Homeಕರ್ನಾಟಕಜನವಾದಿ ಮಹಿಳಾ ಸಂಘಟನೆಯಿಂದ "ಪ್ರಜಾಪ್ರಭುತ್ವ ಉಳಿಸಿ" ಅಭಿಯಾನ: ಸ್ಪೀಕರ್ ಗೆ ಪತ್ರಚಳವಳಿ

ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನ: ಸ್ಪೀಕರ್ ಗೆ ಪತ್ರಚಳವಳಿ

- Advertisement -
- Advertisement -

ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನದ ಭಾಗವಾಗಿ ಕರ್ನಾಟಕದ ಸ್ಪೀಕರ್ ಅವರಿಗೆ ಜನರ ಆಗ್ರಹ ಕಳುಹಿಸಲು ಕರೆ ನೀಡಲಾಗಿದೆ.  ವೈಯಕ್ತಿಕವಾಗಿ, ಸಂಘ ಸಂಸ್ಥೆಗಳ ಹೆಸರಿನಲ್ಲಿಯೂ ಈ ಮೇಲ್ ಮೂಲಕ ಕಳಿಸಲು ಕೋರಿದ್ದು, ಮೌನ ಮುರಿದು ಎಲ್ಲ ಹಂತದಲ್ಲೂ ಮಾತಾಡೋಣ. ಹೆಜ್ಹೆಗಳು ಹೆಚ್ಚಲಿ ಎಂದು ಸಂಘಟನೆಯ ಮುಂದಾಳುಗಳಾದ ಕೆ.ನೀಲಾರವರು ತಿಳಿಸಿದ್ದಾರೆ.

ಸ್ಪೀಕರ್ ರವರಿಗೆ ಕಳಿಸಲು ಮಾದರಿ ಪತ್ರವೊಂದನ್ನು ಸಿದ್ದ ಮಾಡಲಾಗಿದ್ದು ಅದರ ಪೂರ್ಣ ಪಾಠ ಇಲ್ಲಿದೆ

ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ವಿಧಾನ ಸೌಧ
ಬೆಂಗಳೂರು

ಮಾನ್ಯರೆ

ವಿಶ್ವದೆದುರು ಕರ್ನಾಟಕ ನಾಚಿ ತಲೆ ತಗ್ಗಿಸುವ ಕೆಲಸ ಕರ್ನಾಟಕದಲ್ಲಿ ನಡೆಯುತ್ತಿದೆ. ಶಾಸಕರು ಮೂಕಪ್ರಾಣಿಗಳಂತೆ ಬಿಕರಿಗೊಳಗಾಗುತ್ತಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ.

ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವ, ರಾಜ್ಯದಲ್ಲಿ ವಿರೋಧ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರುಗಳು ರಾಜಾರೋಷವಾಗಿ ‘ಅತೃಪ್ತ’ ಶಾಸಕರ ಜೊತೆ ನಿಂತಿರುವುದು, ಪಕ್ಷದ ಪ್ರಮುಖರ ವಿಶೇಷ ವಿಮಾನಗಳಲ್ಲಿ ಶಾಸಕರನ್ನು ಕರೆದೊಯ್ಯುತ್ತಿರುವುದು ಮಾಧ್ಯಮಗಳ ಮೂಲಕ ಜಗಜ್ಜಾಹಿರವಾಗಿದೆ.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕುಡಿಯುವ ನೀರಿಗೂ ತತ್ವಾರವಾಗಿದೆ. ಮಳೆ ಕೈಕೊಟ್ಟು ರೈತರು ಕೂಲಿಕಾರರು ಕಂಗಾಲಾಗಿ ಊರು ಕೇರಿ ಬಿಟ್ಟು ನಗರಗಳತ್ತ ತುತ್ತು ಕೂಳಿಗಾಗಿ ಗುಳೆ ಹೊರಟಿದ್ದಾರೆ. ಮಹಿಳೆಯರು ಮಕ್ಕಳ ಮೇಲೆ, ಹಿಂಸೆ ಅತ್ಯಾಚಾರಗಳು ಹೆಚ್ಚಿವೆ.
ದಲಿತರ ಮೇಲೆ,ಅಲ್ಪಸಂಖ್ಯಾತರ ಮೇಲೆ ಜಾತಿ ಕೋಮಿನ ನೆಲೆಯ ದೌರ್ಜನ್ಯಗಳು ವರದಿಯಾಗುತ್ತಲೇ ಇವೆ.

ಈ ಯಾವ ವಿಷಯಗಳ ಕುರಿತೂ ತಲೆ ಕೆಡಿಸಿಕೊಳ್ಳದೆ ಹೊಣೆಗೇಡಿತನದಿಂದ ವರ್ತಿಸುತ್ತಿರುವ ರೆಬೆಲ್(!?) ಶಾಸಕರು ಮತ್ತು ಭಾರತೀಯ ಜನತಾ ಪಕ್ಷದ ನಡವಳಿಕೆಗಳು ಪ್ರಜಾಪ್ರಭುತ್ವಕ್ಕೆ ಮತ್ತು ಮತದಾರರಿಗೆ ಮಾಡುತ್ತಿರುವ ಅವಮಾನವಾಗಿದೆ. ಈಗ ರಾಜಿನಾಮೆ ಕೊಟ್ಟಿರುವ ಯಾವ ಶಾಸಕರೂ ಜನಹಿತ ಅಥವಾ ತಮ್ಮ ಕ್ಷೇತ್ರದ ಮತದಾರರ  ಹಿತದ ದೃಷ್ಟಿಯಿಂದ ರಾಜಿನಾಮೆ ಕೊಟ್ಟಿರುವುದಿಲ್ಲ. ಅವರಲ್ಲಿ ಹಣ ಮತ್ತು ಅಧಿಕಾರದ ಲಾಲಸೆ ಇರುವುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ.

ಆದ್ದರಿಂದ ರಾಜ್ಯದ ಮತದಾರರಾದ ನಾವು ತಮ್ಮಲ್ಲಿ ಈ ಕೆಳಗಿನಂತೆ ಅರಿಕೆ ಮಾಡಿಕೊಳ್ಳುತ್ತಿದ್ದೇವೆ. ಯಾವುದೇ ಕಾರಣಕ್ಕೂ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಬಾರದು. ಮತ್ತು ಅವರು ಜನಹಿತ ಕಾಪಾಡಲು ಬದ್ಧರಾಗಿಲ್ಲದ ಕಾರಣ ಅವರನ್ನು ಅನರ್ಹಗೊಳಿಸಬೇಕೆಂದೂ ವಿನಂತಿಸುತ್ತೇವೆ.

ಸಾರ್ವಜನಿಕ ಹಿತದೃಷ್ಟಿಯಿಂದ ಇನ್ನು ಮುಂದೆ ಈ ರೀತಿಯ ಕುದುರೆ ವ್ಯಾಪಾರಕ್ಕೆ ಶಾಸಕರು ಒಳಗಾಗದಂಥಹ ಒಂದು ಕಟ್ಟುನಿಟ್ಟಾದ ಕಾನೂನು ಬರುವಂತೆ ತಾವು ಕ್ರಮ ಕೈಗೊಳ್ಳಬೇಕೆಂದು ವಿನಂತಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...