Homeಕರ್ನಾಟಕಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ...

ಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ ಮಹತ್ವದ ಸಭೆ.

KVS, BVS, SFI, CFI, NSUI, SIO ಹಾಗೂ ವಿದ್ಯಾರ್ಥಿ ಜನತಾದಳದ ಪ್ರತಿನಿಧಿಗಳೂ ಸಹ ಒಕ್ಕೊರಲಿನಿಂದ ಈ ಸಭೆಯಲ್ಲಿ ಭಾಗವಹಿಸಿ ಐಕ್ಯಮತ್ಯ ಸೂಚಿಸಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

- Advertisement -
- Advertisement -

ಜೆಎನ್‌ಯು ಪ್ರತಿಭಟನೆಯ ನಂತರ ಕರ್ನಾಟಕದಲ್ಲಿ ಎಲ್ಲಾ ಧಾರೆಗಳ ವಿದ್ಯಾರ್ಥಿ ಸಂಘಟನೆಗಳು ಒಂದೆಡೆ ಸೇರುತ್ತಿರುವ ಪ್ರಯತ್ನವೊಂದು ಆರಂಭವಾಗಿದೆ. ಆ ಪ್ರಯತ್ನದ ಮುಂಚೂಣಿಯಲ್ಲಿರುವವರು ಹೇಳಿದ್ದನ್ನು ಇಲ್ಲಿ ಯಥಾವತ್ತಾಗಿ ನೀಡಲಾಗಿದೆ.

ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು. ಅದು ಉಚಿತವಾಗಿ, ಸಮಾನವಾಗಿ ಎಲ್ಲರಿಗೂ ಕಡ್ಡಾಯವಾಗಿ ಸಿಗಬೇಕೆಂಬುದು ಸಂವಿಧಾನ ಆಶಯ. ಅದಕ್ಕಾಗಿ ಸಾವಿತ್ರಿಬಾಯಿ ಫುಲೆ, ಮಹಾತ್ಮ ಜ್ಯೋತಿಬಾ ಫುಲೆ, ಡಾ.ಬಿ.ಆ‌ರ್‌ ಅಂಬೇಡ್ಕರ್‌ ಸೇರಿದಂತೆ ನೂರಾರು ಮಹನೀಯರು ಹೋರಾಡಿದ್ದಾರೆ. ಇಂದಿಗೂ ಆ ಹೋರಾಟ ನಡೆಯುತ್ತಲೇ ಇದೆ. ಆದರೆ ಆಳುವ ಸರ್ಕಾರಗಳು ಮಾತ್ರ ಶಿಕ್ಷಣ ನೀಡುವ ತಮ್ಮ ಸಾಂವಿಧಾನಿಕ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸದಾ ಪ್ರಯತ್ನಿಸುತ್ತಿರುತ್ತವೆ. ಮನಬಂದಂತೆ ಖಾಸಗಿ ಸಂಸ್ಥೆಗಳನ್ನು ತೆರೆಯಲು ಅವಕಾಶ ಕೊಡುವುದು, ಸರ್ಕಾರಿ ಶಾಲಾ-ಕಾಲೇಜುಗಳನ್ನು ಮುಚ್ಚುವುದರಿಂದ ಹಿಡಿದು ಈಗ JNUವಿನಲ್ಲಿ ಯಥೇಚ್ಚ ಶುಲ್ಕ ಹೆಚ್ಚಳದವರೆಗೆ ಸರ್ಕಾರ ಹುನ್ನಾರ ನಡೆಯುತ್ತಲೇ ಇದೆ.

ಸರ್ಕಾರದ ಈ ಹುನ್ನಾರವನ್ನು ಬಯಲುಗೊಳಿಸಲು, JNU ವಿದ್ಯಾರ್ಥಿಗಳ ಹೋರಾಟ ಬೆಂಬಲಿಸಲು ಮತ್ತು ಸರ್ವರಿಗೂ ಉಚಿತ ಶಿಕ್ಷಣದ ಹಕ್ಕಿನ ದ್ವನಿಯನ್ನು ದೇಶಾದ್ಯಂತ ಪಸರಿಸಲು ಕರ್ನಾಟಕದ ಪ್ರಜ್ಞಾವಂತ ಬಳಗವೊಂದು ಸಿದ್ದಗೊಂಡಿದೆ. ಅದು ಕರ್ನಾಟಕದ ಎಲ್ಲಾ ವಿದ್ಯಾರ್ಥಿ ಸಂಘಟನೆಗಳನ್ನು ಒಂದೆಡೆ ತಂದು ಈ ಹೋರಾಟವನ್ನು ಮುನ್ನಡೆಸಲು ತೀರ್ಮಾನಿಸಿದೆ. ಆ ನೂತನ ಪ್ರಯತ್ನವೇ ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ವಾಗಿದೆ.

ಇದರ ಮೊದಲ ಪೂರ್ವಭಾವಿ ಸಭೆ ಹಿಂದುಳಿದ  ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಡಾ.ಸಿ.ಎಸ್‌ ದ್ವಾರಕನಾಥ್‌ ಮತ್ತು ಯುವ ಹೋರಾಟಗಾರರಾದ ಬಿ.ಆರ್‌ ಭಾಸ್ಕರ್‌ ಪ್ರಸಾದ್‌ರವರ ನೇತೃತ್ವದಲ್ಲಿ ನವೆಂಬರ್‌ 23ರಂದು ಬೆಂಗಳೂರಿನ ಗಾಂಧಿನಗರದಲ್ಲಿ ನಡೆದಿದೆ. KVS, BVS, SFI, CFI, NSUI, SIO ಹಾಗೂ ವಿದ್ಯಾರ್ಥಿ ಜನತಾದಳದ ಪ್ರತಿನಿಧಿಗಳೂ ಸಹ ಒಕ್ಕೊರಲಿನಿಂದ ಈ ಸಭೆಯಲ್ಲಿ ಭಾಗವಹಿಸಿ ಐಕ್ಯಮತ್ಯ ಸೂಚಿಸಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಮುಂದಿನ ಸಭೆಯು ನವೆಂಬರ್‌ 25ರ ಸೋಮವಾರ ಸಂಜೆ 4ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ನಡೆಯಲಿದ್ದು ABVP, AISA, AIDSO, DSF ಸಂಘಟನೆಗಳಿಗೂ ಆಹ್ವಾನ ನೀಡಲಾಗಿದ್ದು ಅವರೂ ಕೂಡ ಭಾಗವಹಿಸುವ ನಿರೀಕ್ಷೆಯಿದೆ ಎಂದು ಬಿ.ಆರ್‌ ಭಾಸ್ಕರ್‌ ಪ್ರಸಾದ್‌ ತಿಳಿಸಿದ್ದಾರೆ.

LKGಯಿಂದ PHDವರೆಗೂ ದೇಶದ ಪ್ರತಿಯೊಬ್ಬರಿಗೂ ಶಿಕ್ಷಣ ಉಚಿತವಾಗಿರಬೇಕು. ಶಿಕ್ಷಣ ರಾಷ್ಟ್ರೀಕರಣವಾಗಬೇಕು. ಜಾತಿ-ಲಿಂಗ ಧರ್ಮಗಳ ತಾರತಮ್ಯವಿಲ್ಲದೇ ಈ ದೇಶದ ಪ್ರತಿಯೊಬ್ಬರಿಗೂ ಸಮಾನ ಶಿಕ್ಷಣ ಸಿಗಬೇಕೆಂಬುದು ಒಕ್ಕೂಟದ ಆಶಯವಾಗಿದೆ. ಇದರ ಜೊತೆಗೆ JNU ಉಳಿಸಿಕೊಳ್ಳೋಣ ಬನ್ನಿ, ಈ ಹೋರಾಟ ನಮಗಾಗಿ, ನಮ್ಮ ಮುಂದಿನ ಪೀಳಿಗೆಗಾಗಿ, ದೇಶದ ಭವ್ಯ ಭವಿಷ್ಯಕ್ಕಾಗಿ ಎಂದು ಸಹ ಕರೆ ಕೊಡಲಾಗಿದೆ.

JNU ವಿದ್ಯಾರ್ಥಿಗಳ ಹೋರಾಟಕ್ಕೆ ನಾವು ಹೇಗೆ ಬೆಂಬಲಿಸಬಹುದು? ಇದರೊಂದಿಗೆ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಪ್ರೈಮರಿಯಿಂದ ಪಿಎಚ್.ಡಿ‌ ವರಗೂ ಉಚಿತ ಶಿಕ್ಷಣ ನೀಡಬೇಕು ಮತ್ತು‌ ಅತಿಮುಖ್ಯವಾಗಿ ಶಿಕ್ಷಣವನ್ನು ರಾಷ್ಡ್ರೀಕರಣ ಮಾಡಬೇಕು ಎಂಬುದರ ಬಗ್ಗೆ ನಮ್ಮ ಗಾಂಧಿನಗರದ ಕಛೇರಿಯಲ್ಲಿ ಇಂದು ಕರೆದಿದ್ದ ಸಭೆಗೆ ಬಹುತೇಕ ಎಲ್ಲಾ ವಿದ್ಯಾರ್ಥಿ ಸಂಘಟನೆಗಳ ನಾಯಕರು ತಮ್ಮ ಪಕ್ಷಬೇದ ತೊರೆದು, ಸೈದ್ದಾಂತಿಕ ಬಿನ್ನಾಭಿಪ್ರಾಯ ಬದಿಗಿಟ್ಟು ಬಂದಿದ್ದರು. ಸುಮಾರು ಎರಡು ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ಹಲವು ವಿಷಯಗಳ ಕುರಿತಂತೆ ಸುದೀರ್ಘವಾಗಿ ಚರ್ಚೆಯಾಯಿತು. ಈ ವಿಷಯದ ಬಗ್ಗೆ ಕಾಳಜಿ ಇರುವ ಇನ್ನಷ್ಟು ಜನರನ್ನು ಕರೆಸಬೇಕೆಂದು ತೀರ್ಮಾನಿಸಲಾಯಿತು ಎಂದು ಸಿ.ಎಸ್.ದ್ವಾರಕಾನಾಥ್‌ರವರು ತಿಳಿಸಿದ್ದಾರೆ.

ನಾನು 2002ರಿಂದ 2010ರವರೆಗೆ ದೆಹಲಿಯ ಜೆಎನ್‌ಯುನಲ್ಲಿ ಎಂ.ಎ, ಎಂ.ಫಿಲ್‌ ಮತ್ತು ಪಿಎಚ್‌ಡಿ ಮಾಡಿದ್ದೇನೆ. ಜೆಎನ್‌ಯು ಅತ್ಯುತ್ತಮ ಶಿಕ್ಷಣವನ್ನು ಅತಿ ಕಡಿಮೆ ವೆಚ್ಚದಲ್ಲಿ ನೀಡುತ್ತದೆ. ಹಾಗಾಗಿಯೇ ಭಾರತದ ಎಲ್ಲಾ ಮೂಲೆಗಳ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಅಲ್ಲಿಗೆ ಬರುತ್ತಾರೆ. ನಾನು ಕೂಡ ಹಳ್ಳಿಯಿಂದ ಹೋಗಿ ಅಲ್ಲಿ ವರ್ಷಕ್ಕೆ ಕೇವಲ 300 ರೂ ಕಟ್ಟಿ ಓದಿದವನು. ಅದಿಲ್ಲದಿದ್ದರೆ ನಾನು ಇಷ್ಟು ಮುಂದೆ ಬರಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲಿ ಕಮ್ಯುನಿಷ್ಟ್‌ ಪ್ರಭಾವ ಹೆಚ್ಚಾಗಿ ಇದ್ದರೂ ಕೂಡ ಯಾರ ಮೇಲೆಯು ಅವರು ತಮ್ಮ ಸಿದ್ದಾಂತವನ್ನು ಹೇರುವುದಿಲ್ಲ. ಅಲ್ಲಿ ABVP, NSUI ಸಹ ಇದೆ. ನಾವು ಕೂಡ ಬಹುಜನ್‌ ಸ್ಟೂಟೆಂಡ್ಸ್‌ ಫ್ರಂಟ್‌ ಎಂಬ ಸಂಘಟನೆ ಶುರು ಮಾಡಿದ್ದೆವು. ಅಷ್ಟೆಲ್ಲ ಸಂಘಟನೆಗಳು ಇದ್ದರೂ ಯಾರು ಯಾರಿಗೂ ಒತ್ತಾಯ ಮಾಡುವುದಿಲ್ಲ. ಅಲ್ಲಿ ಮುಕ್ತ ವಾತಾವರಣ ಇದ್ದು ಇಡೀ ದೇಶದ ವಸ್ತುಸ್ಥಿತಿಯನ್ನು ನಮಗೆ ಅರ್ಥ ಮಾಡಿಸುತ್ತದೆ. ಅದೇ ಬಲಿಷ್ಟ ಭಾರತ ಕಟ್ಟಲು ಎಲ್ಲರಿಗೂ ಪ್ರೇರಣೆ ಕೊಡುತ್ತದೆ. ಅಲ್ಲಿಂದ ಹೊರಬಂದವರು ಅದೇ ಆಲೋಚನೆಗಳನ್ನು ಬಿತ್ತುತ್ತಾರೆ ಎಂಬುದೇ ಬಿಜೆಪಿ ಸರ್ಕಾರಕ್ಕೆ ತಲೆನೋವಾಗಿದೆ. ಅದೊಂದೇ ಕಾರಣಕ್ಕೆ ಕೇಂದ್ರ ಸರ್ಕಾರ ಜೆಎನ್‌ಯು ಮುಗಿಸಲು ಹೊರಟಿದೆ. ಅದನ್ನು ಉಳಿಸಲು ನಾವು ಕರ್ನಾಟಕದಲ್ಲಿ ಒಂದೂಗೂಡುತ್ತಿದ್ದೆವೆ. – ಶ್ರೀನಿವಾಸ್‌, ಬಹುಜನ ವಿದ್ಯಾರ್ಥಿ ಸಂಘ(BVS)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Only basic education should be given free by the state . Higher education should be made available to only those who have the aptitude for it .It should not be based on any kind of reservation .

  2. ತುಂಬಾ ಒಳ್ಳೆಯ ಚರ್ಚೆ ಇದಾಗಿದ್ದು ಎಲ್ಲಾ ಮದ್ಯಮ . ಮತ್ತು ಬಡವರಿಗೂ ತುಂಬಾ ಉಪಯುಕ್ತ ಮಾಹಿತಿ ಎಲ್ಲರು ಶೇರ್ ಮಾಡುವ ಮೂಲಕ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...