Homeಕರ್ನಾಟಕಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಾಂಧಿ ಕೊಲೆ ಆರೋಪಿ ಸಾವರ್ಕರ್‌‌!

ಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಾಂಧಿ ಕೊಲೆ ಆರೋಪಿ ಸಾವರ್ಕರ್‌‌!

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ರಾಜ್ಯದಲ್ಲಿ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ರಾಜ್ಯ ಕಾಂಗ್ರೆಸ್ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿ ವಿ.ಡಿ.ಸಾವರ್ಕರ್‌ ಫೋಟೋ ಇರುವ ಫ್ಲೆಕ್ಸ್ ಅಳವಡಿಸಿ ವಿವಾದಕ್ಕೆ ಸಿಲುಕಿದೆ.

ನಾಗಮಂಗಲ ತಾಲೂಕಿನ ಚೀಣ್ಯ ಗ್ರಾಮದಲ್ಲಿ ವಿ.ಡಿ. ಸಾವರ್ಕರ್ ಇರುವ ಫ್ಲೆಕ್ಸ್ ಒಂದನ್ನು ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಫೋಟೋ ಸಹಿತ ಹಾಕಲಾಗಿದೆ. ಕಾಂಗ್ರೆಸ್‌ ಪಕ್ಷದ ಸೈದ್ಧಾಂತಿಕ ವಿರೋಧಿಯಾದ ಸಾವರ್ಕರ್‌ ಫೋಟೋ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಲೆಕ್ಸ್ ಕಿತ್ತೆಸೆದ ಕಾರ್ಯಕರ್ತರು

ಭಾರತ್ ಜೋಡೋ ಯಾತ್ರೆಯಲ್ಲಿ ವಿ.ಡಿ. ಸಾವರ್ಕರ್ ಕಾಣಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಜನ ಫೋಟೋ ಕ್ಲಿಕ್ಕಿಸಿಕೊಳ್ಳಲು ಆರಂಭಿಸುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಫ್ಲೆಕ್ಸ್ ಅನ್ನು ಅಲ್ಲಿಂದ ತೆರವುಗೊಳಿಸಿದ್ದಾರೆ.

ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್‌ನಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಫ್ಲೆಕ್ಸ್ ಪ್ರಕಟಿಸಿರುವ ಎನ್.ಎ. ಹ್ಯಾರಿಸ್ ಅವರ ಫೋಟೋ ಸಹಿತ ಹೆಸರೂ ಇದೆ.

ಫ್ಲೆಕ್ಸ್ ಹಾಕಲು ಗುತ್ತಿಗೆ ಪಡೆದವರು ಎಲ್ಲ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳನ್ನು ಯಾತ್ರೆಯುದ್ದಕ್ಕೂ ಹಾಕಿದ್ದಾರೆ. ಅದೇ ರೀತಿ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಅಂತರ್ಜಾಲದಲ್ಲಿ ಹುಡುಕಿ ಫ್ಲೆಕ್ಸ್ ಮುದ್ರಿಸಿದ್ದಾರೆ. ಹಾಗಾಗಿ ಈ ಯಡವಟ್ಟು ಸಂಭವಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನು ಕೆಲವರು ಇದು ಕಾಂಗ್ರೆಸ್ ಪಕ್ಷದ ವಿರೋಧಿಗಳ ಕೈವಾಡವೂ ಇರಬಹುದು ಎಂದು ಶಂಕಿಸಿದ್ದಾರೆ.

ಕೇರಳದಲ್ಲೂ ಕಾಣಿಸಿಕೊಂಡಿತ್ತು ಸಾವರ್ಕರ್‌ ಚಿತ್ರ

ಕೇರಳದ ನೆಡುಂಬಸ್ಸೆರಿ ಬಳಿಯ ಅಥಣಿಯಲ್ಲಿ ಯಾತ್ರೆಯ ಪ್ರಚಾರಕ್ಕಾಗಿ ಹಾಕಲಾಗಿದ್ದ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿಯ ಚಿತ್ರ ಸೆಪ್ಟೆಂಬರ್‌ 21 ರಂದು ಕಾಣಿಸಿಕೊಂಡಿತ್ತು. ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಇದರ ನಂತರ ಎಚ್ಚೆತ್ತ ಪಕ್ಷದ ಕಾರ್ಯಕರ್ತರು ಆ ಚಿತ್ರಕ್ಕೆ ಮಹಾತ್ಮ ಗಾಂಧಿಯ ಚಿತ್ರವನ್ನು ಅಂಟಿಸಿ ಅದನ್ನು ಮರೆಮಾಚಿದ್ದರು.

ಈ ನಡುವೆ ಪಕ್ಷವೂ ಸ್ಥಳೀಯ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯನ್ನು ಘಟನೆಗೆ ಹೊಣೆಯನ್ನಾಗಿಸಿ ಅಮಾನತು ಮಾಡಿತ್ತು. “ಪಕ್ಷದ ಸ್ಥಳೀಯ ಕಾರ್ಯಕರ್ತರೊಬ್ಬರು ಈ ಫ್ಲೆಕ್ಸ್‌ ಕಟ್ಟಿದ್ದಾರೆ. ಅವರು ಸ್ವಾತಂತ್ಯ್ರ ಹೋರಾಟಗಾರರ ಚಿತ್ರಗಳನ್ನು ಮುದ್ರಿಸಿ ಕೊಡುವಂತೆ ಫ್ಲೆಕ್ಸ್‌‌ ಮುದ್ರಣ ಮಾರಾಟಗಾರರನ್ನು ಕೇಳಿದ್ದರು. ಅದನ್ನು ಮುದ್ರಿಸುವಾಗ ಈ ಚಿತ್ರವೂ ಪ್ರಮಾದದಿಂದಾಗಿ ಮುದ್ರಣಗೊಂಡಿದೆ. ಸಮಸ್ಯೆ ಗಮನಕ್ಕೆ ಬಂದ ಕೂಡಲೇ ತೆಗೆಸಲು ಸೂಚನೆ ನೀಡಲಾಗಿದೆ” ಎಂದು ಕಾಂಗ್ರೆಸ್‌ ಮುಖಂಡರು ಸಮಜಾಯಿಷಿ ನೀಡಿದ್ದರು.

ಇದನ್ನೂ ಓದಿ: ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...

85 ಕೋಟಿ ರೂ. ವಂಚನೆ ಪ್ರಕರಣ: ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕರನ್ನು ಬಂಧಿಸಿದ ಇಡಿ

85 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮುಂಬೈ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆ ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕ ರಾಜೇಂದ್ರ ಲೋಧಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ (Pe.13)...

ಹೆತ್ತವರ ಹತ್ಯೆ ಪ್ರಕರಣ: ಸ್ಕಿಜೋಫ್ರೇನಿಯಾ ಎಂಬ ಮನೋರೋಗದಿಂದ ಬಳಲುತ್ತಿದ್ದ ಬೆಂಗಳೂರು ಟೆಕ್ಕಿ ರೋಹನ್ ಚಂದ್ರ ಭಟ್ 

ಬೆಂಗಳೂರು: ಬುಧವಾರ ತನ್ನ ಹೆತ್ತವರನ್ನು ಇರಿದು ಕೊಂದ 33 ವರ್ಷದ ಅಮೆರಿಕದಿಂದ ಹಿಂದಿರುಗಿದ ಟೆಕ್ಕಿ ರೋಹನ್ ಚಂದ್ರ ಭಟ್, ವರ್ಷಗಳಿಂದ ಕೆಲಸವಿಲ್ಲದ ಕಾರಣ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಅನ್ನುವುದು ದೃಢವಾಗಿದೆ.  ಬುಧವಾರ ಬೆಳಿಗ್ಗೆ 8.30 ರ...

ಬಿಕ್ಲುಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ: ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು ನಗರ ಪೊಲೀಸ್‌ ವ್ಯಾಪ್ತಿಯ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಆರಿ ಹಿನ್ನಡೆಯಾಗಿದೆ. ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ...

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...