Homeಕರ್ನಾಟಕಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋ ವಿವಾದ: ಮಹನೀಯರ ಚಿತ್ರಗಳನ್ನಿಡಿದು ಕಾಂಗ್ರೆಸ್‌ ಧರಣಿ

ಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋ ವಿವಾದ: ಮಹನೀಯರ ಚಿತ್ರಗಳನ್ನಿಡಿದು ಕಾಂಗ್ರೆಸ್‌ ಧರಣಿ

- Advertisement -
- Advertisement -

ಸುವರ್ಣಸೌಧದ ಸಭಾಂಗಣದಲ್ಲಿ ಸಾವರ್ಕರ್‌ ಭಾವಚಿತ್ರ ಅಳವಡಿಕೆ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಮಹನೀಯರ ಭಾವಚಿತ್ರಗಳನ್ನು ಹಿಡಿದು ಕಾಂಗ್ರೆಸ್ ನಾಯಕರು ಸುವರ್ಣಸೌಧದ ಹೊರಗೆ ಧರಣಿ ನಡೆಸಿದ್ದಾರೆ.

ವಿಧಾನಸಭೆಯಲ್ಲಿ ಮಹರ್ಷಿ ವಾಲ್ಮೀಕಿ, ಬಸವಣ್ಣ, ಸಂತ ಶಿಶುನಾಳ ಶರೀಫ, ಕನಕದಾಸ, ನಾರಾಯಣಗುರು, ಅಂಬೇಡ್ಕರ್, ನೆಹರೂ, ಜಗಜೀವನ ರಾಮ್, ಸರದಾರ ವಲ್ಲಭಬಾಯ್ ಪಟೇಲ್, ಕುವೆಂಪು ಮತ್ತಿತರ ಮಹನೀಯರ ಭಾವಚಿತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹನೀಯರ ಚಿತ್ರಗಳನ್ನಿಡಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಸತೀಶ್ ಜಾರಕಿಹೊಳಿ, ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ಕೆ.ಜೆ.ಜಾರ್ಜ್, ಆರ್.ವಿ.ದೇಶಪಾಂಡೆ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರ ನಾಯಕರು ಬೆಳಗಾವಿ ಸುವರ್ಣಸೌಧದ ಪ್ರವೇಶದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್ ಮಾತನಾಡಿ, “ವಿಧಾನಸಭೆ ಕಲಾಪ ನಡೆಯಬಾರದು ಎಂಬುದು ಅವರ ಅಪೇಕ್ಷೆ. ಕಲಾಪವನ್ನು ಅಡ್ಡಿಪಡಿಸಲು ಯೋಚಿಸಿದ್ದಾರೆ. ಸರ್ಕಾರದ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ವಿಚಾರಗಳನ್ನು ಎತ್ತಲಿದ್ದೇವೆ ಎಂಬ ಕಾರಣಕ್ಕೆ ಫೋಟೋ ವಿಚಾರವನ್ನು ತಂದಿದ್ದಾರೆ. ಸರ್ಕಾರ ಬಳಿ ಯಾವುದೇ ಅಭಿವೃದ್ಧಿ ಅಜೆಂಡಾ ಇಲ್ಲ” ಎಂದು ತಿಳಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, “ಯಾರ ಭಾವಚಿತ್ರ ಹಾಕುವುದಕ್ಕೂ ನನ್ನ ವಿರೋಧವಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯಂತಹ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಬಯಸಿದೆ” ಎಂದು ಆರೋಪಿಸಿದ್ದಾರೆ.

“ಏಕಾಏಕಿ ಭಾವಚಿತ್ರ ಅಳವಡಿಕೆ ಮಾಡಿದ್ದಾರೆ. ಭಾವಚಿತ್ರ ಅನಾವರಣ ಕಾರ್ಯಕ್ರಮಕ್ಕೆ ನಮಗೆ ಆಹ್ವಾನ ಇರಲಿಲ್ಲ. ಮಾಧ್ಯಮದ ಮೂಲಕ ತಿಳಿದುಕೊಂಡೆ. ಯಾರದೇ ಫೋಟೋ ಇಡಲು ವಿರೋಧ ಇಲ್ಲ. ಆದರೆ ಚರ್ಚೆ ಆಗದೆ ಇಟ್ಟಿರುವುದಕ್ಕೆ ನಮ್ಮ ವಿರೋಧವಿದೆ.‌ ನಾವು ಈ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇವೆ. ಕಾನೂನು‌ ಸುವ್ಯವಸ್ಥೆ, ಭ್ರಷ್ಟಾಚಾರ ವಿಚಾರಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಫೋಟೋ ವಿವಾದ ಮುನ್ನಲೆಗೆ‌ ತಂದಿದ್ದಾರೆ” ಎಂದು ದೂರಿದ್ದಾರೆ.

ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಾವರ್ಕರ್ ಫೋಟೋವನ್ನು ಸುವರ್ಣಸೌಧದಲ್ಲಿ ಅನಾವರಣ ಮಾಡಲಾಗಿದೆ. ಸಾವರ್ಕರ್ ಜೊತೆಗೆ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ನೇತಾಜಿ, ಸರ್ದಾರ್ ವಲ್ಲಭ್ ಬಾಯ್ ಪಟೇಲ್, ಸ್ವಾಮಿ ವಿವೇಕಾನಂದ, ಬಸವಣ್ಣರ ಫೋಟೋಗಳನ್ನೂ ಇಡಲಾಗಿದೆ.

ಇದನ್ನೂ ಓದಿರಿ: ಮಾಯಾಜಾಲದ ಪರದೆ ಸರಿದಾಗ; ಉಪಚುನಾವಣೆ ಫಲಿತಾಂಶಗಳು ಹೇಳುವ ಸುನಾಮಿ ಸತ್ಯ

ರಾಷ್ಟ್ರ ಹಾಗೂ ರಾಜ್ಯದ ಮಹಾನ್‌ ವ್ಯಕ್ತಿಗಳ ಚಿತ್ರಗಳನ್ನು ಮುಂದಿಟ್ಟುಕೊಂಡು ಪ್ರಶ್ನಿಸಲು ಕಾಂಗ್ರೆಸ್ ನಿರ್ಧರಿಸಿದೆ. ಕುವೆಂಪು, ನಾರಾಯಣಗುರು ಅಂತಹ ದಾರ್ಶನಿಕರ ಫೋಟೋ ಏಕಿಲ್ಲ ಎಂದು ಕೇಳುತ್ತಿದೆ.

ಸಾವರ್ಕರ್ ವಿಚಾರವಾಗಿ ಚರ್ಚೆ ಮಾಡಿದರೆ ಬಿಜೆಪಿ ಹಿಂದುತ್ವ ವಿಚಾರವನ್ನ ಮುನ್ನಲೆಗೆ ತರಲಿದೆ. ಇದು ಚುನಾವಣೆಗೂ ಮೊದಲು ಧ್ರುವಿಕರಣಕ್ಕೆ ಸಹಾಯವಾಗಲಿದೆ. ಹೀಗಾಗಿ ಇದರ ಬದಲಿಗೆ ಇನ್ನಿತರ ಮಹಾನ್ ನಾಯಕರ ಚಿತ್ರಗಳಿಗೆ ಬೇಡಿಕೆ ಇಟ್ಟು ಹೋರಾಟ ರೂಪಿಸಲು ನಿರ್ಧರಿಸಿದೆ. ಸಾವರ್ಕರ್​ ಫೋಟೋ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಅಸೆಂಬ್ಲಿ ಹಾಲ್​ನಲ್ಲಿ ಹಲವು ಮಹನೀಯರ ಫೋಟೋ ಅಳವಡಿಸಬೇಕಿದೆ. ಮಹರ್ಷಿ ವಾಲ್ಮೀಕಿ, ಬಸವಣ್ಣ, ಕನಕದಾಸ, ಶಿಶುನಾಳ ಶರೀಫ, ನೆಹರು. ನಾರಾಯಣಗುರು, ಡಾ.ಬಿ.ಆರ್​.ಅಂಬೇಡ್ಕರ್​​, ವಲ್ಲಭ ಬಾಯಿ ಪಟೇಲ್, ಬಾಬು ಜಗಜೀವನ ರಾಮ್​​, ಕುವೆಂಪು ಭಾವಚಿತ್ರಗಳನ್ನು ಹಾಕಬೇಕು. ದಾರ್ಶನಿಕರು, ವಿಚಾರವಂತರು, ರಾಷ್ಟ್ರ ನಾಯಕರ ಭಾವಚಿತ್ರಗಳನ್ನು ಇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...