Homeಕರ್ನಾಟಕಜನವಾದಿ ಮಹಿಳಾ ಸಂಘಟನೆಯಿಂದ "ಪ್ರಜಾಪ್ರಭುತ್ವ ಉಳಿಸಿ" ಅಭಿಯಾನ: ಸ್ಪೀಕರ್ ಗೆ ಪತ್ರಚಳವಳಿ

ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನ: ಸ್ಪೀಕರ್ ಗೆ ಪತ್ರಚಳವಳಿ

- Advertisement -
- Advertisement -

ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನದ ಭಾಗವಾಗಿ ಕರ್ನಾಟಕದ ಸ್ಪೀಕರ್ ಅವರಿಗೆ ಜನರ ಆಗ್ರಹ ಕಳುಹಿಸಲು ಕರೆ ನೀಡಲಾಗಿದೆ.  ವೈಯಕ್ತಿಕವಾಗಿ, ಸಂಘ ಸಂಸ್ಥೆಗಳ ಹೆಸರಿನಲ್ಲಿಯೂ ಈ ಮೇಲ್ ಮೂಲಕ ಕಳಿಸಲು ಕೋರಿದ್ದು, ಮೌನ ಮುರಿದು ಎಲ್ಲ ಹಂತದಲ್ಲೂ ಮಾತಾಡೋಣ. ಹೆಜ್ಹೆಗಳು ಹೆಚ್ಚಲಿ ಎಂದು ಸಂಘಟನೆಯ ಮುಂದಾಳುಗಳಾದ ಕೆ.ನೀಲಾರವರು ತಿಳಿಸಿದ್ದಾರೆ.

ಸ್ಪೀಕರ್ ರವರಿಗೆ ಕಳಿಸಲು ಮಾದರಿ ಪತ್ರವೊಂದನ್ನು ಸಿದ್ದ ಮಾಡಲಾಗಿದ್ದು ಅದರ ಪೂರ್ಣ ಪಾಠ ಇಲ್ಲಿದೆ

ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ವಿಧಾನ ಸೌಧ
ಬೆಂಗಳೂರು

ಮಾನ್ಯರೆ

ವಿಶ್ವದೆದುರು ಕರ್ನಾಟಕ ನಾಚಿ ತಲೆ ತಗ್ಗಿಸುವ ಕೆಲಸ ಕರ್ನಾಟಕದಲ್ಲಿ ನಡೆಯುತ್ತಿದೆ. ಶಾಸಕರು ಮೂಕಪ್ರಾಣಿಗಳಂತೆ ಬಿಕರಿಗೊಳಗಾಗುತ್ತಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ.

ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವ, ರಾಜ್ಯದಲ್ಲಿ ವಿರೋಧ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರುಗಳು ರಾಜಾರೋಷವಾಗಿ ‘ಅತೃಪ್ತ’ ಶಾಸಕರ ಜೊತೆ ನಿಂತಿರುವುದು, ಪಕ್ಷದ ಪ್ರಮುಖರ ವಿಶೇಷ ವಿಮಾನಗಳಲ್ಲಿ ಶಾಸಕರನ್ನು ಕರೆದೊಯ್ಯುತ್ತಿರುವುದು ಮಾಧ್ಯಮಗಳ ಮೂಲಕ ಜಗಜ್ಜಾಹಿರವಾಗಿದೆ.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕುಡಿಯುವ ನೀರಿಗೂ ತತ್ವಾರವಾಗಿದೆ. ಮಳೆ ಕೈಕೊಟ್ಟು ರೈತರು ಕೂಲಿಕಾರರು ಕಂಗಾಲಾಗಿ ಊರು ಕೇರಿ ಬಿಟ್ಟು ನಗರಗಳತ್ತ ತುತ್ತು ಕೂಳಿಗಾಗಿ ಗುಳೆ ಹೊರಟಿದ್ದಾರೆ. ಮಹಿಳೆಯರು ಮಕ್ಕಳ ಮೇಲೆ, ಹಿಂಸೆ ಅತ್ಯಾಚಾರಗಳು ಹೆಚ್ಚಿವೆ.
ದಲಿತರ ಮೇಲೆ,ಅಲ್ಪಸಂಖ್ಯಾತರ ಮೇಲೆ ಜಾತಿ ಕೋಮಿನ ನೆಲೆಯ ದೌರ್ಜನ್ಯಗಳು ವರದಿಯಾಗುತ್ತಲೇ ಇವೆ.

ಈ ಯಾವ ವಿಷಯಗಳ ಕುರಿತೂ ತಲೆ ಕೆಡಿಸಿಕೊಳ್ಳದೆ ಹೊಣೆಗೇಡಿತನದಿಂದ ವರ್ತಿಸುತ್ತಿರುವ ರೆಬೆಲ್(!?) ಶಾಸಕರು ಮತ್ತು ಭಾರತೀಯ ಜನತಾ ಪಕ್ಷದ ನಡವಳಿಕೆಗಳು ಪ್ರಜಾಪ್ರಭುತ್ವಕ್ಕೆ ಮತ್ತು ಮತದಾರರಿಗೆ ಮಾಡುತ್ತಿರುವ ಅವಮಾನವಾಗಿದೆ. ಈಗ ರಾಜಿನಾಮೆ ಕೊಟ್ಟಿರುವ ಯಾವ ಶಾಸಕರೂ ಜನಹಿತ ಅಥವಾ ತಮ್ಮ ಕ್ಷೇತ್ರದ ಮತದಾರರ  ಹಿತದ ದೃಷ್ಟಿಯಿಂದ ರಾಜಿನಾಮೆ ಕೊಟ್ಟಿರುವುದಿಲ್ಲ. ಅವರಲ್ಲಿ ಹಣ ಮತ್ತು ಅಧಿಕಾರದ ಲಾಲಸೆ ಇರುವುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ.

ಆದ್ದರಿಂದ ರಾಜ್ಯದ ಮತದಾರರಾದ ನಾವು ತಮ್ಮಲ್ಲಿ ಈ ಕೆಳಗಿನಂತೆ ಅರಿಕೆ ಮಾಡಿಕೊಳ್ಳುತ್ತಿದ್ದೇವೆ. ಯಾವುದೇ ಕಾರಣಕ್ಕೂ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಬಾರದು. ಮತ್ತು ಅವರು ಜನಹಿತ ಕಾಪಾಡಲು ಬದ್ಧರಾಗಿಲ್ಲದ ಕಾರಣ ಅವರನ್ನು ಅನರ್ಹಗೊಳಿಸಬೇಕೆಂದೂ ವಿನಂತಿಸುತ್ತೇವೆ.

ಸಾರ್ವಜನಿಕ ಹಿತದೃಷ್ಟಿಯಿಂದ ಇನ್ನು ಮುಂದೆ ಈ ರೀತಿಯ ಕುದುರೆ ವ್ಯಾಪಾರಕ್ಕೆ ಶಾಸಕರು ಒಳಗಾಗದಂಥಹ ಒಂದು ಕಟ್ಟುನಿಟ್ಟಾದ ಕಾನೂನು ಬರುವಂತೆ ತಾವು ಕ್ರಮ ಕೈಗೊಳ್ಳಬೇಕೆಂದು ವಿನಂತಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...