Homeಮುಖಪುಟದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

ದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

- Advertisement -
- Advertisement -

1947ರಲ್ಲಿ ದೇಶದ ವಿಭಜನೆಗೆ ಕಾರಣರಾದವರು ಯಾರು ಎಂಬುದರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ನಡೆಯುತ್ತಿದ್ದು, ಕಾಂಗ್ರೆಸ್‌ ವಿಡಿಯೊವೊಂದನ್ನು ಬಿಡುಗಡೆ ಮಾಡಿ ಬಿಜೆಪಿಗೆ ತಿರುಗೇಟು ನೀಡಿದೆ.

ಪಂಡಿತ್ ಜವಹರಲಾಲ್‌ ನೆಹರೂ ಅವರನ್ನು ಕೇಂದ್ರೀಕರಿಸಿ, ದೇಶ ವಿಭಜನೆಗೆ ಸಂಬಂಧಿಸಿದ ವಿಡಿಯೊವನ್ನು ಬಿಜೆಪಿ ಆಗಸ್ಟ್‌ 14ರಂದು ಬಿಡುಗಡೆ ಮಾಡಿತ್ತು. ಅದಕ್ಕೆ ಕಾಂಗ್ರೆಸ್‌ ವಿಡಿಯೊ ಮೂಲಕವೇ ಪ್ರತಿಕ್ರಿಯೆ ನೀಡಿದೆ.

ಬಿಜೆಪಿಯ ರಾಜಕೀಯ ಐಕಾನ್‌ಗಳಾದ ವಿನಾಯಕ ದಾಮೋದರ್ ಸಾವರ್ಕರ್ ಮತ್ತು ಎಸ್‌ಪಿ ಮುಖರ್ಜಿಯತ್ತ ಬೆರಳು ತೋರಿಸಿದ ಕಾಂಗ್ರೆಸ್‌ ದೇಶ ವಿಭಜನೆಗೆ ಇವರೇ ಕಾರಣ ಎಂದು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್‌ಪಿ ಮುಖರ್ಜಿಯವರು ಬಂಗಾಳದ ವಿಭಜನೆಗೆ ಬೆಂಬಲವನ್ನು ತೋರಿಸಿದ ಮೂರು ದಶಕಗಳ ನಂತರ ಸಾವರ್ಕರ್ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಮಂಡಿಸಿದರು ಎಂದು ಕಾಂಗ್ರೆಸ್ ತನ್ನ ವೀಡಿಯೊದಲ್ಲಿ ವಾದಿಸಿದೆ. ಸಾವರ್ಕರ್‌ ಮಂಡಿಸಿದ ದ್ವಿರಾಷ್ಟ್ರ ಸಿದ್ಧಾಂತವನ್ನು ನಂತರದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಮುಂದುವರಿಸಿದರು ಎಂದು ಕಾಂಗ್ರೆಸ್ ಆರೋಪಿಸಿದೆ.

“ಎಷ್ಟೇ ವಿಚಿತ್ರವಾಗಿ ಕಂಡರೂ ಸಾವರ್ಕರ್ ಮತ್ತು ಜಿನ್ನಾ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪರಸ್ಪರ ವಿರೋಧಿಸುವ ಬದಲು ಪರಸ್ಪರ ಬೆಂಬಲಿಸಿದ್ದಾರೆ” ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೇಳಿರುವುದಾಗಿ ವಿಡಿಯೊದಲ್ಲಿ ಉಲ್ಲೇಖಿಸಲಾಗಿದೆ.

ಎರಡು ರಾಷ್ಟ್ರಗಳ ಸಿದ್ಧಾಂತದ ಮೇಲೆ ಮುಸ್ಲಿಂ ಲೀಗ್ ಅನ್ನು ಎದುರಿಸಬೇಕಾಗಿದ್ದ ಕಾಂಗ್ರೆಸ್ ನಾಯಕರು ರಾಷ್ಟ್ರದ ಜನರನ್ನು ಸಂಪರ್ಕಿಸದೆ ವಿಭಜನೆಯನ್ನು ಒಪ್ಪಿಕೊಂಡರು ಎಂದು ಬಿಜೆಪಿ ಆರೋಪಿಸಿದೆ. ಸಂಗ್ರಹ ಫೋಟೋಗಳನ್ನು ಬಳಸಲಾದ ವೀಡಿಯೊದಲ್ಲಿ ಜವಾಹರಲಾಲ್ ನೆಹರೂ ಮತ್ತು ಜಿನ್ನಾ ಅವರ ಫೋಟೋಗಳನ್ನೇ ಬಿಜೆಪಿ ಬಳಸಿದೆ.

“ಭಾರತದ ಸಾಂಸ್ಕೃತಿಕ ಪರಂಪರೆ, ನಾಗರಿಕತೆ, ಮೌಲ್ಯಗಳು, ತೀರ್ಥಯಾತ್ರೆಗಳ ಬಗ್ಗೆ ತಿಳಿದಿಲ್ಲದವರು, ಶತಮಾನಗಳಿಂದ ಒಟ್ಟಿಗೆ ವಾಸಿಸುತ್ತಿದ್ದ ಜನರ ನಡುವೆ ಕೇವಲ ಮೂರು ವಾರಗಳಲ್ಲಿ ಗಡಿಗಳನ್ನು ನಿರ್ಮಿಸಿದರು” ಎಂದು ಬಿಜೆಪಿ ದೂರಿದೆ.

ಬಿಜೆಪಿ ವಿರುದ್ಧ ಟೀಕೆಗಳ ಸುರಿಮಳೆಗರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ , “ಆಗಸ್ಟ್ 14ರಂದು ವಿಭಜನೆಯ ಭೀಕರ ಸಂಸ್ಮರಣಾ ದಿನವನ್ನಾಗಿ ಆಚರಿಸುವುದು ಏತಕ್ಕೆ? ಪ್ರಸ್ತುತ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಐತಿಹಾಸಿಕ ಘಟನೆಯನ್ನು ಬಳಸಿಕೊಳ್ಳುವುದೇ ಪ್ರಧಾನಿಯವರ ನಿಜವಾದ ಉದ್ದೇಶವಾಗಿದೆ” ಎಂದು ಟೀಕಿಸಿದ್ದಾರೆ.

“ವಿಭಜನೆಯ ದುರಂತವನ್ನು ದ್ವೇಷ ಮತ್ತು ಪೂರ್ವಾಗ್ರಹವನ್ನು ಉತ್ತೇಜಿಸಲು ದುರುಪಯೋಗ ಮಾಡಿಕೊಳ್ಳಬಾರದು. ಸತ್ಯವೆಂದರೆ ಸಾವರ್ಕರ್ 2 ರಾಷ್ಟ್ರದ ಸಿದ್ಧಾಂತವನ್ನು ಹುಟ್ಟುಹಾಕಿದರು. ಜಿನ್ನಾ ಅದನ್ನು ಪರಿಪೂರ್ಣಗೊಳಿಸಿದರು. ಸರ್ದಾರ್ ಪಟೇಲ್ ಅವರು ಈ ಕುರಿತು ಬರೆಯುತ್ತಾ, -ನಾವು ವಿಭಜನೆಯನ್ನು ಒಪ್ಪಿಕೊಳ್ಳದಿದ್ದರೆ, ಭಾರತವು ಅನೇಕ ಭಾಗಗಳಾಗಿ ವಿಭಜನೆಯಾಗುತ್ತದೆ ಮತ್ತು ಸಂಪೂರ್ಣವಾಗಿ ನಾಶವಾಗುತ್ತದೆ- ಎಂದಿದ್ದಾರೆ” ಎಂದು ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

“ಆಧುನಿಕ ಕಾಲದ ಸಾವರ್ಕರ್‌ಗಳು ಮತ್ತು ಜಿನ್ನಾಗಳು ರಾಷ್ಟ್ರವನ್ನು ವಿಭಜಿಸುವ ಪ್ರಯತ್ನಗಳನ್ನು ಮುಂದುವರೆಸುತ್ತಿದ್ದಾರೆ. ರಾಷ್ಟ್ರವನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ದಣಿವರಿಯದೆ ಹೋರಾಡಿದ ಗಾಂಧಿ, ನೆಹರೂ, ಪಟೇಲ್ ಮತ್ತು ಇತರ ಅನೇಕರ ಪರಂಪರೆಯನ್ನು ಕಾಂಗ್ರೆಸ್‌ ಎತ್ತಿಹಿಡಿಯುತ್ತದೆ. ದ್ವೇಷದ ರಾಜಕೀಯ ಸೋಲಲಿದೆ” ಎಂದು ಅವರು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿ, “ಎರಡು ರಾಷ್ಟ್ರ ಸಿದ್ಧಾಂತವನ್ನು ಮೊದಲು ಪ್ರತಿಪಾದಿಸಿದ್ದು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ಸಂಸ್ಥಾಪಕ ಸರ್ ಸೈಯದ್ ಅಹ್ಮದ್ ಖಾನ್. ಅವರು 1876ರಲ್ಲಿ ಸಾವರ್ಕರ್ ಹುಟ್ಟುವ ಮೊದಲೇ (1883) ಈ ಕಲ್ಪನೆಯನ್ನು ನೀಡಿದ್ದರು. ಸಾವರ್ಕರ್ ಮತ್ತು ಹಿಂದೂ ಮಹಾಸಭಾವು ವಿಭಜನೆಯ ಕಲ್ಪನೆಯನ್ನು ಕೊನೆಯವರೆಗೂ ವಿರೋಧಿಸಿತು” ಎಂದು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿಗಳ ಸುಳ್ಳು ಪ್ರಚಾರಕ್ಕೆ ಪ್ರಜ್ಞಾವಂತರು ಸೂಕ್ತ ರೀತಿಯಲ್ಲಿ ತಿರುಗೇಟು ನೀಡದಿದ್ದರೆ, ವರ್ತಮಾನ ಮತ್ತು ಬವಿಶ್ಯದಲ್ಲಿ, ಈ ಮಾನವ ವಿರೋಧಿ ಮನುವಾದಿಗಳು ಹೇಳಿದ್ದೇ “ನಿಜ” ಎಂಬಂತೆ ಆಗುತ್ತದೆ. ಏಕೆಂದರೆ ಇವರು ಒಂದು ಸುಳ್ಳನ್ನು ನೂರಾರು ಬಾರಿ ಹೇಳಿದರೆ, ಆ ಸುಳ್ಳನ್ನು ಜನ ‘ನಿಜ’ ಎಂದು ನಂಬುತ್ತಾರೆ ಎಂಬ ಹಿಟ್ಲರನ ಶಿಶ್ಯ ಗೋಬೆಲ್ಸನ ತಂತ್ರವನ್ನು ಪ್ರಯೋಗಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...