Homeಕರ್ನಾಟಕಜನವಾದಿ ಮಹಿಳಾ ಸಂಘಟನೆಯಿಂದ "ಪ್ರಜಾಪ್ರಭುತ್ವ ಉಳಿಸಿ" ಅಭಿಯಾನ: ಸ್ಪೀಕರ್ ಗೆ ಪತ್ರಚಳವಳಿ

ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನ: ಸ್ಪೀಕರ್ ಗೆ ಪತ್ರಚಳವಳಿ

- Advertisement -
- Advertisement -

ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನದ ಭಾಗವಾಗಿ ಕರ್ನಾಟಕದ ಸ್ಪೀಕರ್ ಅವರಿಗೆ ಜನರ ಆಗ್ರಹ ಕಳುಹಿಸಲು ಕರೆ ನೀಡಲಾಗಿದೆ.  ವೈಯಕ್ತಿಕವಾಗಿ, ಸಂಘ ಸಂಸ್ಥೆಗಳ ಹೆಸರಿನಲ್ಲಿಯೂ ಈ ಮೇಲ್ ಮೂಲಕ ಕಳಿಸಲು ಕೋರಿದ್ದು, ಮೌನ ಮುರಿದು ಎಲ್ಲ ಹಂತದಲ್ಲೂ ಮಾತಾಡೋಣ. ಹೆಜ್ಹೆಗಳು ಹೆಚ್ಚಲಿ ಎಂದು ಸಂಘಟನೆಯ ಮುಂದಾಳುಗಳಾದ ಕೆ.ನೀಲಾರವರು ತಿಳಿಸಿದ್ದಾರೆ.

ಸ್ಪೀಕರ್ ರವರಿಗೆ ಕಳಿಸಲು ಮಾದರಿ ಪತ್ರವೊಂದನ್ನು ಸಿದ್ದ ಮಾಡಲಾಗಿದ್ದು ಅದರ ಪೂರ್ಣ ಪಾಠ ಇಲ್ಲಿದೆ

ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ವಿಧಾನ ಸೌಧ
ಬೆಂಗಳೂರು

ಮಾನ್ಯರೆ

ವಿಶ್ವದೆದುರು ಕರ್ನಾಟಕ ನಾಚಿ ತಲೆ ತಗ್ಗಿಸುವ ಕೆಲಸ ಕರ್ನಾಟಕದಲ್ಲಿ ನಡೆಯುತ್ತಿದೆ. ಶಾಸಕರು ಮೂಕಪ್ರಾಣಿಗಳಂತೆ ಬಿಕರಿಗೊಳಗಾಗುತ್ತಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ.

ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವ, ರಾಜ್ಯದಲ್ಲಿ ವಿರೋಧ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರುಗಳು ರಾಜಾರೋಷವಾಗಿ ‘ಅತೃಪ್ತ’ ಶಾಸಕರ ಜೊತೆ ನಿಂತಿರುವುದು, ಪಕ್ಷದ ಪ್ರಮುಖರ ವಿಶೇಷ ವಿಮಾನಗಳಲ್ಲಿ ಶಾಸಕರನ್ನು ಕರೆದೊಯ್ಯುತ್ತಿರುವುದು ಮಾಧ್ಯಮಗಳ ಮೂಲಕ ಜಗಜ್ಜಾಹಿರವಾಗಿದೆ.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕುಡಿಯುವ ನೀರಿಗೂ ತತ್ವಾರವಾಗಿದೆ. ಮಳೆ ಕೈಕೊಟ್ಟು ರೈತರು ಕೂಲಿಕಾರರು ಕಂಗಾಲಾಗಿ ಊರು ಕೇರಿ ಬಿಟ್ಟು ನಗರಗಳತ್ತ ತುತ್ತು ಕೂಳಿಗಾಗಿ ಗುಳೆ ಹೊರಟಿದ್ದಾರೆ. ಮಹಿಳೆಯರು ಮಕ್ಕಳ ಮೇಲೆ, ಹಿಂಸೆ ಅತ್ಯಾಚಾರಗಳು ಹೆಚ್ಚಿವೆ.
ದಲಿತರ ಮೇಲೆ,ಅಲ್ಪಸಂಖ್ಯಾತರ ಮೇಲೆ ಜಾತಿ ಕೋಮಿನ ನೆಲೆಯ ದೌರ್ಜನ್ಯಗಳು ವರದಿಯಾಗುತ್ತಲೇ ಇವೆ.

ಈ ಯಾವ ವಿಷಯಗಳ ಕುರಿತೂ ತಲೆ ಕೆಡಿಸಿಕೊಳ್ಳದೆ ಹೊಣೆಗೇಡಿತನದಿಂದ ವರ್ತಿಸುತ್ತಿರುವ ರೆಬೆಲ್(!?) ಶಾಸಕರು ಮತ್ತು ಭಾರತೀಯ ಜನತಾ ಪಕ್ಷದ ನಡವಳಿಕೆಗಳು ಪ್ರಜಾಪ್ರಭುತ್ವಕ್ಕೆ ಮತ್ತು ಮತದಾರರಿಗೆ ಮಾಡುತ್ತಿರುವ ಅವಮಾನವಾಗಿದೆ. ಈಗ ರಾಜಿನಾಮೆ ಕೊಟ್ಟಿರುವ ಯಾವ ಶಾಸಕರೂ ಜನಹಿತ ಅಥವಾ ತಮ್ಮ ಕ್ಷೇತ್ರದ ಮತದಾರರ  ಹಿತದ ದೃಷ್ಟಿಯಿಂದ ರಾಜಿನಾಮೆ ಕೊಟ್ಟಿರುವುದಿಲ್ಲ. ಅವರಲ್ಲಿ ಹಣ ಮತ್ತು ಅಧಿಕಾರದ ಲಾಲಸೆ ಇರುವುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ.

ಆದ್ದರಿಂದ ರಾಜ್ಯದ ಮತದಾರರಾದ ನಾವು ತಮ್ಮಲ್ಲಿ ಈ ಕೆಳಗಿನಂತೆ ಅರಿಕೆ ಮಾಡಿಕೊಳ್ಳುತ್ತಿದ್ದೇವೆ. ಯಾವುದೇ ಕಾರಣಕ್ಕೂ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಬಾರದು. ಮತ್ತು ಅವರು ಜನಹಿತ ಕಾಪಾಡಲು ಬದ್ಧರಾಗಿಲ್ಲದ ಕಾರಣ ಅವರನ್ನು ಅನರ್ಹಗೊಳಿಸಬೇಕೆಂದೂ ವಿನಂತಿಸುತ್ತೇವೆ.

ಸಾರ್ವಜನಿಕ ಹಿತದೃಷ್ಟಿಯಿಂದ ಇನ್ನು ಮುಂದೆ ಈ ರೀತಿಯ ಕುದುರೆ ವ್ಯಾಪಾರಕ್ಕೆ ಶಾಸಕರು ಒಳಗಾಗದಂಥಹ ಒಂದು ಕಟ್ಟುನಿಟ್ಟಾದ ಕಾನೂನು ಬರುವಂತೆ ತಾವು ಕ್ರಮ ಕೈಗೊಳ್ಳಬೇಕೆಂದು ವಿನಂತಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...