Homeಚಳವಳಿಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ: ಚತ್ತೀಸ್‌ಘಡ ಆದಿವಾಸಿಗಳಿಂದ 300 ಕಿ.ಮೀ ಪಾದಯಾತ್ರೆ

ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

- Advertisement -
- Advertisement -

ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಇಂದು ರಾಜಧಾನಿ ರಾಯ್‌ಪುರ ತಲುಪಿದ್ದಾರೆ. ಹಸ್ಡಿಯೋ ಅರಂಡ್ ಕಾಡಿನ ಘಟ್ಬರಾ ಗ್ರಾಮದಿಂದ ಅಕ್ಟೋಬರ್ 04 ರಂದು ನೂರಾರು ಆದಿವಾಸಿಗಳು ಅಂಬೇಡ್ಕರ್, ಗಾಂಧೀಜಿ ಫೋಟೊ ಹಿಡಿದು ಆರಂಭಿಸಿದ ನಡಿಗೆ ಮಳೆ, ಗಾಳಿಯನ್ನೆಲ್ಲ ಎದುರಿಸಿ ಇಂದು ರಾಜಧಾನಿ ತಲುಪಿದೆ.

ಉತ್ತರ ಚತ್ತೀಸ್‌ಘಡದ ಕೊರ್ಬಾ, ಸರ್ಗುಜಾ ಮತ್ತು ಸೂರಜ್‌ಪುರ್ ಜಿಲ್ಲೆಗಳಲ್ಲಿ ಹರಡಿರುವ ಹಸ್ಡಿಯೋ ಅರಣ್ಯ ಮಧ್ಯ ಭಾರತದ ಅತಿ ದೊಡ್ಡ ಕಾಡುಗಳಲ್ಲಿ ಒಂದಾಗಿದೆ. ಕಾಡು ಕೃಷಿ-ಅವಲಂಬಿತ ಸಮುದಾಯಗಳು, ಗೊಂಡ ಆದಿವಾಸಿಗಳು, ನದಿ-ನೀರಿನ ಮೂಲಗಳು, ಆನೆಗಳು, ಚಿರತೆಗಳು ಸೇರಿದಂತೆ ಅಸಂಖ್ಯಾತ ಪ್ರಾಣಿಗಳು ಇಲ್ಲಿ ವಾಸವಿದ್ದು ಜೀವವೈವಿಧ್ಯಗೆ ಹೆಸರುವಾಸಿಯಾಗಿದೆ. ಕಲ್ಲಿದ್ದಲು ಸಚಿವಾಲಯವು ಈ ಶ್ರೀಮಂತ ಕಾಡುಗಳಲ್ಲಿ ಸಾವಿರಾರು ಚ.ಕಿ.ಮೀ ಕಲ್ಲಿದ್ದಲು ಗಣಿ ನಿಕ್ಷೇಪಗಳಿವೆ ಎಂದು ಗುರುತಿಸಿದ್ದು, ಈ ಕಾಡು ಇಂದು ತೀವ್ರ ಅಪಾಯಕ್ಕೆ ಈಡಾಗಿದೆ.

ಹಸ್ಡಿಯೋದಲ್ಲಿನ ಹಳ್ಳಿ ಮತ್ತು ಅರಣ್ಯ ಪ್ರದೇಶಗಳನ್ನು 18 ಕಲ್ಲಿದ್ದಲು ಗಣಿ ಬ್ಲಾಕ್‌ಗಳಾಗಿ ವಿಭಾಗಿಸಲಾಗಿದ್ದು ಅವುಗಳಲ್ಲಿ 3 ಸರ್ಕಾರಿ ಸ್ವಾಮ್ಯದ ನಿಗಮಗಳಿಗೆ ನಾಲ್ಕು ಬ್ಲಾಕ್‌ಗಳನ್ನು ಹಂಚಿಕೆ ಮಾಡಲಾಗಿದೆ. ಅವರೆಲ್ಲರೂ “ಗಣಿ ಡೆವಲಪರ್ ಮತ್ತು ಆಪರೇಟರ್” ಗುತ್ತಿಗೆಯನ್ನು ಗೌತಮ್ ಅದಾನಿಯ ಭಾರತದ ಅತ್ಯಂತ ಶಕ್ತಿಶಾಲಿ ಕಾರ್ಪೊರೇಶನ್‌ಗಳಲ್ಲಿ ಒಂದಾದ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ (AEL)ಗೆ ನೀಡಿದ್ದಾರೆ. AEL ಈಗ ಹಸ್ಡಿಯೋದಲ್ಲಿ ಅಂದಾಜು 964 ದಶಲಕ್ಷ ಟನ್‌ಗಳಷ್ಟು ಕಲ್ಲಿದ್ದಲು ಗಣಿಗಾರಿಕೆ ಮಾಡಲು ಒಪ್ಪಂದ ಮಾಡಿಕೊಂಡಿದೆ. ಅದಕ್ಕಾಗಿ ಸುಮಾರು 7,500 ಹೆಕ್ಟೇರ್ ಭೂಮಿ ಮತ್ತು ಕಾಡುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಮತ್ತು ಮುಕ್ತ ಗಣಿಗಾರಿಕೆಗೆ ನಿರ್ಧರಿಸಲಾಗಿದೆ. AEL ಹಸ್ಡಿಯೋದಲ್ಲಿ ಗಣಿಗಾರಿಕೆ ಕಾರ್ಯಾಚರಣೆ ಆರಂಭಿಸಿದ ವರ್ಷಗಳಲ್ಲಿ ಅರಣ್ಯನಾಶ ಉಂಟಾಗಿದ್ದು ಅದರ ವಿರುದ್ಧ ಅಲ್ಲಿನ ಸ್ಥಳೀಯ ಜನತೆ ಸಿಡಿದೆದ್ದಿದ್ದಾರೆ.

ಹಸ್ಡಿಯೋ ಕಾಡು, Photo Courtesy: Article 14

ಇಲ್ಲಿನ ಜೀವವೈವಿಧ್ಯವನ್ನು ನಾಶಗೊಳಿಸುವ, ಕಾಡನ್ನು ನುಂಗಿಹಾಕುವ ಮತ್ತು ತಮ್ಮ ಬದಕನ್ನು ಕಿತ್ತುಕೊಳ್ಳುವ ಗಣಿಗಾರಿಕೆ ನಿಲ್ಲಿಸಿ, ಅದಾನಿಯಿಂದ ಹಸ್ಡಿಯೋ ಕಾಡನ್ನು ಉಳಿಸಿ ಎಂಬ ಘೋಷಣೆಯೊಂದಿಗೆ ಸ್ಥಳೀಯ ನಿವಾಸಿಗಳು ಪ್ರತಿಭಟನೆಗಿಳಿದಿದ್ದಾರೆ. 2011ರ ಅಕ್ಟೋಬರ್ 02 ರಂದೇ ಅಂದರೆ ಹತ್ತು ವರ್ಷಗಳ ಹಿಂದೆಯೇ ಘಟ್ಬರಾ ಗ್ರಾಮಸಭೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆ ವಿರೋಧಿಸಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈಗ 2021ರ ಅಕ್ಟೋಬರ್ 02 ರಂದು ಫತೇಪುರ್ ಗ್ರಾಮದಲ್ಲಿ ಅರಣ್ಯ ಸತ್ಯಾಗ್ರಹ ನಡೆಸಿದ ಅವರು ರಾಜಧಾನಿಗೆ ಪಾದಯಾತ್ರೆ ನಡೆಸಿದ್ದಾರೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಎರಡು ಪಕ್ಷಗಳು ಜನವಿರೋಧಿಗಳಾಗಿವೆ ಎಂದು ಆರೋಪಿಸಿದ್ದಾರೆ. ಈ ಆದಿವಾಸಿಗಳ ದಿಟ್ಟ ಹೋರಾಟವನ್ನು ನೂರಾರು ಸಾಮಾಜಿಕ ಕಾರ್ಯಕರ್ತರು ಬೆಂಬಲಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ #StopAdani ಎಂಬ ಪ್ರಚಾರಾಂದೋಲನ ಆರಂಭಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಹನ್ಸ್‌ರಾಜ್ ಮೀನಾ “ಚತ್ತೀಸ್‌ಘಡದ ಆದಿವಾಸಿಗಳು 1.70 ಲಕ್ಷ ಹೆಕ್ಟೇರ್ ಹಸ್ಡಿಯೋ ಅರಣ್ಯವನ್ನು ಅದಾನಿಯಿಂದ ರಕ್ಷಿಸಲು 300 ಕಿಮೀ ಪ್ರಯಾಣಿಸಿ ರಾಯ್‌ಪುರ ತಲುಪಿದ್ದಾರೆ. ಆದರೆ ಅವರ ಮನವಿ ಸ್ವೀಕರಿಸಲು ಭೂಪೇಶ್‌ ಭಾಘೇಲ್‌ ಸರ್ಕಾರದ ಒಬ್ಬ ಸಚಿವರು, ಶಾಸಕರು ಬಂದಿಲ್ಲ. ಆದರೆ ಆದಿವಾಸಿ ನೃತ್ಯೋತ್ಸವಕ್ಕೆ ಆಹ್ವಾನಿಸಲು ಪ್ರತಿ ರಾಜ್ಯಕ್ಕೂ ಹೋಗುತ್ತಾರೆ. ಸಾಕು ಮಾಡಿ ನಿಮ್ಮ ನಾಟಕವನ್ನು” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....