Homeಕರ್ನಾಟಕಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಾಂಧಿ ಕೊಲೆ ಆರೋಪಿ ಸಾವರ್ಕರ್‌‌!

ಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಾಂಧಿ ಕೊಲೆ ಆರೋಪಿ ಸಾವರ್ಕರ್‌‌!

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ರಾಜ್ಯದಲ್ಲಿ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ರಾಜ್ಯ ಕಾಂಗ್ರೆಸ್ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿ ವಿ.ಡಿ.ಸಾವರ್ಕರ್‌ ಫೋಟೋ ಇರುವ ಫ್ಲೆಕ್ಸ್ ಅಳವಡಿಸಿ ವಿವಾದಕ್ಕೆ ಸಿಲುಕಿದೆ.

ನಾಗಮಂಗಲ ತಾಲೂಕಿನ ಚೀಣ್ಯ ಗ್ರಾಮದಲ್ಲಿ ವಿ.ಡಿ. ಸಾವರ್ಕರ್ ಇರುವ ಫ್ಲೆಕ್ಸ್ ಒಂದನ್ನು ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಫೋಟೋ ಸಹಿತ ಹಾಕಲಾಗಿದೆ. ಕಾಂಗ್ರೆಸ್‌ ಪಕ್ಷದ ಸೈದ್ಧಾಂತಿಕ ವಿರೋಧಿಯಾದ ಸಾವರ್ಕರ್‌ ಫೋಟೋ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಲೆಕ್ಸ್ ಕಿತ್ತೆಸೆದ ಕಾರ್ಯಕರ್ತರು

ಭಾರತ್ ಜೋಡೋ ಯಾತ್ರೆಯಲ್ಲಿ ವಿ.ಡಿ. ಸಾವರ್ಕರ್ ಕಾಣಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಜನ ಫೋಟೋ ಕ್ಲಿಕ್ಕಿಸಿಕೊಳ್ಳಲು ಆರಂಭಿಸುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಫ್ಲೆಕ್ಸ್ ಅನ್ನು ಅಲ್ಲಿಂದ ತೆರವುಗೊಳಿಸಿದ್ದಾರೆ.

ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್‌ನಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಫ್ಲೆಕ್ಸ್ ಪ್ರಕಟಿಸಿರುವ ಎನ್.ಎ. ಹ್ಯಾರಿಸ್ ಅವರ ಫೋಟೋ ಸಹಿತ ಹೆಸರೂ ಇದೆ.

ಫ್ಲೆಕ್ಸ್ ಹಾಕಲು ಗುತ್ತಿಗೆ ಪಡೆದವರು ಎಲ್ಲ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳನ್ನು ಯಾತ್ರೆಯುದ್ದಕ್ಕೂ ಹಾಕಿದ್ದಾರೆ. ಅದೇ ರೀತಿ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಅಂತರ್ಜಾಲದಲ್ಲಿ ಹುಡುಕಿ ಫ್ಲೆಕ್ಸ್ ಮುದ್ರಿಸಿದ್ದಾರೆ. ಹಾಗಾಗಿ ಈ ಯಡವಟ್ಟು ಸಂಭವಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನು ಕೆಲವರು ಇದು ಕಾಂಗ್ರೆಸ್ ಪಕ್ಷದ ವಿರೋಧಿಗಳ ಕೈವಾಡವೂ ಇರಬಹುದು ಎಂದು ಶಂಕಿಸಿದ್ದಾರೆ.

ಕೇರಳದಲ್ಲೂ ಕಾಣಿಸಿಕೊಂಡಿತ್ತು ಸಾವರ್ಕರ್‌ ಚಿತ್ರ

ಕೇರಳದ ನೆಡುಂಬಸ್ಸೆರಿ ಬಳಿಯ ಅಥಣಿಯಲ್ಲಿ ಯಾತ್ರೆಯ ಪ್ರಚಾರಕ್ಕಾಗಿ ಹಾಕಲಾಗಿದ್ದ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿಯ ಚಿತ್ರ ಸೆಪ್ಟೆಂಬರ್‌ 21 ರಂದು ಕಾಣಿಸಿಕೊಂಡಿತ್ತು. ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಇದರ ನಂತರ ಎಚ್ಚೆತ್ತ ಪಕ್ಷದ ಕಾರ್ಯಕರ್ತರು ಆ ಚಿತ್ರಕ್ಕೆ ಮಹಾತ್ಮ ಗಾಂಧಿಯ ಚಿತ್ರವನ್ನು ಅಂಟಿಸಿ ಅದನ್ನು ಮರೆಮಾಚಿದ್ದರು.

ಈ ನಡುವೆ ಪಕ್ಷವೂ ಸ್ಥಳೀಯ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯನ್ನು ಘಟನೆಗೆ ಹೊಣೆಯನ್ನಾಗಿಸಿ ಅಮಾನತು ಮಾಡಿತ್ತು. “ಪಕ್ಷದ ಸ್ಥಳೀಯ ಕಾರ್ಯಕರ್ತರೊಬ್ಬರು ಈ ಫ್ಲೆಕ್ಸ್‌ ಕಟ್ಟಿದ್ದಾರೆ. ಅವರು ಸ್ವಾತಂತ್ಯ್ರ ಹೋರಾಟಗಾರರ ಚಿತ್ರಗಳನ್ನು ಮುದ್ರಿಸಿ ಕೊಡುವಂತೆ ಫ್ಲೆಕ್ಸ್‌‌ ಮುದ್ರಣ ಮಾರಾಟಗಾರರನ್ನು ಕೇಳಿದ್ದರು. ಅದನ್ನು ಮುದ್ರಿಸುವಾಗ ಈ ಚಿತ್ರವೂ ಪ್ರಮಾದದಿಂದಾಗಿ ಮುದ್ರಣಗೊಂಡಿದೆ. ಸಮಸ್ಯೆ ಗಮನಕ್ಕೆ ಬಂದ ಕೂಡಲೇ ತೆಗೆಸಲು ಸೂಚನೆ ನೀಡಲಾಗಿದೆ” ಎಂದು ಕಾಂಗ್ರೆಸ್‌ ಮುಖಂಡರು ಸಮಜಾಯಿಷಿ ನೀಡಿದ್ದರು.

ಇದನ್ನೂ ಓದಿ: ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...