Homeಕರ್ನಾಟಕಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಾಂಧಿ ಕೊಲೆ ಆರೋಪಿ ಸಾವರ್ಕರ್‌‌!

ಭಾರತ ಐಕ್ಯತಾ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಾಂಧಿ ಕೊಲೆ ಆರೋಪಿ ಸಾವರ್ಕರ್‌‌!

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ರಾಜ್ಯದಲ್ಲಿ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ರಾಜ್ಯ ಕಾಂಗ್ರೆಸ್ ಯಡವಟ್ಟೊಂದನ್ನು ಮಾಡಿಕೊಂಡಿದ್ದು, ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿ ವಿ.ಡಿ.ಸಾವರ್ಕರ್‌ ಫೋಟೋ ಇರುವ ಫ್ಲೆಕ್ಸ್ ಅಳವಡಿಸಿ ವಿವಾದಕ್ಕೆ ಸಿಲುಕಿದೆ.

ನಾಗಮಂಗಲ ತಾಲೂಕಿನ ಚೀಣ್ಯ ಗ್ರಾಮದಲ್ಲಿ ವಿ.ಡಿ. ಸಾವರ್ಕರ್ ಇರುವ ಫ್ಲೆಕ್ಸ್ ಒಂದನ್ನು ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಫೋಟೋ ಸಹಿತ ಹಾಕಲಾಗಿದೆ. ಕಾಂಗ್ರೆಸ್‌ ಪಕ್ಷದ ಸೈದ್ಧಾಂತಿಕ ವಿರೋಧಿಯಾದ ಸಾವರ್ಕರ್‌ ಫೋಟೋ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಲೆಕ್ಸ್ ಕಿತ್ತೆಸೆದ ಕಾರ್ಯಕರ್ತರು

ಭಾರತ್ ಜೋಡೋ ಯಾತ್ರೆಯಲ್ಲಿ ವಿ.ಡಿ. ಸಾವರ್ಕರ್ ಕಾಣಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಜನ ಫೋಟೋ ಕ್ಲಿಕ್ಕಿಸಿಕೊಳ್ಳಲು ಆರಂಭಿಸುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಫ್ಲೆಕ್ಸ್ ಅನ್ನು ಅಲ್ಲಿಂದ ತೆರವುಗೊಳಿಸಿದ್ದಾರೆ.

ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್‌ನಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಫ್ಲೆಕ್ಸ್ ಪ್ರಕಟಿಸಿರುವ ಎನ್.ಎ. ಹ್ಯಾರಿಸ್ ಅವರ ಫೋಟೋ ಸಹಿತ ಹೆಸರೂ ಇದೆ.

ಫ್ಲೆಕ್ಸ್ ಹಾಕಲು ಗುತ್ತಿಗೆ ಪಡೆದವರು ಎಲ್ಲ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳನ್ನು ಯಾತ್ರೆಯುದ್ದಕ್ಕೂ ಹಾಕಿದ್ದಾರೆ. ಅದೇ ರೀತಿ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಅಂತರ್ಜಾಲದಲ್ಲಿ ಹುಡುಕಿ ಫ್ಲೆಕ್ಸ್ ಮುದ್ರಿಸಿದ್ದಾರೆ. ಹಾಗಾಗಿ ಈ ಯಡವಟ್ಟು ಸಂಭವಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನು ಕೆಲವರು ಇದು ಕಾಂಗ್ರೆಸ್ ಪಕ್ಷದ ವಿರೋಧಿಗಳ ಕೈವಾಡವೂ ಇರಬಹುದು ಎಂದು ಶಂಕಿಸಿದ್ದಾರೆ.

ಕೇರಳದಲ್ಲೂ ಕಾಣಿಸಿಕೊಂಡಿತ್ತು ಸಾವರ್ಕರ್‌ ಚಿತ್ರ

ಕೇರಳದ ನೆಡುಂಬಸ್ಸೆರಿ ಬಳಿಯ ಅಥಣಿಯಲ್ಲಿ ಯಾತ್ರೆಯ ಪ್ರಚಾರಕ್ಕಾಗಿ ಹಾಕಲಾಗಿದ್ದ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿಯ ಚಿತ್ರ ಸೆಪ್ಟೆಂಬರ್‌ 21 ರಂದು ಕಾಣಿಸಿಕೊಂಡಿತ್ತು. ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಇದರ ನಂತರ ಎಚ್ಚೆತ್ತ ಪಕ್ಷದ ಕಾರ್ಯಕರ್ತರು ಆ ಚಿತ್ರಕ್ಕೆ ಮಹಾತ್ಮ ಗಾಂಧಿಯ ಚಿತ್ರವನ್ನು ಅಂಟಿಸಿ ಅದನ್ನು ಮರೆಮಾಚಿದ್ದರು.

ಈ ನಡುವೆ ಪಕ್ಷವೂ ಸ್ಥಳೀಯ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯನ್ನು ಘಟನೆಗೆ ಹೊಣೆಯನ್ನಾಗಿಸಿ ಅಮಾನತು ಮಾಡಿತ್ತು. “ಪಕ್ಷದ ಸ್ಥಳೀಯ ಕಾರ್ಯಕರ್ತರೊಬ್ಬರು ಈ ಫ್ಲೆಕ್ಸ್‌ ಕಟ್ಟಿದ್ದಾರೆ. ಅವರು ಸ್ವಾತಂತ್ಯ್ರ ಹೋರಾಟಗಾರರ ಚಿತ್ರಗಳನ್ನು ಮುದ್ರಿಸಿ ಕೊಡುವಂತೆ ಫ್ಲೆಕ್ಸ್‌‌ ಮುದ್ರಣ ಮಾರಾಟಗಾರರನ್ನು ಕೇಳಿದ್ದರು. ಅದನ್ನು ಮುದ್ರಿಸುವಾಗ ಈ ಚಿತ್ರವೂ ಪ್ರಮಾದದಿಂದಾಗಿ ಮುದ್ರಣಗೊಂಡಿದೆ. ಸಮಸ್ಯೆ ಗಮನಕ್ಕೆ ಬಂದ ಕೂಡಲೇ ತೆಗೆಸಲು ಸೂಚನೆ ನೀಡಲಾಗಿದೆ” ಎಂದು ಕಾಂಗ್ರೆಸ್‌ ಮುಖಂಡರು ಸಮಜಾಯಿಷಿ ನೀಡಿದ್ದರು.

ಇದನ್ನೂ ಓದಿ: ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...