Homeಕರ್ನಾಟಕಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ...

ಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ ಮಹತ್ವದ ಸಭೆ.

KVS, BVS, SFI, CFI, NSUI, SIO ಹಾಗೂ ವಿದ್ಯಾರ್ಥಿ ಜನತಾದಳದ ಪ್ರತಿನಿಧಿಗಳೂ ಸಹ ಒಕ್ಕೊರಲಿನಿಂದ ಈ ಸಭೆಯಲ್ಲಿ ಭಾಗವಹಿಸಿ ಐಕ್ಯಮತ್ಯ ಸೂಚಿಸಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

- Advertisement -
- Advertisement -

ಜೆಎನ್‌ಯು ಪ್ರತಿಭಟನೆಯ ನಂತರ ಕರ್ನಾಟಕದಲ್ಲಿ ಎಲ್ಲಾ ಧಾರೆಗಳ ವಿದ್ಯಾರ್ಥಿ ಸಂಘಟನೆಗಳು ಒಂದೆಡೆ ಸೇರುತ್ತಿರುವ ಪ್ರಯತ್ನವೊಂದು ಆರಂಭವಾಗಿದೆ. ಆ ಪ್ರಯತ್ನದ ಮುಂಚೂಣಿಯಲ್ಲಿರುವವರು ಹೇಳಿದ್ದನ್ನು ಇಲ್ಲಿ ಯಥಾವತ್ತಾಗಿ ನೀಡಲಾಗಿದೆ.

ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು. ಅದು ಉಚಿತವಾಗಿ, ಸಮಾನವಾಗಿ ಎಲ್ಲರಿಗೂ ಕಡ್ಡಾಯವಾಗಿ ಸಿಗಬೇಕೆಂಬುದು ಸಂವಿಧಾನ ಆಶಯ. ಅದಕ್ಕಾಗಿ ಸಾವಿತ್ರಿಬಾಯಿ ಫುಲೆ, ಮಹಾತ್ಮ ಜ್ಯೋತಿಬಾ ಫುಲೆ, ಡಾ.ಬಿ.ಆ‌ರ್‌ ಅಂಬೇಡ್ಕರ್‌ ಸೇರಿದಂತೆ ನೂರಾರು ಮಹನೀಯರು ಹೋರಾಡಿದ್ದಾರೆ. ಇಂದಿಗೂ ಆ ಹೋರಾಟ ನಡೆಯುತ್ತಲೇ ಇದೆ. ಆದರೆ ಆಳುವ ಸರ್ಕಾರಗಳು ಮಾತ್ರ ಶಿಕ್ಷಣ ನೀಡುವ ತಮ್ಮ ಸಾಂವಿಧಾನಿಕ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸದಾ ಪ್ರಯತ್ನಿಸುತ್ತಿರುತ್ತವೆ. ಮನಬಂದಂತೆ ಖಾಸಗಿ ಸಂಸ್ಥೆಗಳನ್ನು ತೆರೆಯಲು ಅವಕಾಶ ಕೊಡುವುದು, ಸರ್ಕಾರಿ ಶಾಲಾ-ಕಾಲೇಜುಗಳನ್ನು ಮುಚ್ಚುವುದರಿಂದ ಹಿಡಿದು ಈಗ JNUವಿನಲ್ಲಿ ಯಥೇಚ್ಚ ಶುಲ್ಕ ಹೆಚ್ಚಳದವರೆಗೆ ಸರ್ಕಾರ ಹುನ್ನಾರ ನಡೆಯುತ್ತಲೇ ಇದೆ.

ಸರ್ಕಾರದ ಈ ಹುನ್ನಾರವನ್ನು ಬಯಲುಗೊಳಿಸಲು, JNU ವಿದ್ಯಾರ್ಥಿಗಳ ಹೋರಾಟ ಬೆಂಬಲಿಸಲು ಮತ್ತು ಸರ್ವರಿಗೂ ಉಚಿತ ಶಿಕ್ಷಣದ ಹಕ್ಕಿನ ದ್ವನಿಯನ್ನು ದೇಶಾದ್ಯಂತ ಪಸರಿಸಲು ಕರ್ನಾಟಕದ ಪ್ರಜ್ಞಾವಂತ ಬಳಗವೊಂದು ಸಿದ್ದಗೊಂಡಿದೆ. ಅದು ಕರ್ನಾಟಕದ ಎಲ್ಲಾ ವಿದ್ಯಾರ್ಥಿ ಸಂಘಟನೆಗಳನ್ನು ಒಂದೆಡೆ ತಂದು ಈ ಹೋರಾಟವನ್ನು ಮುನ್ನಡೆಸಲು ತೀರ್ಮಾನಿಸಿದೆ. ಆ ನೂತನ ಪ್ರಯತ್ನವೇ ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ವಾಗಿದೆ.

ಇದರ ಮೊದಲ ಪೂರ್ವಭಾವಿ ಸಭೆ ಹಿಂದುಳಿದ  ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಡಾ.ಸಿ.ಎಸ್‌ ದ್ವಾರಕನಾಥ್‌ ಮತ್ತು ಯುವ ಹೋರಾಟಗಾರರಾದ ಬಿ.ಆರ್‌ ಭಾಸ್ಕರ್‌ ಪ್ರಸಾದ್‌ರವರ ನೇತೃತ್ವದಲ್ಲಿ ನವೆಂಬರ್‌ 23ರಂದು ಬೆಂಗಳೂರಿನ ಗಾಂಧಿನಗರದಲ್ಲಿ ನಡೆದಿದೆ. KVS, BVS, SFI, CFI, NSUI, SIO ಹಾಗೂ ವಿದ್ಯಾರ್ಥಿ ಜನತಾದಳದ ಪ್ರತಿನಿಧಿಗಳೂ ಸಹ ಒಕ್ಕೊರಲಿನಿಂದ ಈ ಸಭೆಯಲ್ಲಿ ಭಾಗವಹಿಸಿ ಐಕ್ಯಮತ್ಯ ಸೂಚಿಸಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಮುಂದಿನ ಸಭೆಯು ನವೆಂಬರ್‌ 25ರ ಸೋಮವಾರ ಸಂಜೆ 4ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ನಡೆಯಲಿದ್ದು ABVP, AISA, AIDSO, DSF ಸಂಘಟನೆಗಳಿಗೂ ಆಹ್ವಾನ ನೀಡಲಾಗಿದ್ದು ಅವರೂ ಕೂಡ ಭಾಗವಹಿಸುವ ನಿರೀಕ್ಷೆಯಿದೆ ಎಂದು ಬಿ.ಆರ್‌ ಭಾಸ್ಕರ್‌ ಪ್ರಸಾದ್‌ ತಿಳಿಸಿದ್ದಾರೆ.

LKGಯಿಂದ PHDವರೆಗೂ ದೇಶದ ಪ್ರತಿಯೊಬ್ಬರಿಗೂ ಶಿಕ್ಷಣ ಉಚಿತವಾಗಿರಬೇಕು. ಶಿಕ್ಷಣ ರಾಷ್ಟ್ರೀಕರಣವಾಗಬೇಕು. ಜಾತಿ-ಲಿಂಗ ಧರ್ಮಗಳ ತಾರತಮ್ಯವಿಲ್ಲದೇ ಈ ದೇಶದ ಪ್ರತಿಯೊಬ್ಬರಿಗೂ ಸಮಾನ ಶಿಕ್ಷಣ ಸಿಗಬೇಕೆಂಬುದು ಒಕ್ಕೂಟದ ಆಶಯವಾಗಿದೆ. ಇದರ ಜೊತೆಗೆ JNU ಉಳಿಸಿಕೊಳ್ಳೋಣ ಬನ್ನಿ, ಈ ಹೋರಾಟ ನಮಗಾಗಿ, ನಮ್ಮ ಮುಂದಿನ ಪೀಳಿಗೆಗಾಗಿ, ದೇಶದ ಭವ್ಯ ಭವಿಷ್ಯಕ್ಕಾಗಿ ಎಂದು ಸಹ ಕರೆ ಕೊಡಲಾಗಿದೆ.

JNU ವಿದ್ಯಾರ್ಥಿಗಳ ಹೋರಾಟಕ್ಕೆ ನಾವು ಹೇಗೆ ಬೆಂಬಲಿಸಬಹುದು? ಇದರೊಂದಿಗೆ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಪ್ರೈಮರಿಯಿಂದ ಪಿಎಚ್.ಡಿ‌ ವರಗೂ ಉಚಿತ ಶಿಕ್ಷಣ ನೀಡಬೇಕು ಮತ್ತು‌ ಅತಿಮುಖ್ಯವಾಗಿ ಶಿಕ್ಷಣವನ್ನು ರಾಷ್ಡ್ರೀಕರಣ ಮಾಡಬೇಕು ಎಂಬುದರ ಬಗ್ಗೆ ನಮ್ಮ ಗಾಂಧಿನಗರದ ಕಛೇರಿಯಲ್ಲಿ ಇಂದು ಕರೆದಿದ್ದ ಸಭೆಗೆ ಬಹುತೇಕ ಎಲ್ಲಾ ವಿದ್ಯಾರ್ಥಿ ಸಂಘಟನೆಗಳ ನಾಯಕರು ತಮ್ಮ ಪಕ್ಷಬೇದ ತೊರೆದು, ಸೈದ್ದಾಂತಿಕ ಬಿನ್ನಾಭಿಪ್ರಾಯ ಬದಿಗಿಟ್ಟು ಬಂದಿದ್ದರು. ಸುಮಾರು ಎರಡು ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ಹಲವು ವಿಷಯಗಳ ಕುರಿತಂತೆ ಸುದೀರ್ಘವಾಗಿ ಚರ್ಚೆಯಾಯಿತು. ಈ ವಿಷಯದ ಬಗ್ಗೆ ಕಾಳಜಿ ಇರುವ ಇನ್ನಷ್ಟು ಜನರನ್ನು ಕರೆಸಬೇಕೆಂದು ತೀರ್ಮಾನಿಸಲಾಯಿತು ಎಂದು ಸಿ.ಎಸ್.ದ್ವಾರಕಾನಾಥ್‌ರವರು ತಿಳಿಸಿದ್ದಾರೆ.

ನಾನು 2002ರಿಂದ 2010ರವರೆಗೆ ದೆಹಲಿಯ ಜೆಎನ್‌ಯುನಲ್ಲಿ ಎಂ.ಎ, ಎಂ.ಫಿಲ್‌ ಮತ್ತು ಪಿಎಚ್‌ಡಿ ಮಾಡಿದ್ದೇನೆ. ಜೆಎನ್‌ಯು ಅತ್ಯುತ್ತಮ ಶಿಕ್ಷಣವನ್ನು ಅತಿ ಕಡಿಮೆ ವೆಚ್ಚದಲ್ಲಿ ನೀಡುತ್ತದೆ. ಹಾಗಾಗಿಯೇ ಭಾರತದ ಎಲ್ಲಾ ಮೂಲೆಗಳ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಅಲ್ಲಿಗೆ ಬರುತ್ತಾರೆ. ನಾನು ಕೂಡ ಹಳ್ಳಿಯಿಂದ ಹೋಗಿ ಅಲ್ಲಿ ವರ್ಷಕ್ಕೆ ಕೇವಲ 300 ರೂ ಕಟ್ಟಿ ಓದಿದವನು. ಅದಿಲ್ಲದಿದ್ದರೆ ನಾನು ಇಷ್ಟು ಮುಂದೆ ಬರಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲಿ ಕಮ್ಯುನಿಷ್ಟ್‌ ಪ್ರಭಾವ ಹೆಚ್ಚಾಗಿ ಇದ್ದರೂ ಕೂಡ ಯಾರ ಮೇಲೆಯು ಅವರು ತಮ್ಮ ಸಿದ್ದಾಂತವನ್ನು ಹೇರುವುದಿಲ್ಲ. ಅಲ್ಲಿ ABVP, NSUI ಸಹ ಇದೆ. ನಾವು ಕೂಡ ಬಹುಜನ್‌ ಸ್ಟೂಟೆಂಡ್ಸ್‌ ಫ್ರಂಟ್‌ ಎಂಬ ಸಂಘಟನೆ ಶುರು ಮಾಡಿದ್ದೆವು. ಅಷ್ಟೆಲ್ಲ ಸಂಘಟನೆಗಳು ಇದ್ದರೂ ಯಾರು ಯಾರಿಗೂ ಒತ್ತಾಯ ಮಾಡುವುದಿಲ್ಲ. ಅಲ್ಲಿ ಮುಕ್ತ ವಾತಾವರಣ ಇದ್ದು ಇಡೀ ದೇಶದ ವಸ್ತುಸ್ಥಿತಿಯನ್ನು ನಮಗೆ ಅರ್ಥ ಮಾಡಿಸುತ್ತದೆ. ಅದೇ ಬಲಿಷ್ಟ ಭಾರತ ಕಟ್ಟಲು ಎಲ್ಲರಿಗೂ ಪ್ರೇರಣೆ ಕೊಡುತ್ತದೆ. ಅಲ್ಲಿಂದ ಹೊರಬಂದವರು ಅದೇ ಆಲೋಚನೆಗಳನ್ನು ಬಿತ್ತುತ್ತಾರೆ ಎಂಬುದೇ ಬಿಜೆಪಿ ಸರ್ಕಾರಕ್ಕೆ ತಲೆನೋವಾಗಿದೆ. ಅದೊಂದೇ ಕಾರಣಕ್ಕೆ ಕೇಂದ್ರ ಸರ್ಕಾರ ಜೆಎನ್‌ಯು ಮುಗಿಸಲು ಹೊರಟಿದೆ. ಅದನ್ನು ಉಳಿಸಲು ನಾವು ಕರ್ನಾಟಕದಲ್ಲಿ ಒಂದೂಗೂಡುತ್ತಿದ್ದೆವೆ. – ಶ್ರೀನಿವಾಸ್‌, ಬಹುಜನ ವಿದ್ಯಾರ್ಥಿ ಸಂಘ(BVS)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Only basic education should be given free by the state . Higher education should be made available to only those who have the aptitude for it .It should not be based on any kind of reservation .

  2. ತುಂಬಾ ಒಳ್ಳೆಯ ಚರ್ಚೆ ಇದಾಗಿದ್ದು ಎಲ್ಲಾ ಮದ್ಯಮ . ಮತ್ತು ಬಡವರಿಗೂ ತುಂಬಾ ಉಪಯುಕ್ತ ಮಾಹಿತಿ ಎಲ್ಲರು ಶೇರ್ ಮಾಡುವ ಮೂಲಕ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...