ವ್ಯಕ್ತಿಯನ್ನು ನೀವು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಅನ್ನುತ್ತೀರಾ?” ಎಂದು ಪ್ರಶ್ನಿಸಿದರು.

ಟಿಪ್ಪು ಅವರನ್ನೇಕೆ ಕೈ ಬಿಟ್ಟಿದ್ದೀರಿ ಎಂದಿದ್ದಕ್ಕೆ, “ಹತ್ತು ನಿಮಿಷದಲ್ಲಿ ಎಷ್ಟು ಜನರನ್ನು ತೋರಿಸಲು ಆಗುತ್ತದೆ. ಟಿಪ್ಪು ನನ್ನ ದೃಷ್ಟಿಯಲ್ಲಿ ವಿವಾದಾತ್ಮಕ ವ್ಯಕ್ತಿ” ಎಂದು ತಿಳಿಸಿದರು. ಶಿವಾಜಿಯೂ ಕೂಡ ವಿವಾದಾತ್ಮಕ ವ್ಯಕ್ತಿಯಲ್ಲವೇ, ಕನ್ನಡಿಗರಿಗೆ ಶಿವಾಜಿಯಿಂದ ಅನ್ಯಾಯವಾಗಿಲ್ಲವೇ ಎಂದರೆ, “ನಮ್ಮ ದೃಷ್ಟಿಯಲ್ಲಿ ಶಿವಾಜಿ ಅಪ್ರತಿಮ ದೇಶಭಕ್ತ. ನೀವು ದೇಶಭಕ್ತಿ, ದೇಶ ಅಂತಾ ಮಾತನಾಡಿ, ಅಥವಾ ಕನ್ನಡ ಪ್ರೇಮ, ಮರಾಠಿ ಅಂತ ಮಾತನಾಡಿ. ಆರು ಲಕ್ಷ ಜನ ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ. ಹತ್ತು ನಿಮಿಷದಲ್ಲಿ ಎಲ್ಲರನ್ನೂ ತೋರಿಸಲು ಆಗುತ್ತಾ?” ಎಂದು ಕೇಳಿದರು.


ಇದನ್ನೂ ಓದಿರಿ: ‘BIFFes’ ಎಂಬ ಅಂತಾರಾಷ್ಟ್ರೀಯ, Sorry ‘ಕನ್ನಡ ಅಂತಾರಾಷ್ಟ್ರೀಯ ಸಿನಿಮೋತ್ಸವ!’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಗಜ್ಯೋತಿ ಬಸವಣ್ಣನವರ ಕರ್ನಾಟಕ ಈಗ ಬಲಪಂಥೀಯರ ಮುಷ್ಠಿ ಯಲ್ಲಿ, ಅವರ ತತ್ವಾಧರಿತ
    ಕಾರ್ಯ ಕ್ರಮಗಳನ್ನು ಸಿಕ್ಕ ಸಿಕ್ಕ ವೇದಿಕೆಗಳನ್ನು ಉಪಯೋಗಿಸಿ ಕೊಂಡು ತರಾತುರಿ ಯಲ್ಲಿ ಜಾರಿಗೆ ತರುವುದು ಅವರ ಹುನ್ನಾರ. ಇವರ ದರ್ಬಾರು ತಾತ್ಕಾಲಿಕವಾಗಬೇಕು. ಅದಕ್ಕೆ ಮತದಾರರು ಕಾರಣವಾಗಬೇಕು.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...