Homeಚಳವಳಿಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

- Advertisement -
- Advertisement -

ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಇಂದು ರಾಜಧಾನಿ ರಾಯ್‌ಪುರ ತಲುಪಿದ್ದಾರೆ. ಹಸ್ಡಿಯೋ ಅರಂಡ್ ಕಾಡಿನ ಘಟ್ಬರಾ ಗ್ರಾಮದಿಂದ ಅಕ್ಟೋಬರ್ 04 ರಂದು ನೂರಾರು ಆದಿವಾಸಿಗಳು ಅಂಬೇಡ್ಕರ್, ಗಾಂಧೀಜಿ ಫೋಟೊ ಹಿಡಿದು ಆರಂಭಿಸಿದ ನಡಿಗೆ ಮಳೆ, ಗಾಳಿಯನ್ನೆಲ್ಲ ಎದುರಿಸಿ ಇಂದು ರಾಜಧಾನಿ ತಲುಪಿದೆ.

ಉತ್ತರ ಚತ್ತೀಸ್‌ಘಡದ ಕೊರ್ಬಾ, ಸರ್ಗುಜಾ ಮತ್ತು ಸೂರಜ್‌ಪುರ್ ಜಿಲ್ಲೆಗಳಲ್ಲಿ ಹರಡಿರುವ ಹಸ್ಡಿಯೋ ಅರಣ್ಯ ಮಧ್ಯ ಭಾರತದ ಅತಿ ದೊಡ್ಡ ಕಾಡುಗಳಲ್ಲಿ ಒಂದಾಗಿದೆ. ಕಾಡು ಕೃಷಿ-ಅವಲಂಬಿತ ಸಮುದಾಯಗಳು, ಗೊಂಡ ಆದಿವಾಸಿಗಳು, ನದಿ-ನೀರಿನ ಮೂಲಗಳು, ಆನೆಗಳು, ಚಿರತೆಗಳು ಸೇರಿದಂತೆ ಅಸಂಖ್ಯಾತ ಪ್ರಾಣಿಗಳು ಇಲ್ಲಿ ವಾಸವಿದ್ದು ಜೀವವೈವಿಧ್ಯಗೆ ಹೆಸರುವಾಸಿಯಾಗಿದೆ. ಕಲ್ಲಿದ್ದಲು ಸಚಿವಾಲಯವು ಈ ಶ್ರೀಮಂತ ಕಾಡುಗಳಲ್ಲಿ ಸಾವಿರಾರು ಚ.ಕಿ.ಮೀ ಕಲ್ಲಿದ್ದಲು ಗಣಿ ನಿಕ್ಷೇಪಗಳಿವೆ ಎಂದು ಗುರುತಿಸಿದ್ದು, ಈ ಕಾಡು ಇಂದು ತೀವ್ರ ಅಪಾಯಕ್ಕೆ ಈಡಾಗಿದೆ.

ಹಸ್ಡಿಯೋದಲ್ಲಿನ ಹಳ್ಳಿ ಮತ್ತು ಅರಣ್ಯ ಪ್ರದೇಶಗಳನ್ನು 18 ಕಲ್ಲಿದ್ದಲು ಗಣಿ ಬ್ಲಾಕ್‌ಗಳಾಗಿ ವಿಭಾಗಿಸಲಾಗಿದ್ದು ಅವುಗಳಲ್ಲಿ 3 ಸರ್ಕಾರಿ ಸ್ವಾಮ್ಯದ ನಿಗಮಗಳಿಗೆ ನಾಲ್ಕು ಬ್ಲಾಕ್‌ಗಳನ್ನು ಹಂಚಿಕೆ ಮಾಡಲಾಗಿದೆ. ಅವರೆಲ್ಲರೂ “ಗಣಿ ಡೆವಲಪರ್ ಮತ್ತು ಆಪರೇಟರ್” ಗುತ್ತಿಗೆಯನ್ನು ಗೌತಮ್ ಅದಾನಿಯ ಭಾರತದ ಅತ್ಯಂತ ಶಕ್ತಿಶಾಲಿ ಕಾರ್ಪೊರೇಶನ್‌ಗಳಲ್ಲಿ ಒಂದಾದ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ (AEL)ಗೆ ನೀಡಿದ್ದಾರೆ. AEL ಈಗ ಹಸ್ಡಿಯೋದಲ್ಲಿ ಅಂದಾಜು 964 ದಶಲಕ್ಷ ಟನ್‌ಗಳಷ್ಟು ಕಲ್ಲಿದ್ದಲು ಗಣಿಗಾರಿಕೆ ಮಾಡಲು ಒಪ್ಪಂದ ಮಾಡಿಕೊಂಡಿದೆ. ಅದಕ್ಕಾಗಿ ಸುಮಾರು 7,500 ಹೆಕ್ಟೇರ್ ಭೂಮಿ ಮತ್ತು ಕಾಡುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಮತ್ತು ಮುಕ್ತ ಗಣಿಗಾರಿಕೆಗೆ ನಿರ್ಧರಿಸಲಾಗಿದೆ. AEL ಹಸ್ಡಿಯೋದಲ್ಲಿ ಗಣಿಗಾರಿಕೆ ಕಾರ್ಯಾಚರಣೆ ಆರಂಭಿಸಿದ ವರ್ಷಗಳಲ್ಲಿ ಅರಣ್ಯನಾಶ ಉಂಟಾಗಿದ್ದು ಅದರ ವಿರುದ್ಧ ಅಲ್ಲಿನ ಸ್ಥಳೀಯ ಜನತೆ ಸಿಡಿದೆದ್ದಿದ್ದಾರೆ.

ಹಸ್ಡಿಯೋ ಕಾಡು, Photo Courtesy: Article 14

ಇಲ್ಲಿನ ಜೀವವೈವಿಧ್ಯವನ್ನು ನಾಶಗೊಳಿಸುವ, ಕಾಡನ್ನು ನುಂಗಿಹಾಕುವ ಮತ್ತು ತಮ್ಮ ಬದಕನ್ನು ಕಿತ್ತುಕೊಳ್ಳುವ ಗಣಿಗಾರಿಕೆ ನಿಲ್ಲಿಸಿ, ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ ಎಂಬ ಘೋಷಣೆಯೊಂದಿಗೆ ಸ್ಥಳೀಯ ನಿವಾಸಿಗಳು ಪ್ರತಿಭಟನೆಗಿಳಿದಿದ್ದಾರೆ. 2011ರ ಅಕ್ಟೋಬರ್ 02 ರಂದೇ ಅಂದರೆ ಹತ್ತು ವರ್ಷಗಳ ಹಿಂದೆಯೇ ಘಟ್ಬರಾ ಗ್ರಾಮಸಭೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆ ವಿರೋಧಿಸಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈಗ 2021ರ ಅಕ್ಟೋಬರ್ 02 ರಂದು ಫತೇಪುರ್ ಗ್ರಾಮದಲ್ಲಿ ಅರಣ್ಯ ಸತ್ಯಾಗ್ರಹ ನಡೆಸಿದ ಅವರು ರಾಜಧಾನಿಗೆ ಪಾದಯಾತ್ರೆ ನಡೆಸಿದ್ದಾರೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಎರಡು ಪಕ್ಷಗಳು ಜನವಿರೋಧಿಗಳಾಗಿವೆ ಎಂದು ಆರೋಪಿಸಿದ್ದಾರೆ. ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಹನ್ಸ್‌ರಾಜ್ ಮೀನಾ “ಚತ್ತೀಸ್‌ಘಡದ ಆದಿವಾಸಿಗಳು 1.70 ಲಕ್ಷ ಹೆಕ್ಟೇರ್ ಹಸ್ಡಿಯೋ ಅರಣ್ಯವನ್ನು ಅದಾನಿಯಿಂದ ರಕ್ಷಿಸಲು 300 ಕಿಮೀ ಪ್ರಯಾಣಿಸಿ ರಾಯ್‌ಪುರ ತಲುಪಿದ್ದಾರೆ. ಆದರೆ ಅವರ ಮನವಿ ಸ್ವೀಕರಿಸಲು ಭೂಪೇಶ್‌ ಭಾಘೇಲ್‌ ಸರ್ಕಾರದ ಒಬ್ಬ ಸಚಿವರು, ಶಾಸಕರು ಬಂದಿಲ್ಲ. ಆದರೆ ಆದಿವಾಸಿ ನೃತ್ಯೋತ್ಸವಕ್ಕೆ ಆಹ್ವಾನಿಸಲು ಪ್ರತಿ ರಾಜ್ಯಕ್ಕೂ ಹೋಗುತ್ತಾರೆ. ಸಾಕು ಮಾಡಿ ನಿಮ್ಮ ನಾಟಕವನ್ನು” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...