Homeಚಳವಳಿಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

- Advertisement -
- Advertisement -

ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಇಂದು ರಾಜಧಾನಿ ರಾಯ್‌ಪುರ ತಲುಪಿದ್ದಾರೆ. ಹಸ್ಡಿಯೋ ಅರಂಡ್ ಕಾಡಿನ ಘಟ್ಬರಾ ಗ್ರಾಮದಿಂದ ಅಕ್ಟೋಬರ್ 04 ರಂದು ನೂರಾರು ಆದಿವಾಸಿಗಳು ಅಂಬೇಡ್ಕರ್, ಗಾಂಧೀಜಿ ಫೋಟೊ ಹಿಡಿದು ಆರಂಭಿಸಿದ ನಡಿಗೆ ಮಳೆ, ಗಾಳಿಯನ್ನೆಲ್ಲ ಎದುರಿಸಿ ಇಂದು ರಾಜಧಾನಿ ತಲುಪಿದೆ.

ಉತ್ತರ ಚತ್ತೀಸ್‌ಘಡದ ಕೊರ್ಬಾ, ಸರ್ಗುಜಾ ಮತ್ತು ಸೂರಜ್‌ಪುರ್ ಜಿಲ್ಲೆಗಳಲ್ಲಿ ಹರಡಿರುವ ಹಸ್ಡಿಯೋ ಅರಣ್ಯ ಮಧ್ಯ ಭಾರತದ ಅತಿ ದೊಡ್ಡ ಕಾಡುಗಳಲ್ಲಿ ಒಂದಾಗಿದೆ. ಕಾಡು ಕೃಷಿ-ಅವಲಂಬಿತ ಸಮುದಾಯಗಳು, ಗೊಂಡ ಆದಿವಾಸಿಗಳು, ನದಿ-ನೀರಿನ ಮೂಲಗಳು, ಆನೆಗಳು, ಚಿರತೆಗಳು ಸೇರಿದಂತೆ ಅಸಂಖ್ಯಾತ ಪ್ರಾಣಿಗಳು ಇಲ್ಲಿ ವಾಸವಿದ್ದು ಜೀವವೈವಿಧ್ಯಗೆ ಹೆಸರುವಾಸಿಯಾಗಿದೆ. ಕಲ್ಲಿದ್ದಲು ಸಚಿವಾಲಯವು ಈ ಶ್ರೀಮಂತ ಕಾಡುಗಳಲ್ಲಿ ಸಾವಿರಾರು ಚ.ಕಿ.ಮೀ ಕಲ್ಲಿದ್ದಲು ಗಣಿ ನಿಕ್ಷೇಪಗಳಿವೆ ಎಂದು ಗುರುತಿಸಿದ್ದು, ಈ ಕಾಡು ಇಂದು ತೀವ್ರ ಅಪಾಯಕ್ಕೆ ಈಡಾಗಿದೆ.

ಹಸ್ಡಿಯೋದಲ್ಲಿನ ಹಳ್ಳಿ ಮತ್ತು ಅರಣ್ಯ ಪ್ರದೇಶಗಳನ್ನು 18 ಕಲ್ಲಿದ್ದಲು ಗಣಿ ಬ್ಲಾಕ್‌ಗಳಾಗಿ ವಿಭಾಗಿಸಲಾಗಿದ್ದು ಅವುಗಳಲ್ಲಿ 3 ಸರ್ಕಾರಿ ಸ್ವಾಮ್ಯದ ನಿಗಮಗಳಿಗೆ ನಾಲ್ಕು ಬ್ಲಾಕ್‌ಗಳನ್ನು ಹಂಚಿಕೆ ಮಾಡಲಾಗಿದೆ. ಅವರೆಲ್ಲರೂ “ಗಣಿ ಡೆವಲಪರ್ ಮತ್ತು ಆಪರೇಟರ್” ಗುತ್ತಿಗೆಯನ್ನು ಗೌತಮ್ ಅದಾನಿಯ ಭಾರತದ ಅತ್ಯಂತ ಶಕ್ತಿಶಾಲಿ ಕಾರ್ಪೊರೇಶನ್‌ಗಳಲ್ಲಿ ಒಂದಾದ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ (AEL)ಗೆ ನೀಡಿದ್ದಾರೆ. AEL ಈಗ ಹಸ್ಡಿಯೋದಲ್ಲಿ ಅಂದಾಜು 964 ದಶಲಕ್ಷ ಟನ್‌ಗಳಷ್ಟು ಕಲ್ಲಿದ್ದಲು ಗಣಿಗಾರಿಕೆ ಮಾಡಲು ಒಪ್ಪಂದ ಮಾಡಿಕೊಂಡಿದೆ. ಅದಕ್ಕಾಗಿ ಸುಮಾರು 7,500 ಹೆಕ್ಟೇರ್ ಭೂಮಿ ಮತ್ತು ಕಾಡುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಮತ್ತು ಮುಕ್ತ ಗಣಿಗಾರಿಕೆಗೆ ನಿರ್ಧರಿಸಲಾಗಿದೆ. AEL ಹಸ್ಡಿಯೋದಲ್ಲಿ ಗಣಿಗಾರಿಕೆ ಕಾರ್ಯಾಚರಣೆ ಆರಂಭಿಸಿದ ವರ್ಷಗಳಲ್ಲಿ ಅರಣ್ಯನಾಶ ಉಂಟಾಗಿದ್ದು ಅದರ ವಿರುದ್ಧ ಅಲ್ಲಿನ ಸ್ಥಳೀಯ ಜನತೆ ಸಿಡಿದೆದ್ದಿದ್ದಾರೆ.

ಹಸ್ಡಿಯೋ ಕಾಡು, Photo Courtesy: Article 14

ಇಲ್ಲಿನ ಜೀವವೈವಿಧ್ಯವನ್ನು ನಾಶಗೊಳಿಸುವ, ಕಾಡನ್ನು ನುಂಗಿಹಾಕುವ ಮತ್ತು ತಮ್ಮ ಬದಕನ್ನು ಕಿತ್ತುಕೊಳ್ಳುವ ಗಣಿಗಾರಿಕೆ ನಿಲ್ಲಿಸಿ, ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ ಎಂಬ ಘೋಷಣೆಯೊಂದಿಗೆ ಸ್ಥಳೀಯ ನಿವಾಸಿಗಳು ಪ್ರತಿಭಟನೆಗಿಳಿದಿದ್ದಾರೆ. 2011ರ ಅಕ್ಟೋಬರ್ 02 ರಂದೇ ಅಂದರೆ ಹತ್ತು ವರ್ಷಗಳ ಹಿಂದೆಯೇ ಘಟ್ಬರಾ ಗ್ರಾಮಸಭೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆ ವಿರೋಧಿಸಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈಗ 2021ರ ಅಕ್ಟೋಬರ್ 02 ರಂದು ಫತೇಪುರ್ ಗ್ರಾಮದಲ್ಲಿ ಅರಣ್ಯ ಸತ್ಯಾಗ್ರಹ ನಡೆಸಿದ ಅವರು ರಾಜಧಾನಿಗೆ ಪಾದಯಾತ್ರೆ ನಡೆಸಿದ್ದಾರೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಎರಡು ಪಕ್ಷಗಳು ಜನವಿರೋಧಿಗಳಾಗಿವೆ ಎಂದು ಆರೋಪಿಸಿದ್ದಾರೆ. ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಹನ್ಸ್‌ರಾಜ್ ಮೀನಾ “ಚತ್ತೀಸ್‌ಘಡದ ಆದಿವಾಸಿಗಳು 1.70 ಲಕ್ಷ ಹೆಕ್ಟೇರ್ ಹಸ್ಡಿಯೋ ಅರಣ್ಯವನ್ನು ಅದಾನಿಯಿಂದ ರಕ್ಷಿಸಲು 300 ಕಿಮೀ ಪ್ರಯಾಣಿಸಿ ರಾಯ್‌ಪುರ ತಲುಪಿದ್ದಾರೆ. ಆದರೆ ಅವರ ಮನವಿ ಸ್ವೀಕರಿಸಲು ಭೂಪೇಶ್‌ ಭಾಘೇಲ್‌ ಸರ್ಕಾರದ ಒಬ್ಬ ಸಚಿವರು, ಶಾಸಕರು ಬಂದಿಲ್ಲ. ಆದರೆ ಆದಿವಾಸಿ ನೃತ್ಯೋತ್ಸವಕ್ಕೆ ಆಹ್ವಾನಿಸಲು ಪ್ರತಿ ರಾಜ್ಯಕ್ಕೂ ಹೋಗುತ್ತಾರೆ. ಸಾಕು ಮಾಡಿ ನಿಮ್ಮ ನಾಟಕವನ್ನು” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...