Homeಕರ್ನಾಟಕಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಾಂಧಿ ಕೊಲೆ ಆರೋಪಿ ಸಾವರ್ಕರ್‌‌!

ಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಾಂಧಿ ಕೊಲೆ ಆರೋಪಿ ಸಾವರ್ಕರ್‌‌!

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ರಾಜ್ಯದಲ್ಲಿ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ರಾಜ್ಯ ಕಾಂಗ್ರೆಸ್ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿ ವಿ.ಡಿ.ಸಾವರ್ಕರ್‌ ಫೋಟೋ ಇರುವ ಫ್ಲೆಕ್ಸ್ ಅಳವಡಿಸಿ ವಿವಾದಕ್ಕೆ ಸಿಲುಕಿದೆ.

ನಾಗಮಂಗಲ ತಾಲೂಕಿನ ಚೀಣ್ಯ ಗ್ರಾಮದಲ್ಲಿ ವಿ.ಡಿ. ಸಾವರ್ಕರ್ ಇರುವ ಫ್ಲೆಕ್ಸ್ ಒಂದನ್ನು ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಫೋಟೋ ಸಹಿತ ಹಾಕಲಾಗಿದೆ. ಕಾಂಗ್ರೆಸ್‌ ಪಕ್ಷದ ಸೈದ್ಧಾಂತಿಕ ವಿರೋಧಿಯಾದ ಸಾವರ್ಕರ್‌ ಫೋಟೋ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಲೆಕ್ಸ್ ಕಿತ್ತೆಸೆದ ಕಾರ್ಯಕರ್ತರು

ಭಾರತ್ ಜೋಡೋ ಯಾತ್ರೆಯಲ್ಲಿ ವಿ.ಡಿ. ಸಾವರ್ಕರ್ ಕಾಣಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಜನ ಫೋಟೋ ಕ್ಲಿಕ್ಕಿಸಿಕೊಳ್ಳಲು ಆರಂಭಿಸುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಫ್ಲೆಕ್ಸ್ ಅನ್ನು ಅಲ್ಲಿಂದ ತೆರವುಗೊಳಿಸಿದ್ದಾರೆ.

ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್‌ನಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಫ್ಲೆಕ್ಸ್ ಪ್ರಕಟಿಸಿರುವ ಎನ್.ಎ. ಹ್ಯಾರಿಸ್ ಅವರ ಫೋಟೋ ಸಹಿತ ಹೆಸರೂ ಇದೆ.

ಫ್ಲೆಕ್ಸ್ ಹಾಕಲು ಗುತ್ತಿಗೆ ಪಡೆದವರು ಎಲ್ಲ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳನ್ನು ಯಾತ್ರೆಯುದ್ದಕ್ಕೂ ಹಾಕಿದ್ದಾರೆ. ಅದೇ ರೀತಿ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಅಂತರ್ಜಾಲದಲ್ಲಿ ಹುಡುಕಿ ಫ್ಲೆಕ್ಸ್ ಮುದ್ರಿಸಿದ್ದಾರೆ. ಹಾಗಾಗಿ ಈ ಯಡವಟ್ಟು ಸಂಭವಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನು ಕೆಲವರು ಇದು ಕಾಂಗ್ರೆಸ್ ಪಕ್ಷದ ವಿರೋಧಿಗಳ ಕೈವಾಡವೂ ಇರಬಹುದು ಎಂದು ಶಂಕಿಸಿದ್ದಾರೆ.

ಕೇರಳದಲ್ಲೂ ಕಾಣಿಸಿಕೊಂಡಿತ್ತು ಸಾವರ್ಕರ್‌ ಚಿತ್ರ

ಕೇರಳದ ನೆಡುಂಬಸ್ಸೆರಿ ಬಳಿಯ ಅಥಣಿಯಲ್ಲಿ ಯಾತ್ರೆಯ ಪ್ರಚಾರಕ್ಕಾಗಿ ಹಾಕಲಾಗಿದ್ದ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿಯ ಚಿತ್ರ ಸೆಪ್ಟೆಂಬರ್‌ 21 ರಂದು ಕಾಣಿಸಿಕೊಂಡಿತ್ತು. ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಇದರ ನಂತರ ಎಚ್ಚೆತ್ತ ಪಕ್ಷದ ಕಾರ್ಯಕರ್ತರು ಆ ಚಿತ್ರಕ್ಕೆ ಮಹಾತ್ಮ ಗಾಂಧಿಯ ಚಿತ್ರವನ್ನು ಅಂಟಿಸಿ ಅದನ್ನು ಮರೆಮಾಚಿದ್ದರು.

ಈ ನಡುವೆ ಪಕ್ಷವೂ ಸ್ಥಳೀಯ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯನ್ನು ಘಟನೆಗೆ ಹೊಣೆಯನ್ನಾಗಿಸಿ ಅಮಾನತು ಮಾಡಿತ್ತು. “ಪಕ್ಷದ ಸ್ಥಳೀಯ ಕಾರ್ಯಕರ್ತರೊಬ್ಬರು ಈ ಫ್ಲೆಕ್ಸ್‌ ಕಟ್ಟಿದ್ದಾರೆ. ಅವರು ಸ್ವಾತಂತ್ಯ್ರ ಹೋರಾಟಗಾರರ ಚಿತ್ರಗಳನ್ನು ಮುದ್ರಿಸಿ ಕೊಡುವಂತೆ ಫ್ಲೆಕ್ಸ್‌‌ ಮುದ್ರಣ ಮಾರಾಟಗಾರರನ್ನು ಕೇಳಿದ್ದರು. ಅದನ್ನು ಮುದ್ರಿಸುವಾಗ ಈ ಚಿತ್ರವೂ ಪ್ರಮಾದದಿಂದಾಗಿ ಮುದ್ರಣಗೊಂಡಿದೆ. ಸಮಸ್ಯೆ ಗಮನಕ್ಕೆ ಬಂದ ಕೂಡಲೇ ತೆಗೆಸಲು ಸೂಚನೆ ನೀಡಲಾಗಿದೆ” ಎಂದು ಕಾಂಗ್ರೆಸ್‌ ಮುಖಂಡರು ಸಮಜಾಯಿಷಿ ನೀಡಿದ್ದರು.

ಇದನ್ನೂ ಓದಿ: ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...