Homeಕರ್ನಾಟಕ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

- Advertisement -
- Advertisement -

ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ (ಬಿಫೆಸ್) 13 ಆವೃತ್ತಿ ಗುರುವಾರ ಸಂಜೆ ಉದ್ಘಾಟನೆಯಾಗಿದ್ದು, ಕಾರ್ಯಕ್ರಮದಲ್ಲಿ ವಿ.ಡಿ.ಸಾವರ್ಕರ್‌ ಕಟೌಟ್‌‌ ಪ್ರದರ್ಶಿಸಲಾಗಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ನಡೆಯುತ್ತಿರುವ ಬಿಫೆಸ್‌ 13 ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮ ಗುರುವಾರ ಸಂಜೆ ನಡೆಯಿತು. ಈ ಸಂದರ್ಭದಲ್ಲಿ ಸಾವರ್ಕರ್‌ ಕಟೌಟ್‌ಅನ್ನು ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯಿ ಪಟೇಲ್ ಕಟೌಟ್‌ ಜೊತೆಯಲ್ಲಿ ಪ್ರದರ್ಶಿಸಲಾಗಿದೆ.

ಸಾವರ್ಕರ್‌ ಬಲಪಂಥೀಯ ಪಡೆಯ ಐಕಾನ್‌. ಜೊತೆಗೆ ಬ್ರಿಟಿಷರಿಗೆ ಹಲವು ಭಾರಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿರುವುದು ಮತ್ತೆ ಮತ್ತೆ ಚರ್ಚೆಯಾಗುತ್ತಿದೆ. ರಾಷ್ಟ್ರಪಿತ ಗಾಂಧೀಜಿಯವರ ಹತ್ಯೆಯ ಜೊತೆಗೂ ಸಾವರ್ಕರ್‌ ಹೆಸರು ತಳುಕು ಹಾಕಿಕೊಂಡಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವರ್ಕರ್‌ ಕುರಿತು ಪೋಸ್ಟ್‌ ಹಾಕಿದ್ದನ್ನು ಹಲವು ಕನ್ನಡಿಗರು ಕಟುವಾಗಿ ಟೀಕಿಸಿದ್ದರು. ಆದರೀಗ ಬಿಜೆಪಿ ನೇತೃತ್ವದ ಸರ್ಕಾರ ಸಾವರ್ಕರ್‌ ಪ್ರೇಮವನ್ನು ಮತ್ತೆ ಪ್ರದರ್ಶಿಸಿದೆ.

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದಲ್ಲಿ (ಜಿಕೆವಿಕೆ) ಗುರುವಾರ ಸಂಜೆ 4.30ಕ್ಕೆ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರ ರಾಷ್ಟ್ರೀಯ ಸಮಾವೇಶ ಭವನದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಜೆ ಆರು ಗಂಟೆಯ ಬಳಿಕ ಕಾರ್ಯಕ್ರಮ ಚಾಲನೆ ಪಡೆಯಿತು.

ಇದನ್ನೂ ಓದಿರಿ: ಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆ ಮೇಲೆ ಸಿಎಂ ಅವರನ್ನು ಕರೆಯುವ ಮುನ್ನ ಮುಖ್ಯಮಂತ್ರಿಯವರ ಕುರಿತು ಒಂದು ಕಿರು ವಿಡಿಯೊ ಪ್ರದರ್ಶಿಸಿ ಪರಿಚಯಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ನಟಿ ಡಾ.ಭಾರತೀ ವಿಷ್ಣುವರ್ಧನ್‌, ಮಲಯಾಳಂ ನಿರ್ದೇಶಕ ಪ್ರಿಯದರ್ಶನ್ ಅವರ ಕುರಿತೂ ಕಿರು ವಿಡಿಯೊ ಪ್ರದರ್ಶಿಸಲಾಯಿತು. ಸಚಿವ ಮುನಿರತ್ನ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನಿರ್ಮಾಪಕ ರಾಕ್‌ಲೈಕ್‌ ವೆಂಕಟೇಶ್‌, ಅಶ್ವಿನಿ ಪುನಿತ್‌ ರಾಜ್‌ಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್‌, ವಾರ್ತಾ ಇಲಾಖೆಯ ಆಯಕ್ತ ಪಿ.ಎಸ್‌.ಹರ್ಷ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್‌ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ಸುಮಾರು 20 ನಿಮಿಷಗಳ ಕಾಲ ಬಸವರಾಜು ಬೊಮ್ಮಾಯಿಯವರು ಮಾತನಾಡಿದರು. ನಂತರ ಕಾರ್ಯಕ್ರಮದಲ್ಲಿ ಹಾಜರಿದ್ದ ಅತಿಥಿಗಳು ಮಾತನಾಡಿದರು.

ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಹಾಗೂ ಇತರರು ತೆರಳಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ನೀಡಲಾಯಿತು. ಮೂರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಮೊದಲ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗ ಬೆಳೆದುಬಂದ ಹಾದಿಯ ಕುರಿತು ಪ್ರದರ್ಶಿಸಲಾಯಿತು. ಎರಡನೆಯದರಲ್ಲಿ  ಪುನೀತ್‌ ರಾಜ್‌ಕುಮಾರ್‌ ಅಭಿನಯದ ವಿವಿಧ ಚಿತ್ರಗೀತೆಗಗಳಿಗೆ ನೃತ್ಯ ಮಾಡಲಾಯಿತು. ಆ ಮೂಲಕ ಪುನೀತ್ ರಾಜ್‌ಕುಮಾರ್‌ ಅವರಿಗೆ ಗೌರವ ಸಲ್ಲಿಸಲಾಯಿತು.

ಮೂರನೇ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾದರಿ ವ್ಯಕ್ತಿಗಳ (ರೋಲ್‌ ಮಾಡೆಲ್‌) ಕುರಿತು ನೃತ್ಯ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ, ಗಾಂಧೀಜಿ, ಝಾನ್ಸಿರಾಣಿ ಲಕ್ಷ್ಮೀಬಾಯಿ, ಸೈರಾ ನರಸಿಂಹರೆಡ್ಡೆ, ಸುಭಾಷ್ ಚಂದ್ರ ಬೋಸ್‌, ಒನಕೆ ಓಬವ್ವ ಸೇರಿದಂತೆ ಹಲವರನ್ನು ಸ್ಮರಿಸಲಾಯಿತು.

ಇದನ್ನೂ ಓದಿರಿ: ಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ಮಾದರಿ ವ್ಯಕ್ತಿತ್ವಗಳ ಪೈಕಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಇರಲಿಲ್ಲ. ಈ ಪ್ರದರ್ಶನದ ಅಂತ್ಯದಲ್ಲಿ ಎಲ್ಲ ಕಲಾವಿದರು ಒಟ್ಟಿಗೆ ವೇದಿಕೆ ಮೇಲೆ ನಿಂತಾಗ ನೃತ್ಯ ತಂಡವು ಸರ್ದಾರ್ ವಲ್ಲಭಬಾಯಿ ಪಟೇಲ್‌ ಮತ್ತು ವಿ.ಡಿ.ಸಾವರ್ಕರ್‌ ಅವರ ಸುಮಾರು ಹತ್ತು ಅಡಿ ಎತ್ತರದ ಕಟೌಟ್ ಪ್ರದರ್ಶಿಸಿತು.

ಬಿಜೆಪಿ ತನ್ನ ಹಿಡನ್ ಅಜೆಂಡಾಗಳನ್ನು ತುರುಕಲು ಪ್ರತಿಷ್ಟಿತ ಚಲನಚಿತ್ರೋತ್ಸವವನ್ನು ಬಳಸುತ್ತಿದೆಯೇ ಎಂದು ಕೇಳಲು ಅಕಾಡೆಮಿಯ ಅಧ್ಯಕ್ಷ ಸುನೀಲ್‌ ಪುರಾಣಿಕ್ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಸುನಿಲ್‌ ಪುರಾಣಿಕ್‌, “ನಮ್ಮ ವೀರ ಸಾವರ್ಕರ್‌ ಏನು ಭಯೋತ್ಪಾದಕನೆ? ಆಜಾದಿ ಕಾ ಅಮೃತ ಮಹೋತ್ಸವ ಎಂದು ಕಾರ್ಯಕ್ರಮ ಮಾಡುತ್ತಿದ್ದೇವೆ. ಭಗತ್‌ಸಿಂಗ್‌, ವೀರ ಸಾವರ್ಕರ್‌, ಚಂದ್ರಶೇಖರ್‌ ಆಜಾದ್ ಮೊದಲಾದವರನ್ನು ಸ್ಮರಿಸಲಾಗಿದೆ” ಎಂದು ತಿಳಿಸಿದರು.

ಅಂಬೇಡ್ಕರ್‌ ಅವರನ್ನೇಕೆ ವೇದಿಕೆ ಮೇಲೆ ತರಲಿಲ್ಲ ಎಂದು ಕೇಳಿದ್ದಕ್ಕೆ, “ಆಜಾದಿ ಕಾ ಅಮೃತ ಮಹೋತ್ಸವ ಮಾಡುತ್ತಿದ್ದೇವೆ.  ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರನ್ನು ಸ್ಮರಿಸಿದ್ದೇವೆ. ಅಂಬೇಡ್ಕರ್‌ ಅವರು ಬರೆದ ಸಂವಿಧಾನದಲ್ಲೇ ನಾವು ಬದುಕುತ್ತಿದ್ದೇವೆ” ಎಂದು ಹೇಳಿದರು.

ಶಿವಾಜಿಯನ್ನು ವೇದಿಕೆ ಮೇಲೆ ತಂದಿದ್ದರ ಕುರಿತು ಪ್ರಶ್ನಿಸಿದಾಗ, “ಸಂಗೊಳ್ಳಿ ರಾಯಣ್ಣ, ಝಾನ್ಸಿರಾಣಿ ಲಕ್ಷ್ಮೀಬಾಯಿ ಅವರಂತೆ ಶಿವಾಜಿಯೂ ಕೂಡ ಹೋರಾಟಗಾರ. ಭಾರತೀಯತೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಹೋರಾಡಿದ ವ್ಯಕ್ತಿಯನ್ನು ನೀವು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಅನ್ನುತ್ತೀರಾ?” ಎಂದು ಪ್ರಶ್ನಿಸಿದರು.

ಟಿಪ್ಪು ಅವರನ್ನೇಕೆ ಕೈ ಬಿಟ್ಟಿದ್ದೀರಿ ಎಂದಿದ್ದಕ್ಕೆ, “ಹತ್ತು ನಿಮಿಷದಲ್ಲಿ ಎಷ್ಟು ಜನರನ್ನು ತೋರಿಸಲು ಆಗುತ್ತದೆ. ಟಿಪ್ಪು ನನ್ನ ದೃಷ್ಟಿಯಲ್ಲಿ ವಿವಾದಾತ್ಮಕ ವ್ಯಕ್ತಿ” ಎಂದು ತಿಳಿಸಿದರು. ಶಿವಾಜಿಯೂ ಕೂಡ ವಿವಾದಾತ್ಮಕ ವ್ಯಕ್ತಿಯಲ್ಲವೇ, ಕನ್ನಡಿಗರಿಗೆ ಶಿವಾಜಿಯಿಂದ ಅನ್ಯಾಯವಾಗಿಲ್ಲವೇ ಎಂದರೆ, “ನಮ್ಮ ದೃಷ್ಟಿಯಲ್ಲಿ ಶಿವಾಜಿ ಅಪ್ರತಿಮ ದೇಶಭಕ್ತ. ನೀವು ದೇಶಭಕ್ತಿ, ದೇಶ ಅಂತಾ ಮಾತನಾಡಿ, ಅಥವಾ ಕನ್ನಡ ಪ್ರೇಮ, ಮರಾಠಿ ಅಂತ ಮಾತನಾಡಿ. ಆರು ಲಕ್ಷ ಜನ ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ. ಹತ್ತು ನಿಮಿಷದಲ್ಲಿ ಎಲ್ಲರನ್ನೂ ತೋರಿಸಲು ಆಗುತ್ತಾ?” ಎಂದು ಕೇಳಿದರು.


ಇದನ್ನೂ ಓದಿರಿ: ‘BIFFes’ ಎಂಬ ಅಂತಾರಾಷ್ಟ್ರೀಯ, Sorry ‘ಕನ್ನಡ ಅಂತಾರಾಷ್ಟ್ರೀಯ ಸಿನಿಮೋತ್ಸವ!’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಗಜ್ಯೋತಿ ಬಸವಣ್ಣನವರ ಕರ್ನಾಟಕ ಈಗ ಬಲಪಂಥೀಯರ ಮುಷ್ಠಿ ಯಲ್ಲಿ, ಅವರ ತತ್ವಾಧರಿತ
    ಕಾರ್ಯ ಕ್ರಮಗಳನ್ನು ಸಿಕ್ಕ ಸಿಕ್ಕ ವೇದಿಕೆಗಳನ್ನು ಉಪಯೋಗಿಸಿ ಕೊಂಡು ತರಾತುರಿ ಯಲ್ಲಿ ಜಾರಿಗೆ ತರುವುದು ಅವರ ಹುನ್ನಾರ. ಇವರ ದರ್ಬಾರು ತಾತ್ಕಾಲಿಕವಾಗಬೇಕು. ಅದಕ್ಕೆ ಮತದಾರರು ಕಾರಣವಾಗಬೇಕು.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...