Homeಕರ್ನಾಟಕಜನವಾದಿ ಮಹಿಳಾ ಸಂಘಟನೆಯಿಂದ "ಪ್ರಜಾಪ್ರಭುತ್ವ ಉಳಿಸಿ" ಅಭಿಯಾನ: ಸ್ಪೀಕರ್ ಗೆ ಪತ್ರಚಳವಳಿ

ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನ: ಸ್ಪೀಕರ್ ಗೆ ಪತ್ರಚಳವಳಿ

- Advertisement -
- Advertisement -

ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನದ ಭಾಗವಾಗಿ ಕರ್ನಾಟಕದ ಸ್ಪೀಕರ್ ಅವರಿಗೆ ಜನರ ಆಗ್ರಹ ಕಳುಹಿಸಲು ಕರೆ ನೀಡಲಾಗಿದೆ.  ವೈಯಕ್ತಿಕವಾಗಿ, ಸಂಘ ಸಂಸ್ಥೆಗಳ ಹೆಸರಿನಲ್ಲಿಯೂ ಈ ಮೇಲ್ ಮೂಲಕ ಕಳಿಸಲು ಕೋರಿದ್ದು, ಮೌನ ಮುರಿದು ಎಲ್ಲ ಹಂತದಲ್ಲೂ ಮಾತಾಡೋಣ. ಹೆಜ್ಹೆಗಳು ಹೆಚ್ಚಲಿ ಎಂದು ಸಂಘಟನೆಯ ಮುಂದಾಳುಗಳಾದ ಕೆ.ನೀಲಾರವರು ತಿಳಿಸಿದ್ದಾರೆ.

ಸ್ಪೀಕರ್ ರವರಿಗೆ ಕಳಿಸಲು ಮಾದರಿ ಪತ್ರವೊಂದನ್ನು ಸಿದ್ದ ಮಾಡಲಾಗಿದ್ದು ಅದರ ಪೂರ್ಣ ಪಾಠ ಇಲ್ಲಿದೆ

ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ವಿಧಾನ ಸೌಧ
ಬೆಂಗಳೂರು

ಮಾನ್ಯರೆ

ವಿಶ್ವದೆದುರು ಕರ್ನಾಟಕ ನಾಚಿ ತಲೆ ತಗ್ಗಿಸುವ ಕೆಲಸ ಕರ್ನಾಟಕದಲ್ಲಿ ನಡೆಯುತ್ತಿದೆ. ಶಾಸಕರು ಮೂಕಪ್ರಾಣಿಗಳಂತೆ ಬಿಕರಿಗೊಳಗಾಗುತ್ತಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ.

ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವ, ರಾಜ್ಯದಲ್ಲಿ ವಿರೋಧ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರುಗಳು ರಾಜಾರೋಷವಾಗಿ ‘ಅತೃಪ್ತ’ ಶಾಸಕರ ಜೊತೆ ನಿಂತಿರುವುದು, ಪಕ್ಷದ ಪ್ರಮುಖರ ವಿಶೇಷ ವಿಮಾನಗಳಲ್ಲಿ ಶಾಸಕರನ್ನು ಕರೆದೊಯ್ಯುತ್ತಿರುವುದು ಮಾಧ್ಯಮಗಳ ಮೂಲಕ ಜಗಜ್ಜಾಹಿರವಾಗಿದೆ.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕುಡಿಯುವ ನೀರಿಗೂ ತತ್ವಾರವಾಗಿದೆ. ಮಳೆ ಕೈಕೊಟ್ಟು ರೈತರು ಕೂಲಿಕಾರರು ಕಂಗಾಲಾಗಿ ಊರು ಕೇರಿ ಬಿಟ್ಟು ನಗರಗಳತ್ತ ತುತ್ತು ಕೂಳಿಗಾಗಿ ಗುಳೆ ಹೊರಟಿದ್ದಾರೆ. ಮಹಿಳೆಯರು ಮಕ್ಕಳ ಮೇಲೆ, ಹಿಂಸೆ ಅತ್ಯಾಚಾರಗಳು ಹೆಚ್ಚಿವೆ.
ದಲಿತರ ಮೇಲೆ,ಅಲ್ಪಸಂಖ್ಯಾತರ ಮೇಲೆ ಜಾತಿ ಕೋಮಿನ ನೆಲೆಯ ದೌರ್ಜನ್ಯಗಳು ವರದಿಯಾಗುತ್ತಲೇ ಇವೆ.

ಈ ಯಾವ ವಿಷಯಗಳ ಕುರಿತೂ ತಲೆ ಕೆಡಿಸಿಕೊಳ್ಳದೆ ಹೊಣೆಗೇಡಿತನದಿಂದ ವರ್ತಿಸುತ್ತಿರುವ ರೆಬೆಲ್(!?) ಶಾಸಕರು ಮತ್ತು ಭಾರತೀಯ ಜನತಾ ಪಕ್ಷದ ನಡವಳಿಕೆಗಳು ಪ್ರಜಾಪ್ರಭುತ್ವಕ್ಕೆ ಮತ್ತು ಮತದಾರರಿಗೆ ಮಾಡುತ್ತಿರುವ ಅವಮಾನವಾಗಿದೆ. ಈಗ ರಾಜಿನಾಮೆ ಕೊಟ್ಟಿರುವ ಯಾವ ಶಾಸಕರೂ ಜನಹಿತ ಅಥವಾ ತಮ್ಮ ಕ್ಷೇತ್ರದ ಮತದಾರರ  ಹಿತದ ದೃಷ್ಟಿಯಿಂದ ರಾಜಿನಾಮೆ ಕೊಟ್ಟಿರುವುದಿಲ್ಲ. ಅವರಲ್ಲಿ ಹಣ ಮತ್ತು ಅಧಿಕಾರದ ಲಾಲಸೆ ಇರುವುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ.

ಆದ್ದರಿಂದ ರಾಜ್ಯದ ಮತದಾರರಾದ ನಾವು ತಮ್ಮಲ್ಲಿ ಈ ಕೆಳಗಿನಂತೆ ಅರಿಕೆ ಮಾಡಿಕೊಳ್ಳುತ್ತಿದ್ದೇವೆ. ಯಾವುದೇ ಕಾರಣಕ್ಕೂ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಬಾರದು. ಮತ್ತು ಅವರು ಜನಹಿತ ಕಾಪಾಡಲು ಬದ್ಧರಾಗಿಲ್ಲದ ಕಾರಣ ಅವರನ್ನು ಅನರ್ಹಗೊಳಿಸಬೇಕೆಂದೂ ವಿನಂತಿಸುತ್ತೇವೆ.

ಸಾರ್ವಜನಿಕ ಹಿತದೃಷ್ಟಿಯಿಂದ ಇನ್ನು ಮುಂದೆ ಈ ರೀತಿಯ ಕುದುರೆ ವ್ಯಾಪಾರಕ್ಕೆ ಶಾಸಕರು ಒಳಗಾಗದಂಥಹ ಒಂದು ಕಟ್ಟುನಿಟ್ಟಾದ ಕಾನೂನು ಬರುವಂತೆ ತಾವು ಕ್ರಮ ಕೈಗೊಳ್ಳಬೇಕೆಂದು ವಿನಂತಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...