Homeಮುಖಪುಟದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

ದೇಶ ವಿಭಜನೆಗೆ ಸಾವರ್ಕರ್‌ ಕಾರಣ: ವಿಡಿಯೊ ಬಿಡುಗಡೆ ಮಾಡಿದ ಕಾಂಗ್ರೆಸ್

- Advertisement -
- Advertisement -

1947ರಲ್ಲಿ ದೇಶದ ವಿಭಜನೆಗೆ ಕಾರಣರಾದವರು ಯಾರು ಎಂಬುದರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ನಡೆಯುತ್ತಿದ್ದು, ಕಾಂಗ್ರೆಸ್‌ ವಿಡಿಯೊವೊಂದನ್ನು ಬಿಡುಗಡೆ ಮಾಡಿ ಬಿಜೆಪಿಗೆ ತಿರುಗೇಟು ನೀಡಿದೆ.

ಪಂಡಿತ್ ಜವಹರಲಾಲ್‌ ನೆಹರೂ ಅವರನ್ನು ಕೇಂದ್ರೀಕರಿಸಿ, ದೇಶ ವಿಭಜನೆಗೆ ಸಂಬಂಧಿಸಿದ ವಿಡಿಯೊವನ್ನು ಬಿಜೆಪಿ ಆಗಸ್ಟ್‌ 14ರಂದು ಬಿಡುಗಡೆ ಮಾಡಿತ್ತು. ಅದಕ್ಕೆ ಕಾಂಗ್ರೆಸ್‌ ವಿಡಿಯೊ ಮೂಲಕವೇ ಪ್ರತಿಕ್ರಿಯೆ ನೀಡಿದೆ.

ಬಿಜೆಪಿಯ ರಾಜಕೀಯ ಐಕಾನ್‌ಗಳಾದ ವಿನಾಯಕ ದಾಮೋದರ್ ಸಾವರ್ಕರ್ ಮತ್ತು ಎಸ್‌ಪಿ ಮುಖರ್ಜಿಯತ್ತ ಬೆರಳು ತೋರಿಸಿದ ಕಾಂಗ್ರೆಸ್‌ ದೇಶ ವಿಭಜನೆಗೆ ಇವರೇ ಕಾರಣ ಎಂದು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್‌ಪಿ ಮುಖರ್ಜಿಯವರು ಬಂಗಾಳದ ವಿಭಜನೆಗೆ ಬೆಂಬಲವನ್ನು ತೋರಿಸಿದ ಮೂರು ದಶಕಗಳ ನಂತರ ಸಾವರ್ಕರ್ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಮಂಡಿಸಿದರು ಎಂದು ಕಾಂಗ್ರೆಸ್ ತನ್ನ ವೀಡಿಯೊದಲ್ಲಿ ವಾದಿಸಿದೆ. ಸಾವರ್ಕರ್‌ ಮಂಡಿಸಿದ ದ್ವಿರಾಷ್ಟ್ರ ಸಿದ್ಧಾಂತವನ್ನು ನಂತರದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಮುಂದುವರಿಸಿದರು ಎಂದು ಕಾಂಗ್ರೆಸ್ ಆರೋಪಿಸಿದೆ.

“ಎಷ್ಟೇ ವಿಚಿತ್ರವಾಗಿ ಕಂಡರೂ ಸಾವರ್ಕರ್ ಮತ್ತು ಜಿನ್ನಾ ಅವರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪರಸ್ಪರ ವಿರೋಧಿಸುವ ಬದಲು ಪರಸ್ಪರ ಬೆಂಬಲಿಸಿದ್ದಾರೆ” ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೇಳಿರುವುದಾಗಿ ವಿಡಿಯೊದಲ್ಲಿ ಉಲ್ಲೇಖಿಸಲಾಗಿದೆ.

ಎರಡು ರಾಷ್ಟ್ರಗಳ ಸಿದ್ಧಾಂತದ ಮೇಲೆ ಮುಸ್ಲಿಂ ಲೀಗ್ ಅನ್ನು ಎದುರಿಸಬೇಕಾಗಿದ್ದ ಕಾಂಗ್ರೆಸ್ ನಾಯಕರು ರಾಷ್ಟ್ರದ ಜನರನ್ನು ಸಂಪರ್ಕಿಸದೆ ವಿಭಜನೆಯನ್ನು ಒಪ್ಪಿಕೊಂಡರು ಎಂದು ಬಿಜೆಪಿ ಆರೋಪಿಸಿದೆ. ಸಂಗ್ರಹ ಫೋಟೋಗಳನ್ನು ಬಳಸಲಾದ ವೀಡಿಯೊದಲ್ಲಿ ಜವಾಹರಲಾಲ್ ನೆಹರೂ ಮತ್ತು ಜಿನ್ನಾ ಅವರ ಫೋಟೋಗಳನ್ನೇ ಬಿಜೆಪಿ ಬಳಸಿದೆ.

“ಭಾರತದ ಸಾಂಸ್ಕೃತಿಕ ಪರಂಪರೆ, ನಾಗರಿಕತೆ, ಮೌಲ್ಯಗಳು, ತೀರ್ಥಯಾತ್ರೆಗಳ ಬಗ್ಗೆ ತಿಳಿದಿಲ್ಲದವರು, ಶತಮಾನಗಳಿಂದ ಒಟ್ಟಿಗೆ ವಾಸಿಸುತ್ತಿದ್ದ ಜನರ ನಡುವೆ ಕೇವಲ ಮೂರು ವಾರಗಳಲ್ಲಿ ಗಡಿಗಳನ್ನು ನಿರ್ಮಿಸಿದರು” ಎಂದು ಬಿಜೆಪಿ ದೂರಿದೆ.

ಬಿಜೆಪಿ ವಿರುದ್ಧ ಟೀಕೆಗಳ ಸುರಿಮಳೆಗರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ , “ಆಗಸ್ಟ್ 14ರಂದು ವಿಭಜನೆಯ ಭೀಕರ ಸಂಸ್ಮರಣಾ ದಿನವನ್ನಾಗಿ ಆಚರಿಸುವುದು ಏತಕ್ಕೆ? ಪ್ರಸ್ತುತ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಐತಿಹಾಸಿಕ ಘಟನೆಯನ್ನು ಬಳಸಿಕೊಳ್ಳುವುದೇ ಪ್ರಧಾನಿಯವರ ನಿಜವಾದ ಉದ್ದೇಶವಾಗಿದೆ” ಎಂದು ಟೀಕಿಸಿದ್ದಾರೆ.

“ವಿಭಜನೆಯ ದುರಂತವನ್ನು ದ್ವೇಷ ಮತ್ತು ಪೂರ್ವಾಗ್ರಹವನ್ನು ಉತ್ತೇಜಿಸಲು ದುರುಪಯೋಗ ಮಾಡಿಕೊಳ್ಳಬಾರದು. ಸತ್ಯವೆಂದರೆ ಸಾವರ್ಕರ್ 2 ರಾಷ್ಟ್ರದ ಸಿದ್ಧಾಂತವನ್ನು ಹುಟ್ಟುಹಾಕಿದರು. ಜಿನ್ನಾ ಅದನ್ನು ಪರಿಪೂರ್ಣಗೊಳಿಸಿದರು. ಸರ್ದಾರ್ ಪಟೇಲ್ ಅವರು ಈ ಕುರಿತು ಬರೆಯುತ್ತಾ, -ನಾವು ವಿಭಜನೆಯನ್ನು ಒಪ್ಪಿಕೊಳ್ಳದಿದ್ದರೆ, ಭಾರತವು ಅನೇಕ ಭಾಗಗಳಾಗಿ ವಿಭಜನೆಯಾಗುತ್ತದೆ ಮತ್ತು ಸಂಪೂರ್ಣವಾಗಿ ನಾಶವಾಗುತ್ತದೆ- ಎಂದಿದ್ದಾರೆ” ಎಂದು ರಮೇಶ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

“ಆಧುನಿಕ ಕಾಲದ ಸಾವರ್ಕರ್‌ಗಳು ಮತ್ತು ಜಿನ್ನಾಗಳು ರಾಷ್ಟ್ರವನ್ನು ವಿಭಜಿಸುವ ಪ್ರಯತ್ನಗಳನ್ನು ಮುಂದುವರೆಸುತ್ತಿದ್ದಾರೆ. ರಾಷ್ಟ್ರವನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ದಣಿವರಿಯದೆ ಹೋರಾಡಿದ ಗಾಂಧಿ, ನೆಹರೂ, ಪಟೇಲ್ ಮತ್ತು ಇತರ ಅನೇಕರ ಪರಂಪರೆಯನ್ನು ಕಾಂಗ್ರೆಸ್‌ ಎತ್ತಿಹಿಡಿಯುತ್ತದೆ. ದ್ವೇಷದ ರಾಜಕೀಯ ಸೋಲಲಿದೆ” ಎಂದು ಅವರು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿ, “ಎರಡು ರಾಷ್ಟ್ರ ಸಿದ್ಧಾಂತವನ್ನು ಮೊದಲು ಪ್ರತಿಪಾದಿಸಿದ್ದು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ಸಂಸ್ಥಾಪಕ ಸರ್ ಸೈಯದ್ ಅಹ್ಮದ್ ಖಾನ್. ಅವರು 1876ರಲ್ಲಿ ಸಾವರ್ಕರ್ ಹುಟ್ಟುವ ಮೊದಲೇ (1883) ಈ ಕಲ್ಪನೆಯನ್ನು ನೀಡಿದ್ದರು. ಸಾವರ್ಕರ್ ಮತ್ತು ಹಿಂದೂ ಮಹಾಸಭಾವು ವಿಭಜನೆಯ ಕಲ್ಪನೆಯನ್ನು ಕೊನೆಯವರೆಗೂ ವಿರೋಧಿಸಿತು” ಎಂದು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿಗಳ ಸುಳ್ಳು ಪ್ರಚಾರಕ್ಕೆ ಪ್ರಜ್ಞಾವಂತರು ಸೂಕ್ತ ರೀತಿಯಲ್ಲಿ ತಿರುಗೇಟು ನೀಡದಿದ್ದರೆ, ವರ್ತಮಾನ ಮತ್ತು ಬವಿಶ್ಯದಲ್ಲಿ, ಈ ಮಾನವ ವಿರೋಧಿ ಮನುವಾದಿಗಳು ಹೇಳಿದ್ದೇ “ನಿಜ” ಎಂಬಂತೆ ಆಗುತ್ತದೆ. ಏಕೆಂದರೆ ಇವರು ಒಂದು ಸುಳ್ಳನ್ನು ನೂರಾರು ಬಾರಿ ಹೇಳಿದರೆ, ಆ ಸುಳ್ಳನ್ನು ಜನ ‘ನಿಜ’ ಎಂದು ನಂಬುತ್ತಾರೆ ಎಂಬ ಹಿಟ್ಲರನ ಶಿಶ್ಯ ಗೋಬೆಲ್ಸನ ತಂತ್ರವನ್ನು ಪ್ರಯೋಗಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...