Homeಚಳವಳಿಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

- Advertisement -
- Advertisement -

ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಇಂದು ರಾಜಧಾನಿ ರಾಯ್‌ಪುರ ತಲುಪಿದ್ದಾರೆ. ಹಸ್ಡಿಯೋ ಅರಂಡ್ ಕಾಡಿನ ಘಟ್ಬರಾ ಗ್ರಾಮದಿಂದ ಅಕ್ಟೋಬರ್ 04 ರಂದು ನೂರಾರು ಆದಿವಾಸಿಗಳು ಅಂಬೇಡ್ಕರ್, ಗಾಂಧೀಜಿ ಫೋಟೊ ಹಿಡಿದು ಆರಂಭಿಸಿದ ನಡಿಗೆ ಮಳೆ, ಗಾಳಿಯನ್ನೆಲ್ಲ ಎದುರಿಸಿ ಇಂದು ರಾಜಧಾನಿ ತಲುಪಿದೆ.

ಉತ್ತರ ಚತ್ತೀಸ್‌ಘಡದ ಕೊರ್ಬಾ, ಸರ್ಗುಜಾ ಮತ್ತು ಸೂರಜ್‌ಪುರ್ ಜಿಲ್ಲೆಗಳಲ್ಲಿ ಹರಡಿರುವ ಹಸ್ಡಿಯೋ ಅರಣ್ಯ ಮಧ್ಯ ಭಾರತದ ಅತಿ ದೊಡ್ಡ ಕಾಡುಗಳಲ್ಲಿ ಒಂದಾಗಿದೆ. ಕಾಡು ಕೃಷಿ-ಅವಲಂಬಿತ ಸಮುದಾಯಗಳು, ಗೊಂಡ ಆದಿವಾಸಿಗಳು, ನದಿ-ನೀರಿನ ಮೂಲಗಳು, ಆನೆಗಳು, ಚಿರತೆಗಳು ಸೇರಿದಂತೆ ಅಸಂಖ್ಯಾತ ಪ್ರಾಣಿಗಳು ಇಲ್ಲಿ ವಾಸವಿದ್ದು ಜೀವವೈವಿಧ್ಯಗೆ ಹೆಸರುವಾಸಿಯಾಗಿದೆ. ಕಲ್ಲಿದ್ದಲು ಸಚಿವಾಲಯವು ಈ ಶ್ರೀಮಂತ ಕಾಡುಗಳಲ್ಲಿ ಸಾವಿರಾರು ಚ.ಕಿ.ಮೀ ಕಲ್ಲಿದ್ದಲು ಗಣಿ ನಿಕ್ಷೇಪಗಳಿವೆ ಎಂದು ಗುರುತಿಸಿದ್ದು, ಈ ಕಾಡು ಇಂದು ತೀವ್ರ ಅಪಾಯಕ್ಕೆ ಈಡಾಗಿದೆ.

ಹಸ್ಡಿಯೋದಲ್ಲಿನ ಹಳ್ಳಿ ಮತ್ತು ಅರಣ್ಯ ಪ್ರದೇಶಗಳನ್ನು 18 ಕಲ್ಲಿದ್ದಲು ಗಣಿ ಬ್ಲಾಕ್‌ಗಳಾಗಿ ವಿಭಾಗಿಸಲಾಗಿದ್ದು ಅವುಗಳಲ್ಲಿ 3 ಸರ್ಕಾರಿ ಸ್ವಾಮ್ಯದ ನಿಗಮಗಳಿಗೆ ನಾಲ್ಕು ಬ್ಲಾಕ್‌ಗಳನ್ನು ಹಂಚಿಕೆ ಮಾಡಲಾಗಿದೆ. ಅವರೆಲ್ಲರೂ “ಗಣಿ ಡೆವಲಪರ್ ಮತ್ತು ಆಪರೇಟರ್” ಗುತ್ತಿಗೆಯನ್ನು ಗೌತಮ್ ಅದಾನಿಯ ಭಾರತದ ಅತ್ಯಂತ ಶಕ್ತಿಶಾಲಿ ಕಾರ್ಪೊರೇಶನ್‌ಗಳಲ್ಲಿ ಒಂದಾದ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ (AEL)ಗೆ ನೀಡಿದ್ದಾರೆ. AEL ಈಗ ಹಸ್ಡಿಯೋದಲ್ಲಿ ಅಂದಾಜು 964 ದಶಲಕ್ಷ ಟನ್‌ಗಳಷ್ಟು ಕಲ್ಲಿದ್ದಲು ಗಣಿಗಾರಿಕೆ ಮಾಡಲು ಒಪ್ಪಂದ ಮಾಡಿಕೊಂಡಿದೆ. ಅದಕ್ಕಾಗಿ ಸುಮಾರು 7,500 ಹೆಕ್ಟೇರ್ ಭೂಮಿ ಮತ್ತು ಕಾಡುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಮತ್ತು ಮುಕ್ತ ಗಣಿಗಾರಿಕೆಗೆ ನಿರ್ಧರಿಸಲಾಗಿದೆ. AEL ಹಸ್ಡಿಯೋದಲ್ಲಿ ಗಣಿಗಾರಿಕೆ ಕಾರ್ಯಾಚರಣೆ ಆರಂಭಿಸಿದ ವರ್ಷಗಳಲ್ಲಿ ಅರಣ್ಯನಾಶ ಉಂಟಾಗಿದ್ದು ಅದರ ವಿರುದ್ಧ ಅಲ್ಲಿನ ಸ್ಥಳೀಯ ಜನತೆ ಸಿಡಿದೆದ್ದಿದ್ದಾರೆ.

ಹಸ್ಡಿಯೋ ಕಾಡು, Photo Courtesy: Article 14

ಇಲ್ಲಿನ ಜೀವವೈವಿಧ್ಯವನ್ನು ನಾಶಗೊಳಿಸುವ, ಕಾಡನ್ನು ನುಂಗಿಹಾಕುವ ಮತ್ತು ತಮ್ಮ ಬದಕನ್ನು ಕಿತ್ತುಕೊಳ್ಳುವ ಗಣಿಗಾರಿಕೆ ನಿಲ್ಲಿಸಿ, ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ ಎಂಬ ಘೋಷಣೆಯೊಂದಿಗೆ ಸ್ಥಳೀಯ ನಿವಾಸಿಗಳು ಪ್ರತಿಭಟನೆಗಿಳಿದಿದ್ದಾರೆ. 2011ರ ಅಕ್ಟೋಬರ್ 02 ರಂದೇ ಅಂದರೆ ಹತ್ತು ವರ್ಷಗಳ ಹಿಂದೆಯೇ ಘಟ್ಬರಾ ಗ್ರಾಮಸಭೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆ ವಿರೋಧಿಸಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈಗ 2021ರ ಅಕ್ಟೋಬರ್ 02 ರಂದು ಫತೇಪುರ್ ಗ್ರಾಮದಲ್ಲಿ ಅರಣ್ಯ ಸತ್ಯಾಗ್ರಹ ನಡೆಸಿದ ಅವರು ರಾಜಧಾನಿಗೆ ಪಾದಯಾತ್ರೆ ನಡೆಸಿದ್ದಾರೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಎರಡು ಪಕ್ಷಗಳು ಜನವಿರೋಧಿಗಳಾಗಿವೆ ಎಂದು ಆರೋಪಿಸಿದ್ದಾರೆ. ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಹನ್ಸ್‌ರಾಜ್ ಮೀನಾ “ಚತ್ತೀಸ್‌ಘಡದ ಆದಿವಾಸಿಗಳು 1.70 ಲಕ್ಷ ಹೆಕ್ಟೇರ್ ಹಸ್ಡಿಯೋ ಅರಣ್ಯವನ್ನು ಅದಾನಿಯಿಂದ ರಕ್ಷಿಸಲು 300 ಕಿಮೀ ಪ್ರಯಾಣಿಸಿ ರಾಯ್‌ಪುರ ತಲುಪಿದ್ದಾರೆ. ಆದರೆ ಅವರ ಮನವಿ ಸ್ವೀಕರಿಸಲು ಭೂಪೇಶ್‌ ಭಾಘೇಲ್‌ ಸರ್ಕಾರದ ಒಬ್ಬ ಸಚಿವರು, ಶಾಸಕರು ಬಂದಿಲ್ಲ. ಆದರೆ ಆದಿವಾಸಿ ನೃತ್ಯೋತ್ಸವಕ್ಕೆ ಆಹ್ವಾನಿಸಲು ಪ್ರತಿ ರಾಜ್ಯಕ್ಕೂ ಹೋಗುತ್ತಾರೆ. ಸಾಕು ಮಾಡಿ ನಿಮ್ಮ ನಾಟಕವನ್ನು” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...