Homeಕರ್ನಾಟಕ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

- Advertisement -
- Advertisement -

ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ (ಬಿಫೆಸ್) 13 ಆವೃತ್ತಿ ಗುರುವಾರ ಸಂಜೆ ಉದ್ಘಾಟನೆಯಾಗಿದ್ದು, ಕಾರ್ಯಕ್ರಮದಲ್ಲಿ ವಿ.ಡಿ.ಸಾವರ್ಕರ್‌ ಕಟೌಟ್‌‌ ಪ್ರದರ್ಶಿಸಲಾಗಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ನಡೆಯುತ್ತಿರುವ ಬಿಫೆಸ್‌ 13 ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮ ಗುರುವಾರ ಸಂಜೆ ನಡೆಯಿತು. ಈ ಸಂದರ್ಭದಲ್ಲಿ ಸಾವರ್ಕರ್‌ ಕಟೌಟ್‌ಅನ್ನು ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯಿ ಪಟೇಲ್ ಕಟೌಟ್‌ ಜೊತೆಯಲ್ಲಿ ಪ್ರದರ್ಶಿಸಲಾಗಿದೆ.

ಸಾವರ್ಕರ್‌ ಬಲಪಂಥೀಯ ಪಡೆಯ ಐಕಾನ್‌. ಜೊತೆಗೆ ಬ್ರಿಟಿಷರಿಗೆ ಹಲವು ಭಾರಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿರುವುದು ಮತ್ತೆ ಮತ್ತೆ ಚರ್ಚೆಯಾಗುತ್ತಿದೆ. ರಾಷ್ಟ್ರಪಿತ ಗಾಂಧೀಜಿಯವರ ಹತ್ಯೆಯ ಜೊತೆಗೂ ಸಾವರ್ಕರ್‌ ಹೆಸರು ತಳುಕು ಹಾಕಿಕೊಂಡಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವರ್ಕರ್‌ ಕುರಿತು ಪೋಸ್ಟ್‌ ಹಾಕಿದ್ದನ್ನು ಹಲವು ಕನ್ನಡಿಗರು ಕಟುವಾಗಿ ಟೀಕಿಸಿದ್ದರು. ಆದರೀಗ ಬಿಜೆಪಿ ನೇತೃತ್ವದ ಸರ್ಕಾರ ಸಾವರ್ಕರ್‌ ಪ್ರೇಮವನ್ನು ಮತ್ತೆ ಪ್ರದರ್ಶಿಸಿದೆ.

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದಲ್ಲಿ (ಜಿಕೆವಿಕೆ) ಗುರುವಾರ ಸಂಜೆ 4.30ಕ್ಕೆ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರ ರಾಷ್ಟ್ರೀಯ ಸಮಾವೇಶ ಭವನದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಜೆ ಆರು ಗಂಟೆಯ ಬಳಿಕ ಕಾರ್ಯಕ್ರಮ ಚಾಲನೆ ಪಡೆಯಿತು.

ಇದನ್ನೂ ಓದಿರಿ: ಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆ ಮೇಲೆ ಸಿಎಂ ಅವರನ್ನು ಕರೆಯುವ ಮುನ್ನ ಮುಖ್ಯಮಂತ್ರಿಯವರ ಕುರಿತು ಒಂದು ಕಿರು ವಿಡಿಯೊ ಪ್ರದರ್ಶಿಸಿ ಪರಿಚಯಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ನಟಿ ಡಾ.ಭಾರತೀ ವಿಷ್ಣುವರ್ಧನ್‌, ಮಲಯಾಳಂ ನಿರ್ದೇಶಕ ಪ್ರಿಯದರ್ಶನ್ ಅವರ ಕುರಿತೂ ಕಿರು ವಿಡಿಯೊ ಪ್ರದರ್ಶಿಸಲಾಯಿತು. ಸಚಿವ ಮುನಿರತ್ನ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನಿರ್ಮಾಪಕ ರಾಕ್‌ಲೈಕ್‌ ವೆಂಕಟೇಶ್‌, ಅಶ್ವಿನಿ ಪುನಿತ್‌ ರಾಜ್‌ಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್‌, ವಾರ್ತಾ ಇಲಾಖೆಯ ಆಯಕ್ತ ಪಿ.ಎಸ್‌.ಹರ್ಷ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್‌ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ಸುಮಾರು 20 ನಿಮಿಷಗಳ ಕಾಲ ಬಸವರಾಜು ಬೊಮ್ಮಾಯಿಯವರು ಮಾತನಾಡಿದರು. ನಂತರ ಕಾರ್ಯಕ್ರಮದಲ್ಲಿ ಹಾಜರಿದ್ದ ಅತಿಥಿಗಳು ಮಾತನಾಡಿದರು.

ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಹಾಗೂ ಇತರರು ತೆರಳಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ನೀಡಲಾಯಿತು. ಮೂರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಮೊದಲ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗ ಬೆಳೆದುಬಂದ ಹಾದಿಯ ಕುರಿತು ಪ್ರದರ್ಶಿಸಲಾಯಿತು. ಎರಡನೆಯದರಲ್ಲಿ  ಪುನೀತ್‌ ರಾಜ್‌ಕುಮಾರ್‌ ಅಭಿನಯದ ವಿವಿಧ ಚಿತ್ರಗೀತೆಗಗಳಿಗೆ ನೃತ್ಯ ಮಾಡಲಾಯಿತು. ಆ ಮೂಲಕ ಪುನೀತ್ ರಾಜ್‌ಕುಮಾರ್‌ ಅವರಿಗೆ ಗೌರವ ಸಲ್ಲಿಸಲಾಯಿತು.

ಮೂರನೇ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾದರಿ ವ್ಯಕ್ತಿಗಳ (ರೋಲ್‌ ಮಾಡೆಲ್‌) ಕುರಿತು ನೃತ್ಯ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ, ಗಾಂಧೀಜಿ, ಝಾನ್ಸಿರಾಣಿ ಲಕ್ಷ್ಮೀಬಾಯಿ, ಸೈರಾ ನರಸಿಂಹರೆಡ್ಡೆ, ಸುಭಾಷ್ ಚಂದ್ರ ಬೋಸ್‌, ಒನಕೆ ಓಬವ್ವ ಸೇರಿದಂತೆ ಹಲವರನ್ನು ಸ್ಮರಿಸಲಾಯಿತು.

ಇದನ್ನೂ ಓದಿರಿ: ಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ಮಾದರಿ ವ್ಯಕ್ತಿತ್ವಗಳ ಪೈಕಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಇರಲಿಲ್ಲ. ಈ ಪ್ರದರ್ಶನದ ಅಂತ್ಯದಲ್ಲಿ ಎಲ್ಲ ಕಲಾವಿದರು ಒಟ್ಟಿಗೆ ವೇದಿಕೆ ಮೇಲೆ ನಿಂತಾಗ ನೃತ್ಯ ತಂಡವು ಸರ್ದಾರ್ ವಲ್ಲಭಬಾಯಿ ಪಟೇಲ್‌ ಮತ್ತು ವಿ.ಡಿ.ಸಾವರ್ಕರ್‌ ಅವರ ಸುಮಾರು ಹತ್ತು ಅಡಿ ಎತ್ತರದ ಕಟೌಟ್ ಪ್ರದರ್ಶಿಸಿತು.

ಬಿಜೆಪಿ ತನ್ನ ಹಿಡನ್ ಅಜೆಂಡಾಗಳನ್ನು ತುರುಕಲು ಪ್ರತಿಷ್ಟಿತ ಚಲನಚಿತ್ರೋತ್ಸವವನ್ನು ಬಳಸುತ್ತಿದೆಯೇ ಎಂದು ಕೇಳಲು ಅಕಾಡೆಮಿಯ ಅಧ್ಯಕ್ಷ ಸುನೀಲ್‌ ಪುರಾಣಿಕ್ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಸುನಿಲ್‌ ಪುರಾಣಿಕ್‌, “ನಮ್ಮ ವೀರ ಸಾವರ್ಕರ್‌ ಏನು ಭಯೋತ್ಪಾದಕನೆ? ಆಜಾದಿ ಕಾ ಅಮೃತ ಮಹೋತ್ಸವ ಎಂದು ಕಾರ್ಯಕ್ರಮ ಮಾಡುತ್ತಿದ್ದೇವೆ. ಭಗತ್‌ಸಿಂಗ್‌, ವೀರ ಸಾವರ್ಕರ್‌, ಚಂದ್ರಶೇಖರ್‌ ಆಜಾದ್ ಮೊದಲಾದವರನ್ನು ಸ್ಮರಿಸಲಾಗಿದೆ” ಎಂದು ತಿಳಿಸಿದರು.

ಅಂಬೇಡ್ಕರ್‌ ಅವರನ್ನೇಕೆ ವೇದಿಕೆ ಮೇಲೆ ತರಲಿಲ್ಲ ಎಂದು ಕೇಳಿದ್ದಕ್ಕೆ, “ಆಜಾದಿ ಕಾ ಅಮೃತ ಮಹೋತ್ಸವ ಮಾಡುತ್ತಿದ್ದೇವೆ.  ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರನ್ನು ಸ್ಮರಿಸಿದ್ದೇವೆ. ಅಂಬೇಡ್ಕರ್‌ ಅವರು ಬರೆದ ಸಂವಿಧಾನದಲ್ಲೇ ನಾವು ಬದುಕುತ್ತಿದ್ದೇವೆ” ಎಂದು ಹೇಳಿದರು.

ಶಿವಾಜಿಯನ್ನು ವೇದಿಕೆ ಮೇಲೆ ತಂದಿದ್ದರ ಕುರಿತು ಪ್ರಶ್ನಿಸಿದಾಗ, “ಸಂಗೊಳ್ಳಿ ರಾಯಣ್ಣ, ಝಾನ್ಸಿರಾಣಿ ಲಕ್ಷ್ಮೀಬಾಯಿ ಅವರಂತೆ ಶಿವಾಜಿಯೂ ಕೂಡ ಹೋರಾಟಗಾರ. ಭಾರತೀಯತೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಹೋರಾಡಿದ ವ್ಯಕ್ತಿಯನ್ನು ನೀವು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಅನ್ನುತ್ತೀರಾ?” ಎಂದು ಪ್ರಶ್ನಿಸಿದರು.

ಟಿಪ್ಪು ಅವರನ್ನೇಕೆ ಕೈ ಬಿಟ್ಟಿದ್ದೀರಿ ಎಂದಿದ್ದಕ್ಕೆ, “ಹತ್ತು ನಿಮಿಷದಲ್ಲಿ ಎಷ್ಟು ಜನರನ್ನು ತೋರಿಸಲು ಆಗುತ್ತದೆ. ಟಿಪ್ಪು ನನ್ನ ದೃಷ್ಟಿಯಲ್ಲಿ ವಿವಾದಾತ್ಮಕ ವ್ಯಕ್ತಿ” ಎಂದು ತಿಳಿಸಿದರು. ಶಿವಾಜಿಯೂ ಕೂಡ ವಿವಾದಾತ್ಮಕ ವ್ಯಕ್ತಿಯಲ್ಲವೇ, ಕನ್ನಡಿಗರಿಗೆ ಶಿವಾಜಿಯಿಂದ ಅನ್ಯಾಯವಾಗಿಲ್ಲವೇ ಎಂದರೆ, “ನಮ್ಮ ದೃಷ್ಟಿಯಲ್ಲಿ ಶಿವಾಜಿ ಅಪ್ರತಿಮ ದೇಶಭಕ್ತ. ನೀವು ದೇಶಭಕ್ತಿ, ದೇಶ ಅಂತಾ ಮಾತನಾಡಿ, ಅಥವಾ ಕನ್ನಡ ಪ್ರೇಮ, ಮರಾಠಿ ಅಂತ ಮಾತನಾಡಿ. ಆರು ಲಕ್ಷ ಜನ ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ. ಹತ್ತು ನಿಮಿಷದಲ್ಲಿ ಎಲ್ಲರನ್ನೂ ತೋರಿಸಲು ಆಗುತ್ತಾ?” ಎಂದು ಕೇಳಿದರು.


ಇದನ್ನೂ ಓದಿರಿ: ‘BIFFes’ ಎಂಬ ಅಂತಾರಾಷ್ಟ್ರೀಯ, Sorry ‘ಕನ್ನಡ ಅಂತಾರಾಷ್ಟ್ರೀಯ ಸಿನಿಮೋತ್ಸವ!’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಗಜ್ಯೋತಿ ಬಸವಣ್ಣನವರ ಕರ್ನಾಟಕ ಈಗ ಬಲಪಂಥೀಯರ ಮುಷ್ಠಿ ಯಲ್ಲಿ, ಅವರ ತತ್ವಾಧರಿತ
    ಕಾರ್ಯ ಕ್ರಮಗಳನ್ನು ಸಿಕ್ಕ ಸಿಕ್ಕ ವೇದಿಕೆಗಳನ್ನು ಉಪಯೋಗಿಸಿ ಕೊಂಡು ತರಾತುರಿ ಯಲ್ಲಿ ಜಾರಿಗೆ ತರುವುದು ಅವರ ಹುನ್ನಾರ. ಇವರ ದರ್ಬಾರು ತಾತ್ಕಾಲಿಕವಾಗಬೇಕು. ಅದಕ್ಕೆ ಮತದಾರರು ಕಾರಣವಾಗಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...