Homeಕರ್ನಾಟಕಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ...

ಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ ಮಹತ್ವದ ಸಭೆ.

KVS, BVS, SFI, CFI, NSUI, SIO ಹಾಗೂ ವಿದ್ಯಾರ್ಥಿ ಜನತಾದಳದ ಪ್ರತಿನಿಧಿಗಳೂ ಸಹ ಒಕ್ಕೊರಲಿನಿಂದ ಈ ಸಭೆಯಲ್ಲಿ ಭಾಗವಹಿಸಿ ಐಕ್ಯಮತ್ಯ ಸೂಚಿಸಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

- Advertisement -
- Advertisement -

ಜೆಎನ್‌ಯು ಪ್ರತಿಭಟನೆಯ ನಂತರ ಕರ್ನಾಟಕದಲ್ಲಿ ಎಲ್ಲಾ ಧಾರೆಗಳ ವಿದ್ಯಾರ್ಥಿ ಸಂಘಟನೆಗಳು ಒಂದೆಡೆ ಸೇರುತ್ತಿರುವ ಪ್ರಯತ್ನವೊಂದು ಆರಂಭವಾಗಿದೆ. ಆ ಪ್ರಯತ್ನದ ಮುಂಚೂಣಿಯಲ್ಲಿರುವವರು ಹೇಳಿದ್ದನ್ನು ಇಲ್ಲಿ ಯಥಾವತ್ತಾಗಿ ನೀಡಲಾಗಿದೆ.

ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು. ಅದು ಉಚಿತವಾಗಿ, ಸಮಾನವಾಗಿ ಎಲ್ಲರಿಗೂ ಕಡ್ಡಾಯವಾಗಿ ಸಿಗಬೇಕೆಂಬುದು ಸಂವಿಧಾನ ಆಶಯ. ಅದಕ್ಕಾಗಿ ಸಾವಿತ್ರಿಬಾಯಿ ಫುಲೆ, ಮಹಾತ್ಮ ಜ್ಯೋತಿಬಾ ಫುಲೆ, ಡಾ.ಬಿ.ಆ‌ರ್‌ ಅಂಬೇಡ್ಕರ್‌ ಸೇರಿದಂತೆ ನೂರಾರು ಮಹನೀಯರು ಹೋರಾಡಿದ್ದಾರೆ. ಇಂದಿಗೂ ಆ ಹೋರಾಟ ನಡೆಯುತ್ತಲೇ ಇದೆ. ಆದರೆ ಆಳುವ ಸರ್ಕಾರಗಳು ಮಾತ್ರ ಶಿಕ್ಷಣ ನೀಡುವ ತಮ್ಮ ಸಾಂವಿಧಾನಿಕ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸದಾ ಪ್ರಯತ್ನಿಸುತ್ತಿರುತ್ತವೆ. ಮನಬಂದಂತೆ ಖಾಸಗಿ ಸಂಸ್ಥೆಗಳನ್ನು ತೆರೆಯಲು ಅವಕಾಶ ಕೊಡುವುದು, ಸರ್ಕಾರಿ ಶಾಲಾ-ಕಾಲೇಜುಗಳನ್ನು ಮುಚ್ಚುವುದರಿಂದ ಹಿಡಿದು ಈಗ JNUವಿನಲ್ಲಿ ಯಥೇಚ್ಚ ಶುಲ್ಕ ಹೆಚ್ಚಳದವರೆಗೆ ಸರ್ಕಾರ ಹುನ್ನಾರ ನಡೆಯುತ್ತಲೇ ಇದೆ.

ಸರ್ಕಾರದ ಈ ಹುನ್ನಾರವನ್ನು ಬಯಲುಗೊಳಿಸಲು, JNU ವಿದ್ಯಾರ್ಥಿಗಳ ಹೋರಾಟ ಬೆಂಬಲಿಸಲು ಮತ್ತು ಸರ್ವರಿಗೂ ಉಚಿತ ಶಿಕ್ಷಣದ ಹಕ್ಕಿನ ದ್ವನಿಯನ್ನು ದೇಶಾದ್ಯಂತ ಪಸರಿಸಲು ಕರ್ನಾಟಕದ ಪ್ರಜ್ಞಾವಂತ ಬಳಗವೊಂದು ಸಿದ್ದಗೊಂಡಿದೆ. ಅದು ಕರ್ನಾಟಕದ ಎಲ್ಲಾ ವಿದ್ಯಾರ್ಥಿ ಸಂಘಟನೆಗಳನ್ನು ಒಂದೆಡೆ ತಂದು ಈ ಹೋರಾಟವನ್ನು ಮುನ್ನಡೆಸಲು ತೀರ್ಮಾನಿಸಿದೆ. ಆ ನೂತನ ಪ್ರಯತ್ನವೇ ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ವಾಗಿದೆ.

ಇದರ ಮೊದಲ ಪೂರ್ವಭಾವಿ ಸಭೆ ಹಿಂದುಳಿದ  ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಡಾ.ಸಿ.ಎಸ್‌ ದ್ವಾರಕನಾಥ್‌ ಮತ್ತು ಯುವ ಹೋರಾಟಗಾರರಾದ ಬಿ.ಆರ್‌ ಭಾಸ್ಕರ್‌ ಪ್ರಸಾದ್‌ರವರ ನೇತೃತ್ವದಲ್ಲಿ ನವೆಂಬರ್‌ 23ರಂದು ಬೆಂಗಳೂರಿನ ಗಾಂಧಿನಗರದಲ್ಲಿ ನಡೆದಿದೆ. KVS, BVS, SFI, CFI, NSUI, SIO ಹಾಗೂ ವಿದ್ಯಾರ್ಥಿ ಜನತಾದಳದ ಪ್ರತಿನಿಧಿಗಳೂ ಸಹ ಒಕ್ಕೊರಲಿನಿಂದ ಈ ಸಭೆಯಲ್ಲಿ ಭಾಗವಹಿಸಿ ಐಕ್ಯಮತ್ಯ ಸೂಚಿಸಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಮುಂದಿನ ಸಭೆಯು ನವೆಂಬರ್‌ 25ರ ಸೋಮವಾರ ಸಂಜೆ 4ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ನಡೆಯಲಿದ್ದು ABVP, AISA, AIDSO, DSF ಸಂಘಟನೆಗಳಿಗೂ ಆಹ್ವಾನ ನೀಡಲಾಗಿದ್ದು ಅವರೂ ಕೂಡ ಭಾಗವಹಿಸುವ ನಿರೀಕ್ಷೆಯಿದೆ ಎಂದು ಬಿ.ಆರ್‌ ಭಾಸ್ಕರ್‌ ಪ್ರಸಾದ್‌ ತಿಳಿಸಿದ್ದಾರೆ.

LKGಯಿಂದ PHDವರೆಗೂ ದೇಶದ ಪ್ರತಿಯೊಬ್ಬರಿಗೂ ಶಿಕ್ಷಣ ಉಚಿತವಾಗಿರಬೇಕು. ಶಿಕ್ಷಣ ರಾಷ್ಟ್ರೀಕರಣವಾಗಬೇಕು. ಜಾತಿ-ಲಿಂಗ ಧರ್ಮಗಳ ತಾರತಮ್ಯವಿಲ್ಲದೇ ಈ ದೇಶದ ಪ್ರತಿಯೊಬ್ಬರಿಗೂ ಸಮಾನ ಶಿಕ್ಷಣ ಸಿಗಬೇಕೆಂಬುದು ಒಕ್ಕೂಟದ ಆಶಯವಾಗಿದೆ. ಇದರ ಜೊತೆಗೆ JNU ಉಳಿಸಿಕೊಳ್ಳೋಣ ಬನ್ನಿ, ಈ ಹೋರಾಟ ನಮಗಾಗಿ, ನಮ್ಮ ಮುಂದಿನ ಪೀಳಿಗೆಗಾಗಿ, ದೇಶದ ಭವ್ಯ ಭವಿಷ್ಯಕ್ಕಾಗಿ ಎಂದು ಸಹ ಕರೆ ಕೊಡಲಾಗಿದೆ.

JNU ವಿದ್ಯಾರ್ಥಿಗಳ ಹೋರಾಟಕ್ಕೆ ನಾವು ಹೇಗೆ ಬೆಂಬಲಿಸಬಹುದು? ಇದರೊಂದಿಗೆ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಪ್ರೈಮರಿಯಿಂದ ಪಿಎಚ್.ಡಿ‌ ವರಗೂ ಉಚಿತ ಶಿಕ್ಷಣ ನೀಡಬೇಕು ಮತ್ತು‌ ಅತಿಮುಖ್ಯವಾಗಿ ಶಿಕ್ಷಣವನ್ನು ರಾಷ್ಡ್ರೀಕರಣ ಮಾಡಬೇಕು ಎಂಬುದರ ಬಗ್ಗೆ ನಮ್ಮ ಗಾಂಧಿನಗರದ ಕಛೇರಿಯಲ್ಲಿ ಇಂದು ಕರೆದಿದ್ದ ಸಭೆಗೆ ಬಹುತೇಕ ಎಲ್ಲಾ ವಿದ್ಯಾರ್ಥಿ ಸಂಘಟನೆಗಳ ನಾಯಕರು ತಮ್ಮ ಪಕ್ಷಬೇದ ತೊರೆದು, ಸೈದ್ದಾಂತಿಕ ಬಿನ್ನಾಭಿಪ್ರಾಯ ಬದಿಗಿಟ್ಟು ಬಂದಿದ್ದರು. ಸುಮಾರು ಎರಡು ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ಹಲವು ವಿಷಯಗಳ ಕುರಿತಂತೆ ಸುದೀರ್ಘವಾಗಿ ಚರ್ಚೆಯಾಯಿತು. ಈ ವಿಷಯದ ಬಗ್ಗೆ ಕಾಳಜಿ ಇರುವ ಇನ್ನಷ್ಟು ಜನರನ್ನು ಕರೆಸಬೇಕೆಂದು ತೀರ್ಮಾನಿಸಲಾಯಿತು ಎಂದು ಸಿ.ಎಸ್.ದ್ವಾರಕಾನಾಥ್‌ರವರು ತಿಳಿಸಿದ್ದಾರೆ.

ನಾನು 2002ರಿಂದ 2010ರವರೆಗೆ ದೆಹಲಿಯ ಜೆಎನ್‌ಯುನಲ್ಲಿ ಎಂ.ಎ, ಎಂ.ಫಿಲ್‌ ಮತ್ತು ಪಿಎಚ್‌ಡಿ ಮಾಡಿದ್ದೇನೆ. ಜೆಎನ್‌ಯು ಅತ್ಯುತ್ತಮ ಶಿಕ್ಷಣವನ್ನು ಅತಿ ಕಡಿಮೆ ವೆಚ್ಚದಲ್ಲಿ ನೀಡುತ್ತದೆ. ಹಾಗಾಗಿಯೇ ಭಾರತದ ಎಲ್ಲಾ ಮೂಲೆಗಳ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಅಲ್ಲಿಗೆ ಬರುತ್ತಾರೆ. ನಾನು ಕೂಡ ಹಳ್ಳಿಯಿಂದ ಹೋಗಿ ಅಲ್ಲಿ ವರ್ಷಕ್ಕೆ ಕೇವಲ 300 ರೂ ಕಟ್ಟಿ ಓದಿದವನು. ಅದಿಲ್ಲದಿದ್ದರೆ ನಾನು ಇಷ್ಟು ಮುಂದೆ ಬರಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲಿ ಕಮ್ಯುನಿಷ್ಟ್‌ ಪ್ರಭಾವ ಹೆಚ್ಚಾಗಿ ಇದ್ದರೂ ಕೂಡ ಯಾರ ಮೇಲೆಯು ಅವರು ತಮ್ಮ ಸಿದ್ದಾಂತವನ್ನು ಹೇರುವುದಿಲ್ಲ. ಅಲ್ಲಿ ABVP, NSUI ಸಹ ಇದೆ. ನಾವು ಕೂಡ ಬಹುಜನ್‌ ಸ್ಟೂಟೆಂಡ್ಸ್‌ ಫ್ರಂಟ್‌ ಎಂಬ ಸಂಘಟನೆ ಶುರು ಮಾಡಿದ್ದೆವು. ಅಷ್ಟೆಲ್ಲ ಸಂಘಟನೆಗಳು ಇದ್ದರೂ ಯಾರು ಯಾರಿಗೂ ಒತ್ತಾಯ ಮಾಡುವುದಿಲ್ಲ. ಅಲ್ಲಿ ಮುಕ್ತ ವಾತಾವರಣ ಇದ್ದು ಇಡೀ ದೇಶದ ವಸ್ತುಸ್ಥಿತಿಯನ್ನು ನಮಗೆ ಅರ್ಥ ಮಾಡಿಸುತ್ತದೆ. ಅದೇ ಬಲಿಷ್ಟ ಭಾರತ ಕಟ್ಟಲು ಎಲ್ಲರಿಗೂ ಪ್ರೇರಣೆ ಕೊಡುತ್ತದೆ. ಅಲ್ಲಿಂದ ಹೊರಬಂದವರು ಅದೇ ಆಲೋಚನೆಗಳನ್ನು ಬಿತ್ತುತ್ತಾರೆ ಎಂಬುದೇ ಬಿಜೆಪಿ ಸರ್ಕಾರಕ್ಕೆ ತಲೆನೋವಾಗಿದೆ. ಅದೊಂದೇ ಕಾರಣಕ್ಕೆ ಕೇಂದ್ರ ಸರ್ಕಾರ ಜೆಎನ್‌ಯು ಮುಗಿಸಲು ಹೊರಟಿದೆ. ಅದನ್ನು ಉಳಿಸಲು ನಾವು ಕರ್ನಾಟಕದಲ್ಲಿ ಒಂದೂಗೂಡುತ್ತಿದ್ದೆವೆ. – ಶ್ರೀನಿವಾಸ್‌, ಬಹುಜನ ವಿದ್ಯಾರ್ಥಿ ಸಂಘ(BVS)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Only basic education should be given free by the state . Higher education should be made available to only those who have the aptitude for it .It should not be based on any kind of reservation .

  2. ತುಂಬಾ ಒಳ್ಳೆಯ ಚರ್ಚೆ ಇದಾಗಿದ್ದು ಎಲ್ಲಾ ಮದ್ಯಮ . ಮತ್ತು ಬಡವರಿಗೂ ತುಂಬಾ ಉಪಯುಕ್ತ ಮಾಹಿತಿ ಎಲ್ಲರು ಶೇರ್ ಮಾಡುವ ಮೂಲಕ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...