Homeಮುಖಪುಟದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

ದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

- Advertisement -
- Advertisement -

1947ರಲ್ಲಿ ದೇಶದ ವಿಭಜನೆಗೆ ಕಾರಣರಾದವರು ಯಾರು ಎಂಬುದರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ನಡೆಯುತ್ತಿದ್ದು, ಕಾಂಗ್ರೆಸ್‌ ವಿಡಿಯೊವೊಂದನ್ನು ಬಿಡುಗಡೆ ಮಾಡಿ ಬಿಜೆಪಿಗೆ ತಿರುಗೇಟು ನೀಡಿದೆ.

ಪಂಡಿತ್ ಜವಹರಲಾಲ್‌ ನೆಹರೂ ಅವರನ್ನು ಕೇಂದ್ರೀಕರಿಸಿ, ದೇಶ ವಿಭಜನೆಗೆ ಸಂಬಂಧಿಸಿದ ವಿಡಿಯೊವನ್ನು ಬಿಜೆಪಿ ಆಗಸ್ಟ್‌ 14ರಂದು ಬಿಡುಗಡೆ ಮಾಡಿತ್ತು. ಅದಕ್ಕೆ ಕಾಂಗ್ರೆಸ್‌ ವಿಡಿಯೊ ಮೂಲಕವೇ ಪ್ರತಿಕ್ರಿಯೆ ನೀಡಿದೆ.

ಬಿಜೆಪಿಯ ರಾಜಕೀಯ ಐಕಾನ್‌ಗಳಾದ ವಿನಾಯಕ ದಾಮೋದರ್ ಸಾವರ್ಕರ್ ಮತ್ತು ಎಸ್‌ಪಿ ಮುಖರ್ಜಿಯತ್ತ ಬೆರಳು ತೋರಿಸಿದ ಕಾಂಗ್ರೆಸ್‌ ದೇಶ ವಿಭಜನೆಗೆ ಇವರೇ ಕಾರಣ ಎಂದು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್‌ಪಿ ಮುಖರ್ಜಿಯವರು ಬಂಗಾಳದ ವಿಭಜನೆಗೆ ಬೆಂಬಲವನ್ನು ತೋರಿಸಿದ ಮೂರು ದಶಕಗಳ ನಂತರ ಸಾವರ್ಕರ್ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಮಂಡಿಸಿದರು ಎಂದು ಕಾಂಗ್ರೆಸ್ ತನ್ನ ವೀಡಿಯೊದಲ್ಲಿ ವಾದಿಸಿದೆ. ಸಾವರ್ಕರ್‌ ಮಂಡಿಸಿದ ದ್ವಿರಾಷ್ಟ್ರ ಸಿದ್ಧಾಂತವನ್ನು ನಂತರದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಮುಂದುವರಿಸಿದರು ಎಂದು ಕಾಂಗ್ರೆಸ್ ಆರೋಪಿಸಿದೆ.

“ಎಷ್ಟೇ ವಿಚಿತ್ರವಾಗಿ ಕಂಡರೂ ಸಾವರ್ಕರ್ ಮತ್ತು ಜಿನ್ನಾ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪರಸ್ಪರ ವಿರೋಧಿಸುವ ಬದಲು ಪರಸ್ಪರ ಬೆಂಬಲಿಸಿದ್ದಾರೆ” ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೇಳಿರುವುದಾಗಿ ವಿಡಿಯೊದಲ್ಲಿ ಉಲ್ಲೇಖಿಸಲಾಗಿದೆ.

ಎರಡು ರಾಷ್ಟ್ರಗಳ ಸಿದ್ಧಾಂತದ ಮೇಲೆ ಮುಸ್ಲಿಂ ಲೀಗ್ ಅನ್ನು ಎದುರಿಸಬೇಕಾಗಿದ್ದ ಕಾಂಗ್ರೆಸ್ ನಾಯಕರು ರಾಷ್ಟ್ರದ ಜನರನ್ನು ಸಂಪರ್ಕಿಸದೆ ವಿಭಜನೆಯನ್ನು ಒಪ್ಪಿಕೊಂಡರು ಎಂದು ಬಿಜೆಪಿ ಆರೋಪಿಸಿದೆ. ಸಂಗ್ರಹ ಫೋಟೋಗಳನ್ನು ಬಳಸಲಾದ ವೀಡಿಯೊದಲ್ಲಿ ಜವಾಹರಲಾಲ್ ನೆಹರೂ ಮತ್ತು ಜಿನ್ನಾ ಅವರ ಫೋಟೋಗಳನ್ನೇ ಬಿಜೆಪಿ ಬಳಸಿದೆ.

“ಭಾರತದ ಸಾಂಸ್ಕೃತಿಕ ಪರಂಪರೆ, ನಾಗರಿಕತೆ, ಮೌಲ್ಯಗಳು, ತೀರ್ಥಯಾತ್ರೆಗಳ ಬಗ್ಗೆ ತಿಳಿದಿಲ್ಲದವರು, ಶತಮಾನಗಳಿಂದ ಒಟ್ಟಿಗೆ ವಾಸಿಸುತ್ತಿದ್ದ ಜನರ ನಡುವೆ ಕೇವಲ ಮೂರು ವಾರಗಳಲ್ಲಿ ಗಡಿಗಳನ್ನು ನಿರ್ಮಿಸಿದರು” ಎಂದು ಬಿಜೆಪಿ ದೂರಿದೆ.

ಬಿಜೆಪಿ ವಿರುದ್ಧ ಟೀಕೆಗಳ ಸುರಿಮಳೆಗರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ , “ಆಗಸ್ಟ್ 14ರಂದು ವಿಭಜನೆಯ ಭೀಕರ ಸಂಸ್ಮರಣಾ ದಿನವನ್ನಾಗಿ ಆಚರಿಸುವುದು ಏತಕ್ಕೆ? ಪ್ರಸ್ತುತ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಐತಿಹಾಸಿಕ ಘಟನೆಯನ್ನು ಬಳಸಿಕೊಳ್ಳುವುದೇ ಪ್ರಧಾನಿಯವರ ನಿಜವಾದ ಉದ್ದೇಶವಾಗಿದೆ” ಎಂದು ಟೀಕಿಸಿದ್ದಾರೆ.

“ವಿಭಜನೆಯ ದುರಂತವನ್ನು ದ್ವೇಷ ಮತ್ತು ಪೂರ್ವಾಗ್ರಹವನ್ನು ಉತ್ತೇಜಿಸಲು ದುರುಪಯೋಗ ಮಾಡಿಕೊಳ್ಳಬಾರದು. ಸತ್ಯವೆಂದರೆ ಸಾವರ್ಕರ್ 2 ರಾಷ್ಟ್ರದ ಸಿದ್ಧಾಂತವನ್ನು ಹುಟ್ಟುಹಾಕಿದರು. ಜಿನ್ನಾ ಅದನ್ನು ಪರಿಪೂರ್ಣಗೊಳಿಸಿದರು. ಸರ್ದಾರ್ ಪಟೇಲ್ ಅವರು ಈ ಕುರಿತು ಬರೆಯುತ್ತಾ, -ನಾವು ವಿಭಜನೆಯನ್ನು ಒಪ್ಪಿಕೊಳ್ಳದಿದ್ದರೆ, ಭಾರತವು ಅನೇಕ ಭಾಗಗಳಾಗಿ ವಿಭಜನೆಯಾಗುತ್ತದೆ ಮತ್ತು ಸಂಪೂರ್ಣವಾಗಿ ನಾಶವಾಗುತ್ತದೆ- ಎಂದಿದ್ದಾರೆ” ಎಂದು ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

“ಆಧುನಿಕ ಕಾಲದ ಸಾವರ್ಕರ್‌ಗಳು ಮತ್ತು ಜಿನ್ನಾಗಳು ರಾಷ್ಟ್ರವನ್ನು ವಿಭಜಿಸುವ ಪ್ರಯತ್ನಗಳನ್ನು ಮುಂದುವರೆಸುತ್ತಿದ್ದಾರೆ. ರಾಷ್ಟ್ರವನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ದಣಿವರಿಯದೆ ಹೋರಾಡಿದ ಗಾಂಧಿ, ನೆಹರೂ, ಪಟೇಲ್ ಮತ್ತು ಇತರ ಅನೇಕರ ಪರಂಪರೆಯನ್ನು ಕಾಂಗ್ರೆಸ್‌ ಎತ್ತಿಹಿಡಿಯುತ್ತದೆ. ದ್ವೇಷದ ರಾಜಕೀಯ ಸೋಲಲಿದೆ” ಎಂದು ಅವರು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿ, “ಎರಡು ರಾಷ್ಟ್ರ ಸಿದ್ಧಾಂತವನ್ನು ಮೊದಲು ಪ್ರತಿಪಾದಿಸಿದ್ದು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ಸಂಸ್ಥಾಪಕ ಸರ್ ಸೈಯದ್ ಅಹ್ಮದ್ ಖಾನ್. ಅವರು 1876ರಲ್ಲಿ ಸಾವರ್ಕರ್ ಹುಟ್ಟುವ ಮೊದಲೇ (1883) ಈ ಕಲ್ಪನೆಯನ್ನು ನೀಡಿದ್ದರು. ಸಾವರ್ಕರ್ ಮತ್ತು ಹಿಂದೂ ಮಹಾಸಭಾವು ವಿಭಜನೆಯ ಕಲ್ಪನೆಯನ್ನು ಕೊನೆಯವರೆಗೂ ವಿರೋಧಿಸಿತು” ಎಂದು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿಗಳ ಸುಳ್ಳು ಪ್ರಚಾರಕ್ಕೆ ಪ್ರಜ್ಞಾವಂತರು ಸೂಕ್ತ ರೀತಿಯಲ್ಲಿ ತಿರುಗೇಟು ನೀಡದಿದ್ದರೆ, ವರ್ತಮಾನ ಮತ್ತು ಬವಿಶ್ಯದಲ್ಲಿ, ಈ ಮಾನವ ವಿರೋಧಿ ಮನುವಾದಿಗಳು ಹೇಳಿದ್ದೇ “ನಿಜ” ಎಂಬಂತೆ ಆಗುತ್ತದೆ. ಏಕೆಂದರೆ ಇವರು ಒಂದು ಸುಳ್ಳನ್ನು ನೂರಾರು ಬಾರಿ ಹೇಳಿದರೆ, ಆ ಸುಳ್ಳನ್ನು ಜನ ‘ನಿಜ’ ಎಂದು ನಂಬುತ್ತಾರೆ ಎಂಬ ಹಿಟ್ಲರನ ಶಿಶ್ಯ ಗೋಬೆಲ್ಸನ ತಂತ್ರವನ್ನು ಪ್ರಯೋಗಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...