Homeಮುಖಪುಟದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

ದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

- Advertisement -
- Advertisement -

1947ರಲ್ಲಿ ದೇಶದ ವಿಭಜನೆಗೆ ಕಾರಣರಾದವರು ಯಾರು ಎಂಬುದರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ನಡೆಯುತ್ತಿದ್ದು, ಕಾಂಗ್ರೆಸ್‌ ವಿಡಿಯೊವೊಂದನ್ನು ಬಿಡುಗಡೆ ಮಾಡಿ ಬಿಜೆಪಿಗೆ ತಿರುಗೇಟು ನೀಡಿದೆ.

ಪಂಡಿತ್ ಜವಹರಲಾಲ್‌ ನೆಹರೂ ಅವರನ್ನು ಕೇಂದ್ರೀಕರಿಸಿ, ದೇಶ ವಿಭಜನೆಗೆ ಸಂಬಂಧಿಸಿದ ವಿಡಿಯೊವನ್ನು ಬಿಜೆಪಿ ಆಗಸ್ಟ್‌ 14ರಂದು ಬಿಡುಗಡೆ ಮಾಡಿತ್ತು. ಅದಕ್ಕೆ ಕಾಂಗ್ರೆಸ್‌ ವಿಡಿಯೊ ಮೂಲಕವೇ ಪ್ರತಿಕ್ರಿಯೆ ನೀಡಿದೆ.

ಬಿಜೆಪಿಯ ರಾಜಕೀಯ ಐಕಾನ್‌ಗಳಾದ ವಿನಾಯಕ ದಾಮೋದರ್ ಸಾವರ್ಕರ್ ಮತ್ತು ಎಸ್‌ಪಿ ಮುಖರ್ಜಿಯತ್ತ ಬೆರಳು ತೋರಿಸಿದ ಕಾಂಗ್ರೆಸ್‌ ದೇಶ ವಿಭಜನೆಗೆ ಇವರೇ ಕಾರಣ ಎಂದು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್‌ಪಿ ಮುಖರ್ಜಿಯವರು ಬಂಗಾಳದ ವಿಭಜನೆಗೆ ಬೆಂಬಲವನ್ನು ತೋರಿಸಿದ ಮೂರು ದಶಕಗಳ ನಂತರ ಸಾವರ್ಕರ್ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಮಂಡಿಸಿದರು ಎಂದು ಕಾಂಗ್ರೆಸ್ ತನ್ನ ವೀಡಿಯೊದಲ್ಲಿ ವಾದಿಸಿದೆ. ಸಾವರ್ಕರ್‌ ಮಂಡಿಸಿದ ದ್ವಿರಾಷ್ಟ್ರ ಸಿದ್ಧಾಂತವನ್ನು ನಂತರದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಮುಂದುವರಿಸಿದರು ಎಂದು ಕಾಂಗ್ರೆಸ್ ಆರೋಪಿಸಿದೆ.

“ಎಷ್ಟೇ ವಿಚಿತ್ರವಾಗಿ ಕಂಡರೂ ಸಾವರ್ಕರ್ ಮತ್ತು ಜಿನ್ನಾ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪರಸ್ಪರ ವಿರೋಧಿಸುವ ಬದಲು ಪರಸ್ಪರ ಬೆಂಬಲಿಸಿದ್ದಾರೆ” ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೇಳಿರುವುದಾಗಿ ವಿಡಿಯೊದಲ್ಲಿ ಉಲ್ಲೇಖಿಸಲಾಗಿದೆ.

ಎರಡು ರಾಷ್ಟ್ರಗಳ ಸಿದ್ಧಾಂತದ ಮೇಲೆ ಮುಸ್ಲಿಂ ಲೀಗ್ ಅನ್ನು ಎದುರಿಸಬೇಕಾಗಿದ್ದ ಕಾಂಗ್ರೆಸ್ ನಾಯಕರು ರಾಷ್ಟ್ರದ ಜನರನ್ನು ಸಂಪರ್ಕಿಸದೆ ವಿಭಜನೆಯನ್ನು ಒಪ್ಪಿಕೊಂಡರು ಎಂದು ಬಿಜೆಪಿ ಆರೋಪಿಸಿದೆ. ಸಂಗ್ರಹ ಫೋಟೋಗಳನ್ನು ಬಳಸಲಾದ ವೀಡಿಯೊದಲ್ಲಿ ಜವಾಹರಲಾಲ್ ನೆಹರೂ ಮತ್ತು ಜಿನ್ನಾ ಅವರ ಫೋಟೋಗಳನ್ನೇ ಬಿಜೆಪಿ ಬಳಸಿದೆ.

“ಭಾರತದ ಸಾಂಸ್ಕೃತಿಕ ಪರಂಪರೆ, ನಾಗರಿಕತೆ, ಮೌಲ್ಯಗಳು, ತೀರ್ಥಯಾತ್ರೆಗಳ ಬಗ್ಗೆ ತಿಳಿದಿಲ್ಲದವರು, ಶತಮಾನಗಳಿಂದ ಒಟ್ಟಿಗೆ ವಾಸಿಸುತ್ತಿದ್ದ ಜನರ ನಡುವೆ ಕೇವಲ ಮೂರು ವಾರಗಳಲ್ಲಿ ಗಡಿಗಳನ್ನು ನಿರ್ಮಿಸಿದರು” ಎಂದು ಬಿಜೆಪಿ ದೂರಿದೆ.

ಬಿಜೆಪಿ ವಿರುದ್ಧ ಟೀಕೆಗಳ ಸುರಿಮಳೆಗರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ , “ಆಗಸ್ಟ್ 14ರಂದು ವಿಭಜನೆಯ ಭೀಕರ ಸಂಸ್ಮರಣಾ ದಿನವನ್ನಾಗಿ ಆಚರಿಸುವುದು ಏತಕ್ಕೆ? ಪ್ರಸ್ತುತ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಐತಿಹಾಸಿಕ ಘಟನೆಯನ್ನು ಬಳಸಿಕೊಳ್ಳುವುದೇ ಪ್ರಧಾನಿಯವರ ನಿಜವಾದ ಉದ್ದೇಶವಾಗಿದೆ” ಎಂದು ಟೀಕಿಸಿದ್ದಾರೆ.

“ವಿಭಜನೆಯ ದುರಂತವನ್ನು ದ್ವೇಷ ಮತ್ತು ಪೂರ್ವಾಗ್ರಹವನ್ನು ಉತ್ತೇಜಿಸಲು ದುರುಪಯೋಗ ಮಾಡಿಕೊಳ್ಳಬಾರದು. ಸತ್ಯವೆಂದರೆ ಸಾವರ್ಕರ್ 2 ರಾಷ್ಟ್ರದ ಸಿದ್ಧಾಂತವನ್ನು ಹುಟ್ಟುಹಾಕಿದರು. ಜಿನ್ನಾ ಅದನ್ನು ಪರಿಪೂರ್ಣಗೊಳಿಸಿದರು. ಸರ್ದಾರ್ ಪಟೇಲ್ ಅವರು ಈ ಕುರಿತು ಬರೆಯುತ್ತಾ, -ನಾವು ವಿಭಜನೆಯನ್ನು ಒಪ್ಪಿಕೊಳ್ಳದಿದ್ದರೆ, ಭಾರತವು ಅನೇಕ ಭಾಗಗಳಾಗಿ ವಿಭಜನೆಯಾಗುತ್ತದೆ ಮತ್ತು ಸಂಪೂರ್ಣವಾಗಿ ನಾಶವಾಗುತ್ತದೆ- ಎಂದಿದ್ದಾರೆ” ಎಂದು ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

“ಆಧುನಿಕ ಕಾಲದ ಸಾವರ್ಕರ್‌ಗಳು ಮತ್ತು ಜಿನ್ನಾಗಳು ರಾಷ್ಟ್ರವನ್ನು ವಿಭಜಿಸುವ ಪ್ರಯತ್ನಗಳನ್ನು ಮುಂದುವರೆಸುತ್ತಿದ್ದಾರೆ. ರಾಷ್ಟ್ರವನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ದಣಿವರಿಯದೆ ಹೋರಾಡಿದ ಗಾಂಧಿ, ನೆಹರೂ, ಪಟೇಲ್ ಮತ್ತು ಇತರ ಅನೇಕರ ಪರಂಪರೆಯನ್ನು ಕಾಂಗ್ರೆಸ್‌ ಎತ್ತಿಹಿಡಿಯುತ್ತದೆ. ದ್ವೇಷದ ರಾಜಕೀಯ ಸೋಲಲಿದೆ” ಎಂದು ಅವರು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿ, “ಎರಡು ರಾಷ್ಟ್ರ ಸಿದ್ಧಾಂತವನ್ನು ಮೊದಲು ಪ್ರತಿಪಾದಿಸಿದ್ದು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ಸಂಸ್ಥಾಪಕ ಸರ್ ಸೈಯದ್ ಅಹ್ಮದ್ ಖಾನ್. ಅವರು 1876ರಲ್ಲಿ ಸಾವರ್ಕರ್ ಹುಟ್ಟುವ ಮೊದಲೇ (1883) ಈ ಕಲ್ಪನೆಯನ್ನು ನೀಡಿದ್ದರು. ಸಾವರ್ಕರ್ ಮತ್ತು ಹಿಂದೂ ಮಹಾಸಭಾವು ವಿಭಜನೆಯ ಕಲ್ಪನೆಯನ್ನು ಕೊನೆಯವರೆಗೂ ವಿರೋಧಿಸಿತು” ಎಂದು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿಗಳ ಸುಳ್ಳು ಪ್ರಚಾರಕ್ಕೆ ಪ್ರಜ್ಞಾವಂತರು ಸೂಕ್ತ ರೀತಿಯಲ್ಲಿ ತಿರುಗೇಟು ನೀಡದಿದ್ದರೆ, ವರ್ತಮಾನ ಮತ್ತು ಬವಿಶ್ಯದಲ್ಲಿ, ಈ ಮಾನವ ವಿರೋಧಿ ಮನುವಾದಿಗಳು ಹೇಳಿದ್ದೇ “ನಿಜ” ಎಂಬಂತೆ ಆಗುತ್ತದೆ. ಏಕೆಂದರೆ ಇವರು ಒಂದು ಸುಳ್ಳನ್ನು ನೂರಾರು ಬಾರಿ ಹೇಳಿದರೆ, ಆ ಸುಳ್ಳನ್ನು ಜನ ‘ನಿಜ’ ಎಂದು ನಂಬುತ್ತಾರೆ ಎಂಬ ಹಿಟ್ಲರನ ಶಿಶ್ಯ ಗೋಬೆಲ್ಸನ ತಂತ್ರವನ್ನು ಪ್ರಯೋಗಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...