Homeಮುಖಪುಟಗಾಂಧಿ ಕೊಲ್ಲಲು ಗೋಡ್ಸೆಗೆ ಬಂದೂಕು ಕೊಟ್ಟಿದ್ದೇ ಸಾವರ್ಕರ್‌: ಬಾಪು ಮೊಮ್ಮಗ ಹೇಳಿಕೆ

ಗಾಂಧಿ ಕೊಲ್ಲಲು ಗೋಡ್ಸೆಗೆ ಬಂದೂಕು ಕೊಟ್ಟಿದ್ದೇ ಸಾವರ್ಕರ್‌: ಬಾಪು ಮೊಮ್ಮಗ ಹೇಳಿಕೆ

- Advertisement -
- Advertisement -

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಯಲ್ಲಿ ಆರ್‌ಎಸ್‌ಎಸ್‌ ನಾಯಕ ವಿ.ಡಿ.ಸಾವರ್ಕರ್‌ ನೇರವಾಗಿ ಪಾತ್ರ ವಹಿಸಿದ್ದರು ಎಂಬ ಆರೋಪವನ್ನು ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್‌ ಗಾಂಧಿ ಮಾಡಿದ್ದಾರೆ.

“ಗಾಂಧಿ ಹತ್ಯೆಯಲ್ಲಿ ಸಾವರ್ಕರ್‌ ಪಾತ್ರವಿಲ್ಲ” ಎಂಬ ವಾದವನ್ನು ಸಂಘಪರಿವಾರ ಮಾಡುತ್ತಾ ಬಂದಿದೆ. ಆದರೆ ಅನೇಕ ಚರಿತ್ರಾಕಾರರು ಈ ಕೃತ್ಯದಲ್ಲಿ ಸಾವರ್ಕರ್‌‌ ಪಾತ್ರವನ್ನು ಉಲ್ಲೇಖಿಸಿ ಬರೆದಿದ್ದಾರೆ. ಈಗ ತುಷಾರ್‌ ಗಾಂಧಿಯವರು ಸಾವರ್ಕರ್‌ ಪಾತ್ರದ ಕುರಿತು ಮಾತನಾಡಿದ್ದಾರೆ.

“ವಿ.ಡಿ.ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದ್ದು ಮಾತ್ರವಲ್ಲದೆ, ಮಹಾತ್ಮ ಗಾಂಧೀಜಿ ಹತ್ಯೆಯಲ್ಲೂ ನಾಥೂರಾಮ್‌ ಗೋಡ್ಸೆಗೆ ಸಹಾಯ ಮಾಡಿದ್ದರು” ಎಂದು ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸಾವರ್ಕರ್‌ ವಿಷಯ ಪ್ರಸ್ತಾಪಿಸಿದ್ದರು. “ಬ್ರಿಟಿಷರಿಗೆ ಸಾವರ್ಕರ್‌ ಪತ್ರ ಬರೆದಿದ್ದರು. ಗಾಂಧೀಜಿ, ನೆಹರೂ, ಪಟೇಲ್‌ ಮತ್ತಿತರ ನಾಯಕರು ಜೈಲು ವಾಸ ಅನುಭವಿಸಿದರು” ಎಂದು ರಾಹುಲ್ ಗಾಂಧಿಯವರು ಮಹಾರಾಷ್ಟ್ರದಲ್ಲಿ ಹೇಳಿದ್ದು ಮಹಾ ವಿಕಾಸ್ ಅಘಾಡಿ ಮೈತ್ರಿಯಲ್ಲಿ ಭಿನ್ನಾಭಿಪ್ರಾಯ ಮೂಡಲೂ ಕಾರಣವಾಗಿತ್ತು. ಮೈತ್ರಿ ಪಕ್ಷವಾದ ಉದ್ಧವ್‌ ನೇತೃತ್ವದ ಶಿವಸೇನಾ ಬಣದ ನಾಯಕರು, ರಾಹುಲ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿತ್ತು.

ವಿವಾದದ ಬೆನ್ನಲ್ಲೇ ಮಹಾತ್ಮ ಗಾಂಧಿಜೀಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರು ಸಾವರ್ಕರ್ ವಿಷಯ ಕೈಗೆತ್ತಿಕೊಂಡಿದ್ದಾರೆ.

ಬುಲ್ಧಾನಾ ಜಿಲ್ಲೆಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿರುವ ತುಷಾರ್ ಗಾಂಧಿ, ಸಾವರ್ಕರ್ ವಿರುದ್ಧ ಮಾತನಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ತುಷಾರ್‌ ಗಾಂಧಿ, “ಸಾವರ್ಕರ್ ಬ್ರಿಟಿಷರಿಗೆ ಮಾತ್ರ ಸಹಾಯ ಮಾಡಿಲ್ಲ. ಬಾಪು ಕೊಲೆಗೆ ನಾಥೂರಾಮ್‌ ಗೋಡ್ಸೆಗೂ ಸಹಾಯ ಮಾಡಿದ್ದಾರೆ. ಗಾಂಧೀಜಿಯನ್ನು ಕೊಲೆ ಮಾಡಲು ಸಮರ್ಥ ಬಂದೂಕು ಒದಗಿಸುವಲ್ಲಿ ಸಾವರ್ಕರ್ ಸಹಾಯ ಮಾಡಿದ್ದಾರೆ. ಗಾಂಧೀಜಿ ಕೊಲೆಗೂ ಮುನ್ನ ಗೋಡ್ಸೆ ಸಮರ್ಥವಾದ ಆಯುಧ ಹೊಂದಿರಲಿಲ್ಲ” ಎಂದು ತಿಳಿಸಿದ್ದಾರೆ.

“1930ರ ದಶಕದಲ್ಲಿ ಬಾಪು ಅವರ ವಿರುದ್ಧ ಅನೇಕ ಪ್ರಯತ್ನಗಳು ನಡೆದವು. ವಿದರ್ಭದ ಅಕೋಲಾದಲ್ಲಿ ಬಾಪುವನ್ನು ಕೊಲ್ಲುವ ಸಂಚಿನ ಬಗ್ಗೆ ಪ್ರಬೋಧಂಕರ್ ಠಾಕ್ರೆ ಅವರು ಬಾಪು ಅವರ ಸಹಚರರಿಗೆ ಮುಂಚಿತವಾಗಿ ಎಚ್ಚರಿಕೆ ನೀಡಿದ್ದರು. ಆದ್ದರಿಂದ ಆ ಸಂದರ್ಭದಲ್ಲಿ ಬಾಪುವಿನ ಜೀವ ಉಳಿದಿತ್ತು. ಸನಾತನಿ ಹಿಂದೂ ಸಂಘಟನೆಗಳು ಮತ್ತು ಮಹಾರಾಷ್ಟ್ರದ ಅವರ ನಾಯಕತ್ವಕ್ಕೆ ಬಾಪು ಅವರ ಹತ್ಯೆಯ ದಾಳಿಯಿಂದ ದೂರವಿರುವಂತೆ ಸಾರ್ವಜನಿಕ ಎಚ್ಚರಿಕೆ ನೀಡಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಮನುಷ್ಯನಾದವನಿಗೆ ಮಾತ್ರ ದುಃಖಿಸಲು ಸಾಧ್ಯ: ಸಾವರ್ಕರ್‌ ವಿವಾದದ ಬಳಿಕ ರಾಹುಲ್‌ರನ್ನು ಹೊಗಳಿದ ಸಂಜಯ್‌ ರಾವುತ್‌

“ಎರಡನೆಯ ಮಹಾಯುದ್ಧದ ಸಮಯದಲ್ಲಿ ಸಾವರ್ಕರ್ ಬ್ರಿಟಿಷರಿಗೆ ಸಕ್ರಿಯವಾಗಿ ಸಹಾಯ ಮಾಡಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಅವರ ಐಎನ್‌ಎ ಬ್ರಿಟಿಷರ ವಿರುದ್ಧ ಹೋರಾಡುತ್ತಿದ್ದಾರೆ ಎಂದು ತಿಳಿದ ನಂತರವೂ ಸಹಾಯ ಮುಂದುವರೆಸಿದ್ದರು. ಇದು ನಿರಾಕರಿಸಲಾಗದ ಐತಿಹಾಸಿಕ ಸತ್ಯ” ಎಂದು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರ ಸಾವರ್ಕರ್ ಹೇಳಿಕೆಗೆ ಉದ್ಧವ್ ಠಾಕ್ರೆ ಬಣ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತ್ತು. ಆ ಕುರಿತು ಮಾತನಾಡಿರುವ ತುಷಾರ್ ಗಾಂಧಿ, “ಸಾವರ್ಕರ್ ಮತ್ತು ಹೆಡ್ಗೇವಾರ್ ಅವರು ಸನಾತನ ಹಿಂದೂಗಳ ನಾಯಕರಾಗಿದ್ದರು. ಪ್ರಬೋಧನಕರ್ ಅವರ ನೀಡಿದ ಎಚ್ಚರಿಕೆಯು ಈ ನಾಯಕರನ್ನುದ್ದೇಶಿಸಿಯೇ ನೀಡಲಾಗಿತ್ತು. ಶಿವಸೇನೆಯ ಉದ್ಧವ್ ಠಾಕ್ರೆಯವರು, ಅವರ ಈ ಇತಿಹಾಸವನ್ನು ನೆನಪಿಸಿಕೊಳ್ಳಬೇಕು” ಎಂದು ವಾಗ್ದಾಳಿ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...