Homeಮುಖಪುಟಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

- Advertisement -
- Advertisement -

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ರಾಹುಲ್ ಅವರ ವಿವಾದಿತ ಭಾಷಣದ ವೀಡಿಯೊವನ್ನು ಪ್ರದರ್ಶಿಸುವ ಮನವಿ ತಿರಸ್ಕರಿಸಿದ ಪುಣೆಯ ವಿಶೇಷ ಸಂಸದ/ಶಾಸಕ ನ್ಯಾಯಾಲಯ, ಅರ್ಜಿ ವಜಾಗೊಳಿಸಿದೆ.

ಗಮನಾರ್ಹವಾಗಿ, ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು, ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂದು ರಾಹುಲ್ ಗಾಂಧಿಯವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ವಿಶೇಷ ನ್ಯಾಯಾಧೀಶ ಅಮೋಲ್ ಶಿಂಧೆ ಅವರು ಅರ್ಜಿಯನ್ನು ವಜಾಗೊಳಿಸಿದರು.

ನವೆಂಬರ್ 14 ರಂದು ನ್ಯಾಯಾಲಯವು, ಮಾನನಷ್ಟ ಭಾಷಣವನ್ನು ಹೊಂದಿದೆ ಎಂದು ಹೇಳಲಾದ ಕಾಂಪ್ಯಾಕ್ಟ್ ಡಿಸ್ಕ್ (ಸಿಡಿ) ಅನ್ನು ಪ್ಲೇ ಮಾಡಿದಾಗ, ಅದು ಖಾಲಿ ಇರುವುದು ಕಂಡುಬಂದಿದೆ. ಕೇಸ್ ದಾಖಲಿಸಿದ ಸಮಯದಲ್ಲಿ ಸತ್ಯಕಿ ಈ ಸಿಡಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಸದರಿ ಸಿಡಿ ಖಾಲಿಯಾಗಿದ್ದಾಗ, ರಾಹುಲ್ ಗಾಂಧಿಯವರ ಯೂಟ್ಯೂಬ್ ಚಾನೆಲ್‌ನ ಭಾಷಣ ವೀಡಿಯೊವನ್ನು ನೇರವಾಗಿ ಪ್ಲೇ ಮಾಡುವಂತೆ ಒತ್ತಾಯಿಸಿ ಸತ್ಯಕಿ ಅರ್ಜಿ ಸಲ್ಲಿಸಿದರು. ಅವರು ಸದರಿ ವೀಡಿಯೊದ ಲಿಂಕ್ ಅನ್ನು ಸಿಡಿಯೊಂದಿಗೆ ನ್ಯಾಯಾಲಯಕ್ಕೆ ನೀಡಿದ್ದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಧೀಶ ಶಿಂಧೆ ತಮ್ಮ ಆದೇಶದಲ್ಲಿ, ಸತ್ಯಕಿ ಸಲ್ಲಿಸಿದ ಸಿಡಿಯನ್ನು ನ್ಯಾಯಾಲಯದ ಲ್ಯಾಪ್‌ಟಾಪ್ ಮತ್ತು ಕಂಪ್ಯೂಟರ್‌ನಲ್ಲಿ ಪ್ರಸಾರ ಮಾಡುವಾಗ ಅದು ಖಾಲಿಯಾಗಿತ್ತು. ಅದರಲ್ಲಿ ಯಾವುದೇ ಡೇಟಾ ಇರಲಿಲ್ಲ ಎಂದು ಗಮನಸೆಳೆದರು.

ಸತ್ಯಕಿ ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 65ಬಿ ಅಡಿಯಲ್ಲಿ ಕಡ್ಡಾಯ ಪ್ರಮಾಣಪತ್ರವನ್ನು ಸಿಡಿಗೆ ಲಗತ್ತಿಸಿದ್ದಾರೆ ಎಂದು ನ್ಯಾಯಾಧೀಶರು ಗಮನಿಸಿದರು.

“ದೂರುದಾರರು ಪ್ಲೇ ಮಾಡಲು ಕೋರಿರುವ ದೂರಿನಲ್ಲಿ ಉಲ್ಲೇಖಿಸಲಾದ ಯುಆರ್‌ಎಲ್‌ಗೆ ಪ್ರಮಾಣಪತ್ರವನ್ನು ಬಳಸಲಾಗುವುದಿಲ್ಲ. ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 65-ಬಿ ಪ್ರಕಾರ ಯುಆರ್‌ಎಲ್‌ ಅನ್ನು ಪ್ರಮಾಣಪತ್ರವು ಬೆಂಬಲಿಸುವುದಿಲ್ಲ. ಆದ್ದರಿಂದ, ಯುಆರ್‌ಎಲ್‌ ಅನ್ನು ಸಾಕ್ಷ್ಯದಲ್ಲಿ ಸ್ವೀಕಾರಾರ್ಹವಲ್ಲ” ಎಂದು ನ್ಯಾಯಾಧೀಶರು ಹೇಳಿದರು.

2023 ರಲ್ಲಿ, ಆಪಾದಿತ ಮಾನನಷ್ಟ ಭಾಷಣವನ್ನು ಕೇಳಿದ ನಂತರ ದೂರುದಾರರು ತಕ್ಷಣ ದೂರು ದಾಖಲಿಸಿದ್ದಾರೆ ಎಂದು ವಿಶೇಷ ನ್ಯಾಯಾಲಯವು ಗಮನಿಸಿತು. “2023 ರಲ್ಲಿ, ಆಪಾದಿತ ಮಾನನಷ್ಟ ಭಾಷಣವನ್ನು ನೀಡಿದ, ಪ್ರಸಾರ ಮಾಡಿದ ಕಾರಣಕ್ಕೆ ಪ್ರಕರಣವನ್ನು ದಾಖಲಿಸಲಾಗಿದೆ. ಆದ್ದರಿಂದ, ಈ ನ್ಯಾಯಾಲಯದಲ್ಲಿ ಯುಆರ್‌ಎಲ್‌ ಅನ್ನು ಪ್ಲೇ ಮಾಡಲು ಸಾಧ್ಯವಿಲ್ಲ. ದೂರುದಾರರು ತಮ್ಮ ಪ್ರಕರಣವನ್ನು ಸಮಂಜಸವಾದ ಅನುಮಾನ ಮೀರಿ ಸಾಬೀತುಪಡಿಸಬೇಕು. ಈ ಅರ್ಜಿಯಲ್ಲಿ ಯಾವುದೇ ಅರ್ಹತೆ ಇಲ್ಲ ಎಂದು ಈ ನ್ಯಾಯಾಲಯವು ಕಂಡುಕೊಳ್ಳುತ್ತದೆ. ದೂರುದಾರರ ಅರ್ಜಿಯನ್ನು ತಿರಸ್ಕರಿಸಲಾಗುವುದು” ಎಂದು ಹೇಳಿದರು.

ಈ ಚರ್ಚೆಗಳೊಂದಿಗೆ ನ್ಯಾಯಾಲಯವು ನ್ಯಾಯಾಲಯದ ಕೋಣೆಯಲ್ಲಿ ಯೂಟ್ಯೂಬ್‌ ವೀಡಿಯೊವನ್ನು ಪ್ಲೇ ಮಾಡಬೇಕೆಂಬ ಸತ್ಯಕಿ ಅವರ ಅರ್ಜಿಯನ್ನು ವಜಾಗೊಳಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...