Homeಚಳವಳಿಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

- Advertisement -
- Advertisement -

ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಇಂದು ರಾಜಧಾನಿ ರಾಯ್‌ಪುರ ತಲುಪಿದ್ದಾರೆ. ಹಸ್ಡಿಯೋ ಅರಂಡ್ ಕಾಡಿನ ಘಟ್ಬರಾ ಗ್ರಾಮದಿಂದ ಅಕ್ಟೋಬರ್ 04 ರಂದು ನೂರಾರು ಆದಿವಾಸಿಗಳು ಅಂಬೇಡ್ಕರ್, ಗಾಂಧೀಜಿ ಫೋಟೊ ಹಿಡಿದು ಆರಂಭಿಸಿದ ನಡಿಗೆ ಮಳೆ, ಗಾಳಿಯನ್ನೆಲ್ಲ ಎದುರಿಸಿ ಇಂದು ರಾಜಧಾನಿ ತಲುಪಿದೆ.

ಉತ್ತರ ಚತ್ತೀಸ್‌ಘಡದ ಕೊರ್ಬಾ, ಸರ್ಗುಜಾ ಮತ್ತು ಸೂರಜ್‌ಪುರ್ ಜಿಲ್ಲೆಗಳಲ್ಲಿ ಹರಡಿರುವ ಹಸ್ಡಿಯೋ ಅರಣ್ಯ ಮಧ್ಯ ಭಾರತದ ಅತಿ ದೊಡ್ಡ ಕಾಡುಗಳಲ್ಲಿ ಒಂದಾಗಿದೆ. ಕಾಡು ಕೃಷಿ-ಅವಲಂಬಿತ ಸಮುದಾಯಗಳು, ಗೊಂಡ ಆದಿವಾಸಿಗಳು, ನದಿ-ನೀರಿನ ಮೂಲಗಳು, ಆನೆಗಳು, ಚಿರತೆಗಳು ಸೇರಿದಂತೆ ಅಸಂಖ್ಯಾತ ಪ್ರಾಣಿಗಳು ಇಲ್ಲಿ ವಾಸವಿದ್ದು ಜೀವವೈವಿಧ್ಯಗೆ ಹೆಸರುವಾಸಿಯಾಗಿದೆ. ಕಲ್ಲಿದ್ದಲು ಸಚಿವಾಲಯವು ಈ ಶ್ರೀಮಂತ ಕಾಡುಗಳಲ್ಲಿ ಸಾವಿರಾರು ಚ.ಕಿ.ಮೀ ಕಲ್ಲಿದ್ದಲು ಗಣಿ ನಿಕ್ಷೇಪಗಳಿವೆ ಎಂದು ಗುರುತಿಸಿದ್ದು, ಈ ಕಾಡು ಇಂದು ತೀವ್ರ ಅಪಾಯಕ್ಕೆ ಈಡಾಗಿದೆ.

ಹಸ್ಡಿಯೋದಲ್ಲಿನ ಹಳ್ಳಿ ಮತ್ತು ಅರಣ್ಯ ಪ್ರದೇಶಗಳನ್ನು 18 ಕಲ್ಲಿದ್ದಲು ಗಣಿ ಬ್ಲಾಕ್‌ಗಳಾಗಿ ವಿಭಾಗಿಸಲಾಗಿದ್ದು ಅವುಗಳಲ್ಲಿ 3 ಸರ್ಕಾರಿ ಸ್ವಾಮ್ಯದ ನಿಗಮಗಳಿಗೆ ನಾಲ್ಕು ಬ್ಲಾಕ್‌ಗಳನ್ನು ಹಂಚಿಕೆ ಮಾಡಲಾಗಿದೆ. ಅವರೆಲ್ಲರೂ “ಗಣಿ ಡೆವಲಪರ್ ಮತ್ತು ಆಪರೇಟರ್” ಗುತ್ತಿಗೆಯನ್ನು ಗೌತಮ್ ಅದಾನಿಯ ಭಾರತದ ಅತ್ಯಂತ ಶಕ್ತಿಶಾಲಿ ಕಾರ್ಪೊರೇಶನ್‌ಗಳಲ್ಲಿ ಒಂದಾದ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ (AEL)ಗೆ ನೀಡಿದ್ದಾರೆ. AEL ಈಗ ಹಸ್ಡಿಯೋದಲ್ಲಿ ಅಂದಾಜು 964 ದಶಲಕ್ಷ ಟನ್‌ಗಳಷ್ಟು ಕಲ್ಲಿದ್ದಲು ಗಣಿಗಾರಿಕೆ ಮಾಡಲು ಒಪ್ಪಂದ ಮಾಡಿಕೊಂಡಿದೆ. ಅದಕ್ಕಾಗಿ ಸುಮಾರು 7,500 ಹೆಕ್ಟೇರ್ ಭೂಮಿ ಮತ್ತು ಕಾಡುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಮತ್ತು ಮುಕ್ತ ಗಣಿಗಾರಿಕೆಗೆ ನಿರ್ಧರಿಸಲಾಗಿದೆ. AEL ಹಸ್ಡಿಯೋದಲ್ಲಿ ಗಣಿಗಾರಿಕೆ ಕಾರ್ಯಾಚರಣೆ ಆರಂಭಿಸಿದ ವರ್ಷಗಳಲ್ಲಿ ಅರಣ್ಯನಾಶ ಉಂಟಾಗಿದ್ದು ಅದರ ವಿರುದ್ಧ ಅಲ್ಲಿನ ಸ್ಥಳೀಯ ಜನತೆ ಸಿಡಿದೆದ್ದಿದ್ದಾರೆ.

ಹಸ್ಡಿಯೋ ಕಾಡು, Photo Courtesy: Article 14

ಇಲ್ಲಿನ ಜೀವವೈವಿಧ್ಯವನ್ನು ನಾಶಗೊಳಿಸುವ, ಕಾಡನ್ನು ನುಂಗಿಹಾಕುವ ಮತ್ತು ತಮ್ಮ ಬದಕನ್ನು ಕಿತ್ತುಕೊಳ್ಳುವ ಗಣಿಗಾರಿಕೆ ನಿಲ್ಲಿಸಿ, ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ ಎಂಬ ಘೋಷಣೆಯೊಂದಿಗೆ ಸ್ಥಳೀಯ ನಿವಾಸಿಗಳು ಪ್ರತಿಭಟನೆಗಿಳಿದಿದ್ದಾರೆ. 2011ರ ಅಕ್ಟೋಬರ್ 02 ರಂದೇ ಅಂದರೆ ಹತ್ತು ವರ್ಷಗಳ ಹಿಂದೆಯೇ ಘಟ್ಬರಾ ಗ್ರಾಮಸಭೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆ ವಿರೋಧಿಸಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈಗ 2021ರ ಅಕ್ಟೋಬರ್ 02 ರಂದು ಫತೇಪುರ್ ಗ್ರಾಮದಲ್ಲಿ ಅರಣ್ಯ ಸತ್ಯಾಗ್ರಹ ನಡೆಸಿದ ಅವರು ರಾಜಧಾನಿಗೆ ಪಾದಯಾತ್ರೆ ನಡೆಸಿದ್ದಾರೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಎರಡು ಪಕ್ಷಗಳು ಜನವಿರೋಧಿಗಳಾಗಿವೆ ಎಂದು ಆರೋಪಿಸಿದ್ದಾರೆ. ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಹನ್ಸ್‌ರಾಜ್ ಮೀನಾ “ಚತ್ತೀಸ್‌ಘಡದ ಆದಿವಾಸಿಗಳು 1.70 ಲಕ್ಷ ಹೆಕ್ಟೇರ್ ಹಸ್ಡಿಯೋ ಅರಣ್ಯವನ್ನು ಅದಾನಿಯಿಂದ ರಕ್ಷಿಸಲು 300 ಕಿಮೀ ಪ್ರಯಾಣಿಸಿ ರಾಯ್‌ಪುರ ತಲುಪಿದ್ದಾರೆ. ಆದರೆ ಅವರ ಮನವಿ ಸ್ವೀಕರಿಸಲು ಭೂಪೇಶ್‌ ಭಾಘೇಲ್‌ ಸರ್ಕಾರದ ಒಬ್ಬ ಸಚಿವರು, ಶಾಸಕರು ಬಂದಿಲ್ಲ. ಆದರೆ ಆದಿವಾಸಿ ನೃತ್ಯೋತ್ಸವಕ್ಕೆ ಆಹ್ವಾನಿಸಲು ಪ್ರತಿ ರಾಜ್ಯಕ್ಕೂ ಹೋಗುತ್ತಾರೆ. ಸಾಕು ಮಾಡಿ ನಿಮ್ಮ ನಾಟಕವನ್ನು” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...