Homeಕರ್ನಾಟಕಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಾಂಧಿ ಕೊಲೆ ಆರೋಪಿ ಸಾವರ್ಕರ್‌‌!

ಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಾಂಧಿ ಕೊಲೆ ಆರೋಪಿ ಸಾವರ್ಕರ್‌‌!

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ರಾಜ್ಯದಲ್ಲಿ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ರಾಜ್ಯ ಕಾಂಗ್ರೆಸ್ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿ ವಿ.ಡಿ.ಸಾವರ್ಕರ್‌ ಫೋಟೋ ಇರುವ ಫ್ಲೆಕ್ಸ್ ಅಳವಡಿಸಿ ವಿವಾದಕ್ಕೆ ಸಿಲುಕಿದೆ.

ನಾಗಮಂಗಲ ತಾಲೂಕಿನ ಚೀಣ್ಯ ಗ್ರಾಮದಲ್ಲಿ ವಿ.ಡಿ. ಸಾವರ್ಕರ್ ಇರುವ ಫ್ಲೆಕ್ಸ್ ಒಂದನ್ನು ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಫೋಟೋ ಸಹಿತ ಹಾಕಲಾಗಿದೆ. ಕಾಂಗ್ರೆಸ್‌ ಪಕ್ಷದ ಸೈದ್ಧಾಂತಿಕ ವಿರೋಧಿಯಾದ ಸಾವರ್ಕರ್‌ ಫೋಟೋ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಲೆಕ್ಸ್ ಕಿತ್ತೆಸೆದ ಕಾರ್ಯಕರ್ತರು

ಭಾರತ್ ಜೋಡೋ ಯಾತ್ರೆಯಲ್ಲಿ ವಿ.ಡಿ. ಸಾವರ್ಕರ್ ಕಾಣಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಜನ ಫೋಟೋ ಕ್ಲಿಕ್ಕಿಸಿಕೊಳ್ಳಲು ಆರಂಭಿಸುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಫ್ಲೆಕ್ಸ್ ಅನ್ನು ಅಲ್ಲಿಂದ ತೆರವುಗೊಳಿಸಿದ್ದಾರೆ.

ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್‌ನಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಫ್ಲೆಕ್ಸ್ ಪ್ರಕಟಿಸಿರುವ ಎನ್.ಎ. ಹ್ಯಾರಿಸ್ ಅವರ ಫೋಟೋ ಸಹಿತ ಹೆಸರೂ ಇದೆ.

ಫ್ಲೆಕ್ಸ್ ಹಾಕಲು ಗುತ್ತಿಗೆ ಪಡೆದವರು ಎಲ್ಲ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳನ್ನು ಯಾತ್ರೆಯುದ್ದಕ್ಕೂ ಹಾಕಿದ್ದಾರೆ. ಅದೇ ರೀತಿ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಅಂತರ್ಜಾಲದಲ್ಲಿ ಹುಡುಕಿ ಫ್ಲೆಕ್ಸ್ ಮುದ್ರಿಸಿದ್ದಾರೆ. ಹಾಗಾಗಿ ಈ ಯಡವಟ್ಟು ಸಂಭವಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನು ಕೆಲವರು ಇದು ಕಾಂಗ್ರೆಸ್ ಪಕ್ಷದ ವಿರೋಧಿಗಳ ಕೈವಾಡವೂ ಇರಬಹುದು ಎಂದು ಶಂಕಿಸಿದ್ದಾರೆ.

ಕೇರಳದಲ್ಲೂ ಕಾಣಿಸಿಕೊಂಡಿತ್ತು ಸಾವರ್ಕರ್‌ ಚಿತ್ರ

ಕೇರಳದ ನೆಡುಂಬಸ್ಸೆರಿ ಬಳಿಯ ಅಥಣಿಯಲ್ಲಿ ಯಾತ್ರೆಯ ಪ್ರಚಾರಕ್ಕಾಗಿ ಹಾಕಲಾಗಿದ್ದ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿಯ ಚಿತ್ರ ಸೆಪ್ಟೆಂಬರ್‌ 21 ರಂದು ಕಾಣಿಸಿಕೊಂಡಿತ್ತು. ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಇದರ ನಂತರ ಎಚ್ಚೆತ್ತ ಪಕ್ಷದ ಕಾರ್ಯಕರ್ತರು ಆ ಚಿತ್ರಕ್ಕೆ ಮಹಾತ್ಮ ಗಾಂಧಿಯ ಚಿತ್ರವನ್ನು ಅಂಟಿಸಿ ಅದನ್ನು ಮರೆಮಾಚಿದ್ದರು.

ಈ ನಡುವೆ ಪಕ್ಷವೂ ಸ್ಥಳೀಯ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯನ್ನು ಘಟನೆಗೆ ಹೊಣೆಯನ್ನಾಗಿಸಿ ಅಮಾನತು ಮಾಡಿತ್ತು. “ಪಕ್ಷದ ಸ್ಥಳೀಯ ಕಾರ್ಯಕರ್ತರೊಬ್ಬರು ಈ ಫ್ಲೆಕ್ಸ್‌ ಕಟ್ಟಿದ್ದಾರೆ. ಅವರು ಸ್ವಾತಂತ್ಯ್ರ ಹೋರಾಟಗಾರರ ಚಿತ್ರಗಳನ್ನು ಮುದ್ರಿಸಿ ಕೊಡುವಂತೆ ಫ್ಲೆಕ್ಸ್‌‌ ಮುದ್ರಣ ಮಾರಾಟಗಾರರನ್ನು ಕೇಳಿದ್ದರು. ಅದನ್ನು ಮುದ್ರಿಸುವಾಗ ಈ ಚಿತ್ರವೂ ಪ್ರಮಾದದಿಂದಾಗಿ ಮುದ್ರಣಗೊಂಡಿದೆ. ಸಮಸ್ಯೆ ಗಮನಕ್ಕೆ ಬಂದ ಕೂಡಲೇ ತೆಗೆಸಲು ಸೂಚನೆ ನೀಡಲಾಗಿದೆ” ಎಂದು ಕಾಂಗ್ರೆಸ್‌ ಮುಖಂಡರು ಸಮಜಾಯಿಷಿ ನೀಡಿದ್ದರು.

ಇದನ್ನೂ ಓದಿ: ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...