Homeಮುಖಪುಟಸಾವರ್ಕರ್ ಮಾನಹಾನಿ ಪ್ರಕರಣ | ದೂರುದಾರ ನಾಥೂರಾಮ್ ಗೋಡ್ಸೆಯ ಸಂಬಂಧಿ: ರಾಹುಲ್ ಗಾಂಧಿ ಆರೋಪ

ಸಾವರ್ಕರ್ ಮಾನಹಾನಿ ಪ್ರಕರಣ | ದೂರುದಾರ ನಾಥೂರಾಮ್ ಗೋಡ್ಸೆಯ ಸಂಬಂಧಿ: ರಾಹುಲ್ ಗಾಂಧಿ ಆರೋಪ

- Advertisement -
- Advertisement -

ಸಾವರ್ಕರ್ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದ ದೂರುದಾರರಾಗಿರುವ ಸತ್ಯಕಿ ಸಾವರ್ಕರ್ ಅವರು, ಮಹಾತ್ಮ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯ ಸಹೋದರ ಗೋಪಾಲ್ ವಿನಾಯಕ್ ಗೋಡ್ಸೆಯ ಮೊಮ್ಮಗ ಎಂಬ ವಾಸ್ತವ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ ಎಂದು ಲೋಕಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ವಕೀಲ ಮಿಲಿಂದ್ ಪವಾರ್ ಮೂಲಕ ಪುಣೆಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ರಾಹುಲ್ ಗಾಂಧಿ, “ದೂರುದಾರ ಸತ್ಯಕಿ ಅವರು ತಾನು ವಿನಾಯಕ ಸಾವರ್ಕರ್ ಅವರ ಸೋದರಳಿಯ ಅಶೋಕ್ ಸಾವರ್ಕರ್ ಅವರ ಮಗ ಎಂದು ಹೇಳಿಕೊಂಡಿದ್ದಾರೆ. ಆದರೆ, ತನ್ನ ತಾಯಿ ಹಿಮಾನಿ ಅವರು ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯ ಸಹೋದರ ಗೋಪಾಲ್ ಗೋಡ್ಸೆಯ ಮಗಳು ಎಂಬ ಅಂಶವನ್ನು ಅವರು ಮರೆಮಾಚಿದ್ದಾರೆ” ಎಂದಿದ್ದಾರೆ.

ನಾಥೂರಾಮ್ ಗೋಡ್ಸೆ ಮತ್ತು ಗೋಪಾಲ್ ಗೋಡ್ಸೆ ಇಬ್ಬರೂ ಗಾಂಧಿ ಕೊಲೆ ಪ್ರಕರಣದ ಅಪರಾಧಿಗಳು

“ಸತ್ಯಕಿ ಅವರು ತನ್ನ ದೂರಿನ ಜೊತೆಗೆ ‘ತಂದೆಯ ಕಡೆಯ’ ವಂಶವೃಕ್ಷವನ್ನು ಮಾತ್ರ ಬಹಿರಂಗಪಡಿಸಿದ್ದಾರೆ. ‘ತಾಯಿಯ ಕಡೆಯ’ ವಂಶವೃಕ್ಷವನ್ನು ಬಹಿರಂಗಪಡಿಸಿಲ್ಲ. ಇದರಿಂದಾಗಿ ಅವರು (ಸತ್ಯಕಿ) ಗೋಪಾಲ್ ಗೋಡ್ಸೆಯ ಮೊಮ್ಮಗ ಎಂಬ ಅಂಶವು ದಾಖಲಾಗಿಲ್ಲ” ಎಂದು ರಾಹುಲ್ ಗಾಂಧಿ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ಮಹಾತ್ಮಾ ಗಾಂಧಿಯವರ ಹತ್ಯೆ ಪ್ರಕರಣದಲ್ಲಿ ಸಾವರ್ಕರ್ ಕೂಡ ‘ಸಹ-ಆರೋಪಿ’ ಆಗಿದ್ದರು. ಆದರೆ, ಸರಿಯಾದ ಪುರಾವೆಗಳ ಕೊರತೆಯಿಂದಾಗಿ ಅವರನ್ನು ಖುಲಾಸೆಗೊಳಿಸಲಾಯಿತು, ಶಿಕ್ಷೆಗೆ ಗುರಿಪಡಿಸಲಾಗಿಲ್ಲ. ಈ ಅಂಶವನ್ನು ಸತ್ಯಕಿ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇದಲ್ಲದೆ, ಗೋಡ್ಸೆ ಮತ್ತು ಸಾವರ್ಕರ್ ಇಬ್ಬರೂ ‘ಹಿಂದೂ ರಾಷ್ಟ್ರ’ದ ಕಟ್ಟಾ ಬೆಂಬಲಿಗರಾಗಿದ್ದರು. ಭಾರತದ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಹೊರಗಿನವರಂತೆ ಹೇಗೆ ಪರಿಗಣಿಸಿದ್ದರು ಮತ್ತು ವಿಭಜನೆಯ ಸಮಯದಲ್ಲಿ ಮಹಾತ್ಮ ಗಾಂಧಿಯವರು ಮುಸ್ಲಿಮರಿಗೆ ‘ದಯಪಾಲಿಸಿದ್ದರು’ ಎಂದು ಪರಿಗಣಿಸಿ ಅವರನ್ನು ಕೊಲ್ಲಲು ಹೇಗೆ ಸಂಚು ರೂಪಿಸಿದರು ಎಂಬುದನ್ನು ತೋರಿಸಲು ರಾಹುಲ್ ಗಾಂಧಿ ತನ್ನ ಅರ್ಜಿಯಲ್ಲಿ ‘ಐತಿಹಾಸಿಕ ಸಂಗತಿಗಳನ್ನು’ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

ಸಾವರ್ಕರ್ ಎರಡು ರಾಷ್ಟ್ರಗಳ ಸಿದ್ಧಾಂತದ ಪ್ರಮುಖ ಪ್ರತಿಪಾದಕರಾಗಿದ್ದರು. ಇದು ಹಿಂದೂಗಳು ಮತ್ತು ಮುಸ್ಲಿಮರುದ್ದು ‘ವಿಭಿನ್ನ ರಾಷ್ಟ್ರಗಳು’ ಎಂದು ಪ್ರತಿಪಾದಿಸಿದ್ದರು. ಇದನ್ನು ನಂತರ ಮುಸ್ಲಿಂ ಲೀಗ್ ನಾಯಕ ಮೊಹಮ್ಮದ್ ಅಲಿ ಜಿನ್ನಾ ಕೂಡ ಬೆಂಬಲಿಸಿದ್ದರು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಸಾವರ್ಕರ್ ಜೈಲಿನಲ್ಲಿದ್ದಾಗಿನಿಂದಲೂ ‘ಮುಸ್ಲಿಂ ವಿರೋಧಿ’ ಬರಹಗಳಿಗೆ ಹೆಸರುವಾಸಿಯಾಗಿದ್ದರು” ಎಂಬುವುದಾಗಿ ಅರ್ಜಿಯಲ್ಲಿ ಆರೋಪಿಸಲಾಗಿದೆ ಎಂದು ವರದಿಯಾಗಿದೆ.

ವಿಶೇಷ ನ್ಯಾಯಾಧೀಶ ಅಮೋಲ್ ಶಿಂಧೆ ಅವರು ದೂರುದಾರ ಸತ್ಯಕಿ ಅವರಿಂದ ರಾಹುಲ್ ಗಾಂಧಿ ಅರ್ಜಿಯಲ್ಲಿ ಮಾಡಿರುವ ಆರೋಪಗಳ ಕುರಿತು ಪ್ರತಿಕ್ರಿಯೆ ಕೇಳಿದ್ದಾರೆ.

2023ರಲ್ಲಿ ಲಂಡನ್‌ಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ವಿನಾಯಕ್ ದಾಮೋದರ್ ಸಾವರ್ಕರ್ ವಿರುದ್ಧ ಮಾನಹಾನಿಕಾರಕ ಹೇಳಿಕೆ ನೀಡಿದ್ದಾರೆ ಎಂದು ಸತ್ಯಕಿ ಸಾವರ್ಕರ್ ಮೊಕದ್ದಮೆ ಹೂಡಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 (ಮಾನಹಾನಿ) ಅಡಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಬೇಕು ಮತ್ತು ಅಪರಾಧ ಪ್ರಕ್ರಿಯೆ ಸಂಹಿತೆಯ ಸೆಕ್ಷನ್ 357 ಅಡಿ ಅವರಿಂದ ಪರಿಹಾರ ಕೊಡಿಸಬೇಕು ಎಂದು ಸತ್ಯಕಿ ಕೋರಿದ್ದಾರೆ.

ಈ ಪ್ರಕರಣವನ್ನು ತೀರ್ಮಾನಿಸುವಲ್ಲಿ ನಿರ್ಣಾಯಕವಾಗಿರುವ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯೊಂದಿಗೆ ಹೊಂದಿರುವ ನೇರ ಕೌಟುಂಬಿಕ ಸಂಬಂಧವನ್ನು ದೂರುದಾರ ಸತ್ಯಕಿ ಸಾವರ್ಕರ್ ಉದ್ದೇಶಪೂರ್ವಕವಾಗಿ ಬಚ್ಚಿಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಇದಲ್ಲದೆ, ದೂರುದಾರ ಸತ್ಯಕಿ ಸಾವರ್ಕರ್ ಸುಳ್ಳು, ಮಾನಹಾನಿಕಾರಕ ಹಾಗೂ ನ್ಯಾಯಾಂಗ ನಿಂದನೆಯ ದೂರು ಸಲ್ಲಿಸಿದ್ದಾರೆ ಎಂದು ಆರೋಪಿಸಿ, ಮತ್ತೊಂದು ಪ್ರತ್ಯೇಕ ಅರ್ಜಿಯನ್ನೂ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಮೇ 9ರಂದು ದೂರುದಾರ ಸತ್ಯಕಿ ಸಾವರ್ಕರ್, ನಾನು ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದೇನೆ ಎಂದು ದಾರಿ ತಪ್ಪಿಸುವ ಅರ್ಜಿಯೊಂದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ಈ ಅರ್ಜಿಯಲ್ಲಿ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ಎರಡೂ ಪ್ರತ್ಯೇಕ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ದೂರುದಾರ ಸತ್ಯಕಿ ಸಾವರ್ಕರ್ ಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಆಪರೇಷನ್ ಸಿಂದೂರ್ ಪೋಸ್ಟ್‌ಗಾಗಿ ಮುಸ್ಲಿಂ ವಿದ್ಯಾರ್ಥಿನಿಯ ಬಂಧನ: ಕಾಲೇಜು ಮೊದಲು ಶಿಸ್ತಿಗೊಳಪಡಲಿ ಎಂದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...