Homeಕರ್ನಾಟಕಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋ ವಿವಾದ: ಮಹನೀಯರ ಚಿತ್ರಗಳನ್ನಿಡಿದು ಕಾಂಗ್ರೆಸ್‌ ಧರಣಿ

ಸುವರ್ಣಸೌಧದಲ್ಲಿ ಸಾವರ್ಕರ್‌ ಫೋಟೋ ವಿವಾದ: ಮಹನೀಯರ ಚಿತ್ರಗಳನ್ನಿಡಿದು ಕಾಂಗ್ರೆಸ್‌ ಧರಣಿ

- Advertisement -
- Advertisement -

ಸುವರ್ಣಸೌಧದ ಸಭಾಂಗಣದಲ್ಲಿ ಸಾವರ್ಕರ್‌ ಭಾವಚಿತ್ರ ಅಳವಡಿಕೆ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಮಹನೀಯರ ಭಾವಚಿತ್ರಗಳನ್ನು ಹಿಡಿದು ಕಾಂಗ್ರೆಸ್ ನಾಯಕರು ಸುವರ್ಣಸೌಧದ ಹೊರಗೆ ಧರಣಿ ನಡೆಸಿದ್ದಾರೆ.

ವಿಧಾನಸಭೆಯಲ್ಲಿ ಮಹರ್ಷಿ ವಾಲ್ಮೀಕಿ, ಬಸವಣ್ಣ, ಸಂತ ಶಿಶುನಾಳ ಶರೀಫ, ಕನಕದಾಸ, ನಾರಾಯಣಗುರು, ಅಂಬೇಡ್ಕರ್, ನೆಹರೂ, ಜಗಜೀವನ ರಾಮ್, ಸರದಾರ ವಲ್ಲಭಬಾಯ್ ಪಟೇಲ್, ಕುವೆಂಪು ಮತ್ತಿತರ ಮಹನೀಯರ ಭಾವಚಿತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹನೀಯರ ಚಿತ್ರಗಳನ್ನಿಡಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಸತೀಶ್ ಜಾರಕಿಹೊಳಿ, ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ಕೆ.ಜೆ.ಜಾರ್ಜ್, ಆರ್.ವಿ.ದೇಶಪಾಂಡೆ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರ ನಾಯಕರು ಬೆಳಗಾವಿ ಸುವರ್ಣಸೌಧದ ಪ್ರವೇಶದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್ ಮಾತನಾಡಿ, “ವಿಧಾನಸಭೆ ಕಲಾಪ ನಡೆಯಬಾರದು ಎಂಬುದು ಅವರ ಅಪೇಕ್ಷೆ. ಕಲಾಪವನ್ನು ಅಡ್ಡಿಪಡಿಸಲು ಯೋಚಿಸಿದ್ದಾರೆ. ಸರ್ಕಾರದ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ವಿಚಾರಗಳನ್ನು ಎತ್ತಲಿದ್ದೇವೆ ಎಂಬ ಕಾರಣಕ್ಕೆ ಫೋಟೋ ವಿಚಾರವನ್ನು ತಂದಿದ್ದಾರೆ. ಸರ್ಕಾರ ಬಳಿ ಯಾವುದೇ ಅಭಿವೃದ್ಧಿ ಅಜೆಂಡಾ ಇಲ್ಲ” ಎಂದು ತಿಳಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, “ಯಾರ ಭಾವಚಿತ್ರ ಹಾಕುವುದಕ್ಕೂ ನನ್ನ ವಿರೋಧವಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯಂತಹ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಬಯಸಿದೆ” ಎಂದು ಆರೋಪಿಸಿದ್ದಾರೆ.

“ಏಕಾಏಕಿ ಭಾವಚಿತ್ರ ಅಳವಡಿಕೆ ಮಾಡಿದ್ದಾರೆ. ಭಾವಚಿತ್ರ ಅನಾವರಣ ಕಾರ್ಯಕ್ರಮಕ್ಕೆ ನಮಗೆ ಆಹ್ವಾನ ಇರಲಿಲ್ಲ. ಮಾಧ್ಯಮದ ಮೂಲಕ ತಿಳಿದುಕೊಂಡೆ. ಯಾರದೇ ಫೋಟೋ ಇಡಲು ವಿರೋಧ ಇಲ್ಲ. ಆದರೆ ಚರ್ಚೆ ಆಗದೆ ಇಟ್ಟಿರುವುದಕ್ಕೆ ನಮ್ಮ ವಿರೋಧವಿದೆ.‌ ನಾವು ಈ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇವೆ. ಕಾನೂನು‌ ಸುವ್ಯವಸ್ಥೆ, ಭ್ರಷ್ಟಾಚಾರ ವಿಚಾರಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಫೋಟೋ ವಿವಾದ ಮುನ್ನಲೆಗೆ‌ ತಂದಿದ್ದಾರೆ” ಎಂದು ದೂರಿದ್ದಾರೆ.

ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಾವರ್ಕರ್ ಫೋಟೋವನ್ನು ಸುವರ್ಣಸೌಧದಲ್ಲಿ ಅನಾವರಣ ಮಾಡಲಾಗಿದೆ. ಸಾವರ್ಕರ್ ಜೊತೆಗೆ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ನೇತಾಜಿ, ಸರ್ದಾರ್ ವಲ್ಲಭ್ ಬಾಯ್ ಪಟೇಲ್, ಸ್ವಾಮಿ ವಿವೇಕಾನಂದ, ಬಸವಣ್ಣರ ಫೋಟೋಗಳನ್ನೂ ಇಡಲಾಗಿದೆ.

ಇದನ್ನೂ ಓದಿರಿ: ಮಾಯಾಜಾಲದ ಪರದೆ ಸರಿದಾಗ; ಉಪಚುನಾವಣೆ ಫಲಿತಾಂಶಗಳು ಹೇಳುವ ಸುನಾಮಿ ಸತ್ಯ

ರಾಷ್ಟ್ರ ಹಾಗೂ ರಾಜ್ಯದ ಮಹಾನ್‌ ವ್ಯಕ್ತಿಗಳ ಚಿತ್ರಗಳನ್ನು ಮುಂದಿಟ್ಟುಕೊಂಡು ಪ್ರಶ್ನಿಸಲು ಕಾಂಗ್ರೆಸ್ ನಿರ್ಧರಿಸಿದೆ. ಕುವೆಂಪು, ನಾರಾಯಣಗುರು ಅಂತಹ ದಾರ್ಶನಿಕರ ಫೋಟೋ ಏಕಿಲ್ಲ ಎಂದು ಕೇಳುತ್ತಿದೆ.

ಸಾವರ್ಕರ್ ವಿಚಾರವಾಗಿ ಚರ್ಚೆ ಮಾಡಿದರೆ ಬಿಜೆಪಿ ಹಿಂದುತ್ವ ವಿಚಾರವನ್ನ ಮುನ್ನಲೆಗೆ ತರಲಿದೆ. ಇದು ಚುನಾವಣೆಗೂ ಮೊದಲು ಧ್ರುವಿಕರಣಕ್ಕೆ ಸಹಾಯವಾಗಲಿದೆ. ಹೀಗಾಗಿ ಇದರ ಬದಲಿಗೆ ಇನ್ನಿತರ ಮಹಾನ್ ನಾಯಕರ ಚಿತ್ರಗಳಿಗೆ ಬೇಡಿಕೆ ಇಟ್ಟು ಹೋರಾಟ ರೂಪಿಸಲು ನಿರ್ಧರಿಸಿದೆ. ಸಾವರ್ಕರ್​ ಫೋಟೋ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಅಸೆಂಬ್ಲಿ ಹಾಲ್​ನಲ್ಲಿ ಹಲವು ಮಹನೀಯರ ಫೋಟೋ ಅಳವಡಿಸಬೇಕಿದೆ. ಮಹರ್ಷಿ ವಾಲ್ಮೀಕಿ, ಬಸವಣ್ಣ, ಕನಕದಾಸ, ಶಿಶುನಾಳ ಶರೀಫ, ನೆಹರು. ನಾರಾಯಣಗುರು, ಡಾ.ಬಿ.ಆರ್​.ಅಂಬೇಡ್ಕರ್​​, ವಲ್ಲಭ ಬಾಯಿ ಪಟೇಲ್, ಬಾಬು ಜಗಜೀವನ ರಾಮ್​​, ಕುವೆಂಪು ಭಾವಚಿತ್ರಗಳನ್ನು ಹಾಕಬೇಕು. ದಾರ್ಶನಿಕರು, ವಿಚಾರವಂತರು, ರಾಷ್ಟ್ರ ನಾಯಕರ ಭಾವಚಿತ್ರಗಳನ್ನು ಇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...