Homeಮುಖಪುಟಗಾಂಧಿ ಕೊಲ್ಲಲು ಗೋಡ್ಸೆಗೆ ಬಂದೂಕು ಕೊಟ್ಟಿದ್ದೇ ಸಾವರ್ಕರ್‌: ಬಾಪು ಮೊಮ್ಮಗ ಹೇಳಿಕೆ

ಗಾಂಧಿ ಕೊಲ್ಲಲು ಗೋಡ್ಸೆಗೆ ಬಂದೂಕು ಕೊಟ್ಟಿದ್ದೇ ಸಾವರ್ಕರ್‌: ಬಾಪು ಮೊಮ್ಮಗ ಹೇಳಿಕೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಯಲ್ಲಿ ಆರ್‌ಎಸ್‌ಎಸ್‌ ನಾಯಕ ವಿ.ಡಿ.ಸಾವರ್ಕರ್‌ ನೇರವಾಗಿ ಪಾತ್ರ ವಹಿಸಿದ್ದರು ಎಂಬ ಆರೋಪವನ್ನು ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್‌ ಗಾಂಧಿ ಮಾಡಿದ್ದಾರೆ.

“ಗಾಂಧಿ ಹತ್ಯೆಯಲ್ಲಿ ಸಾವರ್ಕರ್‌ ಪಾತ್ರವಿಲ್ಲ” ಎಂಬ ವಾದವನ್ನು ಸಂಘಪರಿವಾರ ಮಾಡುತ್ತಾ ಬಂದಿದೆ. ಆದರೆ ಅನೇಕ ಚರಿತ್ರಾಕಾರರು ಈ ಕೃತ್ಯದಲ್ಲಿ ಸಾವರ್ಕರ್‌‌ ಪಾತ್ರವನ್ನು ಉಲ್ಲೇಖಿಸಿ ಬರೆದಿದ್ದಾರೆ. ಈಗ ತುಷಾರ್‌ ಗಾಂಧಿಯವರು ಸಾವರ್ಕರ್‌ ಪಾತ್ರದ ಕುರಿತು ಮಾತನಾಡಿದ್ದಾರೆ.

“ವಿ.ಡಿ.ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದ್ದು ಮಾತ್ರವಲ್ಲದೆ, ಮಹಾತ್ಮ ಗಾಂಧೀಜಿ ಹತ್ಯೆಯಲ್ಲೂ ನಾಥೂರಾಮ್‌ ಗೋಡ್ಸೆಗೆ ಸಹಾಯ ಮಾಡಿದ್ದರು” ಎಂದು ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸಾವರ್ಕರ್‌ ವಿಷಯ ಪ್ರಸ್ತಾಪಿಸಿದ್ದರು. “ಬ್ರಿಟಿಷರಿಗೆ ಸಾವರ್ಕರ್‌ ಪತ್ರ ಬರೆದಿದ್ದರು. ಗಾಂಧೀಜಿ, ನೆಹರೂ, ಪಟೇಲ್‌ ಮತ್ತಿತರ ನಾಯಕರು ಜೈಲು ವಾಸ ಅನುಭವಿಸಿದರು” ಎಂದು ರಾಹುಲ್ ಗಾಂಧಿಯವರು ಮಹಾರಾಷ್ಟ್ರದಲ್ಲಿ ಹೇಳಿದ್ದು ಮಹಾ ವಿಕಾಸ್ ಅಘಾಡಿ ಮೈತ್ರಿಯಲ್ಲಿ ಭಿನ್ನಾಭಿಪ್ರಾಯ ಮೂಡಲೂ ಕಾರಣವಾಗಿತ್ತು. ಮೈತ್ರಿ ಪಕ್ಷವಾದ ಉದ್ಧವ್‌ ನೇತೃತ್ವದ ಶಿವಸೇನಾ ಬಣದ ನಾಯಕರು, ರಾಹುಲ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿತ್ತು.

ವಿವಾದದ ಬೆನ್ನಲ್ಲೇ ಮಹಾತ್ಮ ಗಾಂಧಿಜೀಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರು ಸಾವರ್ಕರ್ ವಿಷಯ ಕೈಗೆತ್ತಿಕೊಂಡಿದ್ದಾರೆ.

ಬುಲ್ಧಾನಾ ಜಿಲ್ಲೆಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿರುವ ತುಷಾರ್ ಗಾಂಧಿ, ಸಾವರ್ಕರ್ ವಿರುದ್ಧ ಮಾತನಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ತುಷಾರ್‌ ಗಾಂಧಿ, “ಸಾವರ್ಕರ್ ಬ್ರಿಟಿಷರಿಗೆ ಮಾತ್ರ ಸಹಾಯ ಮಾಡಿಲ್ಲ. ಬಾಪು ಕೊಲೆಗೆ ನಾಥೂರಾಮ್‌ ಗೋಡ್ಸೆಗೂ ಸಹಾಯ ಮಾಡಿದ್ದಾರೆ. ಗಾಂಧೀಜಿಯನ್ನು ಕೊಲೆ ಮಾಡಲು ಸಮರ್ಥ ಬಂದೂಕು ಒದಗಿಸುವಲ್ಲಿ ಸಾವರ್ಕರ್ ಸಹಾಯ ಮಾಡಿದ್ದಾರೆ. ಗಾಂಧೀಜಿ ಕೊಲೆಗೂ ಮುನ್ನ ಗೋಡ್ಸೆ ಸಮರ್ಥವಾದ ಆಯುಧ ಹೊಂದಿರಲಿಲ್ಲ” ಎಂದು ತಿಳಿಸಿದ್ದಾರೆ.

“1930ರ ದಶಕದಲ್ಲಿ ಬಾಪು ಅವರ ವಿರುದ್ಧ ಅನೇಕ ಪ್ರಯತ್ನಗಳು ನಡೆದವು. ವಿದರ್ಭದ ಅಕೋಲಾದಲ್ಲಿ ಬಾಪುವನ್ನು ಕೊಲ್ಲುವ ಸಂಚಿನ ಬಗ್ಗೆ ಪ್ರಬೋಧಂಕರ್ ಠಾಕ್ರೆ ಅವರು ಬಾಪು ಅವರ ಸಹಚರರಿಗೆ ಮುಂಚಿತವಾಗಿ ಎಚ್ಚರಿಕೆ ನೀಡಿದ್ದರು. ಆದ್ದರಿಂದ ಆ ಸಂದರ್ಭದಲ್ಲಿ ಬಾಪುವಿನ ಜೀವ ಉಳಿದಿತ್ತು. ಸನಾತನಿ ಹಿಂದೂ ಸಂಘಟನೆಗಳು ಮತ್ತು ಮಹಾರಾಷ್ಟ್ರದ ಅವರ ನಾಯಕತ್ವಕ್ಕೆ ಬಾಪು ಅವರ ಹತ್ಯೆಯ ದಾಳಿಯಿಂದ ದೂರವಿರುವಂತೆ ಸಾರ್ವಜನಿಕ ಎಚ್ಚರಿಕೆ ನೀಡಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

“ಎರಡನೆಯ ಮಹಾಯುದ್ಧದ ಸಮಯದಲ್ಲಿ ಸಾವರ್ಕರ್ ಬ್ರಿಟಿಷರಿಗೆ ಸಕ್ರಿಯವಾಗಿ ಸಹಾಯ ಮಾಡಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಅವರ ಐಎನ್‌ಎ ಬ್ರಿಟಿಷರ ವಿರುದ್ಧ ಹೋರಾಡುತ್ತಿದ್ದಾರೆ ಎಂದು ತಿಳಿದ ನಂತರವೂ ಸಹಾಯ ಮುಂದುವರೆಸಿದ್ದರು. ಇದು ನಿರಾಕರಿಸಲಾಗದ ಐತಿಹಾಸಿಕ ಸತ್ಯ” ಎಂದು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರ ಸಾವರ್ಕರ್ ಹೇಳಿಕೆಗೆ ಉದ್ಧವ್ ಠಾಕ್ರೆ ಬಣ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತ್ತು. ಆ ಕುರಿತು ಮಾತನಾಡಿರುವ ತುಷಾರ್ ಗಾಂಧಿ, “ಸಾವರ್ಕರ್ ಮತ್ತು ಹೆಡ್ಗೇವಾರ್ ಅವರು ಸನಾತನ ಹಿಂದೂಗಳ ನಾಯಕರಾಗಿದ್ದರು. ಪ್ರಬೋಧನಕರ್ ಅವರ ನೀಡಿದ ಎಚ್ಚರಿಕೆಯು ಈ ನಾಯಕರನ್ನುದ್ದೇಶಿಸಿಯೇ ನೀಡಲಾಗಿತ್ತು. ಶಿವಸೇನೆಯ ಉದ್ಧವ್ ಠಾಕ್ರೆಯವರು, ಅವರ ಈ ಇತಿಹಾಸವನ್ನು ನೆನಪಿಸಿಕೊಳ್ಳಬೇಕು” ಎಂದು ವಾಗ್ದಾಳಿ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...