Homeಮುಖಪುಟದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

ದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

- Advertisement -
- Advertisement -

1947ರಲ್ಲಿ ದೇಶದ ವಿಭಜನೆಗೆ ಕಾರಣರಾದವರು ಯಾರು ಎಂಬುದರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ನಡೆಯುತ್ತಿದ್ದು, ಕಾಂಗ್ರೆಸ್‌ ವಿಡಿಯೊವೊಂದನ್ನು ಬಿಡುಗಡೆ ಮಾಡಿ ಬಿಜೆಪಿಗೆ ತಿರುಗೇಟು ನೀಡಿದೆ.

ಪಂಡಿತ್ ಜವಹರಲಾಲ್‌ ನೆಹರೂ ಅವರನ್ನು ಕೇಂದ್ರೀಕರಿಸಿ, ದೇಶ ವಿಭಜನೆಗೆ ಸಂಬಂಧಿಸಿದ ವಿಡಿಯೊವನ್ನು ಬಿಜೆಪಿ ಆಗಸ್ಟ್‌ 14ರಂದು ಬಿಡುಗಡೆ ಮಾಡಿತ್ತು. ಅದಕ್ಕೆ ಕಾಂಗ್ರೆಸ್‌ ವಿಡಿಯೊ ಮೂಲಕವೇ ಪ್ರತಿಕ್ರಿಯೆ ನೀಡಿದೆ.

ಬಿಜೆಪಿಯ ರಾಜಕೀಯ ಐಕಾನ್‌ಗಳಾದ ವಿನಾಯಕ ದಾಮೋದರ್ ಸಾವರ್ಕರ್ ಮತ್ತು ಎಸ್‌ಪಿ ಮುಖರ್ಜಿಯತ್ತ ಬೆರಳು ತೋರಿಸಿದ ಕಾಂಗ್ರೆಸ್‌ ದೇಶ ವಿಭಜನೆಗೆ ಇವರೇ ಕಾರಣ ಎಂದು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್‌ಪಿ ಮುಖರ್ಜಿಯವರು ಬಂಗಾಳದ ವಿಭಜನೆಗೆ ಬೆಂಬಲವನ್ನು ತೋರಿಸಿದ ಮೂರು ದಶಕಗಳ ನಂತರ ಸಾವರ್ಕರ್ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಮಂಡಿಸಿದರು ಎಂದು ಕಾಂಗ್ರೆಸ್ ತನ್ನ ವೀಡಿಯೊದಲ್ಲಿ ವಾದಿಸಿದೆ. ಸಾವರ್ಕರ್‌ ಮಂಡಿಸಿದ ದ್ವಿರಾಷ್ಟ್ರ ಸಿದ್ಧಾಂತವನ್ನು ನಂತರದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಮುಂದುವರಿಸಿದರು ಎಂದು ಕಾಂಗ್ರೆಸ್ ಆರೋಪಿಸಿದೆ.

“ಎಷ್ಟೇ ವಿಚಿತ್ರವಾಗಿ ಕಂಡರೂ ಸಾವರ್ಕರ್ ಮತ್ತು ಜಿನ್ನಾ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪರಸ್ಪರ ವಿರೋಧಿಸುವ ಬದಲು ಪರಸ್ಪರ ಬೆಂಬಲಿಸಿದ್ದಾರೆ” ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೇಳಿರುವುದಾಗಿ ವಿಡಿಯೊದಲ್ಲಿ ಉಲ್ಲೇಖಿಸಲಾಗಿದೆ.

ಎರಡು ರಾಷ್ಟ್ರಗಳ ಸಿದ್ಧಾಂತದ ಮೇಲೆ ಮುಸ್ಲಿಂ ಲೀಗ್ ಅನ್ನು ಎದುರಿಸಬೇಕಾಗಿದ್ದ ಕಾಂಗ್ರೆಸ್ ನಾಯಕರು ರಾಷ್ಟ್ರದ ಜನರನ್ನು ಸಂಪರ್ಕಿಸದೆ ವಿಭಜನೆಯನ್ನು ಒಪ್ಪಿಕೊಂಡರು ಎಂದು ಬಿಜೆಪಿ ಆರೋಪಿಸಿದೆ. ಸಂಗ್ರಹ ಫೋಟೋಗಳನ್ನು ಬಳಸಲಾದ ವೀಡಿಯೊದಲ್ಲಿ ಜವಾಹರಲಾಲ್ ನೆಹರೂ ಮತ್ತು ಜಿನ್ನಾ ಅವರ ಫೋಟೋಗಳನ್ನೇ ಬಿಜೆಪಿ ಬಳಸಿದೆ.

“ಭಾರತದ ಸಾಂಸ್ಕೃತಿಕ ಪರಂಪರೆ, ನಾಗರಿಕತೆ, ಮೌಲ್ಯಗಳು, ತೀರ್ಥಯಾತ್ರೆಗಳ ಬಗ್ಗೆ ತಿಳಿದಿಲ್ಲದವರು, ಶತಮಾನಗಳಿಂದ ಒಟ್ಟಿಗೆ ವಾಸಿಸುತ್ತಿದ್ದ ಜನರ ನಡುವೆ ಕೇವಲ ಮೂರು ವಾರಗಳಲ್ಲಿ ಗಡಿಗಳನ್ನು ನಿರ್ಮಿಸಿದರು” ಎಂದು ಬಿಜೆಪಿ ದೂರಿದೆ.

ಬಿಜೆಪಿ ವಿರುದ್ಧ ಟೀಕೆಗಳ ಸುರಿಮಳೆಗರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ , “ಆಗಸ್ಟ್ 14ರಂದು ವಿಭಜನೆಯ ಭೀಕರ ಸಂಸ್ಮರಣಾ ದಿನವನ್ನಾಗಿ ಆಚರಿಸುವುದು ಏತಕ್ಕೆ? ಪ್ರಸ್ತುತ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಐತಿಹಾಸಿಕ ಘಟನೆಯನ್ನು ಬಳಸಿಕೊಳ್ಳುವುದೇ ಪ್ರಧಾನಿಯವರ ನಿಜವಾದ ಉದ್ದೇಶವಾಗಿದೆ” ಎಂದು ಟೀಕಿಸಿದ್ದಾರೆ.

“ವಿಭಜನೆಯ ದುರಂತವನ್ನು ದ್ವೇಷ ಮತ್ತು ಪೂರ್ವಾಗ್ರಹವನ್ನು ಉತ್ತೇಜಿಸಲು ದುರುಪಯೋಗ ಮಾಡಿಕೊಳ್ಳಬಾರದು. ಸತ್ಯವೆಂದರೆ ಸಾವರ್ಕರ್ 2 ರಾಷ್ಟ್ರದ ಸಿದ್ಧಾಂತವನ್ನು ಹುಟ್ಟುಹಾಕಿದರು. ಜಿನ್ನಾ ಅದನ್ನು ಪರಿಪೂರ್ಣಗೊಳಿಸಿದರು. ಸರ್ದಾರ್ ಪಟೇಲ್ ಅವರು ಈ ಕುರಿತು ಬರೆಯುತ್ತಾ, -ನಾವು ವಿಭಜನೆಯನ್ನು ಒಪ್ಪಿಕೊಳ್ಳದಿದ್ದರೆ, ಭಾರತವು ಅನೇಕ ಭಾಗಗಳಾಗಿ ವಿಭಜನೆಯಾಗುತ್ತದೆ ಮತ್ತು ಸಂಪೂರ್ಣವಾಗಿ ನಾಶವಾಗುತ್ತದೆ- ಎಂದಿದ್ದಾರೆ” ಎಂದು ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

“ಆಧುನಿಕ ಕಾಲದ ಸಾವರ್ಕರ್‌ಗಳು ಮತ್ತು ಜಿನ್ನಾಗಳು ರಾಷ್ಟ್ರವನ್ನು ವಿಭಜಿಸುವ ಪ್ರಯತ್ನಗಳನ್ನು ಮುಂದುವರೆಸುತ್ತಿದ್ದಾರೆ. ರಾಷ್ಟ್ರವನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ದಣಿವರಿಯದೆ ಹೋರಾಡಿದ ಗಾಂಧಿ, ನೆಹರೂ, ಪಟೇಲ್ ಮತ್ತು ಇತರ ಅನೇಕರ ಪರಂಪರೆಯನ್ನು ಕಾಂಗ್ರೆಸ್‌ ಎತ್ತಿಹಿಡಿಯುತ್ತದೆ. ದ್ವೇಷದ ರಾಜಕೀಯ ಸೋಲಲಿದೆ” ಎಂದು ಅವರು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿ, “ಎರಡು ರಾಷ್ಟ್ರ ಸಿದ್ಧಾಂತವನ್ನು ಮೊದಲು ಪ್ರತಿಪಾದಿಸಿದ್ದು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ಸಂಸ್ಥಾಪಕ ಸರ್ ಸೈಯದ್ ಅಹ್ಮದ್ ಖಾನ್. ಅವರು 1876ರಲ್ಲಿ ಸಾವರ್ಕರ್ ಹುಟ್ಟುವ ಮೊದಲೇ (1883) ಈ ಕಲ್ಪನೆಯನ್ನು ನೀಡಿದ್ದರು. ಸಾವರ್ಕರ್ ಮತ್ತು ಹಿಂದೂ ಮಹಾಸಭಾವು ವಿಭಜನೆಯ ಕಲ್ಪನೆಯನ್ನು ಕೊನೆಯವರೆಗೂ ವಿರೋಧಿಸಿತು” ಎಂದು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿಗಳ ಸುಳ್ಳು ಪ್ರಚಾರಕ್ಕೆ ಪ್ರಜ್ಞಾವಂತರು ಸೂಕ್ತ ರೀತಿಯಲ್ಲಿ ತಿರುಗೇಟು ನೀಡದಿದ್ದರೆ, ವರ್ತಮಾನ ಮತ್ತು ಬವಿಶ್ಯದಲ್ಲಿ, ಈ ಮಾನವ ವಿರೋಧಿ ಮನುವಾದಿಗಳು ಹೇಳಿದ್ದೇ “ನಿಜ” ಎಂಬಂತೆ ಆಗುತ್ತದೆ. ಏಕೆಂದರೆ ಇವರು ಒಂದು ಸುಳ್ಳನ್ನು ನೂರಾರು ಬಾರಿ ಹೇಳಿದರೆ, ಆ ಸುಳ್ಳನ್ನು ಜನ ‘ನಿಜ’ ಎಂದು ನಂಬುತ್ತಾರೆ ಎಂಬ ಹಿಟ್ಲರನ ಶಿಶ್ಯ ಗೋಬೆಲ್ಸನ ತಂತ್ರವನ್ನು ಪ್ರಯೋಗಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...