Homeಕರ್ನಾಟಕಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋ ವಿವಾದ: ಮಹನೀಯರ ಚಿತ್ರಗಳನ್ನಿಡಿದು ಕಾಂಗ್ರೆಸ್‌ ಧರಣಿ

ಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋ ವಿವಾದ: ಮಹನೀಯರ ಚಿತ್ರಗಳನ್ನಿಡಿದು ಕಾಂಗ್ರೆಸ್‌ ಧರಣಿ

- Advertisement -
- Advertisement -

ಸುವರ್ಣಸೌಧದ ಸಭಾಂಗಣದಲ್ಲಿ ಸಾವರ್ಕರ್‌ ಭಾವಚಿತ್ರ ಅಳವಡಿಕೆ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಮಹನೀಯರ ಭಾವಚಿತ್ರಗಳನ್ನು ಹಿಡಿದು ಕಾಂಗ್ರೆಸ್ ನಾಯಕರು ಸುವರ್ಣಸೌಧದ ಹೊರಗೆ ಧರಣಿ ನಡೆಸಿದ್ದಾರೆ.

ವಿಧಾನಸಭೆಯಲ್ಲಿ ಮಹರ್ಷಿ ವಾಲ್ಮೀಕಿ, ಬಸವಣ್ಣ, ಸಂತ ಶಿಶುನಾಳ ಶರೀಫ, ಕನಕದಾಸ, ನಾರಾಯಣಗುರು, ಅಂಬೇಡ್ಕರ್, ನೆಹರೂ, ಜಗಜೀವನ ರಾಮ್, ಸರದಾರ ವಲ್ಲಭಬಾಯ್ ಪಟೇಲ್, ಕುವೆಂಪು ಮತ್ತಿತರ ಮಹನೀಯರ ಭಾವಚಿತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹನೀಯರ ಚಿತ್ರಗಳನ್ನಿಡಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಸತೀಶ್ ಜಾರಕಿಹೊಳಿ, ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ಕೆ.ಜೆ.ಜಾರ್ಜ್, ಆರ್.ವಿ.ದೇಶಪಾಂಡೆ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರ ನಾಯಕರು ಬೆಳಗಾವಿ ಸುವರ್ಣಸೌಧದ ಪ್ರವೇಶದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್ ಮಾತನಾಡಿ, “ವಿಧಾನಸಭೆ ಕಲಾಪ ನಡೆಯಬಾರದು ಎಂಬುದು ಅವರ ಅಪೇಕ್ಷೆ. ಕಲಾಪವನ್ನು ಅಡ್ಡಿಪಡಿಸಲು ಯೋಚಿಸಿದ್ದಾರೆ. ಸರ್ಕಾರದ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ವಿಚಾರಗಳನ್ನು ಎತ್ತಲಿದ್ದೇವೆ ಎಂಬ ಕಾರಣಕ್ಕೆ ಫೋಟೋ ವಿಚಾರವನ್ನು ತಂದಿದ್ದಾರೆ. ಸರ್ಕಾರ ಬಳಿ ಯಾವುದೇ ಅಭಿವೃದ್ಧಿ ಅಜೆಂಡಾ ಇಲ್ಲ” ಎಂದು ತಿಳಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, “ಯಾರ ಭಾವಚಿತ್ರ ಹಾಕುವುದಕ್ಕೂ ನನ್ನ ವಿರೋಧವಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯಂತಹ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಬಯಸಿದೆ” ಎಂದು ಆರೋಪಿಸಿದ್ದಾರೆ.

“ಏಕಾಏಕಿ ಭಾವಚಿತ್ರ ಅಳವಡಿಕೆ ಮಾಡಿದ್ದಾರೆ. ಭಾವಚಿತ್ರ ಅನಾವರಣ ಕಾರ್ಯಕ್ರಮಕ್ಕೆ ನಮಗೆ ಆಹ್ವಾನ ಇರಲಿಲ್ಲ. ಮಾಧ್ಯಮದ ಮೂಲಕ ತಿಳಿದುಕೊಂಡೆ. ಯಾರದೇ ಫೋಟೋ ಇಡಲು ವಿರೋಧ ಇಲ್ಲ. ಆದರೆ ಚರ್ಚೆ ಆಗದೆ ಇಟ್ಟಿರುವುದಕ್ಕೆ ನಮ್ಮ ವಿರೋಧವಿದೆ.‌ ನಾವು ಈ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇವೆ. ಕಾನೂನು‌ ಸುವ್ಯವಸ್ಥೆ, ಭ್ರಷ್ಟಾಚಾರ ವಿಚಾರಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಫೋಟೋ ವಿವಾದ ಮುನ್ನಲೆಗೆ‌ ತಂದಿದ್ದಾರೆ” ಎಂದು ದೂರಿದ್ದಾರೆ.

ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಾವರ್ಕರ್ ಫೋಟೋವನ್ನು ಸುವರ್ಣಸೌಧದಲ್ಲಿ ಅನಾವರಣ ಮಾಡಲಾಗಿದೆ. ಸಾವರ್ಕರ್ ಜೊತೆಗೆ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ನೇತಾಜಿ, ಸರ್ದಾರ್ ವಲ್ಲಭ್ ಬಾಯ್ ಪಟೇಲ್, ಸ್ವಾಮಿ ವಿವೇಕಾನಂದ, ಬಸವಣ್ಣರ ಫೋಟೋಗಳನ್ನೂ ಇಡಲಾಗಿದೆ.

ಇದನ್ನೂ ಓದಿರಿ: ಮಾಯಾಜಾಲದ ಪರದೆ ಸರಿದಾಗ; ಉಪಚುನಾವಣೆ ಫಲಿತಾಂಶಗಳು ಹೇಳುವ ಸುನಾಮಿ ಸತ್ಯ

ರಾಷ್ಟ್ರ ಹಾಗೂ ರಾಜ್ಯದ ಮಹಾನ್‌ ವ್ಯಕ್ತಿಗಳ ಚಿತ್ರಗಳನ್ನು ಮುಂದಿಟ್ಟುಕೊಂಡು ಪ್ರಶ್ನಿಸಲು ಕಾಂಗ್ರೆಸ್ ನಿರ್ಧರಿಸಿದೆ. ಕುವೆಂಪು, ನಾರಾಯಣಗುರು ಅಂತಹ ದಾರ್ಶನಿಕರ ಫೋಟೋ ಏಕಿಲ್ಲ ಎಂದು ಕೇಳುತ್ತಿದೆ.

ಸಾವರ್ಕರ್ ವಿಚಾರವಾಗಿ ಚರ್ಚೆ ಮಾಡಿದರೆ ಬಿಜೆಪಿ ಹಿಂದುತ್ವ ವಿಚಾರವನ್ನ ಮುನ್ನಲೆಗೆ ತರಲಿದೆ. ಇದು ಚುನಾವಣೆಗೂ ಮೊದಲು ಧ್ರುವಿಕರಣಕ್ಕೆ ಸಹಾಯವಾಗಲಿದೆ. ಹೀಗಾಗಿ ಇದರ ಬದಲಿಗೆ ಇನ್ನಿತರ ಮಹಾನ್ ನಾಯಕರ ಚಿತ್ರಗಳಿಗೆ ಬೇಡಿಕೆ ಇಟ್ಟು ಹೋರಾಟ ರೂಪಿಸಲು ನಿರ್ಧರಿಸಿದೆ. ಸಾವರ್ಕರ್​ ಫೋಟೋ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಅಸೆಂಬ್ಲಿ ಹಾಲ್​ನಲ್ಲಿ ಹಲವು ಮಹನೀಯರ ಫೋಟೋ ಅಳವಡಿಸಬೇಕಿದೆ. ಮಹರ್ಷಿ ವಾಲ್ಮೀಕಿ, ಬಸವಣ್ಣ, ಕನಕದಾಸ, ಶಿಶುನಾಳ ಶರೀಫ, ನೆಹರು. ನಾರಾಯಣಗುರು, ಡಾ.ಬಿ.ಆರ್​.ಅಂಬೇಡ್ಕರ್​​, ವಲ್ಲಭ ಬಾಯಿ ಪಟೇಲ್, ಬಾಬು ಜಗಜೀವನ ರಾಮ್​​, ಕುವೆಂಪು ಭಾವಚಿತ್ರಗಳನ್ನು ಹಾಕಬೇಕು. ದಾರ್ಶನಿಕರು, ವಿಚಾರವಂತರು, ರಾಷ್ಟ್ರ ನಾಯಕರ ಭಾವಚಿತ್ರಗಳನ್ನು ಇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...