Homeಕರ್ನಾಟಕಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ...

ಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ ಮಹತ್ವದ ಸಭೆ.

KVS, BVS, SFI, CFI, NSUI, SIO ಹಾಗೂ ವಿದ್ಯಾರ್ಥಿ ಜನತಾದಳದ ಪ್ರತಿನಿಧಿಗಳೂ ಸಹ ಒಕ್ಕೊರಲಿನಿಂದ ಈ ಸಭೆಯಲ್ಲಿ ಭಾಗವಹಿಸಿ ಐಕ್ಯಮತ್ಯ ಸೂಚಿಸಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

- Advertisement -
- Advertisement -

ಜೆಎನ್‌ಯು ಪ್ರತಿಭಟನೆಯ ನಂತರ ಕರ್ನಾಟಕದಲ್ಲಿ ಎಲ್ಲಾ ಧಾರೆಗಳ ವಿದ್ಯಾರ್ಥಿ ಸಂಘಟನೆಗಳು ಒಂದೆಡೆ ಸೇರುತ್ತಿರುವ ಪ್ರಯತ್ನವೊಂದು ಆರಂಭವಾಗಿದೆ. ಆ ಪ್ರಯತ್ನದ ಮುಂಚೂಣಿಯಲ್ಲಿರುವವರು ಹೇಳಿದ್ದನ್ನು ಇಲ್ಲಿ ಯಥಾವತ್ತಾಗಿ ನೀಡಲಾಗಿದೆ.

ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು. ಅದು ಉಚಿತವಾಗಿ, ಸಮಾನವಾಗಿ ಎಲ್ಲರಿಗೂ ಕಡ್ಡಾಯವಾಗಿ ಸಿಗಬೇಕೆಂಬುದು ಸಂವಿಧಾನ ಆಶಯ. ಅದಕ್ಕಾಗಿ ಸಾವಿತ್ರಿಬಾಯಿ ಫುಲೆ, ಮಹಾತ್ಮ ಜ್ಯೋತಿಬಾ ಫುಲೆ, ಡಾ.ಬಿ.ಆ‌ರ್‌ ಅಂಬೇಡ್ಕರ್‌ ಸೇರಿದಂತೆ ನೂರಾರು ಮಹನೀಯರು ಹೋರಾಡಿದ್ದಾರೆ. ಇಂದಿಗೂ ಆ ಹೋರಾಟ ನಡೆಯುತ್ತಲೇ ಇದೆ. ಆದರೆ ಆಳುವ ಸರ್ಕಾರಗಳು ಮಾತ್ರ ಶಿಕ್ಷಣ ನೀಡುವ ತಮ್ಮ ಸಾಂವಿಧಾನಿಕ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸದಾ ಪ್ರಯತ್ನಿಸುತ್ತಿರುತ್ತವೆ. ಮನಬಂದಂತೆ ಖಾಸಗಿ ಸಂಸ್ಥೆಗಳನ್ನು ತೆರೆಯಲು ಅವಕಾಶ ಕೊಡುವುದು, ಸರ್ಕಾರಿ ಶಾಲಾ-ಕಾಲೇಜುಗಳನ್ನು ಮುಚ್ಚುವುದರಿಂದ ಹಿಡಿದು ಈಗ JNUವಿನಲ್ಲಿ ಯಥೇಚ್ಚ ಶುಲ್ಕ ಹೆಚ್ಚಳದವರೆಗೆ ಸರ್ಕಾರ ಹುನ್ನಾರ ನಡೆಯುತ್ತಲೇ ಇದೆ.

ಸರ್ಕಾರದ ಈ ಹುನ್ನಾರವನ್ನು ಬಯಲುಗೊಳಿಸಲು, JNU ವಿದ್ಯಾರ್ಥಿಗಳ ಹೋರಾಟ ಬೆಂಬಲಿಸಲು ಮತ್ತು ಸರ್ವರಿಗೂ ಉಚಿತ ಶಿಕ್ಷಣದ ಹಕ್ಕಿನ ದ್ವನಿಯನ್ನು ದೇಶಾದ್ಯಂತ ಪಸರಿಸಲು ಕರ್ನಾಟಕದ ಪ್ರಜ್ಞಾವಂತ ಬಳಗವೊಂದು ಸಿದ್ದಗೊಂಡಿದೆ. ಅದು ಕರ್ನಾಟಕದ ಎಲ್ಲಾ ವಿದ್ಯಾರ್ಥಿ ಸಂಘಟನೆಗಳನ್ನು ಒಂದೆಡೆ ತಂದು ಈ ಹೋರಾಟವನ್ನು ಮುನ್ನಡೆಸಲು ತೀರ್ಮಾನಿಸಿದೆ. ಆ ನೂತನ ಪ್ರಯತ್ನವೇ ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ವಾಗಿದೆ.

ಇದರ ಮೊದಲ ಪೂರ್ವಭಾವಿ ಸಭೆ ಹಿಂದುಳಿದ  ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಡಾ.ಸಿ.ಎಸ್‌ ದ್ವಾರಕನಾಥ್‌ ಮತ್ತು ಯುವ ಹೋರಾಟಗಾರರಾದ ಬಿ.ಆರ್‌ ಭಾಸ್ಕರ್‌ ಪ್ರಸಾದ್‌ರವರ ನೇತೃತ್ವದಲ್ಲಿ ನವೆಂಬರ್‌ 23ರಂದು ಬೆಂಗಳೂರಿನ ಗಾಂಧಿನಗರದಲ್ಲಿ ನಡೆದಿದೆ. KVS, BVS, SFI, CFI, NSUI, SIO ಹಾಗೂ ವಿದ್ಯಾರ್ಥಿ ಜನತಾದಳದ ಪ್ರತಿನಿಧಿಗಳೂ ಸಹ ಒಕ್ಕೊರಲಿನಿಂದ ಈ ಸಭೆಯಲ್ಲಿ ಭಾಗವಹಿಸಿ ಐಕ್ಯಮತ್ಯ ಸೂಚಿಸಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಮುಂದಿನ ಸಭೆಯು ನವೆಂಬರ್‌ 25ರ ಸೋಮವಾರ ಸಂಜೆ 4ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ನಡೆಯಲಿದ್ದು ABVP, AISA, AIDSO, DSF ಸಂಘಟನೆಗಳಿಗೂ ಆಹ್ವಾನ ನೀಡಲಾಗಿದ್ದು ಅವರೂ ಕೂಡ ಭಾಗವಹಿಸುವ ನಿರೀಕ್ಷೆಯಿದೆ ಎಂದು ಬಿ.ಆರ್‌ ಭಾಸ್ಕರ್‌ ಪ್ರಸಾದ್‌ ತಿಳಿಸಿದ್ದಾರೆ.

LKGಯಿಂದ PHDವರೆಗೂ ದೇಶದ ಪ್ರತಿಯೊಬ್ಬರಿಗೂ ಶಿಕ್ಷಣ ಉಚಿತವಾಗಿರಬೇಕು. ಶಿಕ್ಷಣ ರಾಷ್ಟ್ರೀಕರಣವಾಗಬೇಕು. ಜಾತಿ-ಲಿಂಗ ಧರ್ಮಗಳ ತಾರತಮ್ಯವಿಲ್ಲದೇ ಈ ದೇಶದ ಪ್ರತಿಯೊಬ್ಬರಿಗೂ ಸಮಾನ ಶಿಕ್ಷಣ ಸಿಗಬೇಕೆಂಬುದು ಒಕ್ಕೂಟದ ಆಶಯವಾಗಿದೆ. ಇದರ ಜೊತೆಗೆ JNU ಉಳಿಸಿಕೊಳ್ಳೋಣ ಬನ್ನಿ, ಈ ಹೋರಾಟ ನಮಗಾಗಿ, ನಮ್ಮ ಮುಂದಿನ ಪೀಳಿಗೆಗಾಗಿ, ದೇಶದ ಭವ್ಯ ಭವಿಷ್ಯಕ್ಕಾಗಿ ಎಂದು ಸಹ ಕರೆ ಕೊಡಲಾಗಿದೆ.

JNU ವಿದ್ಯಾರ್ಥಿಗಳ ಹೋರಾಟಕ್ಕೆ ನಾವು ಹೇಗೆ ಬೆಂಬಲಿಸಬಹುದು? ಇದರೊಂದಿಗೆ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಪ್ರೈಮರಿಯಿಂದ ಪಿಎಚ್.ಡಿ‌ ವರಗೂ ಉಚಿತ ಶಿಕ್ಷಣ ನೀಡಬೇಕು ಮತ್ತು‌ ಅತಿಮುಖ್ಯವಾಗಿ ಶಿಕ್ಷಣವನ್ನು ರಾಷ್ಡ್ರೀಕರಣ ಮಾಡಬೇಕು ಎಂಬುದರ ಬಗ್ಗೆ ನಮ್ಮ ಗಾಂಧಿನಗರದ ಕಛೇರಿಯಲ್ಲಿ ಇಂದು ಕರೆದಿದ್ದ ಸಭೆಗೆ ಬಹುತೇಕ ಎಲ್ಲಾ ವಿದ್ಯಾರ್ಥಿ ಸಂಘಟನೆಗಳ ನಾಯಕರು ತಮ್ಮ ಪಕ್ಷಬೇದ ತೊರೆದು, ಸೈದ್ದಾಂತಿಕ ಬಿನ್ನಾಭಿಪ್ರಾಯ ಬದಿಗಿಟ್ಟು ಬಂದಿದ್ದರು. ಸುಮಾರು ಎರಡು ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ಹಲವು ವಿಷಯಗಳ ಕುರಿತಂತೆ ಸುದೀರ್ಘವಾಗಿ ಚರ್ಚೆಯಾಯಿತು. ಈ ವಿಷಯದ ಬಗ್ಗೆ ಕಾಳಜಿ ಇರುವ ಇನ್ನಷ್ಟು ಜನರನ್ನು ಕರೆಸಬೇಕೆಂದು ತೀರ್ಮಾನಿಸಲಾಯಿತು ಎಂದು ಸಿ.ಎಸ್.ದ್ವಾರಕಾನಾಥ್‌ರವರು ತಿಳಿಸಿದ್ದಾರೆ.

ನಾನು 2002ರಿಂದ 2010ರವರೆಗೆ ದೆಹಲಿಯ ಜೆಎನ್‌ಯುನಲ್ಲಿ ಎಂ.ಎ, ಎಂ.ಫಿಲ್‌ ಮತ್ತು ಪಿಎಚ್‌ಡಿ ಮಾಡಿದ್ದೇನೆ. ಜೆಎನ್‌ಯು ಅತ್ಯುತ್ತಮ ಶಿಕ್ಷಣವನ್ನು ಅತಿ ಕಡಿಮೆ ವೆಚ್ಚದಲ್ಲಿ ನೀಡುತ್ತದೆ. ಹಾಗಾಗಿಯೇ ಭಾರತದ ಎಲ್ಲಾ ಮೂಲೆಗಳ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಅಲ್ಲಿಗೆ ಬರುತ್ತಾರೆ. ನಾನು ಕೂಡ ಹಳ್ಳಿಯಿಂದ ಹೋಗಿ ಅಲ್ಲಿ ವರ್ಷಕ್ಕೆ ಕೇವಲ 300 ರೂ ಕಟ್ಟಿ ಓದಿದವನು. ಅದಿಲ್ಲದಿದ್ದರೆ ನಾನು ಇಷ್ಟು ಮುಂದೆ ಬರಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲಿ ಕಮ್ಯುನಿಷ್ಟ್‌ ಪ್ರಭಾವ ಹೆಚ್ಚಾಗಿ ಇದ್ದರೂ ಕೂಡ ಯಾರ ಮೇಲೆಯು ಅವರು ತಮ್ಮ ಸಿದ್ದಾಂತವನ್ನು ಹೇರುವುದಿಲ್ಲ. ಅಲ್ಲಿ ABVP, NSUI ಸಹ ಇದೆ. ನಾವು ಕೂಡ ಬಹುಜನ್‌ ಸ್ಟೂಟೆಂಡ್ಸ್‌ ಫ್ರಂಟ್‌ ಎಂಬ ಸಂಘಟನೆ ಶುರು ಮಾಡಿದ್ದೆವು. ಅಷ್ಟೆಲ್ಲ ಸಂಘಟನೆಗಳು ಇದ್ದರೂ ಯಾರು ಯಾರಿಗೂ ಒತ್ತಾಯ ಮಾಡುವುದಿಲ್ಲ. ಅಲ್ಲಿ ಮುಕ್ತ ವಾತಾವರಣ ಇದ್ದು ಇಡೀ ದೇಶದ ವಸ್ತುಸ್ಥಿತಿಯನ್ನು ನಮಗೆ ಅರ್ಥ ಮಾಡಿಸುತ್ತದೆ. ಅದೇ ಬಲಿಷ್ಟ ಭಾರತ ಕಟ್ಟಲು ಎಲ್ಲರಿಗೂ ಪ್ರೇರಣೆ ಕೊಡುತ್ತದೆ. ಅಲ್ಲಿಂದ ಹೊರಬಂದವರು ಅದೇ ಆಲೋಚನೆಗಳನ್ನು ಬಿತ್ತುತ್ತಾರೆ ಎಂಬುದೇ ಬಿಜೆಪಿ ಸರ್ಕಾರಕ್ಕೆ ತಲೆನೋವಾಗಿದೆ. ಅದೊಂದೇ ಕಾರಣಕ್ಕೆ ಕೇಂದ್ರ ಸರ್ಕಾರ ಜೆಎನ್‌ಯು ಮುಗಿಸಲು ಹೊರಟಿದೆ. ಅದನ್ನು ಉಳಿಸಲು ನಾವು ಕರ್ನಾಟಕದಲ್ಲಿ ಒಂದೂಗೂಡುತ್ತಿದ್ದೆವೆ. – ಶ್ರೀನಿವಾಸ್‌, ಬಹುಜನ ವಿದ್ಯಾರ್ಥಿ ಸಂಘ(BVS)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Only basic education should be given free by the state . Higher education should be made available to only those who have the aptitude for it .It should not be based on any kind of reservation .

  2. ತುಂಬಾ ಒಳ್ಳೆಯ ಚರ್ಚೆ ಇದಾಗಿದ್ದು ಎಲ್ಲಾ ಮದ್ಯಮ . ಮತ್ತು ಬಡವರಿಗೂ ತುಂಬಾ ಉಪಯುಕ್ತ ಮಾಹಿತಿ ಎಲ್ಲರು ಶೇರ್ ಮಾಡುವ ಮೂಲಕ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

- Advertisment -

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...