Homeಚಳವಳಿಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

- Advertisement -
- Advertisement -

ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಇಂದು ರಾಜಧಾನಿ ರಾಯ್‌ಪುರ ತಲುಪಿದ್ದಾರೆ. ಹಸ್ಡಿಯೋ ಅರಂಡ್ ಕಾಡಿನ ಘಟ್ಬರಾ ಗ್ರಾಮದಿಂದ ಅಕ್ಟೋಬರ್ 04 ರಂದು ನೂರಾರು ಆದಿವಾಸಿಗಳು ಅಂಬೇಡ್ಕರ್, ಗಾಂಧೀಜಿ ಫೋಟೊ ಹಿಡಿದು ಆರಂಭಿಸಿದ ನಡಿಗೆ ಮಳೆ, ಗಾಳಿಯನ್ನೆಲ್ಲ ಎದುರಿಸಿ ಇಂದು ರಾಜಧಾನಿ ತಲುಪಿದೆ.

ಉತ್ತರ ಚತ್ತೀಸ್‌ಘಡದ ಕೊರ್ಬಾ, ಸರ್ಗುಜಾ ಮತ್ತು ಸೂರಜ್‌ಪುರ್ ಜಿಲ್ಲೆಗಳಲ್ಲಿ ಹರಡಿರುವ ಹಸ್ಡಿಯೋ ಅರಣ್ಯ ಮಧ್ಯ ಭಾರತದ ಅತಿ ದೊಡ್ಡ ಕಾಡುಗಳಲ್ಲಿ ಒಂದಾಗಿದೆ. ಕಾಡು ಕೃಷಿ-ಅವಲಂಬಿತ ಸಮುದಾಯಗಳು, ಗೊಂಡ ಆದಿವಾಸಿಗಳು, ನದಿ-ನೀರಿನ ಮೂಲಗಳು, ಆನೆಗಳು, ಚಿರತೆಗಳು ಸೇರಿದಂತೆ ಅಸಂಖ್ಯಾತ ಪ್ರಾಣಿಗಳು ಇಲ್ಲಿ ವಾಸವಿದ್ದು ಜೀವವೈವಿಧ್ಯಗೆ ಹೆಸರುವಾಸಿಯಾಗಿದೆ. ಕಲ್ಲಿದ್ದಲು ಸಚಿವಾಲಯವು ಈ ಶ್ರೀಮಂತ ಕಾಡುಗಳಲ್ಲಿ ಸಾವಿರಾರು ಚ.ಕಿ.ಮೀ ಕಲ್ಲಿದ್ದಲು ಗಣಿ ನಿಕ್ಷೇಪಗಳಿವೆ ಎಂದು ಗುರುತಿಸಿದ್ದು, ಈ ಕಾಡು ಇಂದು ತೀವ್ರ ಅಪಾಯಕ್ಕೆ ಈಡಾಗಿದೆ.

ಹಸ್ಡಿಯೋದಲ್ಲಿನ ಹಳ್ಳಿ ಮತ್ತು ಅರಣ್ಯ ಪ್ರದೇಶಗಳನ್ನು 18 ಕಲ್ಲಿದ್ದಲು ಗಣಿ ಬ್ಲಾಕ್‌ಗಳಾಗಿ ವಿಭಾಗಿಸಲಾಗಿದ್ದು ಅವುಗಳಲ್ಲಿ 3 ಸರ್ಕಾರಿ ಸ್ವಾಮ್ಯದ ನಿಗಮಗಳಿಗೆ ನಾಲ್ಕು ಬ್ಲಾಕ್‌ಗಳನ್ನು ಹಂಚಿಕೆ ಮಾಡಲಾಗಿದೆ. ಅವರೆಲ್ಲರೂ “ಗಣಿ ಡೆವಲಪರ್ ಮತ್ತು ಆಪರೇಟರ್” ಗುತ್ತಿಗೆಯನ್ನು ಗೌತಮ್ ಅದಾನಿಯ ಭಾರತದ ಅತ್ಯಂತ ಶಕ್ತಿಶಾಲಿ ಕಾರ್ಪೊರೇಶನ್‌ಗಳಲ್ಲಿ ಒಂದಾದ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ (AEL)ಗೆ ನೀಡಿದ್ದಾರೆ. AEL ಈಗ ಹಸ್ಡಿಯೋದಲ್ಲಿ ಅಂದಾಜು 964 ದಶಲಕ್ಷ ಟನ್‌ಗಳಷ್ಟು ಕಲ್ಲಿದ್ದಲು ಗಣಿಗಾರಿಕೆ ಮಾಡಲು ಒಪ್ಪಂದ ಮಾಡಿಕೊಂಡಿದೆ. ಅದಕ್ಕಾಗಿ ಸುಮಾರು 7,500 ಹೆಕ್ಟೇರ್ ಭೂಮಿ ಮತ್ತು ಕಾಡುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಮತ್ತು ಮುಕ್ತ ಗಣಿಗಾರಿಕೆಗೆ ನಿರ್ಧರಿಸಲಾಗಿದೆ. AEL ಹಸ್ಡಿಯೋದಲ್ಲಿ ಗಣಿಗಾರಿಕೆ ಕಾರ್ಯಾಚರಣೆ ಆರಂಭಿಸಿದ ವರ್ಷಗಳಲ್ಲಿ ಅರಣ್ಯನಾಶ ಉಂಟಾಗಿದ್ದು ಅದರ ವಿರುದ್ಧ ಅಲ್ಲಿನ ಸ್ಥಳೀಯ ಜನತೆ ಸಿಡಿದೆದ್ದಿದ್ದಾರೆ.

ಹಸ್ಡಿಯೋ ಕಾಡು, Photo Courtesy: Article 14

ಇಲ್ಲಿನ ಜೀವವೈವಿಧ್ಯವನ್ನು ನಾಶಗೊಳಿಸುವ, ಕಾಡನ್ನು ನುಂಗಿಹಾಕುವ ಮತ್ತು ತಮ್ಮ ಬದಕನ್ನು ಕಿತ್ತುಕೊಳ್ಳುವ ಗಣಿಗಾರಿಕೆ ನಿಲ್ಲಿಸಿ, ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ ಎಂಬ ಘೋಷಣೆಯೊಂದಿಗೆ ಸ್ಥಳೀಯ ನಿವಾಸಿಗಳು ಪ್ರತಿಭಟನೆಗಿಳಿದಿದ್ದಾರೆ. 2011ರ ಅಕ್ಟೋಬರ್ 02 ರಂದೇ ಅಂದರೆ ಹತ್ತು ವರ್ಷಗಳ ಹಿಂದೆಯೇ ಘಟ್ಬರಾ ಗ್ರಾಮಸಭೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆ ವಿರೋಧಿಸಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈಗ 2021ರ ಅಕ್ಟೋಬರ್ 02 ರಂದು ಫತೇಪುರ್ ಗ್ರಾಮದಲ್ಲಿ ಅರಣ್ಯ ಸತ್ಯಾಗ್ರಹ ನಡೆಸಿದ ಅವರು ರಾಜಧಾನಿಗೆ ಪಾದಯಾತ್ರೆ ನಡೆಸಿದ್ದಾರೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಎರಡು ಪಕ್ಷಗಳು ಜನವಿರೋಧಿಗಳಾಗಿವೆ ಎಂದು ಆರೋಪಿಸಿದ್ದಾರೆ. ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಹನ್ಸ್‌ರಾಜ್ ಮೀನಾ “ಚತ್ತೀಸ್‌ಘಡದ ಆದಿವಾಸಿಗಳು 1.70 ಲಕ್ಷ ಹೆಕ್ಟೇರ್ ಹಸ್ಡಿಯೋ ಅರಣ್ಯವನ್ನು ಅದಾನಿಯಿಂದ ರಕ್ಷಿಸಲು 300 ಕಿಮೀ ಪ್ರಯಾಣಿಸಿ ರಾಯ್‌ಪುರ ತಲುಪಿದ್ದಾರೆ. ಆದರೆ ಅವರ ಮನವಿ ಸ್ವೀಕರಿಸಲು ಭೂಪೇಶ್‌ ಭಾಘೇಲ್‌ ಸರ್ಕಾರದ ಒಬ್ಬ ಸಚಿವರು, ಶಾಸಕರು ಬಂದಿಲ್ಲ. ಆದರೆ ಆದಿವಾಸಿ ನೃತ್ಯೋತ್ಸವಕ್ಕೆ ಆಹ್ವಾನಿಸಲು ಪ್ರತಿ ರಾಜ್ಯಕ್ಕೂ ಹೋಗುತ್ತಾರೆ. ಸಾಕು ಮಾಡಿ ನಿಮ್ಮ ನಾಟಕವನ್ನು” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....