Homeಕರ್ನಾಟಕಜನವಾದಿ ಮಹಿಳಾ ಸಂಘಟನೆಯಿಂದ "ಪ್ರಜಾಪ್ರಭುತ್ವ ಉಳಿಸಿ" ಅಭಿಯಾನ: ಸ್ಪೀಕರ್ ಗೆ ಪತ್ರಚಳವಳಿ

ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನ: ಸ್ಪೀಕರ್ ಗೆ ಪತ್ರಚಳವಳಿ

- Advertisement -
- Advertisement -

ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನದ ಭಾಗವಾಗಿ ಕರ್ನಾಟಕದ ಸ್ಪೀಕರ್ ಅವರಿಗೆ ಜನರ ಆಗ್ರಹ ಕಳುಹಿಸಲು ಕರೆ ನೀಡಲಾಗಿದೆ.  ವೈಯಕ್ತಿಕವಾಗಿ, ಸಂಘ ಸಂಸ್ಥೆಗಳ ಹೆಸರಿನಲ್ಲಿಯೂ ಈ ಮೇಲ್ ಮೂಲಕ ಕಳಿಸಲು ಕೋರಿದ್ದು, ಮೌನ ಮುರಿದು ಎಲ್ಲ ಹಂತದಲ್ಲೂ ಮಾತಾಡೋಣ. ಹೆಜ್ಹೆಗಳು ಹೆಚ್ಚಲಿ ಎಂದು ಸಂಘಟನೆಯ ಮುಂದಾಳುಗಳಾದ ಕೆ.ನೀಲಾರವರು ತಿಳಿಸಿದ್ದಾರೆ.

ಸ್ಪೀಕರ್ ರವರಿಗೆ ಕಳಿಸಲು ಮಾದರಿ ಪತ್ರವೊಂದನ್ನು ಸಿದ್ದ ಮಾಡಲಾಗಿದ್ದು ಅದರ ಪೂರ್ಣ ಪಾಠ ಇಲ್ಲಿದೆ

ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ವಿಧಾನ ಸೌಧ
ಬೆಂಗಳೂರು

ಮಾನ್ಯರೆ

ವಿಶ್ವದೆದುರು ಕರ್ನಾಟಕ ನಾಚಿ ತಲೆ ತಗ್ಗಿಸುವ ಕೆಲಸ ಕರ್ನಾಟಕದಲ್ಲಿ ನಡೆಯುತ್ತಿದೆ. ಶಾಸಕರು ಮೂಕಪ್ರಾಣಿಗಳಂತೆ ಬಿಕರಿಗೊಳಗಾಗುತ್ತಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ.

ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವ, ರಾಜ್ಯದಲ್ಲಿ ವಿರೋಧ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರುಗಳು ರಾಜಾರೋಷವಾಗಿ ‘ಅತೃಪ್ತ’ ಶಾಸಕರ ಜೊತೆ ನಿಂತಿರುವುದು, ಪಕ್ಷದ ಪ್ರಮುಖರ ವಿಶೇಷ ವಿಮಾನಗಳಲ್ಲಿ ಶಾಸಕರನ್ನು ಕರೆದೊಯ್ಯುತ್ತಿರುವುದು ಮಾಧ್ಯಮಗಳ ಮೂಲಕ ಜಗಜ್ಜಾಹಿರವಾಗಿದೆ.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕುಡಿಯುವ ನೀರಿಗೂ ತತ್ವಾರವಾಗಿದೆ. ಮಳೆ ಕೈಕೊಟ್ಟು ರೈತರು ಕೂಲಿಕಾರರು ಕಂಗಾಲಾಗಿ ಊರು ಕೇರಿ ಬಿಟ್ಟು ನಗರಗಳತ್ತ ತುತ್ತು ಕೂಳಿಗಾಗಿ ಗುಳೆ ಹೊರಟಿದ್ದಾರೆ. ಮಹಿಳೆಯರು ಮಕ್ಕಳ ಮೇಲೆ, ಹಿಂಸೆ ಅತ್ಯಾಚಾರಗಳು ಹೆಚ್ಚಿವೆ.
ದಲಿತರ ಮೇಲೆ,ಅಲ್ಪಸಂಖ್ಯಾತರ ಮೇಲೆ ಜಾತಿ ಕೋಮಿನ ನೆಲೆಯ ದೌರ್ಜನ್ಯಗಳು ವರದಿಯಾಗುತ್ತಲೇ ಇವೆ.

ಈ ಯಾವ ವಿಷಯಗಳ ಕುರಿತೂ ತಲೆ ಕೆಡಿಸಿಕೊಳ್ಳದೆ ಹೊಣೆಗೇಡಿತನದಿಂದ ವರ್ತಿಸುತ್ತಿರುವ ರೆಬೆಲ್(!?) ಶಾಸಕರು ಮತ್ತು ಭಾರತೀಯ ಜನತಾ ಪಕ್ಷದ ನಡವಳಿಕೆಗಳು ಪ್ರಜಾಪ್ರಭುತ್ವಕ್ಕೆ ಮತ್ತು ಮತದಾರರಿಗೆ ಮಾಡುತ್ತಿರುವ ಅವಮಾನವಾಗಿದೆ. ಈಗ ರಾಜಿನಾಮೆ ಕೊಟ್ಟಿರುವ ಯಾವ ಶಾಸಕರೂ ಜನಹಿತ ಅಥವಾ ತಮ್ಮ ಕ್ಷೇತ್ರದ ಮತದಾರರ  ಹಿತದ ದೃಷ್ಟಿಯಿಂದ ರಾಜಿನಾಮೆ ಕೊಟ್ಟಿರುವುದಿಲ್ಲ. ಅವರಲ್ಲಿ ಹಣ ಮತ್ತು ಅಧಿಕಾರದ ಲಾಲಸೆ ಇರುವುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ.

ಆದ್ದರಿಂದ ರಾಜ್ಯದ ಮತದಾರರಾದ ನಾವು ತಮ್ಮಲ್ಲಿ ಈ ಕೆಳಗಿನಂತೆ ಅರಿಕೆ ಮಾಡಿಕೊಳ್ಳುತ್ತಿದ್ದೇವೆ. ಯಾವುದೇ ಕಾರಣಕ್ಕೂ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಬಾರದು. ಮತ್ತು ಅವರು ಜನಹಿತ ಕಾಪಾಡಲು ಬದ್ಧರಾಗಿಲ್ಲದ ಕಾರಣ ಅವರನ್ನು ಅನರ್ಹಗೊಳಿಸಬೇಕೆಂದೂ ವಿನಂತಿಸುತ್ತೇವೆ.

ಸಾರ್ವಜನಿಕ ಹಿತದೃಷ್ಟಿಯಿಂದ ಇನ್ನು ಮುಂದೆ ಈ ರೀತಿಯ ಕುದುರೆ ವ್ಯಾಪಾರಕ್ಕೆ ಶಾಸಕರು ಒಳಗಾಗದಂಥಹ ಒಂದು ಕಟ್ಟುನಿಟ್ಟಾದ ಕಾನೂನು ಬರುವಂತೆ ತಾವು ಕ್ರಮ ಕೈಗೊಳ್ಳಬೇಕೆಂದು ವಿನಂತಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...