Homeಮುಖಪುಟಗಾಂಧಿ ಕೊಲ್ಲಲು ಗೋಡ್ಸೆಗೆ ಬಂದೂಕು ಕೊಟ್ಟಿದ್ದೇ ಸಾವರ್ಕರ್‌: ಬಾಪು ಮೊಮ್ಮಗ ಹೇಳಿಕೆ

ಗಾಂಧಿ ಕೊಲ್ಲಲು ಗೋಡ್ಸೆಗೆ ಬಂದೂಕು ಕೊಟ್ಟಿದ್ದೇ ಸಾವರ್ಕರ್‌: ಬಾಪು ಮೊಮ್ಮಗ ಹೇಳಿಕೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಯಲ್ಲಿ ಆರ್‌ಎಸ್‌ಎಸ್‌ ನಾಯಕ ವಿ.ಡಿ.ಸಾವರ್ಕರ್‌ ನೇರವಾಗಿ ಪಾತ್ರ ವಹಿಸಿದ್ದರು ಎಂಬ ಆರೋಪವನ್ನು ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್‌ ಗಾಂಧಿ ಮಾಡಿದ್ದಾರೆ.

“ಗಾಂಧಿ ಹತ್ಯೆಯಲ್ಲಿ ಸಾವರ್ಕರ್‌ ಪಾತ್ರವಿಲ್ಲ” ಎಂಬ ವಾದವನ್ನು ಸಂಘಪರಿವಾರ ಮಾಡುತ್ತಾ ಬಂದಿದೆ. ಆದರೆ ಅನೇಕ ಚರಿತ್ರಾಕಾರರು ಈ ಕೃತ್ಯದಲ್ಲಿ ಸಾವರ್ಕರ್‌‌ ಪಾತ್ರವನ್ನು ಉಲ್ಲೇಖಿಸಿ ಬರೆದಿದ್ದಾರೆ. ಈಗ ತುಷಾರ್‌ ಗಾಂಧಿಯವರು ಸಾವರ್ಕರ್‌ ಪಾತ್ರದ ಕುರಿತು ಮಾತನಾಡಿದ್ದಾರೆ.

“ವಿ.ಡಿ.ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದ್ದು ಮಾತ್ರವಲ್ಲದೆ, ಮಹಾತ್ಮ ಗಾಂಧೀಜಿ ಹತ್ಯೆಯಲ್ಲೂ ನಾಥೂರಾಮ್‌ ಗೋಡ್ಸೆಗೆ ಸಹಾಯ ಮಾಡಿದ್ದರು” ಎಂದು ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸಾವರ್ಕರ್‌ ವಿಷಯ ಪ್ರಸ್ತಾಪಿಸಿದ್ದರು. “ಬ್ರಿಟಿಷರಿಗೆ ಸಾವರ್ಕರ್‌ ಪತ್ರ ಬರೆದಿದ್ದರು. ಗಾಂಧೀಜಿ, ನೆಹರೂ, ಪಟೇಲ್‌ ಮತ್ತಿತರ ನಾಯಕರು ಜೈಲು ವಾಸ ಅನುಭವಿಸಿದರು” ಎಂದು ರಾಹುಲ್ ಗಾಂಧಿಯವರು ಮಹಾರಾಷ್ಟ್ರದಲ್ಲಿ ಹೇಳಿದ್ದು ಮಹಾ ವಿಕಾಸ್ ಅಘಾಡಿ ಮೈತ್ರಿಯಲ್ಲಿ ಭಿನ್ನಾಭಿಪ್ರಾಯ ಮೂಡಲೂ ಕಾರಣವಾಗಿತ್ತು. ಮೈತ್ರಿ ಪಕ್ಷವಾದ ಉದ್ಧವ್‌ ನೇತೃತ್ವದ ಶಿವಸೇನಾ ಬಣದ ನಾಯಕರು, ರಾಹುಲ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿತ್ತು.

ವಿವಾದದ ಬೆನ್ನಲ್ಲೇ ಮಹಾತ್ಮ ಗಾಂಧಿಜೀಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರು ಸಾವರ್ಕರ್ ವಿಷಯ ಕೈಗೆತ್ತಿಕೊಂಡಿದ್ದಾರೆ.

ಬುಲ್ಧಾನಾ ಜಿಲ್ಲೆಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿರುವ ತುಷಾರ್ ಗಾಂಧಿ, ಸಾವರ್ಕರ್ ವಿರುದ್ಧ ಮಾತನಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ತುಷಾರ್‌ ಗಾಂಧಿ, “ಸಾವರ್ಕರ್ ಬ್ರಿಟಿಷರಿಗೆ ಮಾತ್ರ ಸಹಾಯ ಮಾಡಿಲ್ಲ. ಬಾಪು ಕೊಲೆಗೆ ನಾಥೂರಾಮ್‌ ಗೋಡ್ಸೆಗೂ ಸಹಾಯ ಮಾಡಿದ್ದಾರೆ. ಗಾಂಧೀಜಿಯನ್ನು ಕೊಲೆ ಮಾಡಲು ಸಮರ್ಥ ಬಂದೂಕು ಒದಗಿಸುವಲ್ಲಿ ಸಾವರ್ಕರ್ ಸಹಾಯ ಮಾಡಿದ್ದಾರೆ. ಗಾಂಧೀಜಿ ಕೊಲೆಗೂ ಮುನ್ನ ಗೋಡ್ಸೆ ಸಮರ್ಥವಾದ ಆಯುಧ ಹೊಂದಿರಲಿಲ್ಲ” ಎಂದು ತಿಳಿಸಿದ್ದಾರೆ.

“1930ರ ದಶಕದಲ್ಲಿ ಬಾಪು ಅವರ ವಿರುದ್ಧ ಅನೇಕ ಪ್ರಯತ್ನಗಳು ನಡೆದವು. ವಿದರ್ಭದ ಅಕೋಲಾದಲ್ಲಿ ಬಾಪುವನ್ನು ಕೊಲ್ಲುವ ಸಂಚಿನ ಬಗ್ಗೆ ಪ್ರಬೋಧಂಕರ್ ಠಾಕ್ರೆ ಅವರು ಬಾಪು ಅವರ ಸಹಚರರಿಗೆ ಮುಂಚಿತವಾಗಿ ಎಚ್ಚರಿಕೆ ನೀಡಿದ್ದರು. ಆದ್ದರಿಂದ ಆ ಸಂದರ್ಭದಲ್ಲಿ ಬಾಪುವಿನ ಜೀವ ಉಳಿದಿತ್ತು. ಸನಾತನಿ ಹಿಂದೂ ಸಂಘಟನೆಗಳು ಮತ್ತು ಮಹಾರಾಷ್ಟ್ರದ ಅವರ ನಾಯಕತ್ವಕ್ಕೆ ಬಾಪು ಅವರ ಹತ್ಯೆಯ ದಾಳಿಯಿಂದ ದೂರವಿರುವಂತೆ ಸಾರ್ವಜನಿಕ ಎಚ್ಚರಿಕೆ ನೀಡಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

“ಎರಡನೆಯ ಮಹಾಯುದ್ಧದ ಸಮಯದಲ್ಲಿ ಸಾವರ್ಕರ್ ಬ್ರಿಟಿಷರಿಗೆ ಸಕ್ರಿಯವಾಗಿ ಸಹಾಯ ಮಾಡಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಅವರ ಐಎನ್‌ಎ ಬ್ರಿಟಿಷರ ವಿರುದ್ಧ ಹೋರಾಡುತ್ತಿದ್ದಾರೆ ಎಂದು ತಿಳಿದ ನಂತರವೂ ಸಹಾಯ ಮುಂದುವರೆಸಿದ್ದರು. ಇದು ನಿರಾಕರಿಸಲಾಗದ ಐತಿಹಾಸಿಕ ಸತ್ಯ” ಎಂದು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರ ಸಾವರ್ಕರ್ ಹೇಳಿಕೆಗೆ ಉದ್ಧವ್ ಠಾಕ್ರೆ ಬಣ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತ್ತು. ಆ ಕುರಿತು ಮಾತನಾಡಿರುವ ತುಷಾರ್ ಗಾಂಧಿ, “ಸಾವರ್ಕರ್ ಮತ್ತು ಹೆಡ್ಗೇವಾರ್ ಅವರು ಸನಾತನ ಹಿಂದೂಗಳ ನಾಯಕರಾಗಿದ್ದರು. ಪ್ರಬೋಧನಕರ್ ಅವರ ನೀಡಿದ ಎಚ್ಚರಿಕೆಯು ಈ ನಾಯಕರನ್ನುದ್ದೇಶಿಸಿಯೇ ನೀಡಲಾಗಿತ್ತು. ಶಿವಸೇನೆಯ ಉದ್ಧವ್ ಠಾಕ್ರೆಯವರು, ಅವರ ಈ ಇತಿಹಾಸವನ್ನು ನೆನಪಿಸಿಕೊಳ್ಳಬೇಕು” ಎಂದು ವಾಗ್ದಾಳಿ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...