Homeಮುಖಪುಟಸಾವರ್ಕರ್ ಮಾನಹಾನಿ ಪ್ರಕರಣ | ದೂರುದಾರ ನಾಥೂರಾಮ್ ಗೋಡ್ಸೆಯ ಸಂಬಂಧಿ: ರಾಹುಲ್ ಗಾಂಧಿ ಆರೋಪ

ಸಾವರ್ಕರ್ ಮಾನಹಾನಿ ಪ್ರಕರಣ | ದೂರುದಾರ ನಾಥೂರಾಮ್ ಗೋಡ್ಸೆಯ ಸಂಬಂಧಿ: ರಾಹುಲ್ ಗಾಂಧಿ ಆರೋಪ

- Advertisement -
- Advertisement -

ಸಾವರ್ಕರ್ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದ ದೂರುದಾರರಾಗಿರುವ ಸತ್ಯಕಿ ಸಾವರ್ಕರ್ ಅವರು, ಮಹಾತ್ಮ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯ ಸಹೋದರ ಗೋಪಾಲ್ ವಿನಾಯಕ್ ಗೋಡ್ಸೆಯ ಮೊಮ್ಮಗ ಎಂಬ ವಾಸ್ತವ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ ಎಂದು ಲೋಕಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ವಕೀಲ ಮಿಲಿಂದ್ ಪವಾರ್ ಮೂಲಕ ಪುಣೆಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ರಾಹುಲ್ ಗಾಂಧಿ, “ದೂರುದಾರ ಸತ್ಯಕಿ ಅವರು ತಾನು ವಿನಾಯಕ ಸಾವರ್ಕರ್ ಅವರ ಸೋದರಳಿಯ ಅಶೋಕ್ ಸಾವರ್ಕರ್ ಅವರ ಮಗ ಎಂದು ಹೇಳಿಕೊಂಡಿದ್ದಾರೆ. ಆದರೆ, ತನ್ನ ತಾಯಿ ಹಿಮಾನಿ ಅವರು ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯ ಸಹೋದರ ಗೋಪಾಲ್ ಗೋಡ್ಸೆಯ ಮಗಳು ಎಂಬ ಅಂಶವನ್ನು ಅವರು ಮರೆಮಾಚಿದ್ದಾರೆ” ಎಂದಿದ್ದಾರೆ.

ನಾಥೂರಾಮ್ ಗೋಡ್ಸೆ ಮತ್ತು ಗೋಪಾಲ್ ಗೋಡ್ಸೆ ಇಬ್ಬರೂ ಗಾಂಧಿ ಕೊಲೆ ಪ್ರಕರಣದ ಅಪರಾಧಿಗಳು

“ಸತ್ಯಕಿ ಅವರು ತನ್ನ ದೂರಿನ ಜೊತೆಗೆ ‘ತಂದೆಯ ಕಡೆಯ’ ವಂಶವೃಕ್ಷವನ್ನು ಮಾತ್ರ ಬಹಿರಂಗಪಡಿಸಿದ್ದಾರೆ. ‘ತಾಯಿಯ ಕಡೆಯ’ ವಂಶವೃಕ್ಷವನ್ನು ಬಹಿರಂಗಪಡಿಸಿಲ್ಲ. ಇದರಿಂದಾಗಿ ಅವರು (ಸತ್ಯಕಿ) ಗೋಪಾಲ್ ಗೋಡ್ಸೆಯ ಮೊಮ್ಮಗ ಎಂಬ ಅಂಶವು ದಾಖಲಾಗಿಲ್ಲ” ಎಂದು ರಾಹುಲ್ ಗಾಂಧಿ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ಮಹಾತ್ಮಾ ಗಾಂಧಿಯವರ ಹತ್ಯೆ ಪ್ರಕರಣದಲ್ಲಿ ಸಾವರ್ಕರ್ ಕೂಡ ‘ಸಹ-ಆರೋಪಿ’ ಆಗಿದ್ದರು. ಆದರೆ, ಸರಿಯಾದ ಪುರಾವೆಗಳ ಕೊರತೆಯಿಂದಾಗಿ ಅವರನ್ನು ಖುಲಾಸೆಗೊಳಿಸಲಾಯಿತು, ಶಿಕ್ಷೆಗೆ ಗುರಿಪಡಿಸಲಾಗಿಲ್ಲ. ಈ ಅಂಶವನ್ನು ಸತ್ಯಕಿ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇದಲ್ಲದೆ, ಗೋಡ್ಸೆ ಮತ್ತು ಸಾವರ್ಕರ್ ಇಬ್ಬರೂ ‘ಹಿಂದೂ ರಾಷ್ಟ್ರ’ದ ಕಟ್ಟಾ ಬೆಂಬಲಿಗರಾಗಿದ್ದರು. ಭಾರತದ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಹೊರಗಿನವರಂತೆ ಹೇಗೆ ಪರಿಗಣಿಸಿದ್ದರು ಮತ್ತು ವಿಭಜನೆಯ ಸಮಯದಲ್ಲಿ ಮಹಾತ್ಮ ಗಾಂಧಿಯವರು ಮುಸ್ಲಿಮರಿಗೆ ‘ದಯಪಾಲಿಸಿದ್ದರು’ ಎಂದು ಪರಿಗಣಿಸಿ ಅವರನ್ನು ಕೊಲ್ಲಲು ಹೇಗೆ ಸಂಚು ರೂಪಿಸಿದರು ಎಂಬುದನ್ನು ತೋರಿಸಲು ರಾಹುಲ್ ಗಾಂಧಿ ತನ್ನ ಅರ್ಜಿಯಲ್ಲಿ ‘ಐತಿಹಾಸಿಕ ಸಂಗತಿಗಳನ್ನು’ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

ಸಾವರ್ಕರ್ ಎರಡು ರಾಷ್ಟ್ರಗಳ ಸಿದ್ಧಾಂತದ ಪ್ರಮುಖ ಪ್ರತಿಪಾದಕರಾಗಿದ್ದರು. ಇದು ಹಿಂದೂಗಳು ಮತ್ತು ಮುಸ್ಲಿಮರುದ್ದು ‘ವಿಭಿನ್ನ ರಾಷ್ಟ್ರಗಳು’ ಎಂದು ಪ್ರತಿಪಾದಿಸಿದ್ದರು. ಇದನ್ನು ನಂತರ ಮುಸ್ಲಿಂ ಲೀಗ್ ನಾಯಕ ಮೊಹಮ್ಮದ್ ಅಲಿ ಜಿನ್ನಾ ಕೂಡ ಬೆಂಬಲಿಸಿದ್ದರು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಸಾವರ್ಕರ್ ಜೈಲಿನಲ್ಲಿದ್ದಾಗಿನಿಂದಲೂ ‘ಮುಸ್ಲಿಂ ವಿರೋಧಿ’ ಬರಹಗಳಿಗೆ ಹೆಸರುವಾಸಿಯಾಗಿದ್ದರು” ಎಂಬುವುದಾಗಿ ಅರ್ಜಿಯಲ್ಲಿ ಆರೋಪಿಸಲಾಗಿದೆ ಎಂದು ವರದಿಯಾಗಿದೆ.

ವಿಶೇಷ ನ್ಯಾಯಾಧೀಶ ಅಮೋಲ್ ಶಿಂಧೆ ಅವರು ದೂರುದಾರ ಸತ್ಯಕಿ ಅವರಿಂದ ರಾಹುಲ್ ಗಾಂಧಿ ಅರ್ಜಿಯಲ್ಲಿ ಮಾಡಿರುವ ಆರೋಪಗಳ ಕುರಿತು ಪ್ರತಿಕ್ರಿಯೆ ಕೇಳಿದ್ದಾರೆ.

2023ರಲ್ಲಿ ಲಂಡನ್‌ಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ವಿನಾಯಕ್ ದಾಮೋದರ್ ಸಾವರ್ಕರ್ ವಿರುದ್ಧ ಮಾನಹಾನಿಕಾರಕ ಹೇಳಿಕೆ ನೀಡಿದ್ದಾರೆ ಎಂದು ಸತ್ಯಕಿ ಸಾವರ್ಕರ್ ಮೊಕದ್ದಮೆ ಹೂಡಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 (ಮಾನಹಾನಿ) ಅಡಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಬೇಕು ಮತ್ತು ಅಪರಾಧ ಪ್ರಕ್ರಿಯೆ ಸಂಹಿತೆಯ ಸೆಕ್ಷನ್ 357 ಅಡಿ ಅವರಿಂದ ಪರಿಹಾರ ಕೊಡಿಸಬೇಕು ಎಂದು ಸತ್ಯಕಿ ಕೋರಿದ್ದಾರೆ.

ಈ ಪ್ರಕರಣವನ್ನು ತೀರ್ಮಾನಿಸುವಲ್ಲಿ ನಿರ್ಣಾಯಕವಾಗಿರುವ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯೊಂದಿಗೆ ಹೊಂದಿರುವ ನೇರ ಕೌಟುಂಬಿಕ ಸಂಬಂಧವನ್ನು ದೂರುದಾರ ಸತ್ಯಕಿ ಸಾವರ್ಕರ್ ಉದ್ದೇಶಪೂರ್ವಕವಾಗಿ ಬಚ್ಚಿಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಇದಲ್ಲದೆ, ದೂರುದಾರ ಸತ್ಯಕಿ ಸಾವರ್ಕರ್ ಸುಳ್ಳು, ಮಾನಹಾನಿಕಾರಕ ಹಾಗೂ ನ್ಯಾಯಾಂಗ ನಿಂದನೆಯ ದೂರು ಸಲ್ಲಿಸಿದ್ದಾರೆ ಎಂದು ಆರೋಪಿಸಿ, ಮತ್ತೊಂದು ಪ್ರತ್ಯೇಕ ಅರ್ಜಿಯನ್ನೂ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಮೇ 9ರಂದು ದೂರುದಾರ ಸತ್ಯಕಿ ಸಾವರ್ಕರ್, ನಾನು ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದೇನೆ ಎಂದು ದಾರಿ ತಪ್ಪಿಸುವ ಅರ್ಜಿಯೊಂದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ಈ ಅರ್ಜಿಯಲ್ಲಿ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ಎರಡೂ ಪ್ರತ್ಯೇಕ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ದೂರುದಾರ ಸತ್ಯಕಿ ಸಾವರ್ಕರ್ ಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಆಪರೇಷನ್ ಸಿಂದೂರ್ ಪೋಸ್ಟ್‌ಗಾಗಿ ಮುಸ್ಲಿಂ ವಿದ್ಯಾರ್ಥಿನಿಯ ಬಂಧನ: ಕಾಲೇಜು ಮೊದಲು ಶಿಸ್ತಿಗೊಳಪಡಲಿ ಎಂದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...