Homeಕರ್ನಾಟಕಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋ ವಿವಾದ: ಮಹನೀಯರ ಚಿತ್ರಗಳನ್ನಿಡಿದು ಕಾಂಗ್ರೆಸ್‌ ಧರಣಿ

ಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋ ವಿವಾದ: ಮಹನೀಯರ ಚಿತ್ರಗಳನ್ನಿಡಿದು ಕಾಂಗ್ರೆಸ್‌ ಧರಣಿ

- Advertisement -
- Advertisement -

ಸುವರ್ಣಸೌಧದ ಸಭಾಂಗಣದಲ್ಲಿ ಸಾವರ್ಕರ್‌ ಭಾವಚಿತ್ರ ಅಳವಡಿಕೆ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಮಹನೀಯರ ಭಾವಚಿತ್ರಗಳನ್ನು ಹಿಡಿದು ಕಾಂಗ್ರೆಸ್ ನಾಯಕರು ಸುವರ್ಣಸೌಧದ ಹೊರಗೆ ಧರಣಿ ನಡೆಸಿದ್ದಾರೆ.

ವಿಧಾನಸಭೆಯಲ್ಲಿ ಮಹರ್ಷಿ ವಾಲ್ಮೀಕಿ, ಬಸವಣ್ಣ, ಸಂತ ಶಿಶುನಾಳ ಶರೀಫ, ಕನಕದಾಸ, ನಾರಾಯಣಗುರು, ಅಂಬೇಡ್ಕರ್, ನೆಹರೂ, ಜಗಜೀವನ ರಾಮ್, ಸರದಾರ ವಲ್ಲಭಬಾಯ್ ಪಟೇಲ್, ಕುವೆಂಪು ಮತ್ತಿತರ ಮಹನೀಯರ ಭಾವಚಿತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹನೀಯರ ಚಿತ್ರಗಳನ್ನಿಡಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಸತೀಶ್ ಜಾರಕಿಹೊಳಿ, ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ಕೆ.ಜೆ.ಜಾರ್ಜ್, ಆರ್.ವಿ.ದೇಶಪಾಂಡೆ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರ ನಾಯಕರು ಬೆಳಗಾವಿ ಸುವರ್ಣಸೌಧದ ಪ್ರವೇಶದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್ ಮಾತನಾಡಿ, “ವಿಧಾನಸಭೆ ಕಲಾಪ ನಡೆಯಬಾರದು ಎಂಬುದು ಅವರ ಅಪೇಕ್ಷೆ. ಕಲಾಪವನ್ನು ಅಡ್ಡಿಪಡಿಸಲು ಯೋಚಿಸಿದ್ದಾರೆ. ಸರ್ಕಾರದ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ವಿಚಾರಗಳನ್ನು ಎತ್ತಲಿದ್ದೇವೆ ಎಂಬ ಕಾರಣಕ್ಕೆ ಫೋಟೋ ವಿಚಾರವನ್ನು ತಂದಿದ್ದಾರೆ. ಸರ್ಕಾರ ಬಳಿ ಯಾವುದೇ ಅಭಿವೃದ್ಧಿ ಅಜೆಂಡಾ ಇಲ್ಲ” ಎಂದು ತಿಳಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, “ಯಾರ ಭಾವಚಿತ್ರ ಹಾಕುವುದಕ್ಕೂ ನನ್ನ ವಿರೋಧವಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯಂತಹ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಬಯಸಿದೆ” ಎಂದು ಆರೋಪಿಸಿದ್ದಾರೆ.

“ಏಕಾಏಕಿ ಭಾವಚಿತ್ರ ಅಳವಡಿಕೆ ಮಾಡಿದ್ದಾರೆ. ಭಾವಚಿತ್ರ ಅನಾವರಣ ಕಾರ್ಯಕ್ರಮಕ್ಕೆ ನಮಗೆ ಆಹ್ವಾನ ಇರಲಿಲ್ಲ. ಮಾಧ್ಯಮದ ಮೂಲಕ ತಿಳಿದುಕೊಂಡೆ. ಯಾರದೇ ಫೋಟೋ ಇಡಲು ವಿರೋಧ ಇಲ್ಲ. ಆದರೆ ಚರ್ಚೆ ಆಗದೆ ಇಟ್ಟಿರುವುದಕ್ಕೆ ನಮ್ಮ ವಿರೋಧವಿದೆ.‌ ನಾವು ಈ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇವೆ. ಕಾನೂನು‌ ಸುವ್ಯವಸ್ಥೆ, ಭ್ರಷ್ಟಾಚಾರ ವಿಚಾರಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಫೋಟೋ ವಿವಾದ ಮುನ್ನಲೆಗೆ‌ ತಂದಿದ್ದಾರೆ” ಎಂದು ದೂರಿದ್ದಾರೆ.

ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಾವರ್ಕರ್ ಫೋಟೋವನ್ನು ಸುವರ್ಣಸೌಧದಲ್ಲಿ ಅನಾವರಣ ಮಾಡಲಾಗಿದೆ. ಸಾವರ್ಕರ್ ಜೊತೆಗೆ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ನೇತಾಜಿ, ಸರ್ದಾರ್ ವಲ್ಲಭ್ ಬಾಯ್ ಪಟೇಲ್, ಸ್ವಾಮಿ ವಿವೇಕಾನಂದ, ಬಸವಣ್ಣರ ಫೋಟೋಗಳನ್ನೂ ಇಡಲಾಗಿದೆ.

ಇದನ್ನೂ ಓದಿರಿ: ಮಾಯಾಜಾಲದ ಪರದೆ ಸರಿದಾಗ; ಉಪಚುನಾವಣೆ ಫಲಿತಾಂಶಗಳು ಹೇಳುವ ಸುನಾಮಿ ಸತ್ಯ

ರಾಷ್ಟ್ರ ಹಾಗೂ ರಾಜ್ಯದ ಮಹಾನ್‌ ವ್ಯಕ್ತಿಗಳ ಚಿತ್ರಗಳನ್ನು ಮುಂದಿಟ್ಟುಕೊಂಡು ಪ್ರಶ್ನಿಸಲು ಕಾಂಗ್ರೆಸ್ ನಿರ್ಧರಿಸಿದೆ. ಕುವೆಂಪು, ನಾರಾಯಣಗುರು ಅಂತಹ ದಾರ್ಶನಿಕರ ಫೋಟೋ ಏಕಿಲ್ಲ ಎಂದು ಕೇಳುತ್ತಿದೆ.

ಸಾವರ್ಕರ್ ವಿಚಾರವಾಗಿ ಚರ್ಚೆ ಮಾಡಿದರೆ ಬಿಜೆಪಿ ಹಿಂದುತ್ವ ವಿಚಾರವನ್ನ ಮುನ್ನಲೆಗೆ ತರಲಿದೆ. ಇದು ಚುನಾವಣೆಗೂ ಮೊದಲು ಧ್ರುವಿಕರಣಕ್ಕೆ ಸಹಾಯವಾಗಲಿದೆ. ಹೀಗಾಗಿ ಇದರ ಬದಲಿಗೆ ಇನ್ನಿತರ ಮಹಾನ್ ನಾಯಕರ ಚಿತ್ರಗಳಿಗೆ ಬೇಡಿಕೆ ಇಟ್ಟು ಹೋರಾಟ ರೂಪಿಸಲು ನಿರ್ಧರಿಸಿದೆ. ಸಾವರ್ಕರ್​ ಫೋಟೋ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಅಸೆಂಬ್ಲಿ ಹಾಲ್​ನಲ್ಲಿ ಹಲವು ಮಹನೀಯರ ಫೋಟೋ ಅಳವಡಿಸಬೇಕಿದೆ. ಮಹರ್ಷಿ ವಾಲ್ಮೀಕಿ, ಬಸವಣ್ಣ, ಕನಕದಾಸ, ಶಿಶುನಾಳ ಶರೀಫ, ನೆಹರು. ನಾರಾಯಣಗುರು, ಡಾ.ಬಿ.ಆರ್​.ಅಂಬೇಡ್ಕರ್​​, ವಲ್ಲಭ ಬಾಯಿ ಪಟೇಲ್, ಬಾಬು ಜಗಜೀವನ ರಾಮ್​​, ಕುವೆಂಪು ಭಾವಚಿತ್ರಗಳನ್ನು ಹಾಕಬೇಕು. ದಾರ್ಶನಿಕರು, ವಿಚಾರವಂತರು, ರಾಷ್ಟ್ರ ನಾಯಕರ ಭಾವಚಿತ್ರಗಳನ್ನು ಇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...