Homeಚಳವಳಿಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

- Advertisement -
- Advertisement -

ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಇಂದು ರಾಜಧಾನಿ ರಾಯ್‌ಪುರ ತಲುಪಿದ್ದಾರೆ. ಹಸ್ಡಿಯೋ ಅರಂಡ್ ಕಾಡಿನ ಘಟ್ಬರಾ ಗ್ರಾಮದಿಂದ ಅಕ್ಟೋಬರ್ 04 ರಂದು ನೂರಾರು ಆದಿವಾಸಿಗಳು ಅಂಬೇಡ್ಕರ್, ಗಾಂಧೀಜಿ ಫೋಟೊ ಹಿಡಿದು ಆರಂಭಿಸಿದ ನಡಿಗೆ ಮಳೆ, ಗಾಳಿಯನ್ನೆಲ್ಲ ಎದುರಿಸಿ ಇಂದು ರಾಜಧಾನಿ ತಲುಪಿದೆ.

ಉತ್ತರ ಚತ್ತೀಸ್‌ಘಡದ ಕೊರ್ಬಾ, ಸರ್ಗುಜಾ ಮತ್ತು ಸೂರಜ್‌ಪುರ್ ಜಿಲ್ಲೆಗಳಲ್ಲಿ ಹರಡಿರುವ ಹಸ್ಡಿಯೋ ಅರಣ್ಯ ಮಧ್ಯ ಭಾರತದ ಅತಿ ದೊಡ್ಡ ಕಾಡುಗಳಲ್ಲಿ ಒಂದಾಗಿದೆ. ಕಾಡು ಕೃಷಿ-ಅವಲಂಬಿತ ಸಮುದಾಯಗಳು, ಗೊಂಡ ಆದಿವಾಸಿಗಳು, ನದಿ-ನೀರಿನ ಮೂಲಗಳು, ಆನೆಗಳು, ಚಿರತೆಗಳು ಸೇರಿದಂತೆ ಅಸಂಖ್ಯಾತ ಪ್ರಾಣಿಗಳು ಇಲ್ಲಿ ವಾಸವಿದ್ದು ಜೀವವೈವಿಧ್ಯಗೆ ಹೆಸರುವಾಸಿಯಾಗಿದೆ. ಕಲ್ಲಿದ್ದಲು ಸಚಿವಾಲಯವು ಈ ಶ್ರೀಮಂತ ಕಾಡುಗಳಲ್ಲಿ ಸಾವಿರಾರು ಚ.ಕಿ.ಮೀ ಕಲ್ಲಿದ್ದಲು ಗಣಿ ನಿಕ್ಷೇಪಗಳಿವೆ ಎಂದು ಗುರುತಿಸಿದ್ದು, ಈ ಕಾಡು ಇಂದು ತೀವ್ರ ಅಪಾಯಕ್ಕೆ ಈಡಾಗಿದೆ.

ಹಸ್ಡಿಯೋದಲ್ಲಿನ ಹಳ್ಳಿ ಮತ್ತು ಅರಣ್ಯ ಪ್ರದೇಶಗಳನ್ನು 18 ಕಲ್ಲಿದ್ದಲು ಗಣಿ ಬ್ಲಾಕ್‌ಗಳಾಗಿ ವಿಭಾಗಿಸಲಾಗಿದ್ದು ಅವುಗಳಲ್ಲಿ 3 ಸರ್ಕಾರಿ ಸ್ವಾಮ್ಯದ ನಿಗಮಗಳಿಗೆ ನಾಲ್ಕು ಬ್ಲಾಕ್‌ಗಳನ್ನು ಹಂಚಿಕೆ ಮಾಡಲಾಗಿದೆ. ಅವರೆಲ್ಲರೂ “ಗಣಿ ಡೆವಲಪರ್ ಮತ್ತು ಆಪರೇಟರ್” ಗುತ್ತಿಗೆಯನ್ನು ಗೌತಮ್ ಅದಾನಿಯ ಭಾರತದ ಅತ್ಯಂತ ಶಕ್ತಿಶಾಲಿ ಕಾರ್ಪೊರೇಶನ್‌ಗಳಲ್ಲಿ ಒಂದಾದ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ (AEL)ಗೆ ನೀಡಿದ್ದಾರೆ. AEL ಈಗ ಹಸ್ಡಿಯೋದಲ್ಲಿ ಅಂದಾಜು 964 ದಶಲಕ್ಷ ಟನ್‌ಗಳಷ್ಟು ಕಲ್ಲಿದ್ದಲು ಗಣಿಗಾರಿಕೆ ಮಾಡಲು ಒಪ್ಪಂದ ಮಾಡಿಕೊಂಡಿದೆ. ಅದಕ್ಕಾಗಿ ಸುಮಾರು 7,500 ಹೆಕ್ಟೇರ್ ಭೂಮಿ ಮತ್ತು ಕಾಡುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಮತ್ತು ಮುಕ್ತ ಗಣಿಗಾರಿಕೆಗೆ ನಿರ್ಧರಿಸಲಾಗಿದೆ. AEL ಹಸ್ಡಿಯೋದಲ್ಲಿ ಗಣಿಗಾರಿಕೆ ಕಾರ್ಯಾಚರಣೆ ಆರಂಭಿಸಿದ ವರ್ಷಗಳಲ್ಲಿ ಅರಣ್ಯನಾಶ ಉಂಟಾಗಿದ್ದು ಅದರ ವಿರುದ್ಧ ಅಲ್ಲಿನ ಸ್ಥಳೀಯ ಜನತೆ ಸಿಡಿದೆದ್ದಿದ್ದಾರೆ.

ಹಸ್ಡಿಯೋ ಕಾಡು, Photo Courtesy: Article 14

ಇಲ್ಲಿನ ಜೀವವೈವಿಧ್ಯವನ್ನು ನಾಶಗೊಳಿಸುವ, ಕಾಡನ್ನು ನುಂಗಿಹಾಕುವ ಮತ್ತು ತಮ್ಮ ಬದಕನ್ನು ಕಿತ್ತುಕೊಳ್ಳುವ ಗಣಿಗಾರಿಕೆ ನಿಲ್ಲಿಸಿ, ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ ಎಂಬ ಘೋಷಣೆಯೊಂದಿಗೆ ಸ್ಥಳೀಯ ನಿವಾಸಿಗಳು ಪ್ರತಿಭಟನೆಗಿಳಿದಿದ್ದಾರೆ. 2011ರ ಅಕ್ಟೋಬರ್ 02 ರಂದೇ ಅಂದರೆ ಹತ್ತು ವರ್ಷಗಳ ಹಿಂದೆಯೇ ಘಟ್ಬರಾ ಗ್ರಾಮಸಭೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆ ವಿರೋಧಿಸಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈಗ 2021ರ ಅಕ್ಟೋಬರ್ 02 ರಂದು ಫತೇಪುರ್ ಗ್ರಾಮದಲ್ಲಿ ಅರಣ್ಯ ಸತ್ಯಾಗ್ರಹ ನಡೆಸಿದ ಅವರು ರಾಜಧಾನಿಗೆ ಪಾದಯಾತ್ರೆ ನಡೆಸಿದ್ದಾರೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಎರಡು ಪಕ್ಷಗಳು ಜನವಿರೋಧಿಗಳಾಗಿವೆ ಎಂದು ಆರೋಪಿಸಿದ್ದಾರೆ. ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಹನ್ಸ್‌ರಾಜ್ ಮೀನಾ “ಚತ್ತೀಸ್‌ಘಡದ ಆದಿವಾಸಿಗಳು 1.70 ಲಕ್ಷ ಹೆಕ್ಟೇರ್ ಹಸ್ಡಿಯೋ ಅರಣ್ಯವನ್ನು ಅದಾನಿಯಿಂದ ರಕ್ಷಿಸಲು 300 ಕಿಮೀ ಪ್ರಯಾಣಿಸಿ ರಾಯ್‌ಪುರ ತಲುಪಿದ್ದಾರೆ. ಆದರೆ ಅವರ ಮನವಿ ಸ್ವೀಕರಿಸಲು ಭೂಪೇಶ್‌ ಭಾಘೇಲ್‌ ಸರ್ಕಾರದ ಒಬ್ಬ ಸಚಿವರು, ಶಾಸಕರು ಬಂದಿಲ್ಲ. ಆದರೆ ಆದಿವಾಸಿ ನೃತ್ಯೋತ್ಸವಕ್ಕೆ ಆಹ್ವಾನಿಸಲು ಪ್ರತಿ ರಾಜ್ಯಕ್ಕೂ ಹೋಗುತ್ತಾರೆ. ಸಾಕು ಮಾಡಿ ನಿಮ್ಮ ನಾಟಕವನ್ನು” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...