Homeಮುಖಪುಟಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

- Advertisement -
- Advertisement -

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ರಾಹುಲ್ ಅವರ ವಿವಾದಿತ ಭಾಷಣದ ವೀಡಿಯೊವನ್ನು ಪ್ರದರ್ಶಿಸುವ ಮನವಿ ತಿರಸ್ಕರಿಸಿದ ಪುಣೆಯ ವಿಶೇಷ ಸಂಸದ/ಶಾಸಕ ನ್ಯಾಯಾಲಯ, ಅರ್ಜಿ ವಜಾಗೊಳಿಸಿದೆ.

ಗಮನಾರ್ಹವಾಗಿ, ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು, ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂದು ರಾಹುಲ್ ಗಾಂಧಿಯವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ವಿಶೇಷ ನ್ಯಾಯಾಧೀಶ ಅಮೋಲ್ ಶಿಂಧೆ ಅವರು ಅರ್ಜಿಯನ್ನು ವಜಾಗೊಳಿಸಿದರು.

ನವೆಂಬರ್ 14 ರಂದು ನ್ಯಾಯಾಲಯವು, ಮಾನನಷ್ಟ ಭಾಷಣವನ್ನು ಹೊಂದಿದೆ ಎಂದು ಹೇಳಲಾದ ಕಾಂಪ್ಯಾಕ್ಟ್ ಡಿಸ್ಕ್ (ಸಿಡಿ) ಅನ್ನು ಪ್ಲೇ ಮಾಡಿದಾಗ, ಅದು ಖಾಲಿ ಇರುವುದು ಕಂಡುಬಂದಿದೆ. ಕೇಸ್ ದಾಖಲಿಸಿದ ಸಮಯದಲ್ಲಿ ಸತ್ಯಕಿ ಈ ಸಿಡಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಸದರಿ ಸಿಡಿ ಖಾಲಿಯಾಗಿದ್ದಾಗ, ರಾಹುಲ್ ಗಾಂಧಿಯವರ ಯೂಟ್ಯೂಬ್ ಚಾನೆಲ್‌ನ ಭಾಷಣ ವೀಡಿಯೊವನ್ನು ನೇರವಾಗಿ ಪ್ಲೇ ಮಾಡುವಂತೆ ಒತ್ತಾಯಿಸಿ ಸತ್ಯಕಿ ಅರ್ಜಿ ಸಲ್ಲಿಸಿದರು. ಅವರು ಸದರಿ ವೀಡಿಯೊದ ಲಿಂಕ್ ಅನ್ನು ಸಿಡಿಯೊಂದಿಗೆ ನ್ಯಾಯಾಲಯಕ್ಕೆ ನೀಡಿದ್ದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಧೀಶ ಶಿಂಧೆ ತಮ್ಮ ಆದೇಶದಲ್ಲಿ, ಸತ್ಯಕಿ ಸಲ್ಲಿಸಿದ ಸಿಡಿಯನ್ನು ನ್ಯಾಯಾಲಯದ ಲ್ಯಾಪ್‌ಟಾಪ್ ಮತ್ತು ಕಂಪ್ಯೂಟರ್‌ನಲ್ಲಿ ಪ್ರಸಾರ ಮಾಡುವಾಗ ಅದು ಖಾಲಿಯಾಗಿತ್ತು. ಅದರಲ್ಲಿ ಯಾವುದೇ ಡೇಟಾ ಇರಲಿಲ್ಲ ಎಂದು ಗಮನಸೆಳೆದರು.

ಸತ್ಯಕಿ ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 65ಬಿ ಅಡಿಯಲ್ಲಿ ಕಡ್ಡಾಯ ಪ್ರಮಾಣಪತ್ರವನ್ನು ಸಿಡಿಗೆ ಲಗತ್ತಿಸಿದ್ದಾರೆ ಎಂದು ನ್ಯಾಯಾಧೀಶರು ಗಮನಿಸಿದರು.

“ದೂರುದಾರರು ಪ್ಲೇ ಮಾಡಲು ಕೋರಿರುವ ದೂರಿನಲ್ಲಿ ಉಲ್ಲೇಖಿಸಲಾದ ಯುಆರ್‌ಎಲ್‌ಗೆ ಪ್ರಮಾಣಪತ್ರವನ್ನು ಬಳಸಲಾಗುವುದಿಲ್ಲ. ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 65-ಬಿ ಪ್ರಕಾರ ಯುಆರ್‌ಎಲ್‌ ಅನ್ನು ಪ್ರಮಾಣಪತ್ರವು ಬೆಂಬಲಿಸುವುದಿಲ್ಲ. ಆದ್ದರಿಂದ, ಯುಆರ್‌ಎಲ್‌ ಅನ್ನು ಸಾಕ್ಷ್ಯದಲ್ಲಿ ಸ್ವೀಕಾರಾರ್ಹವಲ್ಲ” ಎಂದು ನ್ಯಾಯಾಧೀಶರು ಹೇಳಿದರು.

2023 ರಲ್ಲಿ, ಆಪಾದಿತ ಮಾನನಷ್ಟ ಭಾಷಣವನ್ನು ಕೇಳಿದ ನಂತರ ದೂರುದಾರರು ತಕ್ಷಣ ದೂರು ದಾಖಲಿಸಿದ್ದಾರೆ ಎಂದು ವಿಶೇಷ ನ್ಯಾಯಾಲಯವು ಗಮನಿಸಿತು. “2023 ರಲ್ಲಿ, ಆಪಾದಿತ ಮಾನನಷ್ಟ ಭಾಷಣವನ್ನು ನೀಡಿದ, ಪ್ರಸಾರ ಮಾಡಿದ ಕಾರಣಕ್ಕೆ ಪ್ರಕರಣವನ್ನು ದಾಖಲಿಸಲಾಗಿದೆ. ಆದ್ದರಿಂದ, ಈ ನ್ಯಾಯಾಲಯದಲ್ಲಿ ಯುಆರ್‌ಎಲ್‌ ಅನ್ನು ಪ್ಲೇ ಮಾಡಲು ಸಾಧ್ಯವಿಲ್ಲ. ದೂರುದಾರರು ತಮ್ಮ ಪ್ರಕರಣವನ್ನು ಸಮಂಜಸವಾದ ಅನುಮಾನ ಮೀರಿ ಸಾಬೀತುಪಡಿಸಬೇಕು. ಈ ಅರ್ಜಿಯಲ್ಲಿ ಯಾವುದೇ ಅರ್ಹತೆ ಇಲ್ಲ ಎಂದು ಈ ನ್ಯಾಯಾಲಯವು ಕಂಡುಕೊಳ್ಳುತ್ತದೆ. ದೂರುದಾರರ ಅರ್ಜಿಯನ್ನು ತಿರಸ್ಕರಿಸಲಾಗುವುದು” ಎಂದು ಹೇಳಿದರು.

ಈ ಚರ್ಚೆಗಳೊಂದಿಗೆ ನ್ಯಾಯಾಲಯವು ನ್ಯಾಯಾಲಯದ ಕೋಣೆಯಲ್ಲಿ ಯೂಟ್ಯೂಬ್‌ ವೀಡಿಯೊವನ್ನು ಪ್ಲೇ ಮಾಡಬೇಕೆಂಬ ಸತ್ಯಕಿ ಅವರ ಅರ್ಜಿಯನ್ನು ವಜಾಗೊಳಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...