Homeಕರ್ನಾಟಕಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಾಂಧಿ ಕೊಲೆ ಆರೋಪಿ ಸಾವರ್ಕರ್‌‌!

ಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಾಂಧಿ ಕೊಲೆ ಆರೋಪಿ ಸಾವರ್ಕರ್‌‌!

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ರಾಜ್ಯದಲ್ಲಿ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ರಾಜ್ಯ ಕಾಂಗ್ರೆಸ್ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿ ವಿ.ಡಿ.ಸಾವರ್ಕರ್‌ ಫೋಟೋ ಇರುವ ಫ್ಲೆಕ್ಸ್ ಅಳವಡಿಸಿ ವಿವಾದಕ್ಕೆ ಸಿಲುಕಿದೆ.

ನಾಗಮಂಗಲ ತಾಲೂಕಿನ ಚೀಣ್ಯ ಗ್ರಾಮದಲ್ಲಿ ವಿ.ಡಿ. ಸಾವರ್ಕರ್ ಇರುವ ಫ್ಲೆಕ್ಸ್ ಒಂದನ್ನು ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಫೋಟೋ ಸಹಿತ ಹಾಕಲಾಗಿದೆ. ಕಾಂಗ್ರೆಸ್‌ ಪಕ್ಷದ ಸೈದ್ಧಾಂತಿಕ ವಿರೋಧಿಯಾದ ಸಾವರ್ಕರ್‌ ಫೋಟೋ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಲೆಕ್ಸ್ ಕಿತ್ತೆಸೆದ ಕಾರ್ಯಕರ್ತರು

ಭಾರತ್ ಜೋಡೋ ಯಾತ್ರೆಯಲ್ಲಿ ವಿ.ಡಿ. ಸಾವರ್ಕರ್ ಕಾಣಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಜನ ಫೋಟೋ ಕ್ಲಿಕ್ಕಿಸಿಕೊಳ್ಳಲು ಆರಂಭಿಸುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಫ್ಲೆಕ್ಸ್ ಅನ್ನು ಅಲ್ಲಿಂದ ತೆರವುಗೊಳಿಸಿದ್ದಾರೆ.

ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್‌ನಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಫ್ಲೆಕ್ಸ್ ಪ್ರಕಟಿಸಿರುವ ಎನ್.ಎ. ಹ್ಯಾರಿಸ್ ಅವರ ಫೋಟೋ ಸಹಿತ ಹೆಸರೂ ಇದೆ.

ಫ್ಲೆಕ್ಸ್ ಹಾಕಲು ಗುತ್ತಿಗೆ ಪಡೆದವರು ಎಲ್ಲ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳನ್ನು ಯಾತ್ರೆಯುದ್ದಕ್ಕೂ ಹಾಕಿದ್ದಾರೆ. ಅದೇ ರೀತಿ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಅಂತರ್ಜಾಲದಲ್ಲಿ ಹುಡುಕಿ ಫ್ಲೆಕ್ಸ್ ಮುದ್ರಿಸಿದ್ದಾರೆ. ಹಾಗಾಗಿ ಈ ಯಡವಟ್ಟು ಸಂಭವಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನು ಕೆಲವರು ಇದು ಕಾಂಗ್ರೆಸ್ ಪಕ್ಷದ ವಿರೋಧಿಗಳ ಕೈವಾಡವೂ ಇರಬಹುದು ಎಂದು ಶಂಕಿಸಿದ್ದಾರೆ.

ಕೇರಳದಲ್ಲೂ ಕಾಣಿಸಿಕೊಂಡಿತ್ತು ಸಾವರ್ಕರ್‌ ಚಿತ್ರ

ಕೇರಳದ ನೆಡುಂಬಸ್ಸೆರಿ ಬಳಿಯ ಅಥಣಿಯಲ್ಲಿ ಯಾತ್ರೆಯ ಪ್ರಚಾರಕ್ಕಾಗಿ ಹಾಕಲಾಗಿದ್ದ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿಯ ಚಿತ್ರ ಸೆಪ್ಟೆಂಬರ್‌ 21 ರಂದು ಕಾಣಿಸಿಕೊಂಡಿತ್ತು. ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಇದರ ನಂತರ ಎಚ್ಚೆತ್ತ ಪಕ್ಷದ ಕಾರ್ಯಕರ್ತರು ಆ ಚಿತ್ರಕ್ಕೆ ಮಹಾತ್ಮ ಗಾಂಧಿಯ ಚಿತ್ರವನ್ನು ಅಂಟಿಸಿ ಅದನ್ನು ಮರೆಮಾಚಿದ್ದರು.

ಈ ನಡುವೆ ಪಕ್ಷವೂ ಸ್ಥಳೀಯ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯನ್ನು ಘಟನೆಗೆ ಹೊಣೆಯನ್ನಾಗಿಸಿ ಅಮಾನತು ಮಾಡಿತ್ತು. “ಪಕ್ಷದ ಸ್ಥಳೀಯ ಕಾರ್ಯಕರ್ತರೊಬ್ಬರು ಈ ಫ್ಲೆಕ್ಸ್‌ ಕಟ್ಟಿದ್ದಾರೆ. ಅವರು ಸ್ವಾತಂತ್ಯ್ರ ಹೋರಾಟಗಾರರ ಚಿತ್ರಗಳನ್ನು ಮುದ್ರಿಸಿ ಕೊಡುವಂತೆ ಫ್ಲೆಕ್ಸ್‌‌ ಮುದ್ರಣ ಮಾರಾಟಗಾರರನ್ನು ಕೇಳಿದ್ದರು. ಅದನ್ನು ಮುದ್ರಿಸುವಾಗ ಈ ಚಿತ್ರವೂ ಪ್ರಮಾದದಿಂದಾಗಿ ಮುದ್ರಣಗೊಂಡಿದೆ. ಸಮಸ್ಯೆ ಗಮನಕ್ಕೆ ಬಂದ ಕೂಡಲೇ ತೆಗೆಸಲು ಸೂಚನೆ ನೀಡಲಾಗಿದೆ” ಎಂದು ಕಾಂಗ್ರೆಸ್‌ ಮುಖಂಡರು ಸಮಜಾಯಿಷಿ ನೀಡಿದ್ದರು.

ಇದನ್ನೂ ಓದಿ: ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...