Homeಕರ್ನಾಟಕ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

- Advertisement -
- Advertisement -

ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ (ಬಿಫೆಸ್) 13 ಆವೃತ್ತಿ ಗುರುವಾರ ಸಂಜೆ ಉದ್ಘಾಟನೆಯಾಗಿದ್ದು, ಕಾರ್ಯಕ್ರಮದಲ್ಲಿ ವಿ.ಡಿ.ಸಾವರ್ಕರ್‌ ಕಟೌಟ್‌‌ ಪ್ರದರ್ಶಿಸಲಾಗಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ನಡೆಯುತ್ತಿರುವ ಬಿಫೆಸ್‌ 13 ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮ ಗುರುವಾರ ಸಂಜೆ ನಡೆಯಿತು. ಈ ಸಂದರ್ಭದಲ್ಲಿ ಸಾವರ್ಕರ್‌ ಕಟೌಟ್‌ಅನ್ನು ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯಿ ಪಟೇಲ್ ಕಟೌಟ್‌ ಜೊತೆಯಲ್ಲಿ ಪ್ರದರ್ಶಿಸಲಾಗಿದೆ.

ಸಾವರ್ಕರ್‌ ಬಲಪಂಥೀಯ ಪಡೆಯ ಐಕಾನ್‌. ಜೊತೆಗೆ ಬ್ರಿಟಿಷರಿಗೆ ಹಲವು ಭಾರಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿರುವುದು ಮತ್ತೆ ಮತ್ತೆ ಚರ್ಚೆಯಾಗುತ್ತಿದೆ. ರಾಷ್ಟ್ರಪಿತ ಗಾಂಧೀಜಿಯವರ ಹತ್ಯೆಯ ಜೊತೆಗೂ ಸಾವರ್ಕರ್‌ ಹೆಸರು ತಳುಕು ಹಾಕಿಕೊಂಡಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವರ್ಕರ್‌ ಕುರಿತು ಪೋಸ್ಟ್‌ ಹಾಕಿದ್ದನ್ನು ಹಲವು ಕನ್ನಡಿಗರು ಕಟುವಾಗಿ ಟೀಕಿಸಿದ್ದರು. ಆದರೀಗ ಬಿಜೆಪಿ ನೇತೃತ್ವದ ಸರ್ಕಾರ ಸಾವರ್ಕರ್‌ ಪ್ರೇಮವನ್ನು ಮತ್ತೆ ಪ್ರದರ್ಶಿಸಿದೆ.

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದಲ್ಲಿ (ಜಿಕೆವಿಕೆ) ಗುರುವಾರ ಸಂಜೆ 4.30ಕ್ಕೆ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರ ರಾಷ್ಟ್ರೀಯ ಸಮಾವೇಶ ಭವನದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಜೆ ಆರು ಗಂಟೆಯ ಬಳಿಕ ಕಾರ್ಯಕ್ರಮ ಚಾಲನೆ ಪಡೆಯಿತು.

ಇದನ್ನೂ ಓದಿರಿ: ಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆ ಮೇಲೆ ಸಿಎಂ ಅವರನ್ನು ಕರೆಯುವ ಮುನ್ನ ಮುಖ್ಯಮಂತ್ರಿಯವರ ಕುರಿತು ಒಂದು ಕಿರು ವಿಡಿಯೊ ಪ್ರದರ್ಶಿಸಿ ಪರಿಚಯಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ನಟಿ ಡಾ.ಭಾರತೀ ವಿಷ್ಣುವರ್ಧನ್‌, ಮಲಯಾಳಂ ನಿರ್ದೇಶಕ ಪ್ರಿಯದರ್ಶನ್ ಅವರ ಕುರಿತೂ ಕಿರು ವಿಡಿಯೊ ಪ್ರದರ್ಶಿಸಲಾಯಿತು. ಸಚಿವ ಮುನಿರತ್ನ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನಿರ್ಮಾಪಕ ರಾಕ್‌ಲೈಕ್‌ ವೆಂಕಟೇಶ್‌, ಅಶ್ವಿನಿ ಪುನಿತ್‌ ರಾಜ್‌ಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್‌, ವಾರ್ತಾ ಇಲಾಖೆಯ ಆಯಕ್ತ ಪಿ.ಎಸ್‌.ಹರ್ಷ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್‌ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ಸುಮಾರು 20 ನಿಮಿಷಗಳ ಕಾಲ ಬಸವರಾಜು ಬೊಮ್ಮಾಯಿಯವರು ಮಾತನಾಡಿದರು. ನಂತರ ಕಾರ್ಯಕ್ರಮದಲ್ಲಿ ಹಾಜರಿದ್ದ ಅತಿಥಿಗಳು ಮಾತನಾಡಿದರು.

ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಹಾಗೂ ಇತರರು ತೆರಳಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ನೀಡಲಾಯಿತು. ಮೂರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಮೊದಲ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗ ಬೆಳೆದುಬಂದ ಹಾದಿಯ ಕುರಿತು ಪ್ರದರ್ಶಿಸಲಾಯಿತು. ಎರಡನೆಯದರಲ್ಲಿ  ಪುನೀತ್‌ ರಾಜ್‌ಕುಮಾರ್‌ ಅಭಿನಯದ ವಿವಿಧ ಚಿತ್ರಗೀತೆಗಗಳಿಗೆ ನೃತ್ಯ ಮಾಡಲಾಯಿತು. ಆ ಮೂಲಕ ಪುನೀತ್ ರಾಜ್‌ಕುಮಾರ್‌ ಅವರಿಗೆ ಗೌರವ ಸಲ್ಲಿಸಲಾಯಿತು.

ಮೂರನೇ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾದರಿ ವ್ಯಕ್ತಿಗಳ (ರೋಲ್‌ ಮಾಡೆಲ್‌) ಕುರಿತು ನೃತ್ಯ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ, ಗಾಂಧೀಜಿ, ಝಾನ್ಸಿರಾಣಿ ಲಕ್ಷ್ಮೀಬಾಯಿ, ಸೈರಾ ನರಸಿಂಹರೆಡ್ಡೆ, ಸುಭಾಷ್ ಚಂದ್ರ ಬೋಸ್‌, ಒನಕೆ ಓಬವ್ವ ಸೇರಿದಂತೆ ಹಲವರನ್ನು ಸ್ಮರಿಸಲಾಯಿತು.

ಇದನ್ನೂ ಓದಿರಿ: ಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ಮಾದರಿ ವ್ಯಕ್ತಿತ್ವಗಳ ಪೈಕಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಇರಲಿಲ್ಲ. ಈ ಪ್ರದರ್ಶನದ ಅಂತ್ಯದಲ್ಲಿ ಎಲ್ಲ ಕಲಾವಿದರು ಒಟ್ಟಿಗೆ ವೇದಿಕೆ ಮೇಲೆ ನಿಂತಾಗ ನೃತ್ಯ ತಂಡವು ಸರ್ದಾರ್ ವಲ್ಲಭಬಾಯಿ ಪಟೇಲ್‌ ಮತ್ತು ವಿ.ಡಿ.ಸಾವರ್ಕರ್‌ ಅವರ ಸುಮಾರು ಹತ್ತು ಅಡಿ ಎತ್ತರದ ಕಟೌಟ್ ಪ್ರದರ್ಶಿಸಿತು.

ಬಿಜೆಪಿ ತನ್ನ ಹಿಡನ್ ಅಜೆಂಡಾಗಳನ್ನು ತುರುಕಲು ಪ್ರತಿಷ್ಟಿತ ಚಲನಚಿತ್ರೋತ್ಸವವನ್ನು ಬಳಸುತ್ತಿದೆಯೇ ಎಂದು ಕೇಳಲು ಅಕಾಡೆಮಿಯ ಅಧ್ಯಕ್ಷ ಸುನೀಲ್‌ ಪುರಾಣಿಕ್ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಸುನಿಲ್‌ ಪುರಾಣಿಕ್‌, “ನಮ್ಮ ವೀರ ಸಾವರ್ಕರ್‌ ಏನು ಭಯೋತ್ಪಾದಕನೆ? ಆಜಾದಿ ಕಾ ಅಮೃತ ಮಹೋತ್ಸವ ಎಂದು ಕಾರ್ಯಕ್ರಮ ಮಾಡುತ್ತಿದ್ದೇವೆ. ಭಗತ್‌ಸಿಂಗ್‌, ವೀರ ಸಾವರ್ಕರ್‌, ಚಂದ್ರಶೇಖರ್‌ ಆಜಾದ್ ಮೊದಲಾದವರನ್ನು ಸ್ಮರಿಸಲಾಗಿದೆ” ಎಂದು ತಿಳಿಸಿದರು.

ಅಂಬೇಡ್ಕರ್‌ ಅವರನ್ನೇಕೆ ವೇದಿಕೆ ಮೇಲೆ ತರಲಿಲ್ಲ ಎಂದು ಕೇಳಿದ್ದಕ್ಕೆ, “ಆಜಾದಿ ಕಾ ಅಮೃತ ಮಹೋತ್ಸವ ಮಾಡುತ್ತಿದ್ದೇವೆ.  ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರನ್ನು ಸ್ಮರಿಸಿದ್ದೇವೆ. ಅಂಬೇಡ್ಕರ್‌ ಅವರು ಬರೆದ ಸಂವಿಧಾನದಲ್ಲೇ ನಾವು ಬದುಕುತ್ತಿದ್ದೇವೆ” ಎಂದು ಹೇಳಿದರು.

ಶಿವಾಜಿಯನ್ನು ವೇದಿಕೆ ಮೇಲೆ ತಂದಿದ್ದರ ಕುರಿತು ಪ್ರಶ್ನಿಸಿದಾಗ, “ಸಂಗೊಳ್ಳಿ ರಾಯಣ್ಣ, ಝಾನ್ಸಿರಾಣಿ ಲಕ್ಷ್ಮೀಬಾಯಿ ಅವರಂತೆ ಶಿವಾಜಿಯೂ ಕೂಡ ಹೋರಾಟಗಾರ. ಭಾರತೀಯತೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಹೋರಾಡಿದ ವ್ಯಕ್ತಿಯನ್ನು ನೀವು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಅನ್ನುತ್ತೀರಾ?” ಎಂದು ಪ್ರಶ್ನಿಸಿದರು.

ಟಿಪ್ಪು ಅವರನ್ನೇಕೆ ಕೈ ಬಿಟ್ಟಿದ್ದೀರಿ ಎಂದಿದ್ದಕ್ಕೆ, “ಹತ್ತು ನಿಮಿಷದಲ್ಲಿ ಎಷ್ಟು ಜನರನ್ನು ತೋರಿಸಲು ಆಗುತ್ತದೆ. ಟಿಪ್ಪು ನನ್ನ ದೃಷ್ಟಿಯಲ್ಲಿ ವಿವಾದಾತ್ಮಕ ವ್ಯಕ್ತಿ” ಎಂದು ತಿಳಿಸಿದರು. ಶಿವಾಜಿಯೂ ಕೂಡ ವಿವಾದಾತ್ಮಕ ವ್ಯಕ್ತಿಯಲ್ಲವೇ, ಕನ್ನಡಿಗರಿಗೆ ಶಿವಾಜಿಯಿಂದ ಅನ್ಯಾಯವಾಗಿಲ್ಲವೇ ಎಂದರೆ, “ನಮ್ಮ ದೃಷ್ಟಿಯಲ್ಲಿ ಶಿವಾಜಿ ಅಪ್ರತಿಮ ದೇಶಭಕ್ತ. ನೀವು ದೇಶಭಕ್ತಿ, ದೇಶ ಅಂತಾ ಮಾತನಾಡಿ, ಅಥವಾ ಕನ್ನಡ ಪ್ರೇಮ, ಮರಾಠಿ ಅಂತ ಮಾತನಾಡಿ. ಆರು ಲಕ್ಷ ಜನ ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ. ಹತ್ತು ನಿಮಿಷದಲ್ಲಿ ಎಲ್ಲರನ್ನೂ ತೋರಿಸಲು ಆಗುತ್ತಾ?” ಎಂದು ಕೇಳಿದರು.


ಇದನ್ನೂ ಓದಿರಿ: ‘BIFFes’ ಎಂಬ ಅಂತಾರಾಷ್ಟ್ರೀಯ, Sorry ‘ಕನ್ನಡ ಅಂತಾರಾಷ್ಟ್ರೀಯ ಸಿನಿಮೋತ್ಸವ!’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಗಜ್ಯೋತಿ ಬಸವಣ್ಣನವರ ಕರ್ನಾಟಕ ಈಗ ಬಲಪಂಥೀಯರ ಮುಷ್ಠಿ ಯಲ್ಲಿ, ಅವರ ತತ್ವಾಧರಿತ
    ಕಾರ್ಯ ಕ್ರಮಗಳನ್ನು ಸಿಕ್ಕ ಸಿಕ್ಕ ವೇದಿಕೆಗಳನ್ನು ಉಪಯೋಗಿಸಿ ಕೊಂಡು ತರಾತುರಿ ಯಲ್ಲಿ ಜಾರಿಗೆ ತರುವುದು ಅವರ ಹುನ್ನಾರ. ಇವರ ದರ್ಬಾರು ತಾತ್ಕಾಲಿಕವಾಗಬೇಕು. ಅದಕ್ಕೆ ಮತದಾರರು ಕಾರಣವಾಗಬೇಕು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...