Homeಮುಖಪುಟರಾಜಕೀಯ ಅಸ್ತ್ರವಾಗಿ ಅತ್ಯಾಚಾರವನ್ನು ಸಮರ್ಥಿಸಿದ್ದ ಸಾವರ್ಕರ್!

ರಾಜಕೀಯ ಅಸ್ತ್ರವಾಗಿ ಅತ್ಯಾಚಾರವನ್ನು ಸಮರ್ಥಿಸಿದ್ದ ಸಾವರ್ಕರ್!

ಹಿಂದೂಗಳು ಮುಸ್ಲಿಂ ಮಹಿಳೆಯರನ್ನು ಸುಲಭದಲ್ಲಿ ಬಿಟ್ಟುಬಿಟ್ಟು ಅವರ ಮೇಲೆ ಕರುಣೆ ತೋರುವುದರ ಮೂಲಕ ಸದ್ಗುಣಶೀಲತೆ ಮತ್ತು ಶೌರ್ಯದ "ಆತ್ಮಹತ್ಯಾತ್ಮಕ" ಮನೋಭಾವದಿಂದ ಬಾಧಿತರಾಗಿದ್ದರು - ಸಾವರ್ಕರ್

- Advertisement -
- Advertisement -

ಜಮ್ಮುವಿನ ಕಥುವಾದಲ್ಲಿ ಎಂಟು ವರ್ಷ ಪ್ರಾಯದ ಬಾಲಕಿಯನ್ನು ಅಪಹರಿಸಿ, ಮೂರು ದಿನಗಳ ಕಾಲ ದೇವಾಲಯವೊಂದರಲ್ಲಿ ಕೂಡಿಹಾಕಿ ಅತ್ಯಾಚಾರ ಮಾಡಿ ಕೊಂದ ಎಂಟು ಮಂದಿ ದುಷ್ಟರ ಕ್ರೂರತೆಯು ದೇಶವನ್ನು ದಂಗುಬಡಿಸಿತ್ತು. ದೇಶದಾದ್ಯಂತ ಪ್ರತಿಭಟನೆಗಳೂ ನಡೆದಿದ್ದವು. ಈ ಘಟನೆಯ ಚಿತ್ರದಿಂದ ನಿಧಾನವಾಗಿ ಅಳಿಸಲು ಪ್ರಯತ್ನಿಸಲಾಗುತ್ತಿದ್ದ ಒಂದು ಸತ್ಯವೆಂದರೆ, ಮುಸ್ಲಿಂ ಅಲೆಮಾರಿ ಬಾಕರ್ವಾಲ್ ಸಮುದಾಯದ ಹುಡುಗಿಯನ್ನು ಅಪಹರಿಸುವ ಸಂಚನ್ನು ಈ ವ್ಯಕ್ತಿಗಳು ಅವರನ್ನು ಆ ಪರಿಸರದಿಂದ ಓಡಿಸುವ ಉದ್ದೇಶದಿಂದ ರೂಪಿಸಿದ್ದರು ಎಂಬುದು. ಇದನ್ನು ಅಡ್ಡಕ್ಕೆ, ಉದ್ದಕ್ಕೆ ಹೇಗೆ ಬೇಕಾದರೂ ಕೊಯ್ದು ನೋಡಿದರೂ, ಮುಸ್ಲಿಂ ಸಮುದಾಯದ ವಿರುದ್ಧ ಹಿಂದೂ ಮತಾಂಧರ ಸಂಚು ಇದಾಗಿತ್ತೆಂಬ ಸತ್ಯವು ಉಳಿದುಕೊಳ್ಳುತ್ತದೆ. ಇದು ವರ್ಷಗಳಿಂದ ಜಮ್ಮು ಪ್ರದೇಶದಲ್ಲಿ ಸಂಘಪರಿವಾರವು ಹಿಂದೂ ಸಮುದಾಯದಲ್ಲಿ ಬಿತ್ತಿ ಬೆಳೆಸಿಕೊಂಡು ಬರುತ್ತಿರುವ ವಿಷಕಾರಿ ದ್ವೇಷದ ಅಂತಿಮ ಪರಿಣಾಮವಾಗಿತ್ತು.

ಈ ಸಂಪರ್ಕದ ಪರಿಣಾಮವಾಗಿಯೇ ಆರ್‌ಎಸ್‌ಎಸ್/ ಬಿಜೆಪಿ ಬೆಂಬಲಿಗರು ಹಿಂದೂ ಸೇನಾ ಎಂಬ ಮುಸುಕಿನಲ್ಲಿ, ಆರೋಪಿಗಳ ಬಂಧನದ ವೇಳೆ ಪ್ರತಿಭಟನೆಗಳನ್ನು ನಡೆಸಿದರು; ಕಥುವಾ ಸೆಷನ್ಸ್ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸುವುದಕ್ಕೆ ವಕೀಲರು ಅಡ್ಡಿ ಮಾಡಿದರು; ಜಮ್ಮು ಬಂದ್‌ಗೆ ಕರೆ ನೀಡಲಾಯಿತು (ಆದರೆ, ಅದು ತೋಪಾಯಿತು) ಮತ್ತು ಬಿಜೆಪಿಯ ಇಬ್ಬರು ಶಾಸಕರು ಆರೋಪಿಗಳ ಬೆಂಬಲದಲ್ಲಿ ನಡೆದ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದರು.

ಕಥುವಾ ಮತ್ತು ಉನಾವ್‌ನಲ್ಲಿ ನಡೆದ ಇನ್ನೊಂದು ಅತ್ಯಾಚಾರ ಪ್ರಕರಣಕ್ಕೂ ಸಾಮ್ಯವಿದೆ. ಇಲ್ಲಿ ಸಂತ್ರಸ್ತೆ ಮುಸ್ಲಿಂ ಆಗಿರಲಿಲ್ಲ. ಆದರೆ, ಇದನ್ನು ಮಾಡಿದಾತ ಒಬ್ಬ ಚುನಾಯಿತ ಬಿಜೆಪಿ ಶಾಸಕನಾಗಿದ್ದ. ಸಾಮ್ಯ ಇರುವುದು ಎಲ್ಲಿ ಎಂದರೆ, ಅತ್ಯಾಚಾರಿಗಳು ಮತ್ತು ಕೊಲೆಗಡುಕರಿಗೆ ತಕ್ಷಣವೇ ಬೆಂಬಲವನ್ನು ಆಯೋಜಿಸುವುದರಲ್ಲಿ; ಕಾನೂನಿನ ಸಹಜ ಪ್ರಕ್ರಿಯೆಯನ್ನು ಬುಡಮೇಲು ಮಾಡುವುದರಲ್ಲಿ; ಗಮನವನ್ನು ಬೇರೆಡೆ ಸೆಳೆಯುವ ಕುಟಿಲ ತಂತ್ರ ಅನುಸರಿಸುವುದರಲ್ಲಿ ಮತ್ತು ತಪ್ಪಿತಸ್ಥರನ್ನು ರಕ್ಷಿಸಲು ರಾಜಕೀಯ ಬಲದ ದುರುಪಯೋಗ ಮಾಡುವುದರಲ್ಲಿ. ಇದು ಕೆಲವು ಅಧಿಕಾರದ ಮದವೇರಿದ ವ್ಯಕ್ತಿಗಳು ಕಾನೂನಿನ ಭಯವಿಲ್ಲದೆ ನಡೆಸಿದ ಕೃತ್ಯ ಎಂದಾಗಲೀ, ಒಂದು ರೀತಿಯ ಹುಚ್ಚು ಉನ್ಮಾದದ ಪರಿಣಾಮ ಎಂದಾಗಲೀ ಭಾವಿಸಿದರೆ ಅದು ಉನಾವ್ ಅತ್ಯಾಚಾರ ಸಂತ್ರಸ್ತೆಗೆ ಮಾಡಿದ ಅನ್ಯಾಯವಾದೀತು.

ರಾಜಕೀಯ ಅಥವಾ ಇತರ ವಿರೋಧಿಗಳ ಮೇಲೆ ಅಧಿಕಾರದ ಬಲವನ್ನು ಹೇರುವ ವಿಧಾನವಾಗಿ ಅತ್ಯಾಚಾರದ ಸಿದ್ಧಾಂತ, ಅಥವಾ ಬಲಪ್ರಯೋಗದ ಮೂಲಕ ತಮ್ಮ ಸಿದ್ಧಾಂತವನ್ನು ಬೆಳೆಸುವ ಅಸ್ತ್ರವಾಗಿ ಅತ್ಯಾಚಾರವನ್ನು ಬಳಸುವ ಪರಿಕಲ್ಪನೆಯನ್ನು ಸಂಘಪರಿವಾರದ ಒಳಗೆ ತುಂಬಿಸಿದವರು, ಅವರ ಆರಾಧ್ಯ ದೈವ ಎನಿಸಿದ “ವೀರ” ಸಾವರ್ಕರ್ ಅವರಲ್ಲದೇ ಬೇರಾರೂ ಅಲ್ಲ. ಆರೆಸ್ಸೆಸ್ ಮತ್ತೆಮತ್ತೆ ಅವರ ಹೆಸರನ್ನು ಉಲ್ಲೇಖಿಸುತ್ತದೆ ಮತ್ತು ಪ್ರಧಾನಿಯಾಗಿದ್ದಾಗ 2003ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನೇತುಹಾಕಿದ ಸಾವರ್ಕರ್ ಭಾವಚಿತ್ರಕ್ಕೆ ಸ್ವತಃ ಪ್ರಧಾನಿ ಮೋದಿ ಹಾರ ಹಾಕಲು ಹೋಗುತ್ತಾರೆ.

ವಿನಾಯಕ ದಾಮೋದರ ಸಾವರ್ಕರ್, ತನ್ನ ಪುಸ್ತಕಗಳಲ್ಲಿ ಒಂದಾದ “ಸಿಕ್ಸ್ ಗ್ಲೋರಿಯಸ್ ಎಪೋಕ್ಸ್ ಆಫ್ ಇಂಡಿಯನ್ ಹಿಸ್ಟರಿ” (ಭಾರತದ ಇತಿಹಾಸದ ಆರು ಮಹತ್ವದ ಪರ್ವಗಳು) ಎಂಬ ಪುಸ್ತಕದಲ್ಲಿ ಮುಸ್ಲಿಂ ಮಹಿಳೆಯನ್ನು ಅತ್ಯಾಚಾರ ಮಾಡುವುದು ಏಕೆ ಸಮರ್ಥನೀಯ ಎಂದು ಸ್ಪಷ್ಟವಾಗಿ ವಿವರಿಸುತ್ತಾರೆ ಮತ್ತು ಅವಕಾಶ ಸಿಕ್ಕಾಗ ಅದನ್ನು ಮಾಡದೇ ಇರುವುದು ಸದ್ಗುಣವಾಗಲೀ, ಶೌರ್ಯವಾಗಲೀ ಅಲ್ಲ; ಬದಲಾಗಿ ಹೇಡಿತನ ಎಂದು ಪ್ರತಿಪಾದಿಸುತ್ತಾರೆ. (ಮುಂಬಯಿ ಮೂಲದ ‘ಸ್ವಾತಂತ್ರ್ಯವೀರ ಸಾವರ್ಕರ್ ರಾಷ್ಟ್ರೀಯ ಸ್ಮಾರಕ್’ ಬಿಡುಗಡೆ ಮಾಡಿರುವ ಆನ್ಲೈನ್ ಆವೃತ್ತಿಯ ಅಧ್ಯಾಯ VIII ನೋಡಿ.)

ಹಿಂದೆ ಹಿಂದೂಗಳು ಮುಸ್ಲಿಂ ಮಹಿಳೆಯರನ್ನು ಸುಲಭದಲ್ಲಿ ಬಿಟ್ಟುಬಿಟ್ಟು ಅವರ ಮೇಲೆ ಕರುಣೆ ತೋರುವುದರ ಮೂಲಕ ಸದ್ಗುಣಶೀಲತೆ ಮತ್ತು ಶೌರ್ಯದ “ಆತ್ಮಹತ್ಯಾತ್ಮಕ” (ಪ್ಯಾರಾ 452) ಮನೋಭಾವದಿಂದ ಬಾಧಿತರಾಗಿದ್ದರು ಎಂದು ಸಾವರ್ಕರ್ ವಿವರಿಸುತ್ತಾರೆ. ಅವರು ಛತ್ರಪತಿ ಶಿವಾಜಿಯಂತಹ ಪ್ರಖ್ಯಾತ ವ್ಯಕ್ತಿ ಕಲ್ಯಾಣ್‌ನ ಮುಸ್ಲಿಂ ರಾಜ್ಯಪಾಲನ ಸೊಸೆಯನ್ನು ಬಿಟ್ಟುಬಿಟ್ಟ ಮತ್ತು ಅದೇ ರೀತಿಯಲ್ಲಿ ಪೇಶ್ವೆ ಚಿಮಾಜಿ ಅಪ್ಟೆ ಬೇಸ್ಸಿನ್‌ನ ಪೋರ್ಚುಗೀಸ್ ಗವರ್ನರ್‌ನ ಹೆಂಡತಿಯನ್ನು ಯಾವುದೇ ಹಾನಿ ಮಾಡದೆ ಬಿಟ್ಟುಬಿಟ್ಟ ಉದಾಹರಣೆಗಳನ್ನು ನೀಡುತ್ತಾರೆ. (ಪ್ಯಾರ 450)

ಮುಸ್ಲಿಂ ದಮನಕೋರರು ಹಿಂದೂ ಮಹಿಳೆಯರನ್ನು ಅದೇ ರೀತಿ ಶಿಕ್ಷಿಸುತ್ತಿದ್ದರಿಂದ, ಅದೇ ನಡವಳಿಕೆಯನ್ನು ವಿಜಯಿ ಹಿಂದೂಗಳು ಪರಾಜಿತ ಮುಸ್ಲಿಂ ಮಹಿಳೆಯರಿಗೆ ತೋರಬೇಕು ಎಂದು ಸಾವರ್ಕರ್ ಭಾವೋದ್ರಿಕ್ತ ಧ್ವನಿಯಲ್ಲಿ ವಾದಿಸಿದ್ದಾರೆ.

ಇದನ್ನೂ ಓದಿ: ಸಾವರ್ಕರ್:‌ ಸಂಘಪರಿವಾರಕ್ಕೆ ಅಸ್ತ್ರವೋ, ದೌರ್ಬಲ್ಯವೋ – ಕ್ಷಮಾಪಣೆ ಪತ್ರಗಳು ಹೇಳುವ ಸತ್ಯಗಳು

“ಹಿಂದೂಗಳು ಗೆದ್ದ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಯರು ಕೂಡಾ ಅದೇ ವಿಪತ್ತಿನಲ್ಲಿ ಇರುತ್ತಾರೆ ಎಂಬ ಈ ಘೋರ ಆತಂಕದಿಂದ ಒಮ್ಮೆ ಅವರು ಪೀಡಿತರಾದರೆ, ಭವಿಷ್ಯದ ಮುಸ್ಲಿಂ ವಿಜಯಿಗಳು ಹಿಂದೂ ಮಹಿಳೆಯರ ಮೇಲೆ ಅಂತಹ ಅತ್ಯಾಚಾರದ ಯೋಚನೆ ಮಾಡುವ ಧೈರ್ಯವನ್ನು ಎಂದಿಗೂ ತೋರುವುದಿಲ್ಲ” ಎಂದು ಅವರು ಬರೆದಿದ್ದಾರೆ. (ಪ್ಯಾರಾ 452) ಹಿಂದೂಗಳು ಹಿಂದಿನ ಕಾಲದಿಂದಲೂ ಮುಸ್ಲಿಂ ಮಹಿಳೆಯರನ್ನು ಅನುಭೋಗಿಸುವ ಧೋರಣೆಯನ್ನು ಅನುಸರಿಸುತ್ತಿದ್ದರೆ, ಪರಿಸ್ಥಿತಿ ಈಗಿರುವುದಕ್ಕಿಂತ ಚೆನ್ನಾಗಿರುತ್ತಿತ್ತು ಎಂದು ಅವರು ವಾದಿಸುತ್ತಾರೆ:

“ಒಂದು ವೇಳೆ ಭಾರತದ ಮೇಲೆ ಹಿಂದಿನ ಮುಸ್ಲಿಂ ಆಕ್ರಮಣಗಳ ಕಾಲದಲ್ಲಿ ಹಿಂದೂಗಳು ಕೂಡಾ, ಯುದ್ಧಭೂಮಿಯಲ್ಲಿ ಜಯಶೀಲರಾದಾಗಲೆಲ್ಲಾ, ಮುಸ್ಲಿಂ ಮಹಿಳೆಯರಿಗೆ ಅದೇ ರೀತಿಯಲ್ಲಿ ಉತ್ತರ ನೀಡುತ್ತಿದ್ದರೆ, ಅಥವಾ ಅವರನ್ನು ಯಾವುದಾದರೂ ಬೇರೆ ರೀತಿಯಲ್ಲಿ ಶಿಕ್ಷಿಸುತ್ತಿದ್ದರೆ; ಅಂದರೆ, ಬಲವಂತವಾಗಿಯಾದರೂ ಮತಾಂತರ ಮಾಡುವುದು, ಮತ್ತು ಅವರನ್ನು ನಂತರ ತಮ್ಮ ತೆಕ್ಕೆಯೊಳಗೆ ಸೇರಿಸಿಕೊಳ್ಳುವುದು ಮಾಡುತ್ತಿದ್ದರೆ, ಆಗ? ಆಗ, ಅವರ ಹೃದಯದಲ್ಲಿ ಈ ಭಯಾನಕ ಭೀತಿ ಇರುವಾಗ, ಯಾವುದೇ ಹಿಂದೂ ಮಹಿಳೆಯ ವಿರುದ್ಧ ಅವರ ದುಷ್ಟ ಯೋಚನೆಯಿಂದ ದೂರ ಉಳಿಯುತ್ತಿದ್ದರು.” (ಪ್ಯಾರಾ 455) ಎಂದು ಸಾವರ್ಕರ್ ಬರೆದಿದ್ದಾರೆ.

“ಪ್ರತಿ ಹಿಂದೂವೂ ತನ್ನ ತಾಯಿಯ ಹಾಲು ಹೀರುವುದರ ಜೊತೆಗೆಯೇ, ಧಾರ್ಮಿಕ ಸಹಿಷ್ಣುತೆಯು ಒಂದು ಸದ್ಗುಣ ಎಂಬುದನ್ನು ಹೀರುವಂತೆ ಮಾಡಿರುವಂತೆ ಕಾಣುತ್ತದೆ” (ಪ್ಯಾರಾ 429-430) ಎಂಬ ತಪ್ಪು ಕಲ್ಪನೆಯ ಹೊರತಾಗಿ ಸಾವರ್ಕರ್, “ಮುಸ್ಲಿಂ ಮಹಿಳೆಯೊಂದಿಗೆ ಯಾವುದೇ ರೀತಿಯ ಸಂಬಂಧವು ತಾವೇ ಇಸ್ಲಾಮಿಗೆ ಮತಾಂತರವಾದಂತೆ ಆಗುವುದು” ಎಂಬ “ಮೂರ್ಖ ಕಲ್ಪನೆ”ಯು ಹಿಂದೂಗಳಲ್ಲಿ ಇರುವುದನ್ನು ಮತ್ತು ಇದುವೇ ಅವರು ಮುಸ್ಲಿಂ ಮಹಿಳೆಯರನ್ನು ಅತ್ಯಾಚಾರ ಮಾಡದಿರುವುದಕ್ಕೆ ಕಾರಣ ಎಂದು ಗುರುತಿಸುತ್ತಾರೆ.
(ಪ್ಯಾರಾ 453). ಈ ಕಲ್ಪನೆಯು, “ಮುಸ್ಲಿಂ ಸ್ತ್ರೀ ವರ್ಗ”ವನ್ನು ಶಿಕ್ಷಿಸದಂತೆ ಹಿಂದೂ ಪುರುಷರನ್ನು ತಡೆದಿದೆ ಎಂದು ಅವರು ಬರೆಯುತ್ತಾರೆ. (ಪ್ಯಾರಾ 454)

ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ಒಂದು ವೇಳೆ ಯಾರಾದರೂ ಮುಸ್ಲಿಂ ಮಹಿಳೆಯರ ಬಗ್ಗೆ ಸಹಾನುಭೂತಿ ತೋರುವುದಾದಲ್ಲಿ, ಸಾವರ್ಕರ್ ನಮ್ಮನ್ನು ಮುಸ್ಲಿಂ ಮಹಿಳೆಯರು ಮಾಡಿದ ಯಾವುದೇ ಆಧಾರವಿಲ್ಲದ “ತಪ್ಪು”ಗಳ ಯಾತ್ರೆಗೆ ಕೊಂಡೊಯ್ಯುತ್ತಾರೆ. ಅವುಗಳಲ್ಲಿ ಹಿಂದೂ ಹುಡುಗಿಯರನ್ನು ಪುಸಲಾಯಿಸುವುದು ಮತ್ತು ಅವರನ್ನು “ಮಸೀದಿಗಳಲ್ಲಿ ಇರುವ ಮುಸ್ಲಿಂ ಕೇಂದ್ರಗಳಿಗೆ” ಕಳುಹಿಸುವುದು ಮತ್ತು ಹಿಂದೂಗಳ ವಿರುದ್ಧ ಹಿಂಸಾಚಾರದಲ್ಲಿ ಮುಸ್ಲಿಂ ಪುರುಷರನ್ನು ಬೆಂಬಲಿಸುವುದು ಸೇರಿದೆ.

ವರ್ಷಗಳಿಂದ ಆರ್‌ಎಸ್‌ಎಸ್ ಮತ್ತು ಅದರ ಮುಂಚೂಣಿ ಸಂಘಟನೆಗಳು ಪ್ರಚಾರ ಮಾಡುತ್ತಿರುವುದು ಇಂತಹಾ ವಿಚಾರಗಳನ್ನೇ ಮತ್ತು ಸಾವರ್ಕರ್ ಸಂಘ ಪರಿವಾರದ ಹಿಂಬಾಲಕರ ನಡುವೆ ಬಹಳ ಗೌರವ ಹೊಂದಿರುವ ನಾಯಕನಾಗಿ ಉಳಿದುಕೊಂಡಿದ್ದಾರೆ. ಇದು 2002ರಲ್ಲಿ ಗುಜರಾತಿನಲ್ಲಿ ಮತ್ತು 2013ರಲ್ಲಿ ಮುಜಾಫರ್‌ನಗರದಲ್ಲಿ ಮುಸ್ಲಿಂ ಮಹಿಳೆಯರ ಮೇಲೆ ಭಯಾನಕವಾದ ದೌರ್ಜನ್ಯಗಳನ್ನು ನಡೆಸುವಂತೆ ಹಿಂದೂ ಗಲಭೆಕೋರರನ್ನು ಮತ್ತು ಇನ್ನೂ ಅನೇಕರನ್ನು ಪ್ರೇರೇಪಿಸಿದೆ.

ಆದುದರಿಂದ, ಕಥುವಾ ಅಥವಾ ಉನಾವ್‌ನ ಅತ್ಯಾಚಾರಿಗಳು ಮತ್ತು ಕೊಲೆಗಡುಕರು- ಅವರ ಮಾನಸಿಕವಾಗಿ ಪ್ರಚೋದನೆಗಳು ಏನೇ ಇರಲಿ, ಅವರ ನೈತಿಕ ಮತ್ತು ಸೈದ್ಧಾಂತಿಕ ಸಮರ್ಥನೆಗಳು ಬರುತ್ತಿರುವುದು ಸಾವರ್ಕರ್ ಅವರಿಂದಲೇ ಹೊರತು ಬೇರಾರಿಂದಲೂ ಅಲ್ಲ. ಇಂತಹ ಕೃತ್ಯಗಳನ್ನು ಖಂಡಿಸುವುದು ಮತ್ತು ಆ ಕುರಿತು ಕ್ರಮ ಕೈಗೊಳ್ಳುವುದು ಸಂಘಪರಿವಾರಕ್ಕೆ ಕಷ್ಟವಾಗುತ್ತಿರುವುದರಲ್ಲಿ ದೊಡ್ಡ ಆಶ್ಚರ್ಯವೇನಿಲ್ಲ. ಮಹಿಳೆಯರ ವಿರುದ್ಧದ ಅಪರಾಧದಲ್ಲಿ ತೊಡಗಿದ ಬಿಜೆಪಿ/ ಸಂಘಪರಿವಾರದ ಸದಸ್ಯರ ಪಟ್ಟಿ ಬೆಳೆಯುತ್ತಾ ಹೋಗುತ್ತಿರುವುದರಲ್ಲಿ ಕೂಡಾ ದೊಡ್ಡ ಆಶ್ಚರ್ಯವೇನಿಲ್ಲ.

ಸುಬೋಧ್ ವರ್ಮಾ
ಅನುವಾದ: ನಿಖಿಲ್ ಕೋಲ್ಪೆ
ಕೃಪೆ: ‘ನ್ಯೂಸ್ ಕ್ಲಿಕ್’


ಇದನ್ನೂ ಓದಿ: ರಾಜಕೀಯ ಸಾಧನವಾಗಿ ಅತ್ಯಾಚಾರದ ಕಲ್ಪನೆಯನ್ನು ಸಾವರ್ಕರ್ ಸಮರ್ಥಿಸಿಕೊಂಡಿದ್ದು ಹೀಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...