Homeಕರ್ನಾಟಕಜನವಾದಿ ಮಹಿಳಾ ಸಂಘಟನೆಯಿಂದ "ಪ್ರಜಾಪ್ರಭುತ್ವ ಉಳಿಸಿ" ಅಭಿಯಾನ: ಸ್ಪೀಕರ್ ಗೆ ಪತ್ರಚಳವಳಿ

ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನ: ಸ್ಪೀಕರ್ ಗೆ ಪತ್ರಚಳವಳಿ

- Advertisement -
- Advertisement -

ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನದ ಭಾಗವಾಗಿ ಕರ್ನಾಟಕದ ಸ್ಪೀಕರ್ ಅವರಿಗೆ ಜನರ ಆಗ್ರಹ ಕಳುಹಿಸಲು ಕರೆ ನೀಡಲಾಗಿದೆ.  ವೈಯಕ್ತಿಕವಾಗಿ, ಸಂಘ ಸಂಸ್ಥೆಗಳ ಹೆಸರಿನಲ್ಲಿಯೂ ಈ ಮೇಲ್ ಮೂಲಕ ಕಳಿಸಲು ಕೋರಿದ್ದು, ಮೌನ ಮುರಿದು ಎಲ್ಲ ಹಂತದಲ್ಲೂ ಮಾತಾಡೋಣ. ಹೆಜ್ಹೆಗಳು ಹೆಚ್ಚಲಿ ಎಂದು ಸಂಘಟನೆಯ ಮುಂದಾಳುಗಳಾದ ಕೆ.ನೀಲಾರವರು ತಿಳಿಸಿದ್ದಾರೆ.

ಸ್ಪೀಕರ್ ರವರಿಗೆ ಕಳಿಸಲು ಮಾದರಿ ಪತ್ರವೊಂದನ್ನು ಸಿದ್ದ ಮಾಡಲಾಗಿದ್ದು ಅದರ ಪೂರ್ಣ ಪಾಠ ಇಲ್ಲಿದೆ

ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ವಿಧಾನ ಸೌಧ
ಬೆಂಗಳೂರು

ಮಾನ್ಯರೆ

ವಿಶ್ವದೆದುರು ಕರ್ನಾಟಕ ನಾಚಿ ತಲೆ ತಗ್ಗಿಸುವ ಕೆಲಸ ಕರ್ನಾಟಕದಲ್ಲಿ ನಡೆಯುತ್ತಿದೆ. ಶಾಸಕರು ಮೂಕಪ್ರಾಣಿಗಳಂತೆ ಬಿಕರಿಗೊಳಗಾಗುತ್ತಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ.

ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವ, ರಾಜ್ಯದಲ್ಲಿ ವಿರೋಧ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರುಗಳು ರಾಜಾರೋಷವಾಗಿ ‘ಅತೃಪ್ತ’ ಶಾಸಕರ ಜೊತೆ ನಿಂತಿರುವುದು, ಪಕ್ಷದ ಪ್ರಮುಖರ ವಿಶೇಷ ವಿಮಾನಗಳಲ್ಲಿ ಶಾಸಕರನ್ನು ಕರೆದೊಯ್ಯುತ್ತಿರುವುದು ಮಾಧ್ಯಮಗಳ ಮೂಲಕ ಜಗಜ್ಜಾಹಿರವಾಗಿದೆ.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕುಡಿಯುವ ನೀರಿಗೂ ತತ್ವಾರವಾಗಿದೆ. ಮಳೆ ಕೈಕೊಟ್ಟು ರೈತರು ಕೂಲಿಕಾರರು ಕಂಗಾಲಾಗಿ ಊರು ಕೇರಿ ಬಿಟ್ಟು ನಗರಗಳತ್ತ ತುತ್ತು ಕೂಳಿಗಾಗಿ ಗುಳೆ ಹೊರಟಿದ್ದಾರೆ. ಮಹಿಳೆಯರು ಮಕ್ಕಳ ಮೇಲೆ, ಹಿಂಸೆ ಅತ್ಯಾಚಾರಗಳು ಹೆಚ್ಚಿವೆ.
ದಲಿತರ ಮೇಲೆ,ಅಲ್ಪಸಂಖ್ಯಾತರ ಮೇಲೆ ಜಾತಿ ಕೋಮಿನ ನೆಲೆಯ ದೌರ್ಜನ್ಯಗಳು ವರದಿಯಾಗುತ್ತಲೇ ಇವೆ.

ಈ ಯಾವ ವಿಷಯಗಳ ಕುರಿತೂ ತಲೆ ಕೆಡಿಸಿಕೊಳ್ಳದೆ ಹೊಣೆಗೇಡಿತನದಿಂದ ವರ್ತಿಸುತ್ತಿರುವ ರೆಬೆಲ್(!?) ಶಾಸಕರು ಮತ್ತು ಭಾರತೀಯ ಜನತಾ ಪಕ್ಷದ ನಡವಳಿಕೆಗಳು ಪ್ರಜಾಪ್ರಭುತ್ವಕ್ಕೆ ಮತ್ತು ಮತದಾರರಿಗೆ ಮಾಡುತ್ತಿರುವ ಅವಮಾನವಾಗಿದೆ. ಈಗ ರಾಜಿನಾಮೆ ಕೊಟ್ಟಿರುವ ಯಾವ ಶಾಸಕರೂ ಜನಹಿತ ಅಥವಾ ತಮ್ಮ ಕ್ಷೇತ್ರದ ಮತದಾರರ  ಹಿತದ ದೃಷ್ಟಿಯಿಂದ ರಾಜಿನಾಮೆ ಕೊಟ್ಟಿರುವುದಿಲ್ಲ. ಅವರಲ್ಲಿ ಹಣ ಮತ್ತು ಅಧಿಕಾರದ ಲಾಲಸೆ ಇರುವುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ.

ಆದ್ದರಿಂದ ರಾಜ್ಯದ ಮತದಾರರಾದ ನಾವು ತಮ್ಮಲ್ಲಿ ಈ ಕೆಳಗಿನಂತೆ ಅರಿಕೆ ಮಾಡಿಕೊಳ್ಳುತ್ತಿದ್ದೇವೆ. ಯಾವುದೇ ಕಾರಣಕ್ಕೂ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಬಾರದು. ಮತ್ತು ಅವರು ಜನಹಿತ ಕಾಪಾಡಲು ಬದ್ಧರಾಗಿಲ್ಲದ ಕಾರಣ ಅವರನ್ನು ಅನರ್ಹಗೊಳಿಸಬೇಕೆಂದೂ ವಿನಂತಿಸುತ್ತೇವೆ.

ಸಾರ್ವಜನಿಕ ಹಿತದೃಷ್ಟಿಯಿಂದ ಇನ್ನು ಮುಂದೆ ಈ ರೀತಿಯ ಕುದುರೆ ವ್ಯಾಪಾರಕ್ಕೆ ಶಾಸಕರು ಒಳಗಾಗದಂಥಹ ಒಂದು ಕಟ್ಟುನಿಟ್ಟಾದ ಕಾನೂನು ಬರುವಂತೆ ತಾವು ಕ್ರಮ ಕೈಗೊಳ್ಳಬೇಕೆಂದು ವಿನಂತಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....