Homeಚಳವಳಿಜನರ ಉಸಿರಾಗಿರುವ ಹಸಿರು ’ನಲ್ಲಮಲ’ ಕಾಡಿನ ಮೇಲೆ ಕೇಂದ್ರ, ರಾಜ್ಯ ಸರ್ಕಾರದ ಕೆಂಗಣ್ಣು..

ಜನರ ಉಸಿರಾಗಿರುವ ಹಸಿರು ’ನಲ್ಲಮಲ’ ಕಾಡಿನ ಮೇಲೆ ಕೇಂದ್ರ, ರಾಜ್ಯ ಸರ್ಕಾರದ ಕೆಂಗಣ್ಣು..

- Advertisement -
- Advertisement -

‘ನಲ್ಲಮಲ’ ಒಂದು ಕಾಡಿನ ಹೆಸರು. ತೆಲಂಗಾಣ ಮತ್ತು ಆಂಧ್ರಪ್ರದೇಶಕ್ಕೆ ಉಸಿರಿನಂತಿರುವ ಹಸಿರ ಹೊದಿಕೆಯ ದಟ್ಟಾರಣ್ಯ ಇದು. ಇಲ್ಲಿ ವಿವಿಧ ಬುಡಕಟ್ಟು ಜನಾಂಗಗಳು ಈಗಲೂ ಸಹ ತಮ್ಮ ಜೀವನವನ್ನ ಸಾಗಿಸುತ್ತಾ ಬಂದಿದ್ದಾರೆ. ಚೆಂಚು ಎಂಬ ಬುಡಕಟ್ಟು ಜನಾಂಗ ಇಲ್ಲಿ ತಲೆ ತಲೆಮಾರುಗಳಿಂದ ಜೀವಿಸುತ್ತಾ ಬಂದಿದ್ದಾರೆ. ಸದಾ ಹಚ್ಚ ಹಸಿರಿನಿಂದ ಕೂಡಿರುವ ಈ ಕಾಡು ಎರಡು ರಾಜ್ಯಗಳ ಮಳೆ, ಬೆಳೆ ಮತ್ತು ವಾತಾವರಣ ಸಮತೋಲನಕ್ಕೆ ಪ್ರಮುಖ ಪಾತ್ರವಹಿಸುತ್ತದೆ.

ನಲ್ಲಮಲ ಕಾಡು ಜೀವಜಂತುಗಳ ವೈವಿಧ್ಯತೆಯಿಂದ ಕೂಡಿದ್ದು ಇಲ್ಲಿ 600ಕ್ಕೂ ವಿವಿಧ ಜಾತಿಯ ಮರಗಳು, 300 ರೀತಿಯ ಪಕ್ಷಿಗಳು, ವಿಶೇಷವಾಗಿ ವಿನಾಶದ ಅಂಚಿನಲ್ಲಿರುವ ಹುಲಿಗಳು, ಚಿರತೆ, ಆನೆ, ಕೃಷ್ಣಮೃಗ, ಮುಂತಾದ 70ಕ್ಕೂ ಅಧಿಕ ಜಾತಿಯ ಪ್ರಾಣಿಗಳು ಇಲ್ಲಿವೆ. ಇಂತಹ ಜೀವ ವೈವಿಧ್ಯತೆಯ ತಾಣಕ್ಕೆ ಈಗ ಗಂಡಾಂತರ ಬಂದೊದಗಿದೆ. ಅದೇನೆಂದರೆ ನಲ್ಲಮಲ ಕಾಡಿನಲ್ಲಿ ಯುರೇನಿಯಂ ಇದೆಯೆಂದು ಕೆಲವು ಸಂಶೋಧನೆಗಳಿಂದ ತಿಳಿದು ಬಂದಿದ್ದು, ಇಲ್ಲಿ ಕೇಂದ್ರ ಸರ್ಕಾರ ರಾಜ್ಯಸರ್ಕಾರದ ಸಹಕಾರದೊಂದಿಗೆ ಯುರೇನಿಯಂ ಗಣಿಗಾರಿಕೆಯನ್ನು ಪ್ರಾರಂಭಿಸಲು ಸಿದ್ಧತೆ ನಡೆಸಿದೆ.

ಜಗತ್ತನ್ನೆ ನಾಶ ಮಾಡಲು ಶಕ್ತಿಯುಳ್ಳ ಅಣು ಬಾಂಬ್ ತಯಾರಿಕೆಯಲ್ಲಿ ಬಳಸುವ ‘ಯುರೇನಿಯಂ’ ನಲ್ಲಮಲ ಕಾಡಿನಲ್ಲಿ ಸಿಗಲಿದೆ ಎಂದಿದ್ದೆ ತಡ ಹಿಂದೆ ಮುಂದೆ ನೋಡದೆ ಕೇಂದ್ರ ಮತ್ತು ತೆಲಂಗಾಣ ರಾಜ್ಯ ಸರ್ಕಾರ ಕಾಡನ್ನು ಬಗೆಯಲು ವಿವೇಚನ ರಹಿತವಾಗಿ ಹೊರಟಿವೆ. ಇದನ್ನು ಸ್ಥಳೀಯ ಜನಪರ ಹೋರಾಟಗಾರರು ಮತ್ತು ಪ್ರಜ್ಞಾವಂತರು ತೀವ್ರವಾಗಿ ಖಂಡಿಸುತ್ತಿದ್ದಾರೆ. ರಾಜ್ಯ ಸರ್ಕಾರ ಸ್ವಲ್ಫ ಹಿಂದೇಟು ಹಾಕುತ್ತಿದ್ದರು ಸಹ ಕೇಂದ್ರ ಸರ್ಕಾರ ಸ್ಥಳೀಯ ಗ್ರಾಮಪಂಚಾಯಿತಿಯ ಅನುಮತಿ ಪಡೆಯದೆ ‘ಯುರೇನಿಯಂ ಕಾರ್ಪೋರೇಷನ್’ (ಯು.ಸಿ.ಎಲ್) ಗೆ ಅನುಮತಿ ನೀಡಿ ಗಣಿಗಾರಿಕೆ ಶುರು ಮಾಡುವ ಆತುರದಲ್ಲಿದೆ. ಮೇಲ್ನೋಟಕ್ಕೆ ಇದನ್ನು ವಿರೋಧಿಸುವಂತೆ ಮಾತನಾಡುವ ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಆರ್ ಸರ್ಕಾರ, ಕೇಂದ್ರ ಸರ್ಕಾರ ಮಾಡುತ್ತಿರುವ ಕೆಲಸಕ್ಕೆ ಯಾವುದೇ ವಿರೋಧ ವ್ಯಕ್ತಪಡಿಸುತ್ತಿಲ್ಲ.

ಯುರೇನಿಯಂನ್ನು ಇತ್ತಿಚಿಗೆ ಅಣು ವಿದ್ಯುತ್ ಉತ್ಪಾದನೆಗೂ ಬಳಸುತ್ತಾರೆ. ಇದು ಬಹಳ ಅಪಾಯಕಾರಿಯಾದ ಖನಿಜವಾಗಿದೆ. ಇದನ್ನು ಸರಿಯಾಗಿ ನಿವರ್ಹಣೆ ಮಾಡದೆ ಹೋದರೆ ಈ ಗಣಿಗಾರಿಕೆ ನಡೆಯುವ ಸುತ್ತಲಿನ ಪ್ರದೇಶ ವಿಷಮಯವಾಗುವ ಎಲ್ಲಾ ಸಾಧ್ಯತೆ ಇದೆ. ಯುರೇನಿಯಂನ್ನು ಇಂಧನವಾಗಿ ಬಳಸುವ ಅಣು ವಿದ್ಯುತ್ ಕೇಂದ್ರಗಳು ಅವಘಡಗಳಾಗಿ ಸ್ಫೋಟಗಳ್ಳದೆ ಇರುವ ಸಮಯದಲ್ಲೂ ಸಹ ಅಣು ವಿದ್ಯುತ್ ಕೇಂದ್ರದ ಮೂಲಕ ಅಲ್ಫಾ, ಬೀಟಾ, ಗಾಮಾ ವಿಕಿರಣಗಳು ಹೋರಸೂಸುತ್ತಲೇ ಇರುತ್ತವೆ. ಕ್ಯಾನ್ಸರ್ ಮತ್ತು ತಲೆಮಾರುಗಳವರೆಗೂ ವಿವಿಧ ಅಂಗ ವೈಕಲ್ಯ ಸೃಷ್ಟಿಸುವ ಅಪಾಯ ಇದರಿಂದಾಗುತ್ತದೆ.

ಇಪ್ಪತ್ತು ಮೂವತ್ತು ವರ್ಷ ಮಾತ್ರ ಇರುವ ಯುರೇನಿಯಂ ಅನ್ನು ಬಳಸಬಹುದು ನಂತರ ಅವು ಕೆಲಸಕ್ಕೆ ಬರೆದೆ ಹೋಗುತ್ತವೆ. ತದ ನಂತರವು ಅವು ಹೊರ ಸೂಸುವ ಕಿರಣಗಳಿಂದ ಅತ್ಯಂತ ಘೋರವಾದ ಪರಿಸರ ಮತ್ತು ಜೀವ ನಾಶವಾಗಲಿದೆ. ಇದೇ ಭಾಗದಲ್ಲಿ ಕೃಷ್ಣಾನದಿ, ಶ್ರೀ ಶೈಲಂ, ನಾಗಾರ್ಜುನ ಸಾಗರ ಜಲಾಶಯಗಳು ಇವೆ. ಇಲ್ಲಿಂದ  ಕುಡಿಯಲು ಮತ್ತು ಬೆಳೆಯಲು ಈ ನೀರನ್ನು ಬಳಸುವುದರಿಂದ ಸ್ವಲ್ಫ ಹೆಚ್ಚುಕಮ್ಮಿ ಆದರೂ ಸಹ ವಿಕಿರಣಗಳು ಈ ನೀರಿನಲ್ಲಿ ಸೇರಿದರೆ ಜನಸಾಮಾನ್ಯರು ಮತ್ತು ಜೀವ ಸಂಕುಲಕ್ಕೆ ಕುತ್ತು ಬರಲಿದೆ.

ಈಗ ಸರ್ಕಾರದ ಮುಂದೆ ಇರುವ ಪ್ರಶ್ನೆ ಅಪಾಯಕಾರಿ ಖನಿಜವನ್ನು ಬಳಸಿ ವಿದ್ಯುತ್ ಉತ್ಫಾದನೆ ಮಾಡುವ ಅವಶ್ಯಕತೆಯಾದರೂ ಎನಿದೆ? ಈಗಾಗಲೆ ನಮ್ಮಲ್ಲಿ ಸೌರ ಮತ್ತು ಪವನ ವಿದ್ಯುತ್ ಅತ್ಯಂತ ಯಶಸ್ವಿಯಾಗಿ ಉತ್ಫಾದನೆ ಮಾಡಲಾಗುತ್ತಿದೆ. ಇಂತಹ ಮರುಬಳಕೆಯ ಸಂಪನ್ಮೂಲವನ್ನು ಬಳಸಿ ವಿದ್ಯುತ್ ಉತ್ಫಾದನೆ ಮಾಡುವುದನ್ನು ಬಿಟ್ಟು ಯುರೇನಿಯಂನ್ನು ಬಳಸಿ ಅಣು ವಿದ್ಯುತ್ ಅನ್ನೇ ಉತ್ಫಾದಿಸುತ್ತೆವೆ ಎಂಬ ಸರ್ಕಾರದ ಹುನ್ನಾರವೇನು? ಇದು ಬರಿ ಅಣು ವಿದ್ಯುತ್‌ಗೆ ನಿಲ್ಲದೇ ಅಣುಬಾಂಬ್ ತಯಾರಿಕೆಯವರೆಗೂ ವಿಸ್ತರಿಸುವ ಸಾಧ್ಯತೆ ಹೆಚ್ಚಿದೆ. ಈ ರೀತಿಯ ನಡೆಗಳು ಮುಂದುವರೆದ ದೇಶಗಳೆನಿಸಿಕೊಂಡ ಅಮೆರಿಕಾ, ಕೆನಡಾ, ಇಂಗ್ಲೆಂಡ್, ಫ್ರಾನ್ಸ್ ಮುಂತಾದ ದೇಶಗಳ ಪ್ರಯತ್ನಗಳ ವಿರುದ್ಧ ಅಲ್ಲಿನ ಜನಸಾಮಾನ್ಯರು ಬೃಹತ್‍ಮಟ್ಟದ ಹೋರಾಟಗಳನ್ನು ಮಾಡಿ ಬೀದಿಯಲ್ಲಿ ಪ್ರತಿಭಟಿಸಿದ್ದಾರೆ.

ಇಪ್ಪತ್ತು ಸಾವಿರ ಟನ್ನುನಷ್ಟು ಯುರೇನಿಯಂ ಇರಬಹುದೆಂದು ಅಂದಾಜು ಮಾಡಲಾಗಿದೆ. ಇದನ್ನು ತೆಗೆಯಲು ಅನುಕೂಲವಾಗುವಂತೆ ಸುಮಾರು ನಾಲ್ಕು ಸಾವಿರ ಬೋರ್‍ವೆಲ್‍ಗಳನ್ನು ಕೊರೆಯಬೇಕಾಗುತ್ತದೆ ಎನ್ನಲಾಗುತ್ತಿದೆ. 2030ರ ಹೊತ್ತಿಗೆ 40ಸಾವಿರ ಮೆಗಾವ್ಯಾಟ್‌ಗಳ ಅಣುವಿದ್ಯುತ್ ಉತ್ಫಾದನೆ ಮಾಡಬೇಕೆಂಬ ಗುರಿ ಇಟ್ಟುಕೊಳ್ಳಲಾಗಿದ್ದು, ಸರ್ಕಾರ ಮಾಡುತ್ತಿರುವ ಆತುರಕ್ಕೆ ಬಹುರಾಷ್ಟ್ರಿಯ ಕಂಪನಿಗೆಳ ಒತ್ತಡ ಕಾರಣವಾಗಿದೆ ಎಂದು ಕೆಲವು ಜನಪರ ಚಿಂತಕರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ರಾಜ್ಯ ಸಚಿವ ಕೆಟಿಆರ್ ಸಂಪುಟದಲ್ಲಿ ‘ನಲ್ಲಮಲ’ ಯರೇನಿಯಂ ಗಣಿ ಯೋಜನೆಗೆ ವಿರುದ್ಧವಾಗಿ ಬಿಲ್ ಮಂಡಿಸಿದ್ದಾರೆ. ಮತ್ತು ಸಿನೆಮಾ ನಿರ್ದೇಶಕ ಪೂರಿ ಜಗನ್ನಾತ್, ನಟ ಪವನ್ ಕಲ್ಯಾಣ್, ವಿಜಯ್ ದೇವರಕೊಂಡ, ನಟಿ ಸಮಂತ ಮತ್ತಿತರರು ಕೂಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಯೋಜನೆಯನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದ್ಧಾರೆ. ಈ ಟ್ವಿಟ್ಟರ್‍ ಅಭಿಯಾನವನ್ನು ಡಿವೈಎಫ್‍ಐ ಸಂಘಟನೆ ಫ್ರಾರಂಬಿಸಿದ್ದು ಟ್ರೆಂಡ್ ಆಗಿತ್ತು.

ಬೆಲ್ಲ ಇದ್ದ ಕಡೆ ಇರುವೆಯ ಜಾಡು ಮೂಡುವ ಹಾಗೆ ಬಹುರಾಷ್ಟ್ರೀಯ ಕಂಪನಿಗಳು ಸದಾ ನೈಸರ್ಗಿಕ ಸಂಪನ್ಮೂಲಗಳಿರುವ ಕಡೆ ಕಣ್ಣು ಹಾಕಿರುತ್ತಾರೆ. ಅವರಿಗೆ ಪೂರಕವಾದ ಸರ್ಕಾರಗಳಿದ್ದರಂತು ಮುಗಿದೆ ಹೋಯಿತು. ಕಡಿಮೆ ಸಮಯದಲ್ಲಿ ಹೆಚ್ಚು ತಿಂದು ತೇಗಲು ಬೇಕಾದ ವಾತಾವರಣ ರೂಪಿಸಿಕೊಂಡು ಕಾರ್ಯಕ್ಕಿಳಿಯುತ್ತವೆ. ಇತ್ತಿಚಿಗೆ ಅಮೇಜಾನ್ ಕಾಡು ಮನುಷ್ಯನ ದುರಂಹಾಕರಕ್ಕೆ ಹೊತ್ತಿ ಉರಿದ ಹಾಗೆ ನಲ್ಲಮಲ ಕಾಡು ಮನುಷ್ಯನ ದುರಾಸೆಗೆ ಬಲಿಯಾಗದೆ ಇರಲಿ. ಅಲ್ಲಿನ ಮೂಲ ನಿವಾಸಿಗಳಾದ ‘ಚೆಂಚು’, ’ಕೋಯಾ’ ಬುಡಕಟ್ಟು ಜನಾಂಗಗಳು ಇದುವರೆಗೂ ಆ ಕಾಡನ್ನು ನಾಶವಾಗದೆ ಕಾಪಾಡಿಕೊಂಡು ಬಂದಿದ್ಧಾರೆ. ಸರ್ಕಾರದ ಈ ಆತುರದ ತೀರ್ಮಾನಗಳಿಂದ ಈ ಜನಾಂಗ ನಾಶವಾಗದಂತೆ ಕಪಾಡಿಕೊಳ್ಳಬೇಕಾಗಿದೆ.

ಅದಕ್ಕಾಗಿ ನಲ್ಲಮಲ್ಲ ಕಾಡು ಉಳಿಸಲು ನಡೆಸುತ್ತಿರುವ ಹೋರಾಟ ಮತ್ತಷ್ಟು ದೃಢಗೊಳ್ಳಬೇಕಿದೆ. ಬೀದಿಯಲ್ಲಿ ನಡೆಯುವ ಹೋರಾಟಕ್ಕೆ ಸಿನಿಮಾ ತಾರೆಯರು ಜೊತೆಗೂಡಬೇಕಿದೆ ಮತ್ತು ನಾವೆಲ್ಲರೂ ಬೆಂಬಲಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...