Homeಮುಖಪುಟದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

ದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

- Advertisement -
- Advertisement -

1947ರಲ್ಲಿ ದೇಶದ ವಿಭಜನೆಗೆ ಕಾರಣರಾದವರು ಯಾರು ಎಂಬುದರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ನಡೆಯುತ್ತಿದ್ದು, ಕಾಂಗ್ರೆಸ್‌ ವಿಡಿಯೊವೊಂದನ್ನು ಬಿಡುಗಡೆ ಮಾಡಿ ಬಿಜೆಪಿಗೆ ತಿರುಗೇಟು ನೀಡಿದೆ.

ಪಂಡಿತ್ ಜವಹರಲಾಲ್‌ ನೆಹರೂ ಅವರನ್ನು ಕೇಂದ್ರೀಕರಿಸಿ, ದೇಶ ವಿಭಜನೆಗೆ ಸಂಬಂಧಿಸಿದ ವಿಡಿಯೊವನ್ನು ಬಿಜೆಪಿ ಆಗಸ್ಟ್‌ 14ರಂದು ಬಿಡುಗಡೆ ಮಾಡಿತ್ತು. ಅದಕ್ಕೆ ಕಾಂಗ್ರೆಸ್‌ ವಿಡಿಯೊ ಮೂಲಕವೇ ಪ್ರತಿಕ್ರಿಯೆ ನೀಡಿದೆ.

ಬಿಜೆಪಿಯ ರಾಜಕೀಯ ಐಕಾನ್‌ಗಳಾದ ವಿನಾಯಕ ದಾಮೋದರ್ ಸಾವರ್ಕರ್ ಮತ್ತು ಎಸ್‌ಪಿ ಮುಖರ್ಜಿಯತ್ತ ಬೆರಳು ತೋರಿಸಿದ ಕಾಂಗ್ರೆಸ್‌ ದೇಶ ವಿಭಜನೆಗೆ ಇವರೇ ಕಾರಣ ಎಂದು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್‌ಪಿ ಮುಖರ್ಜಿಯವರು ಬಂಗಾಳದ ವಿಭಜನೆಗೆ ಬೆಂಬಲವನ್ನು ತೋರಿಸಿದ ಮೂರು ದಶಕಗಳ ನಂತರ ಸಾವರ್ಕರ್ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಮಂಡಿಸಿದರು ಎಂದು ಕಾಂಗ್ರೆಸ್ ತನ್ನ ವೀಡಿಯೊದಲ್ಲಿ ವಾದಿಸಿದೆ. ಸಾವರ್ಕರ್‌ ಮಂಡಿಸಿದ ದ್ವಿರಾಷ್ಟ್ರ ಸಿದ್ಧಾಂತವನ್ನು ನಂತರದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಮುಂದುವರಿಸಿದರು ಎಂದು ಕಾಂಗ್ರೆಸ್ ಆರೋಪಿಸಿದೆ.

“ಎಷ್ಟೇ ವಿಚಿತ್ರವಾಗಿ ಕಂಡರೂ ಸಾವರ್ಕರ್ ಮತ್ತು ಜಿನ್ನಾ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪರಸ್ಪರ ವಿರೋಧಿಸುವ ಬದಲು ಪರಸ್ಪರ ಬೆಂಬಲಿಸಿದ್ದಾರೆ” ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೇಳಿರುವುದಾಗಿ ವಿಡಿಯೊದಲ್ಲಿ ಉಲ್ಲೇಖಿಸಲಾಗಿದೆ.

ಎರಡು ರಾಷ್ಟ್ರಗಳ ಸಿದ್ಧಾಂತದ ಮೇಲೆ ಮುಸ್ಲಿಂ ಲೀಗ್ ಅನ್ನು ಎದುರಿಸಬೇಕಾಗಿದ್ದ ಕಾಂಗ್ರೆಸ್ ನಾಯಕರು ರಾಷ್ಟ್ರದ ಜನರನ್ನು ಸಂಪರ್ಕಿಸದೆ ವಿಭಜನೆಯನ್ನು ಒಪ್ಪಿಕೊಂಡರು ಎಂದು ಬಿಜೆಪಿ ಆರೋಪಿಸಿದೆ. ಸಂಗ್ರಹ ಫೋಟೋಗಳನ್ನು ಬಳಸಲಾದ ವೀಡಿಯೊದಲ್ಲಿ ಜವಾಹರಲಾಲ್ ನೆಹರೂ ಮತ್ತು ಜಿನ್ನಾ ಅವರ ಫೋಟೋಗಳನ್ನೇ ಬಿಜೆಪಿ ಬಳಸಿದೆ.

“ಭಾರತದ ಸಾಂಸ್ಕೃತಿಕ ಪರಂಪರೆ, ನಾಗರಿಕತೆ, ಮೌಲ್ಯಗಳು, ತೀರ್ಥಯಾತ್ರೆಗಳ ಬಗ್ಗೆ ತಿಳಿದಿಲ್ಲದವರು, ಶತಮಾನಗಳಿಂದ ಒಟ್ಟಿಗೆ ವಾಸಿಸುತ್ತಿದ್ದ ಜನರ ನಡುವೆ ಕೇವಲ ಮೂರು ವಾರಗಳಲ್ಲಿ ಗಡಿಗಳನ್ನು ನಿರ್ಮಿಸಿದರು” ಎಂದು ಬಿಜೆಪಿ ದೂರಿದೆ.

ಬಿಜೆಪಿ ವಿರುದ್ಧ ಟೀಕೆಗಳ ಸುರಿಮಳೆಗರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ , “ಆಗಸ್ಟ್ 14ರಂದು ವಿಭಜನೆಯ ಭೀಕರ ಸಂಸ್ಮರಣಾ ದಿನವನ್ನಾಗಿ ಆಚರಿಸುವುದು ಏತಕ್ಕೆ? ಪ್ರಸ್ತುತ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಐತಿಹಾಸಿಕ ಘಟನೆಯನ್ನು ಬಳಸಿಕೊಳ್ಳುವುದೇ ಪ್ರಧಾನಿಯವರ ನಿಜವಾದ ಉದ್ದೇಶವಾಗಿದೆ” ಎಂದು ಟೀಕಿಸಿದ್ದಾರೆ.

“ವಿಭಜನೆಯ ದುರಂತವನ್ನು ದ್ವೇಷ ಮತ್ತು ಪೂರ್ವಾಗ್ರಹವನ್ನು ಉತ್ತೇಜಿಸಲು ದುರುಪಯೋಗ ಮಾಡಿಕೊಳ್ಳಬಾರದು. ಸತ್ಯವೆಂದರೆ ಸಾವರ್ಕರ್ 2 ರಾಷ್ಟ್ರದ ಸಿದ್ಧಾಂತವನ್ನು ಹುಟ್ಟುಹಾಕಿದರು. ಜಿನ್ನಾ ಅದನ್ನು ಪರಿಪೂರ್ಣಗೊಳಿಸಿದರು. ಸರ್ದಾರ್ ಪಟೇಲ್ ಅವರು ಈ ಕುರಿತು ಬರೆಯುತ್ತಾ, -ನಾವು ವಿಭಜನೆಯನ್ನು ಒಪ್ಪಿಕೊಳ್ಳದಿದ್ದರೆ, ಭಾರತವು ಅನೇಕ ಭಾಗಗಳಾಗಿ ವಿಭಜನೆಯಾಗುತ್ತದೆ ಮತ್ತು ಸಂಪೂರ್ಣವಾಗಿ ನಾಶವಾಗುತ್ತದೆ- ಎಂದಿದ್ದಾರೆ” ಎಂದು ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

“ಆಧುನಿಕ ಕಾಲದ ಸಾವರ್ಕರ್‌ಗಳು ಮತ್ತು ಜಿನ್ನಾಗಳು ರಾಷ್ಟ್ರವನ್ನು ವಿಭಜಿಸುವ ಪ್ರಯತ್ನಗಳನ್ನು ಮುಂದುವರೆಸುತ್ತಿದ್ದಾರೆ. ರಾಷ್ಟ್ರವನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ದಣಿವರಿಯದೆ ಹೋರಾಡಿದ ಗಾಂಧಿ, ನೆಹರೂ, ಪಟೇಲ್ ಮತ್ತು ಇತರ ಅನೇಕರ ಪರಂಪರೆಯನ್ನು ಕಾಂಗ್ರೆಸ್‌ ಎತ್ತಿಹಿಡಿಯುತ್ತದೆ. ದ್ವೇಷದ ರಾಜಕೀಯ ಸೋಲಲಿದೆ” ಎಂದು ಅವರು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿ, “ಎರಡು ರಾಷ್ಟ್ರ ಸಿದ್ಧಾಂತವನ್ನು ಮೊದಲು ಪ್ರತಿಪಾದಿಸಿದ್ದು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ಸಂಸ್ಥಾಪಕ ಸರ್ ಸೈಯದ್ ಅಹ್ಮದ್ ಖಾನ್. ಅವರು 1876ರಲ್ಲಿ ಸಾವರ್ಕರ್ ಹುಟ್ಟುವ ಮೊದಲೇ (1883) ಈ ಕಲ್ಪನೆಯನ್ನು ನೀಡಿದ್ದರು. ಸಾವರ್ಕರ್ ಮತ್ತು ಹಿಂದೂ ಮಹಾಸಭಾವು ವಿಭಜನೆಯ ಕಲ್ಪನೆಯನ್ನು ಕೊನೆಯವರೆಗೂ ವಿರೋಧಿಸಿತು” ಎಂದು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿಗಳ ಸುಳ್ಳು ಪ್ರಚಾರಕ್ಕೆ ಪ್ರಜ್ಞಾವಂತರು ಸೂಕ್ತ ರೀತಿಯಲ್ಲಿ ತಿರುಗೇಟು ನೀಡದಿದ್ದರೆ, ವರ್ತಮಾನ ಮತ್ತು ಬವಿಶ್ಯದಲ್ಲಿ, ಈ ಮಾನವ ವಿರೋಧಿ ಮನುವಾದಿಗಳು ಹೇಳಿದ್ದೇ “ನಿಜ” ಎಂಬಂತೆ ಆಗುತ್ತದೆ. ಏಕೆಂದರೆ ಇವರು ಒಂದು ಸುಳ್ಳನ್ನು ನೂರಾರು ಬಾರಿ ಹೇಳಿದರೆ, ಆ ಸುಳ್ಳನ್ನು ಜನ ‘ನಿಜ’ ಎಂದು ನಂಬುತ್ತಾರೆ ಎಂಬ ಹಿಟ್ಲರನ ಶಿಶ್ಯ ಗೋಬೆಲ್ಸನ ತಂತ್ರವನ್ನು ಪ್ರಯೋಗಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...