Homeಮುಖಪುಟಸಾವರ್ಕರ್ ಮಾನಹಾನಿ ಪ್ರಕರಣ | ದೂರುದಾರ ನಾಥೂರಾಮ್ ಗೋಡ್ಸೆಯ ಸಂಬಂಧಿ: ರಾಹುಲ್ ಗಾಂಧಿ ಆರೋಪ

ಸಾವರ್ಕರ್ ಮಾನಹಾನಿ ಪ್ರಕರಣ | ದೂರುದಾರ ನಾಥೂರಾಮ್ ಗೋಡ್ಸೆಯ ಸಂಬಂಧಿ: ರಾಹುಲ್ ಗಾಂಧಿ ಆರೋಪ

- Advertisement -
- Advertisement -

ಸಾವರ್ಕರ್ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದ ದೂರುದಾರರಾಗಿರುವ ಸತ್ಯಕಿ ಸಾವರ್ಕರ್ ಅವರು, ಮಹಾತ್ಮ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯ ಸಹೋದರ ಗೋಪಾಲ್ ವಿನಾಯಕ್ ಗೋಡ್ಸೆಯ ಮೊಮ್ಮಗ ಎಂಬ ವಾಸ್ತವ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ ಎಂದು ಲೋಕಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ವಕೀಲ ಮಿಲಿಂದ್ ಪವಾರ್ ಮೂಲಕ ಪುಣೆಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ರಾಹುಲ್ ಗಾಂಧಿ, “ದೂರುದಾರ ಸತ್ಯಕಿ ಅವರು ತಾನು ವಿನಾಯಕ ಸಾವರ್ಕರ್ ಅವರ ಸೋದರಳಿಯ ಅಶೋಕ್ ಸಾವರ್ಕರ್ ಅವರ ಮಗ ಎಂದು ಹೇಳಿಕೊಂಡಿದ್ದಾರೆ. ಆದರೆ, ತನ್ನ ತಾಯಿ ಹಿಮಾನಿ ಅವರು ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯ ಸಹೋದರ ಗೋಪಾಲ್ ಗೋಡ್ಸೆಯ ಮಗಳು ಎಂಬ ಅಂಶವನ್ನು ಅವರು ಮರೆಮಾಚಿದ್ದಾರೆ” ಎಂದಿದ್ದಾರೆ.

ನಾಥೂರಾಮ್ ಗೋಡ್ಸೆ ಮತ್ತು ಗೋಪಾಲ್ ಗೋಡ್ಸೆ ಇಬ್ಬರೂ ಗಾಂಧಿ ಕೊಲೆ ಪ್ರಕರಣದ ಅಪರಾಧಿಗಳು

“ಸತ್ಯಕಿ ಅವರು ತನ್ನ ದೂರಿನ ಜೊತೆಗೆ ‘ತಂದೆಯ ಕಡೆಯ’ ವಂಶವೃಕ್ಷವನ್ನು ಮಾತ್ರ ಬಹಿರಂಗಪಡಿಸಿದ್ದಾರೆ. ‘ತಾಯಿಯ ಕಡೆಯ’ ವಂಶವೃಕ್ಷವನ್ನು ಬಹಿರಂಗಪಡಿಸಿಲ್ಲ. ಇದರಿಂದಾಗಿ ಅವರು (ಸತ್ಯಕಿ) ಗೋಪಾಲ್ ಗೋಡ್ಸೆಯ ಮೊಮ್ಮಗ ಎಂಬ ಅಂಶವು ದಾಖಲಾಗಿಲ್ಲ” ಎಂದು ರಾಹುಲ್ ಗಾಂಧಿ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ಮಹಾತ್ಮಾ ಗಾಂಧಿಯವರ ಹತ್ಯೆ ಪ್ರಕರಣದಲ್ಲಿ ಸಾವರ್ಕರ್ ಕೂಡ ‘ಸಹ-ಆರೋಪಿ’ ಆಗಿದ್ದರು. ಆದರೆ, ಸರಿಯಾದ ಪುರಾವೆಗಳ ಕೊರತೆಯಿಂದಾಗಿ ಅವರನ್ನು ಖುಲಾಸೆಗೊಳಿಸಲಾಯಿತು, ಶಿಕ್ಷೆಗೆ ಗುರಿಪಡಿಸಲಾಗಿಲ್ಲ. ಈ ಅಂಶವನ್ನು ಸತ್ಯಕಿ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇದಲ್ಲದೆ, ಗೋಡ್ಸೆ ಮತ್ತು ಸಾವರ್ಕರ್ ಇಬ್ಬರೂ ‘ಹಿಂದೂ ರಾಷ್ಟ್ರ’ದ ಕಟ್ಟಾ ಬೆಂಬಲಿಗರಾಗಿದ್ದರು. ಭಾರತದ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಹೊರಗಿನವರಂತೆ ಹೇಗೆ ಪರಿಗಣಿಸಿದ್ದರು ಮತ್ತು ವಿಭಜನೆಯ ಸಮಯದಲ್ಲಿ ಮಹಾತ್ಮ ಗಾಂಧಿಯವರು ಮುಸ್ಲಿಮರಿಗೆ ‘ದಯಪಾಲಿಸಿದ್ದರು’ ಎಂದು ಪರಿಗಣಿಸಿ ಅವರನ್ನು ಕೊಲ್ಲಲು ಹೇಗೆ ಸಂಚು ರೂಪಿಸಿದರು ಎಂಬುದನ್ನು ತೋರಿಸಲು ರಾಹುಲ್ ಗಾಂಧಿ ತನ್ನ ಅರ್ಜಿಯಲ್ಲಿ ‘ಐತಿಹಾಸಿಕ ಸಂಗತಿಗಳನ್ನು’ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

ಸಾವರ್ಕರ್ ಎರಡು ರಾಷ್ಟ್ರಗಳ ಸಿದ್ಧಾಂತದ ಪ್ರಮುಖ ಪ್ರತಿಪಾದಕರಾಗಿದ್ದರು. ಇದು ಹಿಂದೂಗಳು ಮತ್ತು ಮುಸ್ಲಿಮರುದ್ದು ‘ವಿಭಿನ್ನ ರಾಷ್ಟ್ರಗಳು’ ಎಂದು ಪ್ರತಿಪಾದಿಸಿದ್ದರು. ಇದನ್ನು ನಂತರ ಮುಸ್ಲಿಂ ಲೀಗ್ ನಾಯಕ ಮೊಹಮ್ಮದ್ ಅಲಿ ಜಿನ್ನಾ ಕೂಡ ಬೆಂಬಲಿಸಿದ್ದರು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಸಾವರ್ಕರ್ ಜೈಲಿನಲ್ಲಿದ್ದಾಗಿನಿಂದಲೂ ‘ಮುಸ್ಲಿಂ ವಿರೋಧಿ’ ಬರಹಗಳಿಗೆ ಹೆಸರುವಾಸಿಯಾಗಿದ್ದರು” ಎಂಬುವುದಾಗಿ ಅರ್ಜಿಯಲ್ಲಿ ಆರೋಪಿಸಲಾಗಿದೆ ಎಂದು ವರದಿಯಾಗಿದೆ.

ವಿಶೇಷ ನ್ಯಾಯಾಧೀಶ ಅಮೋಲ್ ಶಿಂಧೆ ಅವರು ದೂರುದಾರ ಸತ್ಯಕಿ ಅವರಿಂದ ರಾಹುಲ್ ಗಾಂಧಿ ಅರ್ಜಿಯಲ್ಲಿ ಮಾಡಿರುವ ಆರೋಪಗಳ ಕುರಿತು ಪ್ರತಿಕ್ರಿಯೆ ಕೇಳಿದ್ದಾರೆ.

2023ರಲ್ಲಿ ಲಂಡನ್‌ಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ವಿನಾಯಕ್ ದಾಮೋದರ್ ಸಾವರ್ಕರ್ ವಿರುದ್ಧ ಮಾನಹಾನಿಕಾರಕ ಹೇಳಿಕೆ ನೀಡಿದ್ದಾರೆ ಎಂದು ಸತ್ಯಕಿ ಸಾವರ್ಕರ್ ಮೊಕದ್ದಮೆ ಹೂಡಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 (ಮಾನಹಾನಿ) ಅಡಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಬೇಕು ಮತ್ತು ಅಪರಾಧ ಪ್ರಕ್ರಿಯೆ ಸಂಹಿತೆಯ ಸೆಕ್ಷನ್ 357 ಅಡಿ ಅವರಿಂದ ಪರಿಹಾರ ಕೊಡಿಸಬೇಕು ಎಂದು ಸತ್ಯಕಿ ಕೋರಿದ್ದಾರೆ.

ಈ ಪ್ರಕರಣವನ್ನು ತೀರ್ಮಾನಿಸುವಲ್ಲಿ ನಿರ್ಣಾಯಕವಾಗಿರುವ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯೊಂದಿಗೆ ಹೊಂದಿರುವ ನೇರ ಕೌಟುಂಬಿಕ ಸಂಬಂಧವನ್ನು ದೂರುದಾರ ಸತ್ಯಕಿ ಸಾವರ್ಕರ್ ಉದ್ದೇಶಪೂರ್ವಕವಾಗಿ ಬಚ್ಚಿಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಇದಲ್ಲದೆ, ದೂರುದಾರ ಸತ್ಯಕಿ ಸಾವರ್ಕರ್ ಸುಳ್ಳು, ಮಾನಹಾನಿಕಾರಕ ಹಾಗೂ ನ್ಯಾಯಾಂಗ ನಿಂದನೆಯ ದೂರು ಸಲ್ಲಿಸಿದ್ದಾರೆ ಎಂದು ಆರೋಪಿಸಿ, ಮತ್ತೊಂದು ಪ್ರತ್ಯೇಕ ಅರ್ಜಿಯನ್ನೂ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಮೇ 9ರಂದು ದೂರುದಾರ ಸತ್ಯಕಿ ಸಾವರ್ಕರ್, ನಾನು ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದೇನೆ ಎಂದು ದಾರಿ ತಪ್ಪಿಸುವ ಅರ್ಜಿಯೊಂದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ಈ ಅರ್ಜಿಯಲ್ಲಿ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ಎರಡೂ ಪ್ರತ್ಯೇಕ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ದೂರುದಾರ ಸತ್ಯಕಿ ಸಾವರ್ಕರ್ ಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಆಪರೇಷನ್ ಸಿಂದೂರ್ ಪೋಸ್ಟ್‌ಗಾಗಿ ಮುಸ್ಲಿಂ ವಿದ್ಯಾರ್ಥಿನಿಯ ಬಂಧನ: ಕಾಲೇಜು ಮೊದಲು ಶಿಸ್ತಿಗೊಳಪಡಲಿ ಎಂದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...