Homeಕರ್ನಾಟಕಜನವಾದಿ ಮಹಿಳಾ ಸಂಘಟನೆಯಿಂದ "ಪ್ರಜಾಪ್ರಭುತ್ವ ಉಳಿಸಿ" ಅಭಿಯಾನ: ಸ್ಪೀಕರ್ ಗೆ ಪತ್ರಚಳವಳಿ

ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನ: ಸ್ಪೀಕರ್ ಗೆ ಪತ್ರಚಳವಳಿ

- Advertisement -
- Advertisement -

ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನದ ಭಾಗವಾಗಿ ಕರ್ನಾಟಕದ ಸ್ಪೀಕರ್ ಅವರಿಗೆ ಜನರ ಆಗ್ರಹ ಕಳುಹಿಸಲು ಕರೆ ನೀಡಲಾಗಿದೆ.  ವೈಯಕ್ತಿಕವಾಗಿ, ಸಂಘ ಸಂಸ್ಥೆಗಳ ಹೆಸರಿನಲ್ಲಿಯೂ ಈ ಮೇಲ್ ಮೂಲಕ ಕಳಿಸಲು ಕೋರಿದ್ದು, ಮೌನ ಮುರಿದು ಎಲ್ಲ ಹಂತದಲ್ಲೂ ಮಾತಾಡೋಣ. ಹೆಜ್ಹೆಗಳು ಹೆಚ್ಚಲಿ ಎಂದು ಸಂಘಟನೆಯ ಮುಂದಾಳುಗಳಾದ ಕೆ.ನೀಲಾರವರು ತಿಳಿಸಿದ್ದಾರೆ.

ಸ್ಪೀಕರ್ ರವರಿಗೆ ಕಳಿಸಲು ಮಾದರಿ ಪತ್ರವೊಂದನ್ನು ಸಿದ್ದ ಮಾಡಲಾಗಿದ್ದು ಅದರ ಪೂರ್ಣ ಪಾಠ ಇಲ್ಲಿದೆ

ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ವಿಧಾನ ಸೌಧ
ಬೆಂಗಳೂರು

ಮಾನ್ಯರೆ

ವಿಶ್ವದೆದುರು ಕರ್ನಾಟಕ ನಾಚಿ ತಲೆ ತಗ್ಗಿಸುವ ಕೆಲಸ ಕರ್ನಾಟಕದಲ್ಲಿ ನಡೆಯುತ್ತಿದೆ. ಶಾಸಕರು ಮೂಕಪ್ರಾಣಿಗಳಂತೆ ಬಿಕರಿಗೊಳಗಾಗುತ್ತಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ.

ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿರುವ, ರಾಜ್ಯದಲ್ಲಿ ವಿರೋಧ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರುಗಳು ರಾಜಾರೋಷವಾಗಿ ‘ಅತೃಪ್ತ’ ಶಾಸಕರ ಜೊತೆ ನಿಂತಿರುವುದು, ಪಕ್ಷದ ಪ್ರಮುಖರ ವಿಶೇಷ ವಿಮಾನಗಳಲ್ಲಿ ಶಾಸಕರನ್ನು ಕರೆದೊಯ್ಯುತ್ತಿರುವುದು ಮಾಧ್ಯಮಗಳ ಮೂಲಕ ಜಗಜ್ಜಾಹಿರವಾಗಿದೆ.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕುಡಿಯುವ ನೀರಿಗೂ ತತ್ವಾರವಾಗಿದೆ. ಮಳೆ ಕೈಕೊಟ್ಟು ರೈತರು ಕೂಲಿಕಾರರು ಕಂಗಾಲಾಗಿ ಊರು ಕೇರಿ ಬಿಟ್ಟು ನಗರಗಳತ್ತ ತುತ್ತು ಕೂಳಿಗಾಗಿ ಗುಳೆ ಹೊರಟಿದ್ದಾರೆ. ಮಹಿಳೆಯರು ಮಕ್ಕಳ ಮೇಲೆ, ಹಿಂಸೆ ಅತ್ಯಾಚಾರಗಳು ಹೆಚ್ಚಿವೆ.
ದಲಿತರ ಮೇಲೆ,ಅಲ್ಪಸಂಖ್ಯಾತರ ಮೇಲೆ ಜಾತಿ ಕೋಮಿನ ನೆಲೆಯ ದೌರ್ಜನ್ಯಗಳು ವರದಿಯಾಗುತ್ತಲೇ ಇವೆ.

ಈ ಯಾವ ವಿಷಯಗಳ ಕುರಿತೂ ತಲೆ ಕೆಡಿಸಿಕೊಳ್ಳದೆ ಹೊಣೆಗೇಡಿತನದಿಂದ ವರ್ತಿಸುತ್ತಿರುವ ರೆಬೆಲ್(!?) ಶಾಸಕರು ಮತ್ತು ಭಾರತೀಯ ಜನತಾ ಪಕ್ಷದ ನಡವಳಿಕೆಗಳು ಪ್ರಜಾಪ್ರಭುತ್ವಕ್ಕೆ ಮತ್ತು ಮತದಾರರಿಗೆ ಮಾಡುತ್ತಿರುವ ಅವಮಾನವಾಗಿದೆ. ಈಗ ರಾಜಿನಾಮೆ ಕೊಟ್ಟಿರುವ ಯಾವ ಶಾಸಕರೂ ಜನಹಿತ ಅಥವಾ ತಮ್ಮ ಕ್ಷೇತ್ರದ ಮತದಾರರ  ಹಿತದ ದೃಷ್ಟಿಯಿಂದ ರಾಜಿನಾಮೆ ಕೊಟ್ಟಿರುವುದಿಲ್ಲ. ಅವರಲ್ಲಿ ಹಣ ಮತ್ತು ಅಧಿಕಾರದ ಲಾಲಸೆ ಇರುವುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ.

ಆದ್ದರಿಂದ ರಾಜ್ಯದ ಮತದಾರರಾದ ನಾವು ತಮ್ಮಲ್ಲಿ ಈ ಕೆಳಗಿನಂತೆ ಅರಿಕೆ ಮಾಡಿಕೊಳ್ಳುತ್ತಿದ್ದೇವೆ. ಯಾವುದೇ ಕಾರಣಕ್ಕೂ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಬಾರದು. ಮತ್ತು ಅವರು ಜನಹಿತ ಕಾಪಾಡಲು ಬದ್ಧರಾಗಿಲ್ಲದ ಕಾರಣ ಅವರನ್ನು ಅನರ್ಹಗೊಳಿಸಬೇಕೆಂದೂ ವಿನಂತಿಸುತ್ತೇವೆ.

ಸಾರ್ವಜನಿಕ ಹಿತದೃಷ್ಟಿಯಿಂದ ಇನ್ನು ಮುಂದೆ ಈ ರೀತಿಯ ಕುದುರೆ ವ್ಯಾಪಾರಕ್ಕೆ ಶಾಸಕರು ಒಳಗಾಗದಂಥಹ ಒಂದು ಕಟ್ಟುನಿಟ್ಟಾದ ಕಾನೂನು ಬರುವಂತೆ ತಾವು ಕ್ರಮ ಕೈಗೊಳ್ಳಬೇಕೆಂದು ವಿನಂತಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...