Homeಮುಖಪುಟಸಾವರ್ಕರ್ ಮಾನಹಾನಿ ಪ್ರಕರಣ | ದೂರುದಾರ ನಾಥೂರಾಮ್ ಗೋಡ್ಸೆಯ ಸಂಬಂಧಿ: ರಾಹುಲ್ ಗಾಂಧಿ ಆರೋಪ

ಸಾವರ್ಕರ್ ಮಾನಹಾನಿ ಪ್ರಕರಣ | ದೂರುದಾರ ನಾಥೂರಾಮ್ ಗೋಡ್ಸೆಯ ಸಂಬಂಧಿ: ರಾಹುಲ್ ಗಾಂಧಿ ಆರೋಪ

- Advertisement -
- Advertisement -

ಸಾವರ್ಕರ್ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದ ದೂರುದಾರರಾಗಿರುವ ಸತ್ಯಕಿ ಸಾವರ್ಕರ್ ಅವರು, ಮಹಾತ್ಮ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯ ಸಹೋದರ ಗೋಪಾಲ್ ವಿನಾಯಕ್ ಗೋಡ್ಸೆಯ ಮೊಮ್ಮಗ ಎಂಬ ವಾಸ್ತವ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ ಎಂದು ಲೋಕಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ವಕೀಲ ಮಿಲಿಂದ್ ಪವಾರ್ ಮೂಲಕ ಪುಣೆಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ರಾಹುಲ್ ಗಾಂಧಿ, “ದೂರುದಾರ ಸತ್ಯಕಿ ಅವರು ತಾನು ವಿನಾಯಕ ಸಾವರ್ಕರ್ ಅವರ ಸೋದರಳಿಯ ಅಶೋಕ್ ಸಾವರ್ಕರ್ ಅವರ ಮಗ ಎಂದು ಹೇಳಿಕೊಂಡಿದ್ದಾರೆ. ಆದರೆ, ತನ್ನ ತಾಯಿ ಹಿಮಾನಿ ಅವರು ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯ ಸಹೋದರ ಗೋಪಾಲ್ ಗೋಡ್ಸೆಯ ಮಗಳು ಎಂಬ ಅಂಶವನ್ನು ಅವರು ಮರೆಮಾಚಿದ್ದಾರೆ” ಎಂದಿದ್ದಾರೆ.

ನಾಥೂರಾಮ್ ಗೋಡ್ಸೆ ಮತ್ತು ಗೋಪಾಲ್ ಗೋಡ್ಸೆ ಇಬ್ಬರೂ ಗಾಂಧಿ ಕೊಲೆ ಪ್ರಕರಣದ ಅಪರಾಧಿಗಳು

“ಸತ್ಯಕಿ ಅವರು ತನ್ನ ದೂರಿನ ಜೊತೆಗೆ ‘ತಂದೆಯ ಕಡೆಯ’ ವಂಶವೃಕ್ಷವನ್ನು ಮಾತ್ರ ಬಹಿರಂಗಪಡಿಸಿದ್ದಾರೆ. ‘ತಾಯಿಯ ಕಡೆಯ’ ವಂಶವೃಕ್ಷವನ್ನು ಬಹಿರಂಗಪಡಿಸಿಲ್ಲ. ಇದರಿಂದಾಗಿ ಅವರು (ಸತ್ಯಕಿ) ಗೋಪಾಲ್ ಗೋಡ್ಸೆಯ ಮೊಮ್ಮಗ ಎಂಬ ಅಂಶವು ದಾಖಲಾಗಿಲ್ಲ” ಎಂದು ರಾಹುಲ್ ಗಾಂಧಿ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ಮಹಾತ್ಮಾ ಗಾಂಧಿಯವರ ಹತ್ಯೆ ಪ್ರಕರಣದಲ್ಲಿ ಸಾವರ್ಕರ್ ಕೂಡ ‘ಸಹ-ಆರೋಪಿ’ ಆಗಿದ್ದರು. ಆದರೆ, ಸರಿಯಾದ ಪುರಾವೆಗಳ ಕೊರತೆಯಿಂದಾಗಿ ಅವರನ್ನು ಖುಲಾಸೆಗೊಳಿಸಲಾಯಿತು, ಶಿಕ್ಷೆಗೆ ಗುರಿಪಡಿಸಲಾಗಿಲ್ಲ. ಈ ಅಂಶವನ್ನು ಸತ್ಯಕಿ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇದಲ್ಲದೆ, ಗೋಡ್ಸೆ ಮತ್ತು ಸಾವರ್ಕರ್ ಇಬ್ಬರೂ ‘ಹಿಂದೂ ರಾಷ್ಟ್ರ’ದ ಕಟ್ಟಾ ಬೆಂಬಲಿಗರಾಗಿದ್ದರು. ಭಾರತದ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಹೊರಗಿನವರಂತೆ ಹೇಗೆ ಪರಿಗಣಿಸಿದ್ದರು ಮತ್ತು ವಿಭಜನೆಯ ಸಮಯದಲ್ಲಿ ಮಹಾತ್ಮ ಗಾಂಧಿಯವರು ಮುಸ್ಲಿಮರಿಗೆ ‘ದಯಪಾಲಿಸಿದ್ದರು’ ಎಂದು ಪರಿಗಣಿಸಿ ಅವರನ್ನು ಕೊಲ್ಲಲು ಹೇಗೆ ಸಂಚು ರೂಪಿಸಿದರು ಎಂಬುದನ್ನು ತೋರಿಸಲು ರಾಹುಲ್ ಗಾಂಧಿ ತನ್ನ ಅರ್ಜಿಯಲ್ಲಿ ‘ಐತಿಹಾಸಿಕ ಸಂಗತಿಗಳನ್ನು’ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

ಸಾವರ್ಕರ್ ಎರಡು ರಾಷ್ಟ್ರಗಳ ಸಿದ್ಧಾಂತದ ಪ್ರಮುಖ ಪ್ರತಿಪಾದಕರಾಗಿದ್ದರು. ಇದು ಹಿಂದೂಗಳು ಮತ್ತು ಮುಸ್ಲಿಮರುದ್ದು ‘ವಿಭಿನ್ನ ರಾಷ್ಟ್ರಗಳು’ ಎಂದು ಪ್ರತಿಪಾದಿಸಿದ್ದರು. ಇದನ್ನು ನಂತರ ಮುಸ್ಲಿಂ ಲೀಗ್ ನಾಯಕ ಮೊಹಮ್ಮದ್ ಅಲಿ ಜಿನ್ನಾ ಕೂಡ ಬೆಂಬಲಿಸಿದ್ದರು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಸಾವರ್ಕರ್ ಜೈಲಿನಲ್ಲಿದ್ದಾಗಿನಿಂದಲೂ ‘ಮುಸ್ಲಿಂ ವಿರೋಧಿ’ ಬರಹಗಳಿಗೆ ಹೆಸರುವಾಸಿಯಾಗಿದ್ದರು” ಎಂಬುವುದಾಗಿ ಅರ್ಜಿಯಲ್ಲಿ ಆರೋಪಿಸಲಾಗಿದೆ ಎಂದು ವರದಿಯಾಗಿದೆ.

ವಿಶೇಷ ನ್ಯಾಯಾಧೀಶ ಅಮೋಲ್ ಶಿಂಧೆ ಅವರು ದೂರುದಾರ ಸತ್ಯಕಿ ಅವರಿಂದ ರಾಹುಲ್ ಗಾಂಧಿ ಅರ್ಜಿಯಲ್ಲಿ ಮಾಡಿರುವ ಆರೋಪಗಳ ಕುರಿತು ಪ್ರತಿಕ್ರಿಯೆ ಕೇಳಿದ್ದಾರೆ.

2023ರಲ್ಲಿ ಲಂಡನ್‌ಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ವಿನಾಯಕ್ ದಾಮೋದರ್ ಸಾವರ್ಕರ್ ವಿರುದ್ಧ ಮಾನಹಾನಿಕಾರಕ ಹೇಳಿಕೆ ನೀಡಿದ್ದಾರೆ ಎಂದು ಸತ್ಯಕಿ ಸಾವರ್ಕರ್ ಮೊಕದ್ದಮೆ ಹೂಡಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 (ಮಾನಹಾನಿ) ಅಡಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಬೇಕು ಮತ್ತು ಅಪರಾಧ ಪ್ರಕ್ರಿಯೆ ಸಂಹಿತೆಯ ಸೆಕ್ಷನ್ 357 ಅಡಿ ಅವರಿಂದ ಪರಿಹಾರ ಕೊಡಿಸಬೇಕು ಎಂದು ಸತ್ಯಕಿ ಕೋರಿದ್ದಾರೆ.

ಈ ಪ್ರಕರಣವನ್ನು ತೀರ್ಮಾನಿಸುವಲ್ಲಿ ನಿರ್ಣಾಯಕವಾಗಿರುವ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯೊಂದಿಗೆ ಹೊಂದಿರುವ ನೇರ ಕೌಟುಂಬಿಕ ಸಂಬಂಧವನ್ನು ದೂರುದಾರ ಸತ್ಯಕಿ ಸಾವರ್ಕರ್ ಉದ್ದೇಶಪೂರ್ವಕವಾಗಿ ಬಚ್ಚಿಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಇದಲ್ಲದೆ, ದೂರುದಾರ ಸತ್ಯಕಿ ಸಾವರ್ಕರ್ ಸುಳ್ಳು, ಮಾನಹಾನಿಕಾರಕ ಹಾಗೂ ನ್ಯಾಯಾಂಗ ನಿಂದನೆಯ ದೂರು ಸಲ್ಲಿಸಿದ್ದಾರೆ ಎಂದು ಆರೋಪಿಸಿ, ಮತ್ತೊಂದು ಪ್ರತ್ಯೇಕ ಅರ್ಜಿಯನ್ನೂ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಮೇ 9ರಂದು ದೂರುದಾರ ಸತ್ಯಕಿ ಸಾವರ್ಕರ್, ನಾನು ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದೇನೆ ಎಂದು ದಾರಿ ತಪ್ಪಿಸುವ ಅರ್ಜಿಯೊಂದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ಈ ಅರ್ಜಿಯಲ್ಲಿ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ಎರಡೂ ಪ್ರತ್ಯೇಕ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ದೂರುದಾರ ಸತ್ಯಕಿ ಸಾವರ್ಕರ್ ಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಆಪರೇಷನ್ ಸಿಂದೂರ್ ಪೋಸ್ಟ್‌ಗಾಗಿ ಮುಸ್ಲಿಂ ವಿದ್ಯಾರ್ಥಿನಿಯ ಬಂಧನ: ಕಾಲೇಜು ಮೊದಲು ಶಿಸ್ತಿಗೊಳಪಡಲಿ ಎಂದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...