Homeಮುಖಪುಟಸಾವರ್ಕರ್ ಮಾನಹಾನಿ ಪ್ರಕರಣ | ದೂರುದಾರ ನಾಥೂರಾಮ್ ಗೋಡ್ಸೆಯ ಸಂಬಂಧಿ: ರಾಹುಲ್ ಗಾಂಧಿ ಆರೋಪ

ಸಾವರ್ಕರ್ ಮಾನಹಾನಿ ಪ್ರಕರಣ | ದೂರುದಾರ ನಾಥೂರಾಮ್ ಗೋಡ್ಸೆಯ ಸಂಬಂಧಿ: ರಾಹುಲ್ ಗಾಂಧಿ ಆರೋಪ

- Advertisement -
- Advertisement -

ಸಾವರ್ಕರ್ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದ ದೂರುದಾರರಾಗಿರುವ ಸತ್ಯಕಿ ಸಾವರ್ಕರ್ ಅವರು, ಮಹಾತ್ಮ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯ ಸಹೋದರ ಗೋಪಾಲ್ ವಿನಾಯಕ್ ಗೋಡ್ಸೆಯ ಮೊಮ್ಮಗ ಎಂಬ ವಾಸ್ತವ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ ಎಂದು ಲೋಕಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ವಕೀಲ ಮಿಲಿಂದ್ ಪವಾರ್ ಮೂಲಕ ಪುಣೆಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ರಾಹುಲ್ ಗಾಂಧಿ, “ದೂರುದಾರ ಸತ್ಯಕಿ ಅವರು ತಾನು ವಿನಾಯಕ ಸಾವರ್ಕರ್ ಅವರ ಸೋದರಳಿಯ ಅಶೋಕ್ ಸಾವರ್ಕರ್ ಅವರ ಮಗ ಎಂದು ಹೇಳಿಕೊಂಡಿದ್ದಾರೆ. ಆದರೆ, ತನ್ನ ತಾಯಿ ಹಿಮಾನಿ ಅವರು ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯ ಸಹೋದರ ಗೋಪಾಲ್ ಗೋಡ್ಸೆಯ ಮಗಳು ಎಂಬ ಅಂಶವನ್ನು ಅವರು ಮರೆಮಾಚಿದ್ದಾರೆ” ಎಂದಿದ್ದಾರೆ.

ನಾಥೂರಾಮ್ ಗೋಡ್ಸೆ ಮತ್ತು ಗೋಪಾಲ್ ಗೋಡ್ಸೆ ಇಬ್ಬರೂ ಗಾಂಧಿ ಕೊಲೆ ಪ್ರಕರಣದ ಅಪರಾಧಿಗಳು

“ಸತ್ಯಕಿ ಅವರು ತನ್ನ ದೂರಿನ ಜೊತೆಗೆ ‘ತಂದೆಯ ಕಡೆಯ’ ವಂಶವೃಕ್ಷವನ್ನು ಮಾತ್ರ ಬಹಿರಂಗಪಡಿಸಿದ್ದಾರೆ. ‘ತಾಯಿಯ ಕಡೆಯ’ ವಂಶವೃಕ್ಷವನ್ನು ಬಹಿರಂಗಪಡಿಸಿಲ್ಲ. ಇದರಿಂದಾಗಿ ಅವರು (ಸತ್ಯಕಿ) ಗೋಪಾಲ್ ಗೋಡ್ಸೆಯ ಮೊಮ್ಮಗ ಎಂಬ ಅಂಶವು ದಾಖಲಾಗಿಲ್ಲ” ಎಂದು ರಾಹುಲ್ ಗಾಂಧಿ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ಮಹಾತ್ಮಾ ಗಾಂಧಿಯವರ ಹತ್ಯೆ ಪ್ರಕರಣದಲ್ಲಿ ಸಾವರ್ಕರ್ ಕೂಡ ‘ಸಹ-ಆರೋಪಿ’ ಆಗಿದ್ದರು. ಆದರೆ, ಸರಿಯಾದ ಪುರಾವೆಗಳ ಕೊರತೆಯಿಂದಾಗಿ ಅವರನ್ನು ಖುಲಾಸೆಗೊಳಿಸಲಾಯಿತು, ಶಿಕ್ಷೆಗೆ ಗುರಿಪಡಿಸಲಾಗಿಲ್ಲ. ಈ ಅಂಶವನ್ನು ಸತ್ಯಕಿ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇದಲ್ಲದೆ, ಗೋಡ್ಸೆ ಮತ್ತು ಸಾವರ್ಕರ್ ಇಬ್ಬರೂ ‘ಹಿಂದೂ ರಾಷ್ಟ್ರ’ದ ಕಟ್ಟಾ ಬೆಂಬಲಿಗರಾಗಿದ್ದರು. ಭಾರತದ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಹೊರಗಿನವರಂತೆ ಹೇಗೆ ಪರಿಗಣಿಸಿದ್ದರು ಮತ್ತು ವಿಭಜನೆಯ ಸಮಯದಲ್ಲಿ ಮಹಾತ್ಮ ಗಾಂಧಿಯವರು ಮುಸ್ಲಿಮರಿಗೆ ‘ದಯಪಾಲಿಸಿದ್ದರು’ ಎಂದು ಪರಿಗಣಿಸಿ ಅವರನ್ನು ಕೊಲ್ಲಲು ಹೇಗೆ ಸಂಚು ರೂಪಿಸಿದರು ಎಂಬುದನ್ನು ತೋರಿಸಲು ರಾಹುಲ್ ಗಾಂಧಿ ತನ್ನ ಅರ್ಜಿಯಲ್ಲಿ ‘ಐತಿಹಾಸಿಕ ಸಂಗತಿಗಳನ್ನು’ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

ಸಾವರ್ಕರ್ ಎರಡು ರಾಷ್ಟ್ರಗಳ ಸಿದ್ಧಾಂತದ ಪ್ರಮುಖ ಪ್ರತಿಪಾದಕರಾಗಿದ್ದರು. ಇದು ಹಿಂದೂಗಳು ಮತ್ತು ಮುಸ್ಲಿಮರುದ್ದು ‘ವಿಭಿನ್ನ ರಾಷ್ಟ್ರಗಳು’ ಎಂದು ಪ್ರತಿಪಾದಿಸಿದ್ದರು. ಇದನ್ನು ನಂತರ ಮುಸ್ಲಿಂ ಲೀಗ್ ನಾಯಕ ಮೊಹಮ್ಮದ್ ಅಲಿ ಜಿನ್ನಾ ಕೂಡ ಬೆಂಬಲಿಸಿದ್ದರು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಸಾವರ್ಕರ್ ಜೈಲಿನಲ್ಲಿದ್ದಾಗಿನಿಂದಲೂ ‘ಮುಸ್ಲಿಂ ವಿರೋಧಿ’ ಬರಹಗಳಿಗೆ ಹೆಸರುವಾಸಿಯಾಗಿದ್ದರು” ಎಂಬುವುದಾಗಿ ಅರ್ಜಿಯಲ್ಲಿ ಆರೋಪಿಸಲಾಗಿದೆ ಎಂದು ವರದಿಯಾಗಿದೆ.

ವಿಶೇಷ ನ್ಯಾಯಾಧೀಶ ಅಮೋಲ್ ಶಿಂಧೆ ಅವರು ದೂರುದಾರ ಸತ್ಯಕಿ ಅವರಿಂದ ರಾಹುಲ್ ಗಾಂಧಿ ಅರ್ಜಿಯಲ್ಲಿ ಮಾಡಿರುವ ಆರೋಪಗಳ ಕುರಿತು ಪ್ರತಿಕ್ರಿಯೆ ಕೇಳಿದ್ದಾರೆ.

2023ರಲ್ಲಿ ಲಂಡನ್‌ಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ವಿನಾಯಕ್ ದಾಮೋದರ್ ಸಾವರ್ಕರ್ ವಿರುದ್ಧ ಮಾನಹಾನಿಕಾರಕ ಹೇಳಿಕೆ ನೀಡಿದ್ದಾರೆ ಎಂದು ಸತ್ಯಕಿ ಸಾವರ್ಕರ್ ಮೊಕದ್ದಮೆ ಹೂಡಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 (ಮಾನಹಾನಿ) ಅಡಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಬೇಕು ಮತ್ತು ಅಪರಾಧ ಪ್ರಕ್ರಿಯೆ ಸಂಹಿತೆಯ ಸೆಕ್ಷನ್ 357 ಅಡಿ ಅವರಿಂದ ಪರಿಹಾರ ಕೊಡಿಸಬೇಕು ಎಂದು ಸತ್ಯಕಿ ಕೋರಿದ್ದಾರೆ.

ಈ ಪ್ರಕರಣವನ್ನು ತೀರ್ಮಾನಿಸುವಲ್ಲಿ ನಿರ್ಣಾಯಕವಾಗಿರುವ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯೊಂದಿಗೆ ಹೊಂದಿರುವ ನೇರ ಕೌಟುಂಬಿಕ ಸಂಬಂಧವನ್ನು ದೂರುದಾರ ಸತ್ಯಕಿ ಸಾವರ್ಕರ್ ಉದ್ದೇಶಪೂರ್ವಕವಾಗಿ ಬಚ್ಚಿಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಇದಲ್ಲದೆ, ದೂರುದಾರ ಸತ್ಯಕಿ ಸಾವರ್ಕರ್ ಸುಳ್ಳು, ಮಾನಹಾನಿಕಾರಕ ಹಾಗೂ ನ್ಯಾಯಾಂಗ ನಿಂದನೆಯ ದೂರು ಸಲ್ಲಿಸಿದ್ದಾರೆ ಎಂದು ಆರೋಪಿಸಿ, ಮತ್ತೊಂದು ಪ್ರತ್ಯೇಕ ಅರ್ಜಿಯನ್ನೂ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಮೇ 9ರಂದು ದೂರುದಾರ ಸತ್ಯಕಿ ಸಾವರ್ಕರ್, ನಾನು ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದೇನೆ ಎಂದು ದಾರಿ ತಪ್ಪಿಸುವ ಅರ್ಜಿಯೊಂದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ಈ ಅರ್ಜಿಯಲ್ಲಿ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ಎರಡೂ ಪ್ರತ್ಯೇಕ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ದೂರುದಾರ ಸತ್ಯಕಿ ಸಾವರ್ಕರ್ ಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಆಪರೇಷನ್ ಸಿಂದೂರ್ ಪೋಸ್ಟ್‌ಗಾಗಿ ಮುಸ್ಲಿಂ ವಿದ್ಯಾರ್ಥಿನಿಯ ಬಂಧನ: ಕಾಲೇಜು ಮೊದಲು ಶಿಸ್ತಿಗೊಳಪಡಲಿ ಎಂದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...